Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 55:5 - ಕನ್ನಡ ಸತ್ಯವೇದವು J.V. (BSI)

5 ಎಲೈ, [ಇಸ್ರಾಯೇಲೇ], [ಅವನಂತೆ ನೀನೂ] ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ವಾವಿು ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಎಲೈ, ಇಸ್ರಾಯೇಲೇ, ಅವನಂತೆ ನೀನೂ ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ವಾಮಿ ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವುದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಎಲೈ ಇಸ್ರಯೇಲೇ, ನಿನ್ನ ದೇವರಾದ ಸರ್ವೇಶ್ವರನಿಗೋಸ್ಕರ ನಿನ್ನ ಮಹಿಮೆಪಡಿಸಿದ ಇಸ್ರಯೇಲಿನ ಪರಮಪಾವನನಿಗೋಸ್ಕರ ನೀ ಕರೆಗೊಡುವೆ ನಿನಗೆ ಗೊತ್ತಿಲ್ಲದ ಜನಾಂಗಕೆ. ಆಗ ಅಪರಿಚಿತರೂ ಓಡಿಬರುವರು ನಿನ್ನಾಶ್ರಯಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿನಗೆ ಗೊತ್ತಿರದ ಸ್ಥಳಗಳಲ್ಲಿ ಜನಾಂಗಗಳು ನೆಲೆಸಿವೆ. ಆ ದೇಶಗಳನ್ನು ನೀನು ಕರೆಯುವೆ. ಆ ದೇಶಗಳಿಗೆ ನಿನ್ನ ಪರಿಚಯವಿರುವದಿಲ್ಲ. ಆದರೆ ಅವುಗಳು ನಿನ್ನ ಬಳಿಗೆ ಓಡಿಬರುವವು. ಇವೆಲ್ಲಾ ನಿನ್ನ ದೇವರಾದ ಯೆಹೋವನ ಚಿತ್ತಕ್ಕನುಸಾರವಾಗಿ ಆಗುತ್ತವೆ. ಇಸ್ರೇಲಿನ ಪರಿಶುದ್ಧ ದೇವರು ನಿನ್ನನ್ನು ಗೌರವಿಸುವದರಿಂದ ಇದನ್ನು ನೆರವೇರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿನ್ನ ದೇವರಾದ ಯೆಹೋವ ದೇವರ ನಿಮಿತ್ತವೂ, ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆಯುವೆ, ಏಕೆಂದರೆ ಆತನು ನಿನಗೆ ಕೊಟ್ಟ ವೈಭವದಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 55:5
30 ತಿಳಿವುಗಳ ಹೋಲಿಕೆ  

ಯೆಹೋವನು ನಿನ್ನನ್ನು ವೈಭವಪಡಿಸಿರುವದನ್ನು ಕೇಳಿ ತಾರ್ಷೀಷಿನ ಹಡಗುಗಳು ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ವಿಧಿಯೂ ಇಸ್ರಾಯೇಲಿನ ಸದಮಲಸ್ವಾವಿುಯ ಸನ್ನಿಧಿಯೂ ಆದ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವದರಲ್ಲಿ ಮುಂದಾಗುತ್ತಿವೆ.


ನೀನು ನೋಡಿ ಕಳೆಗೊಳ್ಳುವಿ, ನಿನ್ನ ಹೃದಯವು ಅದರುತ್ತಾ ಉಬ್ಬುವದು; ಏಕಂದರೆ ಸಮುದ್ರವ್ಯಾಪಾರ ಸಮೃದ್ಧಿಯು ನಿನ್ನ ಕಡೆಗೆ ತಿರುಗುವದು, ಜನಾಂಗಗಳ ಐಶ್ವರ್ಯವು ನಿನಗೆ ದೊರೆಯುವದು.


ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವವು; ನಾನು ನಿನ್ನ ಮಧ್ಯದಲ್ಲಿ ವಾಸಿಸುವೆನು; ಆಗ ಸೇನಾಧೀಶ್ವರ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬದು ನಿನಗೆ ಗೊತ್ತಾಗುವದು.


ಮತ್ತೊಬ್ಬರು ಹಾಕಿದ ಅಸ್ತಿವಾರದ ಮೇಲೆ ಕಟ್ಟಬಾರದೆಂದು ಮನಸ್ಸಿನಲ್ಲಿ ನೆನಸಿ ಇತರರು ಕ್ರಿಸ್ತನ ಹೆಸರನ್ನು ತಿಳಿಸಿದ ಕಡೆಯಲ್ಲಿ ಸುವಾರ್ತೆಯನ್ನು ಪ್ರಕಟಿಸುವದಿಲ್ಲವೆಂಬದಾಗಿ ನಿಷ್ಕರ್ಷೆಮಾಡಿಕೊಂಡೆನು.


ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ ಪಾಪಪರಿಹಾರವನ್ನೂ ದಯಪಾಲಿಸುವದಕ್ಕಾಗಿ ನಾಯಕನೆಂತಲೂ ರಕ್ಷಕನೆಂತಲೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.


ನಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ ಆತನನ್ನು ಬೇಡವೆಂದಿರಿ.


ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನಂದರೆ - ನಾನು ಕೂಡಿಸಿದ ಇಸ್ರಾಯೇಲ್ಯರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು ಎಂಬದೇ.


ಇಗೋ, ನಾನು ಅವನನ್ನು ಜನಾಂಗಗಳಿಗೆ ಸಾಕ್ಷಿಯನ್ನಾಗಿಯೂ ನಾಯಕನನ್ನಾಗಿಯೂ ಅಧಿಪತಿಯನ್ನಾಗಿಯೂ ನೇವಿುಸಿದೆನು.


ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು ಎಂಬ ನುಡಿ ನನ್ನ ಸತ್ಯದ ಬಾಯಿಂದ ಹೊರಟಿದೆ, ಅದನ್ನು ಹಿಂತೆಗೆಯೆನು, ನನ್ನ ಮೇಲೆ ಆಣೆಯಿಟ್ಟಿದ್ದೇನೆ.


ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿ ಜನಾಂಗಗಳಿಗೆ ದೊರೆಯಾಗುವಂತೆ ಮಾಡಿದ್ದೀ; ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.


ಯೇಸು ಈ ಮಾತುಗಳನ್ನಾಡಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ಹೇಳಿದ್ದೇನಂದರೆ - ತಂದೆಯೇ, ಕಾಲ ಬಂದದೆ; ನಿನ್ನ ಮಗನನ್ನು ಮಹಿಮೆಪಡಿಸು, ಆಗ ಮಗನು ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.


ಇಸ್ರಾಯೇಲ್ಯರ ಸಂಖ್ಯೆಯು ಅಳೆಯುವದಕ್ಕೂ ಲೆಕ್ಕಿಸುವದಕ್ಕೂ ಅಸಾಧ್ಯವಾದ ಸಮುದ್ರತೀರದ ಉಸುಬಿನಂತಾಗುವದು; ಆಗ ಅವರು ನನ್ನ ಪ್ರಜೆಯಲ್ಲದವರು ಎನಿಸಿಕೊಳ್ಳುವದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.


ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಮಕಿತರಾಗುವರು; ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು; ಏಕಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದ ವಿಷಯವನ್ನು ಗ್ರಹಿಸಿಕೊಳ್ಳುವರು.


ಆತನೇ ಈಗ ಹೀಗನ್ನುತ್ತಾನೆ - ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪಕಾರ್ಯವೇ ಸರಿ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.


ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬದನ್ನು ಅವರು ಪರಿಶೋಧನೆ ಮಾಡಿದರು.


ಹಾಗೆಯೇ ಕ್ರಿಸ್ತನು ಸಹ ತನ್ನನ್ನು ಘನಪಡಿಸಿಕೊಂಡು ತನ್ನನ್ನು ತಾನೇ ಮಹಾಯಾಜಕನನ್ನಾಗಿ ಮಾಡಿಕೊಳ್ಳಲಿಲ್ಲ; ಆದರೆ - ನನಗೆ ನೀನು ಮಗನು; ನಾನೇ ಈಹೊತ್ತು ನಿನ್ನನ್ನು ಪಡೆದಿದ್ದೇನೆ


ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.


ಕ್ರಿಸ್ತನು ಇಂಥ ಶ್ರಮಗಳನ್ನು ಅನುಭವಿಸಿ ತನ್ನ ಮಹಾಪದವಿಗೆ ಸೇರುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ


ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ; ಶರೀರದಲ್ಲಿ ಕೈಯಿಂದ ಸುನ್ನತಿಮಾಡಿಸಿಕೊಂಡು ಸುನ್ನತಿಯವರೆನಿಸಿಕೊಳ್ಳುವವರು ನಿಮ್ಮನ್ನು ಸುನ್ನತಿಯಿಲ್ಲದವರೆಂದು ಹೇಳುತ್ತಾರೆ.


ನನ್ನ ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿದ್ದೀ; ಜನಾಂಗಗಳಿಗೆ ದೊರೆಯಾಗುವಂತೆ ನನ್ನನ್ನು ಉಳಿಸಿದ್ದೀ. ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.


ಯೆಹೋವನ ಈ ಮಾತನ್ನು ಕೇಳಿರಿ - ಐಗುಪ್ತದ ಆದಾಯವೂ ಕೂಷಿನ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು - ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.


ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ.


ಇಗೋ, ಇವರು ದೂರದಿಂದ ಬರುತ್ತಾರೆ, ಇಗೋ, ಇವರು ಬಡಗಲಿಂದ ಮತ್ತು ಪಡುವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.


ಅವುಗಳೊಳಗಿಂದ ಸ್ತೋತ್ರವೂ ವಿನೋದಪಡುವವರ ಧ್ವನಿಯೂ ಕೇಳಿಸುವವು; ನಾನು ಆ ಜನರನ್ನು ಹೆಚ್ಚಿಸುವೆನು, ಇನ್ನು ಕೊಂಚವಾಗಿರರು, ಅವರನ್ನು ಘನಪಡಿಸುವೆನು, ಇನ್ನು ಹೀನರಾಗಿರರು.


ನಾನು ನನ್ನ ಪವಿತ್ರನಾಮವನ್ನು ನನ್ನ ಜನರಾದ ಇಸ್ರಾಯೇಲ್ಯರ ನಡುವೆ ವ್ಯಕ್ತಗೊಳಿಸುವೆನು, ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗಲೀಸೆನು; ನಾನೇ ಯೆಹೋವ, ಇಸ್ರಾಯೇಲಿನ ಸದಮಲಸ್ವಾವಿು ಎಂದು ಜನಾಂಗಗಳಿಗೆ ಗೊತ್ತಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು