Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 57:16 - ಕನ್ನಡ ಸತ್ಯವೇದವು J.V. (BSI)

16 ನಾನು ಸರ್ವದಾ ವ್ಯಾಜ್ಯವಾಡೆನು, ಕಡೆಯ ತನಕ ಕೋಪಿಸಿಕೊಳ್ಳೆನು, ಹೀಗೆ ಮಾಡಿದರೆ ಮನುಷ್ಯಾತ್ಮವೂ ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಸರ್ವದಾ ವ್ಯಾಜ್ಯವಾಡುವುದಿಲ್ಲ, ಕಡೆಯ ತನಕ ಕೋಪಿಸಿಕೊಳ್ಳೆನು, ಹೀಗೆ ಮಾಡಿದರೆ ಮನುಷ್ಯನ ಆತ್ಮವೂ, ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಾನು ಸರ್ವದಾ ತಪ್ಪು ಹುಡುಕುವವನಲ್ಲ; ಕಡೆಯ ತನಕ ಕೋಪದಿಂದಿರುವವನಲ್ಲ. ಹಾಗೆ ಮಾಡಿದರೆ ಜೀವಾತ್ಮ ಕುಂದಿಹೋದೀತು. ಆ ಜೀವಿಗಳನ್ನು ಸೃಷ್ಟಿಸಿದವನು ನಾನೇ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ನಿತ್ಯಕಾಲಕ್ಕೂ ಯುದ್ಧ ಮಾಡುವವನಲ್ಲ. ನಾನು ಎಂದೆಂದಿಗೂ ಕೋಪಗೊಳ್ಳುವವನಲ್ಲ. ನಾನು ಹಾಗೆ ಮಾಡುವವನಾದರೆ ನಾನು ಕೊಟ್ಟಿರುವ ಮನುಷ್ಯನ ಆತ್ಮವು ನನ್ನ ಮುಂದೆಯೇ ಸಾಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ಎಂದೆಂದಿಗೂ ವ್ಯಾಜ್ಯವಾಡುವುದಿಲ್ಲ. ಯಾವಾಗಲೂ ಕೋಪಿಸಿಕೊಳ್ಳೆನು. ಏಕೆಂದರೆ ಆತ್ಮವೂ, ನಾನು ಉಂಟುಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 57:16
21 ತಿಳಿವುಗಳ ಹೋಲಿಕೆ  

ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವಾಸ್ತ್ಯದವರಲ್ಲಿ ಉಳಿದವರ ಅಪರಾಧವನ್ನು ಕ್ಷವಿುಸುವವನೂ ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ; ಹೌದು, ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ, ಕರುಣೆಯೇ ಆತನಿಗೆ ಇಷ್ಟ.


ಸದಾಕಾಲವೂ ನಮ್ಮ ಮೇಲೆ ಸಿಟ್ಟುಮಾಡುವಿಯಾ? ತಲತಲಾಂತರಗಳಿಗೂ ಕೋಪವನ್ನು ಬೆಳೆಸುವಿಯೋ?


ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿಸಿದೆವಷ್ಟೆ; ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ.


ಯೆಹೋವನೇ, ನನ್ನನ್ನು ಶಿಕ್ಷಿಸು, ಆದರೆ ವಿುತಿಮೀರಿ ಬೇಡ; ರೋಷದಿಂದ ದಂಡಿಸದಿರು, ನಾನು ಕೇವಲ ಕ್ಷೀಣನಾದೇನು.


ಅವರು ಅಡ್ಡಬಿದ್ದು - ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ,


ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ - ಈ ಪ್ರಾಣವನ್ನು ನಮಗೆ ದಯಪಾಲಿಸಿದ ಯೆಹೋವನ ಜೀವದಾಣೆ, ನಾನು ನಿನ್ನನ್ನು ಸಾಯಿಸೆನು, ನಿನ್ನ ಪ್ರಾಣವನ್ನು ಹುಡುಕುವ ಇವರ ಕೈಗೂ ನಿನ್ನನ್ನು ಸಿಕ್ಕಿಸೆನು ಎಂದು ರಹಸ್ಯವಾಗಿ ಪ್ರಮಾಣಮಾಡಲು


ಆಕಾಶಮಂಡಲವನ್ನುಂಟುಮಾಡಿ ಹರವಿ ಭೂಮಂಡಲವನ್ನೂ ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಚರರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗನ್ನುತ್ತಾನೆ -


ಆಗ ಯೆಹೋವನು - ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿರುವದಿಲ್ಲ; ಅವರು ಭ್ರಷ್ಟರಾದದರಿಂದ ಮರ್ತ್ಯರೇ. ಅವರ ಆಯುಷ್ಯವು ನೂರ ಇಪ್ಪತ್ತು ವರುಷವಾಗಿರಲಿ ಅಂದನು.


ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶಮಂಡಲವನ್ನು ಹರವಿ ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ ಮನುಷ್ಯನೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ -


ಮಣ್ಣು ಭೂವಿುಗೆ ಸೇರಿ ಇದ್ದ ಹಾಗಾಗುವದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವದು; ಇಷ್ಟರೊಳಗಾಗಿ [ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ.]


ಆತನು ನಿತ್ಯವಾಗಿ ಕೋಪಮಾಡುವನೋ? ಕೊನೆಯ ತನಕ ಇಟ್ಟುಕೊಳ್ಳುವನೋ? ಅಂದುಕೊಳ್ಳುತ್ತಿದ್ದೀ. ಇಗೋ, ನೀನು ಹೀಗೆ ಮಾತಾಡಿದರೇನು? ದುಷ್ಕೃತ್ಯಗಳನ್ನು ನಡಿಸಿ ಕೃತಾರ್ಥಳಾಗಿದ್ದೀ.


ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.


ಯೆಹೋವನು ಇಂತೆನ್ನುತ್ತಾನೆ - ಎದೋಮು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಕತ್ತಿಹಿಡಿದು ತನ್ನ ಸಹೋದರನನ್ನು ಹಿಂದಟ್ಟಿ ಕರುಣೆಯನ್ನು ತೊರೆದು ಸಿಟ್ಟಿನಿಂದ ಸದಾ ಸಿಗಿದುಬಿಡುತ್ತಾ ತನ್ನ ಕೋಪವನ್ನು ಶಾಶ್ವತಮಾಡಿಕೊಂಡಿತಷ್ಟೆ.


ದೇವದೂತನು ಯೆರೂಸಲೇಮನ್ನೂ ಸಂಹರಿಸುವದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕದೂತನಿಗೆ - ಈಗ ಸಾಕು, ನಿನ್ನ ಕೈಯನ್ನು ಹಿಂದೆಗೆ ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.


ಪ್ರತಿಪ್ರಾಣಿಯ ಪ್ರಾಣವೂ ಸಮಸ್ತಮನುಷ್ಯರ ಆತ್ಮಗಳೂ ಆತನ ಕೈಯಲ್ಲಿರುವವು.


ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ವಿುತಿಮೀರದೆ ಹೋರಾಡುತ್ತಿದ್ದೀ; ಮೂಡಣ ಗಾಳಿಯು ಬೀಸಿದ ದಿನದಲ್ಲಿ ಅದರ ಕ್ರೂರವಾದ ಬಡಿತದಿಂದ ನಿನ್ನ ಜನವನ್ನು ತೊಲಗಿಸಿದಿ.


ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದೀ; ನಾವು ಜೇಡಿಮಣ್ಣು, ನೀನು ಕುಂಬಾರ, ನಾವೆಲ್ಲರೂ ನಿನ್ನ ಕೈಕೆಲಸವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು