Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:9 - ಕನ್ನಡ ಸತ್ಯವೇದವು J.V. (BSI)

9 ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ಪುರಾತನದ ತಲಾಂತರಗಳಲ್ಲಿ, ಎಚ್ಚರಪಟ್ಟಂತೆ ಈಗಲೂ ಎಚ್ಚತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟ ತೋಳು ನೀನಲ್ಲವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ತಲಾಂತರಗಳಲ್ಲಿ, ಎಚ್ಚರಗೊಂಡಂತೆ ಈಗಲೂ ಎಚ್ಚೆತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟವನು ನೀನಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನ ಭುಜಬಲವೇ, ಎಚ್ಚರಗೊಳ್ಳು ಎಚ್ಚರಗೊಳ್ಳು, ಬಲವನ್ನು ಹೊಂದಿಕೊ! ಪುರಾತನ ಕಾಲದಲ್ಲಿ ಮಾಡಿದಂತೆಯೇ ನಿನ್ನ ಶಕ್ತಿಯನ್ನು ತೋರು. ನಿನ್ನ ಶಕ್ತಿಯಿಂದ ನೀನು ರಹಬನ್ನು ಸೋಲಿಸಿರುವೆ. ದೈತ್ಯಾಕಾರದ ಮೃಗವನ್ನು ಸೋಲಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು ಬಲವನ್ನು ಧರಿಸಿಕೋ. ಹಿಂದಿನ ಜನಾಂಗಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:9
40 ತಿಳಿವುಗಳ ಹೋಲಿಕೆ  

ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಚಂದದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡರು.


ಆ ದಿನದಲ್ಲಿ ಯೆಹೋವನು ಕಠಿನವೂ ಮಹತ್ತೂ ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪ, ಡೊಂಕಾಗಿ ಹರಿಯುವ ಸರ್ಪ, ಈ ಎರಡು ಹೆಬ್ಬಾವುಗಳನ್ನು ಹೊಡೆದು ಮಹಾ ನದಿಯಲ್ಲಿನ ಘಟಸರ್ಪವನ್ನೂ ಕೊಂದುಹಾಕುವನು.


ರಹಬನ್ನು ಛೇದಿಸಿ ಸಾಯಿಸಿದವನು ನೀನು; ನಿನ್ನ ಭುಜಬಲದಿಂದ ಶತ್ರುಗಳನ್ನು ಚದರಿಸಿಬಿಟ್ಟಿ.


ಐಗುಪ್ತದ ಸಹಾಯವು ವ್ಯರ್ಥವೇ ವ್ಯರ್ಥ; ಆದದರಿಂದ ನಾನು ಅದಕ್ಕೆ ಸುಮ್ಮನೆ ಬಿದ್ದಿರುವ ಜಂಬದ ಮೃಗವೆಂದು ಹೆಸರಿಟ್ಟಿದ್ದೇನೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಐಗುಪ್ತದ ಅರಸನಾದ ಫರೋಹನೇ, ನಿನ್ನ ನದೀ ಶಾಖೆಗಳ ನಡುವೆ ಒರಗಿಕೊಂಡು - ಈ ನದಿಯು ನನ್ನದೇ, ನನಗಾಗಿಯೇ ಮಾಡಿಕೊಂಡದು ಅಂದುಕೊಳ್ಳುವ ಪೇರ್ಮೊಸಳೆಯೇ, ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ, ಎಚ್ಚತ್ತುಕೋ, ಎಚ್ಚತ್ತುಕೋ, ಎದ್ದು ನಿಲ್ಲು! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದು ಬಿಟ್ಟಿದ್ದೀ.


ದೇವರೇ, ಪೂರ್ವಕಾಲದಲ್ಲಿ ನಮ್ಮ ಪಿತೃಗಳ ದಿನದಲ್ಲಿ ನೀನು ನಡಿಸಿದ ಮಹತ್ಕಾರ್ಯಗಳ ವಿಷಯವನ್ನು ಕೇಳಿದ್ದೇವೆ; ಅವರೇ ನಮಗೆ ತಿಳಿಸಿದರು.


ಆತನು ತನ್ನ ವಿವೇಕಶಕ್ತಿಯಿಂದ ಘಟಸರ್ಪವನ್ನು ಹೊಡೆದುಹಾಕಿದನು; ತನ್ನ ಪರಾಕ್ರಮದಿಂದ ಸಾಗರವನ್ನು ಶಾಂತಿಪಡಿಸಿದನು.


ಯೆಹೋವನೇ, ನ್ಯಾಯಸ್ಥಾಪಕನೇ, ನನಗೋಸ್ಕರ ಎಚ್ಚರವಾಗು. ಮಹಾಕೋಪದಿಂದ ಎದ್ದು ಬಂದು ನನ್ನ ವಿರೋಧಿಗಳ ಕ್ರೋಧವನ್ನು ಭಂಗಪಡಿಸು.


ನಿನ್ನ ಪ್ರಜೆಯ ರಕ್ಷಣೆಗೆ, ನಿನ್ನ ಅಭಿಷಿಕ್ತನ ಉದ್ಧಾರಕ್ಕೆ ಹೊರಟಿದ್ದೀ; ತಲೆಯನ್ನು ಕುತ್ತಿಗೆಯ ಬುಡದವರೆಗೆ ಹೊಡೆದುಹಾಕಿದ ಹಾಗೆ ತಳಾದಿಯು ಬೈಲಾಗುವಷ್ಟರ ಮಟ್ಟಿಗೆ ನೀನು ದುಷ್ಟನ ಮನೆಯನ್ನು ಹೊಡೆದಿದ್ದೀ. ಸೆಲಾ.


ಯೆಹೋವನು ತನ್ನ ಬಲಗೈ ಮೇಲೆ, ತನ್ನ ಭುಜಬಲದ ಮೇಲೆ, ಆಣೆಯಿಟ್ಟು - ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡಲೇ ಕೊಡೆನು. ನೀನು ದುಡಿದ ದ್ರಾಕ್ಷಾರಸವನ್ನು ಅನ್ಯರು ಕುಡಿಯುವದೇ ಇಲ್ಲ;


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಮಹಿಮಾವಸ್ತ್ರವನ್ನು ಧರಿಸಿದ್ದಾನೆ, ಧರಿಸಿದ್ದಾನೆ. ಶೌರ್ಯವನ್ನು ನಡುಕಟ್ಟಾಗಿ ಬಿಗಿದಿದ್ದಾನೆ; ಭೂಲೋಕವು ಸ್ಥಿರವಾಗಿರುವದು, ಕದಲುವದಿಲ್ಲ.


ಐಗುಪ್ತ ಬಾಬೆಲ್ ದೇಶಗಳವರನ್ನು ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ ಫಿಲಿಷ್ಟಿಯ, ತೂರ್, ಕೂಷ್ ಜನಾಂಗಗಳು ಅಲ್ಲೇ ಹುಟ್ಟಿದವು ಎಂಬದೇ.


ಕರ್ತನೇ, ಯಾಕೆ ನಿದ್ರಿಸುತ್ತೀ? ಎಚ್ಚರವಾಗು; ಏಳು, ನಮ್ಮನ್ನು ಬಿಟ್ಟೇಬಿಡಬೇಡ.


ಭೂಲೋಕದವರನ್ನೆಲ್ಲಾ ಮರುಳುಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾತನ ಸರ್ಪವು ದೊಬ್ಬಲ್ಪಟ್ಟು ಭೂವಿುಗೆ ಬಿದ್ದನು;


ಕರ್ತನೇ, ಸರ್ವಶಕ್ತನಾದ ದೇವರೇ, ಸದಾ ಇರುವಾತನೇ, ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳಿದ್ದರಿಂದ ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ.


ಆತನು ತನ್ನ ಭುಜಪರಾಕ್ರಮವನ್ನು ತೋರಿಸಿ ಸೊಕ್ಕಿದ ಮನಸ್ಸುಳ್ಳವರನ್ನು ಚದರಿಸಿಬಿಟ್ಟಿದ್ದಾನೆ.


ಮರಕ್ಕೆ ಎಚ್ಚತ್ತುಕೋ, ಜಡವಾದ ಕಲ್ಲಿಗೆ ಎದ್ದೇಳು ಎಂದು ಅಪ್ಪಣೆಕೊಡುವವನ ಗತಿಯನ್ನು ಅಯ್ಯೋ, ಏನು ಹೇಳಲಿ! ಇಂಥ ಬೊಂಬೆಯು ಬೋಧಿಸೀತೇ? ಇಗೋ, ಅದಕ್ಕೆ ಬೆಳ್ಳಿಬಂಗಾರವು ಹೊದಗಿಸಿದೆ, ಅದರೊಳಗೆ ಶ್ವಾಸವೇನೂ ಇಲ್ಲ.


ನಾವು ಕೇಳಿದ ಸಂಗತಿಯನ್ನು [ನಮ್ಮಲ್ಲಿ] ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?


ನನ್ನ ರಕ್ಷಣಧರ್ಮದ ಕಾರ್ಯವು ಸಮೀಪಿಸಿದೆ, ನನ್ನ ವಿಮೋಚನಕ್ರಿಯೆಯು ತಲೆದೋರಿದೆ, ನನ್ನ ಹಸ್ತವು ಜನಾಂಗಗಳಿಗೆ ನ್ಯಾಯತೀರಿಸುವದು; ದ್ವೀಪನಿವಾಸಿಗಳು ನನ್ನನ್ನು ನಿರೀಕ್ಷಿಸಿಕೊಂಡು ನನ್ನ ಹಸ್ತಕಾರ್ಯಕ್ಕೆ ಕಾದಿರುವರು.


ಆವರೆಗೆ ನಿದ್ರಿಸುವವನಂತೆಯೂ ದ್ರಾಕ್ಷಾರಸದಿಂದ ಮೈಮರೆತ ವೀರನಂತೆಯೂ ಇದ್ದ ಕರ್ತನು ಫಕ್ಕನೆ ಎಚ್ಚತ್ತು


ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಪ್ರಸಿದ್ಧಿಪಡಿಸಿಕೋ; ನಾವು ಗಾಯನಮಾಡುತ್ತಾ ನಿನ್ನ ಶೂರತ್ವವನ್ನು ಕೊಂಡಾಡುವೆವು.


ಆಗ ಗಿದ್ಯೋನನು ಅವನಿಗೆ - ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ವಿುದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ ಅನ್ನಲು


ಬೇರೆ ಯಾವ ದೇವರಾದರೂ ಮನಶ್ಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವದಕ್ಕೆ ಪ್ರಯತ್ನಿಸಿದ್ದುಂಟೋ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣಿಗೆದುರಾಗಿ ನಡಿಸಿದನಲ್ಲಾ.


ಇದರಿಂದ ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು; ಅದೇನಂದರೆ - ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಬಾಹುವು ಯಾರಿಗೆ ಗೋಚರವಾಯಿತು? ಎಂಬದು.


ನಿಷ್ಕಾರಣವಾಗಿ ನನ್ನ ಮೇಲೆ ಬೀಳಲು ಓಡಿಬಂದು ನಿಂತಿದ್ದಾರೆ; ಎದ್ದು ಬಂದು ಪರಾಂಬರಿಸಿ ನನಗೆ ಸಹಾಯ ಮಾಡು.


ನಾನು ಮಾಡಿದ ವಾಗ್ದಾನವನ್ನು ನೆನಸಿಕೊಂಡೆನು. ಆದದರಿಂದ ನೀನು ಇಸ್ರಾಯೇಲ್ಯರಿಗೆ [ನನ್ನ ಹೆಸರಿನಲ್ಲಿ] ಹೇಳಬೇಕಾದದ್ದೇನಂದರೆ - ನಾನು ಯೆಹೋವನು; ಐಗುಪ್ತ್ಯರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸಗಳನ್ನು ನಾನು ತಪ್ಪಿಸಿ ಅವರಲ್ಲಿ ನಿಮಗಿರುವ ದಾಸತ್ವವನ್ನು ತೊಲಗಿಸಿ ನನ್ನ ಕೈ ಚಾಚಿ ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.


ದೇವರು ತನ್ನ ಸಿಟ್ಟನ್ನು ತೊಲಗಿಸಿಬಿಡುವದಿಲ್ಲ; ಘಟಸರ್ಪದ ಸಹಾಯಕರು ಆತನಿಗೆ ಪಾದಾಕ್ರಾಂತರಾದರಲ್ಲಾ.


ಹಳೆಯ ದಿನಗಳನ್ನೂ ಪುರಾತನ ವರುಷಗಳನ್ನೂ ಯೋಚಿಸಿದೆನು.


ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ; ಭೂವಿುಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಕಾರ್ಯವನ್ನು ನೋಡುವರು.


ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಪ್ರಾಣಿಗಳೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ.


ಅವರು ಕಷ್ಟವೆಂಬ ಕಡಲನ್ನು ದಾಟಿ ಬರುವರು, ಅಲ್ಲಕಲ್ಲೋಲವಾದ ಸಮುದ್ರವನ್ನು ಭೇದಿಸಿಬಿಡುವರು, ನೈಲ್‍ನದಿಯೆಲ್ಲಾ ತಳದ ತನಕ ಒಣಗುವದು, ಅಶ್ಶೂರದ ಗರ್ವವು ತಗ್ಗಿಸಲ್ಪಡುವದು, ಐಗುಪ್ತದ ರಾಜದಂಡವು ತಪ್ಪಿಹೋಗುವದು.


ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ ನಮ್ಮ ಪಿತೃಗಳನ್ನೇ ನೆಲೆಗೊಳ್ಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.


ಯಾಕೆ ವಿಮುಖನಾಗಿದ್ದೀ? ನಮಗಿರುವ ಬಾಧೆಯನ್ನೂ ಹಿಂಸೆಯನ್ನೂ ಯಾಕೆ ಲಕ್ಷಿಸುವದಿಲ್ಲ?


ಆಕಾಶವು ನಿನ್ನದು, ಭೂವಿುಯೂ ನಿನ್ನದೇ; ಲೋಕವನ್ನೂ ಅದರಲ್ಲಿರುವದೆಲ್ಲವನ್ನೂ ನಿರ್ಮಿಸಿದವನು ನೀನು.


ನೀನು ಐಗುಪ್ತದೇಶದೊಳಗಿಂದ ಪಾರಾಗಿ ಬಂದ ಕಾಲದಲ್ಲಿ ನಾನು ತೋರಿಸಿದಂತೆ ಅದ್ಭುತಗಳನ್ನು ತೋರಿಸುವೆನು.


ಮತ್ತು ನಿನ್ನ ಸಂತಾನದವರು ದಾಸರಾಗಿ ಸೇವಿಸುವ ಅನ್ಯಜನರಿಗೆ ನಾನೇ ನ್ಯಾಯತೀರಿಸುವೆನು. ಆಮೇಲೆ ಅವರು ಹೊರಟುಬಂದು ಈ ಸ್ಥಳದಲ್ಲಿ ನನ್ನನ್ನು ಆರಾಧಿಸುವರು ಎಂಬದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು