Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 53:4 - ಕನ್ನಡ ಸತ್ಯವೇದವು J.V. (BSI)

4 ನಿಜವಾಗಿಯೂ ನಮ್ಮ ಸಂಕಷ್ಟಗಳನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ, ಹೌದು; ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು, ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿಜವಾಗಿ ವಹಿಸಿಕೊಂಡನಾತ ನಮ್ಮ ಬಾಧೆಗಳನು ಹೊರೆಯಂತೆ ಹೊತ್ತನಾತ ನಮ್ಮ ಕಷ್ಟಸಂಕಟಗಳನು ನಾವು ಭಾವಿಸಿದ್ದಾದರು ಏನು? ಆತ ದೇವರಿಂದ ಬಾಧಿತನೆಂದು ದಂಡನೆಗೆ ಗುರಿಯಾದವನು, ತಿರಸ್ಕೃತನಾದವನೆಂದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಆತನು ನಮ್ಮ ಸಂಕಷ್ಟಗಳನ್ನು ತನ್ನ ಮೇಲೆ ಹೊತ್ತುಕೊಂಡನು. ನಮ್ಮ ಬೇನೆಯನ್ನು ಆತನು ಅನುಭವಿಸಿದನು. ದೇವರು ಆತನನ್ನು ಶಿಕ್ಷಿಸಿದ್ದಾನೆ ಎಂದು ನಾವು ನೆನಸಿದೆವು. ಆತನು ಏನೋ ಮಾಡಿದ್ದಕ್ಕಾಗಿ ದೇವರು ಆತನಿಗೆ ಹೊಡೆದನೆಂದು ಭಾವಿಸಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಶ್ಚಯವಾಗಿಯೂ ಆತನು ನಮ್ಮ ನೋವನ್ನು ತೆಗೆದುಕೊಂಡನು; ಹೌದು, ನಮ್ಮ ದುಃಖಗಳನ್ನು ಸಹ ಹೊತ್ತುಕೊಂಡನು. ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಶಿಕ್ಷೆಹೊಂದಿದವನು, ಬಾಧೆಪಟ್ಟವನು ಎಂದು ಭಾವಿಸಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 53:4
19 ತಿಳಿವುಗಳ ಹೋಲಿಕೆ  

ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಮರಣದ ಕಂಬವನ್ನು ಏರಿದನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಇದರಿಂದ ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು ಎಂದು ಯೆಶಾಯನೆಂಬ ಪ್ರವಾದಿಯಿಂದ ಹೇಳಿರುವ ಮಾತು ನೆರವೇರಿತು.


ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆ ಉಂಟಾಗುವಂತೆಯೂ ದೇವರು ವಾಗ್ದಾನಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ


ಆತನು ನಮ್ಮ ಪಾಪಗಳನ್ನು ನಿವಾರಣಮಾಡುವ ಯಜ್ಞವಾಗಿದ್ದಾನೆ; ನಮ್ಮ ಪಾಪಗಳನ್ನು ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನು ಸಹ ನಿವಾರಣಮಾಡುತ್ತಾನೆ.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವದಕ್ಕಾಗಿ ಒಂದೇ ಸಾರಿ ಪಾಪನಿವಾರಣಕ್ಕೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧದಲ್ಲಿ ಕೊಲ್ಲಲ್ಪಟ್ಟನು, ಆತ್ಮಸಂಬಂಧದಲ್ಲಿ ತಿರಿಗಿ ಬದುಕುವವನಾದನು.


ಮತ್ತು ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನುಂಟು ಮಾಡುವದಕ್ಕೋಸ್ಕರ ಪಾಪಸಂಬಂಧವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.


ಯೆಹೂದ್ಯರು ಅವನಿಗೆ - ನಮಗೆ ಒಂದು ನೇಮ ಉಂಟು, ಆ ನೇಮದ ಪ್ರಕಾರ ಇವನು ಸಾಯತಕ್ಕವನು; ಯಾಕಂದರೆ ಅವನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ ಎಂದು ಉತ್ತರಕೊಟ್ಟರು.


ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ; ನೀನು ಗಾಯಮಾಡಿದವರ ನೋವು ಅವರ ಆಡಿಕೆಗೆ ಕಾರಣವಾಗಿದೆ.


ಪೇತ್ರನನ್ನೂ ಜೆಬೆದಾಯನ ಇಬ್ಬರು ಮಕ್ಕಳನ್ನೂ ಕರಕೊಂಡು ಹೋಗಿ ದುಃಖಪಟ್ಟು ಮನಗುಂದಿದವನಾದನು.


ದೇವರು ಆತನನ್ನು ನಮ್ಮ ಅಪರಾಧಗಳ ನಿವಿುತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ನಿವಿುತ್ತ ಜೀವದಿಂದ ಎಬ್ಬಿಸಿದನು.


ಯಾವ ಹೋತ ಅಜಾಜೇಲನದೆಂದು ಗೊತ್ತಾಗುವದೋ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ ಅದರ ಮೇಲೆ ದೋಷಹೊರಿಸಿ ಅರಣ್ಯಕ್ಕೆ ಅಜಾಜೇಲನಿಗಾಗಿ ಬಿಡಿಸಿಬಿಡಬೇಕು.


ಅವನನ್ನು ಜಜ್ಜುವದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು; ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವದು;


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಒಂದು ವರುಷದ ಕುರಿ;


ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಒಂದು ವರುಷದ ಕುರಿ;


ನನ್ನ ಅಣ್ಣತಮ್ಮಂದಿರಿಗೆ ಹೆರನಂತಾದೆನು; ಒಡಹುಟ್ಟಿದವರಿಗೆ ಪರಕೀಯನಂತಿದ್ದೇನೆ.


ಅವರ ಅಪರಾಧಗಳು ಒಂದೊಂದಾಗಿ ಹೆಚ್ಚುತ್ತಾ ಬರಲಿ. ನಿನ್ನ ನೀತಿಯಲ್ಲಿ ಅವರಿಗೆ ಪಾಲುಕೊಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು