Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 52:2 - ಕನ್ನಡ ಸತ್ಯವೇದವು J.V. (BSI)

2 ಯೆರೂಸಲೇಮೇ, ದೂಳನ್ನು ಝಾಡಿಸಿಕೋ! ಎದ್ದು ಆಸನದ ಮೇಲೆ ಕೂಡ್ರು! ಸೆರೆಬಿದ್ದ ಚೀಯೋನ್ ಕನ್ಯೆಯೇ, ನಿನ್ನ ಕತ್ತಿನ ಪಾಶವನ್ನು ಬಿಚ್ಚಿಬಿಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆರೂಸಲೇಮೇ, ಧೂಳನ್ನು ಝಾಡಿಸಿಕೋ! ಎದ್ದು ಆಸನದ ಮೇಲೆ ಕುಳಿತುಕೋ! ಸೆರೆಯಲ್ಲಿ ಬಿದ್ದ ಚೀಯೋನ್ ಪುತ್ರಿಯೇ, ನಿನ್ನ ಕುತ್ತಿಗೆಯ ಬಂಧನವನ್ನು ಬಿಚ್ಚಿಕೋ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಖೈದಿಯಾಗಿ ಬಿದ್ದಿರುವ ಸಿಯೋನ್ ಕನ್ಯೆಯೆ, ಕಿತ್ತುಬಿಡು ಬಂಧನವನು ನಿನ್ನ ಕುತ್ತಿಗೆಯಿಂದ ಸಿಂಹಾಸನಾರೂಢಳಾಗು ಜೆರುಸಲೇಮೆ ಝಾಡಿಸಿ ಎದ್ದುನಿಂತು ದುಂಬುಧೂಳಿನಿಂದ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿನ್ನ ಧೂಳನ್ನು ಝಾಡಿಸು. ನಿನ್ನ ಮನೋಹರವಾದ ವಸ್ತ್ರಗಳನ್ನು ಧರಿಸಿಕೊ. ಚೀಯೋನಿನ ಕುಮಾರ್ತೆಯಾದ ಜೆರುಸಲೇಮೇ, ನೀನು ಒಮ್ಮೆ ಸೆರೆಯಾಳಾಗಿದ್ದೆ. ಈಗ ನೀನು ನಿನ್ನ ಕುತ್ತಿಗೆಗೆ ಬಂಧಿಸಲ್ಪಟ್ಟ ಸಂಕೋಲೆಗಳಿಂದ ಬಿಡಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆರೂಸಲೇಮೇ ಧೂಳನ್ನು ಝಾಡಿಸಿಕೋ, ಎದ್ದು ಆಸನದ ಮೇಲೆ ಕುಳಿತುಕೋ. ಸೆರೆಯಾದ ಚೀಯೋನ್ ಪುತ್ರಿಯೇ, ನಿನ್ನ ಕುತ್ತಿಗೆಯ ಬಂಧನಗಳನ್ನು ಬಿಚ್ಚಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 52:2
19 ತಿಳಿವುಗಳ ಹೋಲಿಕೆ  

ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು, ಸೆರೆಯವರಿಗೆ ಬಿಡುಗಡೆಯಾಗುವದನ್ನು ಮತ್ತು ಕುರುಡರಿಗೆ ಕಣ್ಣು ಬರುವದನ್ನು ಪ್ರಸಿದ್ಧಿಪಡಿಸುವದಕ್ಕೂ ಮನಮುರಿದವರನ್ನು ಬಿಡಿಸಿ ಕಳುಹಿಸುವದಕ್ಕೂ


ಖಡ್ಗಕ್ಕೆ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ; ದೂರದಲ್ಲಿಯೂ ಯೆಹೋವನನ್ನು ಸ್ಮರಿಸಿರಿ, ಯೆರೂಸಲೇವಿುನ ಹಂಬಲು ನಿಮ್ಮ ಮನಸ್ಸಿನಲ್ಲಿ ಹುಟ್ಟಲಿ.


ನನ್ನ ಜನರೇ, ನೀವೆಲ್ಲರೂ ಬಾಬೆಲಿನೊಳಗಿಂದ ಹೊರಟು ಯೆಹೋವನ ರೋಷಾಗ್ನಿಯಿಂದ ತಪ್ಪಿಸಿಕೊಳ್ಳಿರಿ.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವದಕ್ಕೂ ಸೆರೆಯವರಿಗೆ ಬಿಡುಗಡೆಯಾಗುವದನ್ನು, ಬಂದಿಗಳಿಗೆ [ಕದ] ತೆರೆಯುವದನ್ನು ಪ್ರಸಿದ್ಧಿಪಡಿಸುವದಕ್ಕೂ


[ಸೆರೆಯಲ್ಲಿ] ಕುಗ್ಗಿರುವವನು ಸಾಯನು, ಪಾತಾಳಕ್ಕೆ ಇಳಿಯನು, ಬೇಗನೆ ಬಿಡುಗಡೆಯಾಗುವನು; ಅವನಿಗೆ ಅನ್ನದ ಕೊರತೆಯೇ ಇರದು.


ಪರಲೋಕದಿಂದ ಬಂದ ಮತ್ತೊಂದು ಶಬ್ದವನ್ನು ಕೇಳಿದೆನು; ಅದು ಹೇಳಿದ್ದೇನಂದರೆ - ನನ್ನ ಪ್ರಜೆಗಳೇ, ಅವಳನ್ನು ಬಿಟ್ಟುಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿಯಾಗಬಾರದು.


ಎಲೈ, ಎಲೈ, ಉತ್ತರದೇಶದಿಂದ ಓಡಿಬನ್ನಿರಿ; ಇದು ಯೆಹೋವನ ನುಡಿ; ಚತುರ್ದಿಕ್ಕಿನ ಗಾಳಿಗಳಂತೆ ನಿಮ್ಮನ್ನು ಚದರಿಸಿದ್ದೇನಲ್ಲಾ; ಇದು ಯೆಹೋವನ ನುಡಿ.


ಅವರು ಕತ್ತಿಯ ಬಾಯಿಗೆ ಬೀಳುವರು; ಅವರನ್ನು ಅನ್ಯದೇಶಗಳಿಗೆಲ್ಲಾ ಸೆರೆಹಿಡಿದುಕೊಂಡು ಹೋಗುವರು; ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವದು.


ನೀನು ಕುಗ್ಗಿ ಭೂವಿುಯೊಳಗಿಂದ ಮಾತಾಡುವಿ, ನಿನ್ನ ನುಡಿಯು ಮಣ್ಣಿನೊಳಗಿಂದ ಸಣ್ಣಸ್ವರವಾಗಿ ಹೊರಡುವದು. ನಿನ್ನ ಧ್ವನಿಯು ಪ್ರೇತದ ಧ್ವನಿಯಂತೆ ನೆಲದೊಳಗಿಂದ ಬರುವದು, ನಿನ್ನ ನುಡಿಯು ದೂಳಿನೊಳಗಿಂದ ಲೊಚಗುಟ್ಟುವದು.


ಅವಳ ಪುರದ್ವಾರಗಳಲ್ಲಿ ಪ್ರಲಾಪವೂ ದುಃಖವೂ ತುಂಬಿರುವವು; ಅವಳು ಹಾಳಾಗಿ ನೆಲದ ಮೇಲೆ ಕೂತುಬಿಡುವಳು.


ನಿನ್ನನ್ನು ಬಾಧಿಸುವವರ ಕೈಗೆ ಅದನ್ನು ಕೊಡುವೆನು; ಅವರು ನಿನಗೆ - ನೀನು ಬಿದ್ದುಕೋ, ನಿನ್ನನ್ನು ತುಳಿಯುತ್ತಾ ಹೋಗುವೆವು ಎಂದು ಹೇಳಲು ನೀನು ಹಾದುಹೋಗುವ ಅವರಿಗೆ ನಿನ್ನ ಬೆನ್ನನ್ನು ನೆಲವನ್ನಾಗಿಯೂ ಬೀದಿಯ ಮಣ್ಣನ್ನಾಗಿಯೂ ಮಾಡಿಕೊಂಡಿಯಲ್ಲಾ.


ಆಗ ನೀನು ನಿನ್ನ ಮನದೊಳಗೆ - ನನಗೋಸ್ಕರ ಇವರನ್ನು ಯಾರು ಹೆತ್ತರು? ನಾನೋ ಮಕ್ಕಳನ್ನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು; ಇವರನ್ನು ಸಾಕಿದವರು ಯಾರು? ಆಹಾ, ನಾನು ಒಂಟಿಯಾಗಿ ಉಳಿದಿದ್ದೆನಲ್ಲಾ; ಇವರೆಲ್ಲಿದ್ದರು? ಅಂದುಕೊಳ್ಳುವಿ.


ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ; ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬೆಲಿಗೆ ಪ್ರತೀಕಾರಮಾಡುವನು.


ಅವರಿಗೆ ಭಾರವಾದ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ವಿುದ್ಯಾನಿನ ನಾಶದಿನದಲ್ಲಿ ಮುರಿದುಬಿಟ್ಟಂತೆ ಮುರಿದುಬಿಟ್ಟಿದ್ದೀ.


ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ ಹೂಡಿದ ನೊಗವು ಕತ್ತಿನಿಂದಲೂ ತೊಲಗುವವು; ನೀವು ಪುಷ್ಟರಾದ ಕಾರಣ ನೊಗವು ಮುರಿದು ಹೋಗುವದು.


ಅಶ್ಶೂರ್ಯರನ್ನು ನನ್ನ ದೇಶದಲ್ಲಿ ಮುರಿದು ನನ್ನ ಬೆಟ್ಟಗಳ ಮೇಲೆ ತುಳಿದುಬಿಡುವೆನು; ಆಗ ಅವರು ಹೂಡಿದ ನೊಗವು ನನ್ನ ಜನರಿಂದ ತೊಲಗಿ ಹೊರಿಸಿದ ಹೊರೆಯು ನನ್ನ ಜನರ ಹೆಗಲಿಗೆ ದೂರವಾಗುವದು.


ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.


ತೋಟದ ಮರಗಳು ಹಣ್ಣುಬಿಡುವವು; ಹೊಲಗಳು ಒಳ್ಳೆಯ ಬೆಳೆಕೊಡುವವು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗದ ಗೂಟಗಳನ್ನು ನಾನು ಮುರಿದುಹಾಕಿ ಅವರನ್ನು ಅಡಿಯಾಳಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ ನಾನೇ ಯೆಹೋವನು ಎಂದು ಅವರಿಗೆ ದೃಢವಾಗುವದು.


ಎಲೈ, ಬಾಬೆಲ್‍ಪುರಿಯಲ್ಲಿ ವಾಸಿಸುವ ಚೀಯೋನಿನವರೇ, ತಪ್ಪಿಸಿಕೊಂಡು ಬನ್ನಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು