Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 53:11 - ಕನ್ನಡ ಸತ್ಯವೇದವು J.V. (BSI)

11 ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆತನು ತನ್ನ ಆತ್ಮದಲ್ಲಿ ಬಹಳವಾಗಿ ಸಂಕಟಪಡುವನು. ಆದರೆ ಒಳ್ಳೆಯ ಕಾರ್ಯಗಳಾಗುವುದನ್ನು ಆತನು ನೋಡುವನು. ತಾನು ಕಲಿತ ವಿಷಯಗಳಲ್ಲಿ ಸಂತುಷ್ಟನಾಗುವನು. ಅನೇಕರು ತಮ್ಮ ಪಾಪಗಳಿಂದ ಬಿಡುಗಡೆ ಹೊಂದುವಂತೆ ನನ್ನ ಒಳ್ಳೇ ಸೇವಕನು ಮಾಡುವನು. ಅವರ ಪಾಪಗಳನ್ನು ಹೊತ್ತುಕೊಂಡು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆತನು ತನ್ನ ಪ್ರಾಣದ ವೇದನೆಯನ್ನು ಸಹಿಸಿದ ತರುವಾಯ, ಜೀವದ ಬೆಳಕನ್ನು ಕಂಡು ತೃಪ್ತನಾಗುವನು. ತನ್ನ ತಿಳುವಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕರಿಗೆ ನೀತಿವಂತನಾಗಿ ನಿರ್ಣಯಿಸುವನು. ಏಕೆಂದರೆ ಆತನೇ ಅವರ ಅಪರಾಧಗಳನ್ನು ಹೊತ್ತುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 53:11
37 ತಿಳಿವುಗಳ ಹೋಲಿಕೆ  

ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಮರಣದ ಕಂಬವನ್ನು ಏರಿದನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರನ್ನು ನಂಬುವ ನಮಗೂ ನಂಬಿಕೆಯು ನೀತಿಯೆಂದು ಎಣಿಸಲ್ಪಡುವದು.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವದೇ ನಿತ್ಯಜೀವವು.


ಇವನು ಇಂಥವನಾಗಿರುವದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು ಮರಣಹೊಂದಿ ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು ಬಹುಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆಮಾಡಿದನಲ್ಲಾ.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವದಕ್ಕಾಗಿ ಒಂದೇ ಸಾರಿ ಪಾಪನಿವಾರಣಕ್ಕೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧದಲ್ಲಿ ಕೊಲ್ಲಲ್ಪಟ್ಟನು, ಆತ್ಮಸಂಬಂಧದಲ್ಲಿ ತಿರಿಗಿ ಬದುಕುವವನಾದನು.


ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ನನ್ನ ಪ್ರಿಯರಾದ ಮಕ್ಕಳೇ, ನೀವು ಪಾಪಮಾಡದಂತೆ ಈ ಮಾತುಗಳನ್ನು ನಿಮಗೆ ಬರೆಯುತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.


ಮತ್ತು ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನುಂಟು ಮಾಡುವದಕ್ಕೋಸ್ಕರ ಪಾಪಸಂಬಂಧವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಲ್ಲಿಯೂ ತೊಳೆದುಕೊಂಡಿರಿ, ದೇವಜನರಾದಿರಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.


ಒಬ್ಬ ಸ್ತ್ರೀ ಹೆರುವಾಗ ತನ್ನ ಬೇನೆಯ ಕಾಲ ಬಂತೆಂದು ಆಕೆಗೆ ದುಃಖವಾಗುತ್ತದೆ; ಆದರೆ ಕೂಸನ್ನು ಹೆತ್ತ ಮೇಲೆ ಲೋಕದಲ್ಲಿ ಒಬ್ಬ ಮನುಷ್ಯನು ಹುಟ್ಟಿದನೆಂಬ ಆನಂದದಿಂದ ಆ ಬೇನೆಯನ್ನು ನೆನಸುವದಿಲ್ಲ.


ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.


ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ಕೀಳಲ್ಪಟ್ಟಿದ್ದಾನೆ, ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು?


ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ; ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ; ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರ ಪಡಿಸುವನು.


ತಂದೆಯಾದ ದೇವರಿಂದಲೂ ಆ ತಂದೆಯ ಮಗನಾದ ಯೇಸು ಕ್ರಿಸ್ತನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಸತ್ಯಪೂರ್ವಕವಾಗಿಯೂ ಪ್ರೀತಿಪೂರ್ವಕವಾಗಿಯೂ ನಮ್ಮೊಂದಿಗಿರುವವು.


ಸಭೆಯ ಹಿರಿಯನು ದೇವರಾದುಕೊಂಡವರಾದ ಅಮ್ಮನವರಿಗೂ ಆಕೆಯ ಮಕ್ಕಳಿಗೂ ಬರೆಯುವದೇನಂದರೆ - ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ಸದಾಕಾಲವೂ ನಮ್ಮೊಂದಿಗಿರುವಂಥ ಸತ್ಯದ ನಿವಿುತ್ತ ನಾನು ನಿಮ್ಮನ್ನು ಸತ್ಯವಾಗಿ ಪ್ರೀತಿಸುತ್ತೇನೆ; ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ.


ನೀವು ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಅಭಿವೃದ್ಧಿಯನ್ನು ಹೊಂದುತ್ತಾ ಇರ್ರಿ. ಆತನಿಗೆ ಈಗಲೂ ಸದಾಕಾಲವೂ ಸ್ತೋತ್ರ. ಆಮೆನ್.


ನನ್ನ ಪ್ರಿಯವಾದ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಿಮಗೋಸ್ಕರ ತಿರಿಗಿ ಪ್ರಸವವೇದನೆ ಪಡುತ್ತೇನೆ.


ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕ ಬರುವ ಕೋಪಕ್ಕೆ ತಪ್ಪಿಸಿಕೊಳ್ಳುವದು ಮತ್ತೂ ನಿಶ್ಚಯವಲ್ಲವೇ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂವಿುಯಲ್ಲಿ ಬಿದ್ದು ಸಾಯದಿದ್ದರೆ ಒಂದೇಯಾಗಿ ಉಳಿಯುವದು; ಸತ್ತರೆ ಬಹಳ ಫಲಕೊಡುವದು.


ಆತನು ಮನೋವ್ಯಥೆಯುಳ್ಳವನಾಗಿ ಇನ್ನೂ ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ ಆತನ ಬೆವರು ಭೂವಿುಗೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳೋಪಾದಿಯಲ್ಲಿತ್ತು.


ಆತನು ನನಗೆ - ನೀನು ನನ್ನ ಸೇವಕನೂ ನಾನು ಪ್ರಭಾವಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ ಎಂದು ಹೇಳಿದನು.


ಇಗೋ, ನನ್ನ ಸೇವಕನು ಕೃತಾರ್ಥನಾಗುವನು; ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು.


ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು; ಬಹು ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.


ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು