Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 54:8 - ಕನ್ನಡ ಸತ್ಯವೇದವು J.V. (BSI)

8 ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು, ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು, ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು” ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ತಟ್ಟನೆ ಉಕ್ಕಿ ಹರಿಯುವ ಕೋಪದಿಂದ ಕ್ಷಣಮಾತ್ರ ಮುಖಮರೆಸಿಕೊಂಡೆ ನಿನ್ನಿಂದ ಕರುಣಿಸುವೆನು ನಿನ್ನನು ಶಾಶ್ವತ ಕೃಪೆಯಿಂದ.” ಇಂತೆನ್ನುತಿಹನು ನಿನ್ನ ಉದ್ಧಾರಕ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ತುಂಬಾ ಸಿಟ್ಟುಗೊಂಡಿದ್ದೆನು ಮತ್ತು ಸ್ವಲ್ಪ ಕಾಲಕ್ಕೆ ನಿನಗೆ ಮರೆಯಾದೆನು. ಆದರೆ ನಿನ್ನನ್ನು ಕರುಣೆಯಿಂದ ನಿರಂತರವೂ ಸಂತೈಸುವೆನು.” ನಿನ್ನ ರಕ್ಷಕನಾದ ಯೆಹೋವನ ನುಡಿಗಳಿವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನನಗೆ ಬೇಸರವಾದಾಗ ನನ್ನ ಮುಖವನ್ನು ನಿನಗೆ ಕ್ಷಣಮಾತ್ರವೇ ಮರೆಮಾಡಿಕೊಂಡೆನು. ಆದರೆ ಶಾಶ್ವತವಾದ ದಯೆಯಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿದ್ದೇನೆ, ಎಂದು ನಿನ್ನ ವಿಮೋಚಕನಾದ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 54:8
34 ತಿಳಿವುಗಳ ಹೋಲಿಕೆ  

ನಾನು ನಿನ್ನನ್ನು ಪ್ರೀತಿಸಿರುವದು ಶಾಶ್ವತ ಪ್ರೇಮದಿಂದಲೇ; ಆದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ,


ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸು ಮುಖ್ಯ ಪಾಪಿಯಾದ ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘಶಾಂತಿಯನ್ನು ತೋರ್ಪಡಿಸಿದನು.


ವಿದೇಶೀಯರು ನಿನ್ನ ಪೌಳಿಗೋಡೆಗಳನ್ನು ಕಟ್ಟುವರು, ಅವರ ಅರಸರು ನಿನ್ನನ್ನು ಸೇವಿಸುವರು; ನನ್ನ ಕೋಪದಿಂದ ನಿನ್ನನ್ನು ಹೊಡೆದುಬಿಟ್ಟು ನನ್ನ ಕೃಪೆಯಿಂದ ನಿನ್ನನ್ನು ಕರುಣಿಸಿದ್ದೇನಷ್ಟೆ.


ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನನಗೆ ಬಲು ಸಿಟ್ಟೇರಿದೆ; ನಾನು [ಯೆರೂಸಲೇವಿುನ ಮೇಲೆ] ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಿಸಬೇಕೆಂದಿದ್ದ ಕೇಡಿಗಿಂತ ಅವು ಹೆಚ್ಚಾಗಿ ಮಾಡಿದವಷ್ಟೆ.


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ.


ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.


ನಿನ್ನ ವಿಮೋಚಕನೂ ಇಸ್ರಾಯೇಲ್ಯರ ಸದಮಲಸ್ವಾವಿುಯೂ ಆದ ಯೆಹೋವನು ಹೀಗನ್ನುತ್ತಾನೆ - ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಯಿಸುವವನಾಗಿದ್ದೇನೆ.


ನಾನು ನನ್ನ ಜನರ ಮೇಲೆ ರೋಷಗೊಂಡು ಅವರನ್ನು ನಿನ್ನ ಕೈವಶ ಮಾಡಿ ನನ್ನ ಸ್ವಾಸ್ತ್ಯವನ್ನು ಹೊಲೆಗೆಡಿಸಿದೆನು; ನೀನು ಅವರನ್ನು ಹೇಗೂ ಕರುಣಿಸದೆ ಮುದುಕರ ಮೇಲೆಯೂ ಬಹುಭಾರವಾದ ನೊಗವನ್ನು ಹೊರಿಸಿದಿ.


ಯಾಕೋಬನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.


ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಿಮ್ಮ ಹೃದಯಗಳನ್ನು ಸಂತೈಸಿ


ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವದು.


ಇಸ್ರಾಯೇಲ್ಯರ ದೇವರೇ, ರಕ್ಷಕನೇ, ನಿಶ್ಚಯವಾಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.


ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯವು ಯುಗಯುಗಾಂತರಗಳವರೆಗೂ ಇರುತ್ತದೆ.


ಯೆಹೋವನೇ, ನೀನು ಇನ್ನೆಷ್ಟರವರೆಗೆ ನನ್ನನ್ನು ಸಂಪೂರ್ಣವಾಗಿ ಮರೆತಿರುವಿ? ಇನ್ನೆಲ್ಲಿಯ ತನಕ ನನಗೆ ವಿಮುಖನಾಗಿರುವಿ?


ನನಗೆ ವಿಮುಖನಾಗಿರಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ. ನೀನೇ ನನಗೆ ಸಹಾಯಕನಾಗಿದ್ದೆಯಲ್ಲವೇ; ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದು ಬಿಡಬೇಡ.


ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವದು; ಸಂಜೆಗೆ ದುಃಖವೆಂಬದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ ಮುಂಜಾನೆ ಹರ್ಷಧ್ವನಿಯು ಕೇಳಿಸುವದು.


ಯೆಹೋವನು ಯಾಕೋಬ್ಯರನ್ನು ಕನಿಕರಿಸಿ ಮತ್ತೆ ಇಸ್ರಾಯೇಲ್ಯರನ್ನು ಆರಿಸಿಕೊಂಡು ಸ್ವದೇಶದಲ್ಲಿ ತಂಗಿಸಬೇಕೆಂದಿದ್ದಾನಷ್ಟೆ; ಪರದೇಶಿಗಳು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಿಲು ಮುಚ್ಚಿಕೊಳ್ಳಿರಿ; ದೈವರೋಷವು ತೀರುವ ತನಕ ಒಂದು ಕ್ಷಣ ಅವಿತುಕೊಳ್ಳಿರಿ.


ಯಾಕೋಬೇ, ಇಸ್ರಾಯೇಲೇ, ನನ್ನ ಮಾರ್ಗವು ಯೆಹೋವನಿಗೆ ಮರೆಯಾಗಿದೆ, ನನಗೆ ಸಿಕ್ಕಬೇಕಾದ ನ್ಯಾಯವು ನನ್ನ ದೇವರ ಲಕ್ಷ್ಯಕ್ಕೆ ಬಿದ್ದಿಲ್ಲವಲ್ಲಾ ಎಂದು ಏಕೆ ಅಂದುಕೊಳ್ಳುತ್ತೀ?


ಅವರಿಗೆ ಹಸಿವೆ ಬಾಯಾರಿಕೆಗಳು ಆಗವು. ಝಳವೂ ಬಿಸಿಲೂ ಬಡಿಯವು; ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರುಕ್ಕುವ ಒರತೆಗಳ ಬಳಿಯಲ್ಲಿ ನಡಿಸುವನು.


ಆಕಾಶವೇ, ಹರ್ಷಧ್ವನಿಗೈ! ಭೂವಿುಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಕೋಲಾಹಲಮಾಡಿರಿ! ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುತ್ತಿದ್ದಾನೆ.


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾ ಕೃಪೆಯಿಂದ ಕ್ಷವಿುಸುವನು.


ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನೂ ಸ್ತುತ್ಯಕೃತ್ಯಗಳನ್ನೂ ಆತನು ಕನಿಕರದಿಂದಲೂ ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.


ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದೀಯಲ್ಲಾ.


ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೇನು. ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.


ಇಸ್ರಾಯೇಲ್ಯರ ಸದಮಲಸ್ವಾವಿುಗೆ ಆತನ ಜನರು ಮಾಡಿದ ಅಪರಾಧವು ತಮ್ಮ ದೇಶದಲ್ಲಿ ತುಂಬಿದ್ದರೂ ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಸ್ರಾಯೇಲನ್ನಾಗಲಿ ಯೆಹೂದವನ್ನಾಗಲಿ ತ್ಯಜಿಸಲಿಲ್ಲ.


ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ; ಯೆಹೋವನೇ, ಯುಗದ ಮಧ್ಯದಲ್ಲಿ ನಿನ್ನ ರಕ್ಷಣಕಾರ್ಯವನ್ನು ಪುನಃ ಮಾಡು, ಯುಗದ ಮಧ್ಯದಲ್ಲಿ ಅದನ್ನು ಪ್ರಸಿದ್ಧಿಪಡಿಸು; ನೀನು ರೋಷಗೊಂಡಿದ್ದರೂ ಕರುಣೆಯನ್ನು ಚಿತ್ತಕ್ಕೆ ತಂದುಕೋ.


ಹೀಗಿರಲು ಯೆಹೋವನು ಇಂತೆನ್ನುತ್ತಾನೆ - ನಾನು ಕನಿಕರವುಳ್ಳವನಾಗಿ ಯೆರೂಸಲೇವಿುಗೆ ಹಿಂದಿರುಗಿದ್ದೇನೆ; ನನ್ನ ಆಲಯವು ಅಲ್ಲಿ ಕಟ್ಟಲ್ಪಡುವದು; ಯೆರೂಸಲೇವಿುನಲ್ಲಿ ನೂಲು ಎಳೆಯಲ್ಪಡುವದು; ಇದು ಸೇನಾಧೀಶ್ವರ ಯೆಹೋವನ ನುಡಿ.


ನಾನು ಯೆಹೂದ ವಂಶವನ್ನು ಬಲಗೊಳಿಸಿ ಯೋಸೇಫ ವಂಶವನ್ನು ಉದ್ಧರಿಸುವೆನು; ನನ್ನ ಕನಿಕರವು ಅವರ ಮೇಲೆ ಇರುವದರಿಂದ ಅವರನ್ನು ಹಿಂದಕ್ಕೆ ಬರಮಾಡುವೆನು; ಆಗ ನಾನು ಅವರನ್ನು ತಳ್ಳಿಬಿಟ್ಟದ್ದು ಇಲ್ಲದಂತಾಗುವದು; ನಾನು ಅವರ ದೇವರಾದ ಯೆಹೋವನಾಗಿದ್ದೇನಲ್ಲಾ, ಅವರ ಮೊರೆಯನ್ನು ಲಾಲಿಸುವೆನು.


ನಿನ್ನ ಜೀವವನ್ನು ನಾಶದಿಂದ ತಪ್ಪಿಸುವವನೂ ಪ್ರೀತಿಕೃಪೆಗಳೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ.


ಇನ್ನೆಂದಿಗೂ ಅವರಿಗೆ ವಿಮುಖನಾಗೆನು; ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನಷ್ಟೆ; ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು