Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 55:10 - ಕನ್ನಡ ಸತ್ಯವೇದವು J.V. (BSI)

10 ಮಳೆಯೂ ಹಿಮವೂ ಆಕಾಶದಿಂದ ಬಿದ್ದು ಭೂವಿುಯನ್ನು ತೋಯಿಸಿ ಹಸಿರುಗೊಳಿಸಿ ಫಲಿಸುವಂತೆ ಮಾಡಿ ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸಿದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವದಿಲ್ಲವೋ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮಳೆಯೂ, ಹಿಮವೂ ಆಕಾಶದಿಂದ ಬಿದ್ದು, ಭೂಮಿಯನ್ನು ತೋಯಿಸಿ, ಹಸರುಗೊಳಿಸಿ ಫಲಿಸುವಂತೆ ಮಾಡಿ, ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸಿದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವುದಿಲ್ಲವೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮಳೆಯೂ ಹಿಮವೂ ಆಕಾಶಮಂಡಲದಿಂದಿಳಿದು ಬಂದು ತೋಯಿಸಿ, ಹಸಿರುಗೊಳಿಸಿ, ಹುಲುಸು ಮಾಡುತ್ತವೆ ಭೂಮಿಯನು. ಬಿತ್ತುವವನಿಗೆ ಬೀಜ, ಉಣ್ಣುವವನಿಗೆ ಆಹಾರ ಒದಗಿಸದೆ, ಹಿಂದಿರುಗಿ ಬರುವುದಿಲ್ಲ ಅವು ಸುಮ್ಮನೆ ಬಂದಲ್ಲಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಮಳೆಯೂ ಹಿಮವೂ ಆಕಾಶದಿಂದ ಬೀಳುವವು. ಅವು ನೆಲವನ್ನು ತೇವಮಾಡದೆ ಆಕಾಶಕ್ಕೆ ಹಿಂತಿರುಗುವುದಿಲ್ಲ. ಆಗ ನೆಲವು ಬೀಜವನ್ನು ತೋಯಿಸಿ ಸಸಿ ಚಿಗುರುವಂತೆ ಮಾಡುವದು. ಆ ಸಸಿಗಳು ವ್ಯವಸಾಯಗಾರನಿಗೆ ಧಾನ್ಯವನ್ನು ಫಲಿಸುತ್ತವೆ. ಜನರು ಆ ಧಾನ್ಯದಿಂದ ರೊಟ್ಟಿಗಳನ್ನು ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮಳೆಯೂ, ಹಿಮವೂ ಆಕಾಶದಿಂದ ಬಿದ್ದು, ಭೂಮಿಯನ್ನು ತೋಯಿಸಿ, ಹಸಿರುಗೊಳಿಸಿ, ಫಲಿಸುವಂತೆ ಮಾಡಿ, ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವುದಿಲ್ಲವೋ, ಹಾಗೆಯೇ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 55:10
13 ತಿಳಿವುಗಳ ಹೋಲಿಕೆ  

ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ [ತಣ್ಣಗಿರುವದು;] ನನ್ನ ಬೋಧನೆಯು ಮಂಜಿನಂತೆಯೂ ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ [ಹಿತವಾಗಿರುವದು].


ಆಗ ನೀವು ಹೊಲದಲ್ಲಿ ಬೀಜಬಿತ್ತುವದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡದೊಡ್ಡ ಕಾವಲುಗಳಲ್ಲಿ ಮೇಯುವವು.


ನಾನು ಅವರನ್ನೂ ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ಶುಭದಾಯಕ ವೃಷ್ಟಿಯು ಆಗುವದು.


ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಗೆಯ್ಯದ ನಿಮ್ಮ ಭೂವಿುಯನ್ನು ಗೆಯ್ಯಿರಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನನ್ನು ಶರಣುಹೊಗುವ ಸಮಯವು ಒದಗಿದೆ.


ಭೂವಿುಯು ತನ್ನೊಳಗಿಂದ ಮೊಳಿಕೆಯನ್ನು ಹೊರಡಿಸುವಂತೆಯೂ ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೂ ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಸ್ತೋತ್ರವನ್ನೂ ಮೊಳೆಯಿಸುವನು.


ಇವರಿಗೆ ಯಾವನಾದರೂ ಕೇಡನ್ನು ಉಂಟುಮಾಡಬೇಕೆಂದಿದ್ದರೆ ಅವನಿಗೆ ಈ ರೀತಿಯಾಗಿ ಕೊಲೆಯಾಗಬೇಕು. ತಾವು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂವಿುಯನ್ನು ಪೀಡಿಸುವದಕ್ಕೂ ಅಧಿಕಾರವುಂಟು.


ಅದನ್ನು ಹಾಳುಮಾಡುವೆನು, ಯಾರೂ ಕುಡಿಕತ್ತರಿಸಿ ಅಗತೆಮಾಡುವದಿಲ್ಲ; ಅದರಲ್ಲಿ ಮುಳ್ಳುಗಿಳ್ಳು ಬೆಳೆದುಹೋಗುವದು; ಮತ್ತು ಅದರ ಮೇಲೆ ಮಳೆಸುರಿಸಬಾರದೆಂದು ಮೇಘಗಳಿಗೆ ಅಪ್ಪಣೆಮಾಡುವೆನು.


ಆದದರಿಂದ ಅವನು ತಿರಿಗಿ ಯೆಹೋವನನ್ನು ಕೇಳಿದನು. ಆತನು - ನೀನೆದ್ದು ಕೆಯೀಲಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು ಎಂದು ಉತ್ತರಕೊಟ್ಟನು.


ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ನಾನು ಒಲುಮೆ ತೋರಿಸುವೆನು; ಬೇಡುವ ಆಕಾಶಕ್ಕೆ ನಾನು ಒಲಿಯಲು ಬೇಡುವ ಭೂವಿುಗೆ ಅದು ಒಲಿಯುವದು.


ಹೃದಯಾನಂದಕರವಾದ ದ್ರಾಕ್ಷಾರಸವನ್ನೂ ಮುಖಕ್ಕೆ ಕಾಂತಿಯನ್ನುಂಟುಮಾಡುವ ಎಣ್ಣೆಯನ್ನೂ ಪ್ರಾಣಾಧಾರವಾದ ರೊಟ್ಟಿಯನ್ನೂ ಸಂಪಾದಿಸಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು