Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 57:17 - ಕನ್ನಡ ಸತ್ಯವೇದವು J.V. (BSI)

17 ನನ್ನ ಜನರು ಲಾಭವನ್ನು ದೋಚಿಕೊಂಡ ಅನ್ಯಾಯವನ್ನು ನಾನು ನೋಡಿ ಕೋಪಗೊಂಡು ಅವರನ್ನು ಹೊಡೆದೆನು, [ನನ್ನ ಮುಖವನ್ನು] ಮುಚ್ಚಿಕೊಂಡು ರೋಷಭರಿತನಾಗಿದ್ದೆನು; ಅವರೋ ತಿರುಗಿಕೊಂಡು ಮನಸ್ಸಿಗೆ ತೋರಿದ ಹಾಗೆಯೇ ನಡೆಯುತ್ತಾ ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನನ್ನ ಜನರು ಲಾಭವನ್ನು ದೋಚಿಕೊಂಡ ಅನ್ಯಾಯವನ್ನು ನಾನು ನೋಡಿ ಕೋಪಗೊಂಡು ಅವರನ್ನು ಹೊಡೆದೆನು, ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತನಾಗಿದ್ದೆನು; ಅವರೋ ತಿರುಗಿಕೊಂಡು ಮನಸ್ಸಿಗೆ ತೋರಿದ ಹಾಗೆಯೇ ನಡೆಯುತ್ತಾ ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನನ್ನ ಜನರ ದುರಾಶೆಯ ದೋಷದ ನಿಮಿತ್ತ ನಾನು ಕೋಪಗೊಂಡೆ, ದಂಡಿಸಿದೆ, ಮುಖ ಮರೆಸಿಕೊಂಡೆ, ರೋಷಭರಿತನಾದೆ. ಅವರಾದರೋ ಮೊಂಡುತನದಿಂದ ಮನಸ್ಸಿಗೆ ತೋಚಿದ ಹಾಗೆ ನಡೆಯುತ್ತಾ ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈ ಜನರು ದುಷ್ಕೃತ್ಯಗಳನ್ನು ನಡಿಸಿ ನನಗೆ ಕೋಪವನ್ನೆಬ್ಬಿಸಿದರು. ಆದ್ದರಿಂದ ನಾನು ಇಸ್ರೇಲನ್ನು ಶಿಕ್ಷಿಸಿದೆನು. ನಾನು ಕೋಪಗೊಂಡು ಅವರಿಗೆ ವಿಮುಖನಾದೆನು. ಇಸ್ರೇಲ್ ನನ್ನನ್ನು ತೊರೆದು ತನಗಿಷ್ಟವಾದ ಸ್ಥಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪಗೊಂಡು, ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತನಾದೆನು. ಅವನು ಮೊಂಡುತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 57:17
29 ತಿಳಿವುಗಳ ಹೋಲಿಕೆ  

ಮತ್ತು ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾವನೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.


ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಸಾಯಿಸಿರಿ. ಜಾರತ್ವ ಬಂಡುತನ ಕಾಮಾಭಿಲಾಷೆ ದುರಾಶೆ ವಿಗ್ರಹಾರಾಧನೆಗೆ ಸಮವಾಗಿರುವ ಲೋಭ ಇವುಗಳನ್ನು ವಿಸರ್ಜಿಸಿಬಿಡಿರಿ;


ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರು ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.


ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲಚಿತ್ತರನ್ನು ಮರುಳುಗೊಳಿಸುವವರೂ ಲೋಭದಲ್ಲಿ ತೇರ್ಗಡೆಹೊಂದಿದ ಮನಸ್ಸುಳ್ಳವರೂ ಶಾಪಕ್ಕೆ ಪಾತ್ರರೂ ಆಗಿದ್ದಾರೆ.


ಐಶ್ವರ್ಯವಂತರಾಗಬೇಕೆಂದು ಮನಸ್ಸು ಮಾಡುವವರು ದುಷ್ಪ್ರೇರಣೆಯೆಂಬ ಉರ್ಲಿನಲ್ಲಿ ಸಿಕ್ಕಿಕೊಂಡು ಬುದ್ಧಿವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರನಾಶನಗಳಲ್ಲಿ ಮುಳುಗಿಸುತ್ತವೆ.


ಜನರಿಗೆ - ಎಲ್ಲಾ ಲೋಭಕ್ಕೂ ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವದಿಲ್ಲ ಎಂದು ಹೇಳಿ ಒಂದು ಸಾಮ್ಯವನ್ನು ಹೇಳಿದನು;


[ಪ್ರಶ್ನೆ ಕೇಳುವದಕ್ಕೆ] ಬರುವ ಜನರಂತೆ ಅವರು ನಿನ್ನ ಬಳಿಗೆ ಬಂದು ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಕೊಳ್ಳುವದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೇನೋ ತಾವು ದೋಚಿಕೊಂಡದರ ಮೇಲೆ ಹೋಗುತ್ತದೆ.


ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವದು, ದೋಚಿಕೊಳ್ಳುವದು, ಹಿಂಸಿಸುವದು, ಜಜ್ಜುವದು, ಇವುಗಳನ್ನು ಮಾಡುವದರಲ್ಲಿಯೇ ನಿನ್ನ ದೃಷ್ಟಿಯೂ ನಿನ್ನ ಮನಸ್ಸೂ ನೆಲೆಗೊಂಡಿವೆ.


ಅವರ ಜ್ಞಾನವು ಎಷ್ಟರದು? ಆದದರಿಂದ ನಾನು ಇವರ ಹೆಂಡರನ್ನು ಅನ್ಯರಿಗೂ ಇವರ ಹೊಲಗದ್ದೆಗಳನ್ನು ಆಕ್ರವಿುಸುವವರಿಗೂ ಕೊಟ್ಟುಬಿಡುವೆನು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ಪಶ್ಚಾತ್ತಾಪಪಡಲಿಲ್ಲ, ಸಂಹರಿಸಿದರೂ ಶಿಕ್ಷಣಕ್ಕೆ ಒಪ್ಪಲಿಲ್ಲ; ತಮ್ಮ ಮುಖವನ್ನು ಕಲ್ಲಿಗಿಂತ ಕಠಿಣಮಾಡಿಕೊಂಡು ತಿರುಗಿಕೊಳ್ಳಲೊಲ್ಲದೆ ಹೋಗಿದ್ದಾರೆ.


ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ತಿದ್ದುಪಾಟಾಗಲಿಲ್ಲ; ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.


ಇಸ್ರಾಯೇಲ್ಯರ ದೇವರೇ, ರಕ್ಷಕನೇ, ನಿಶ್ಚಯವಾಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.


ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.


ಯಾಕೋಬನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.


ಪಾಪಿಷ್ಠಜನವೇ, ಅಧರ್ಮಭಾರ ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನನ್ನು ತೊರೆದಿದ್ದಾರೆ, ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ಧಿಕ್ಕರಿಸಿದ್ದಾರೆ, ಆತನಿಗೆ ಬೆನ್ನುಮಾಡಿ ಬೇರೆಯಾಗಿದ್ದಾರೆ.


ಬಗೆಬಗೆಯಾಗಿ ಆಶಿಸುವದಕ್ಕಿಂತ ಕಣ್ಣೆದುರಿಗಿರುವದನ್ನು ಅನುಭವಿಸುವದೇ ಲೇಸು; ಇದು ಕೂಡ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಲೋಕಾದಿಯಿಂದ ಅಂಥವರಿಗೆ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವದು, ಅವರ ನಾಶವು ತೂಕಡಿಸುವದಿಲ್ಲ.


ಇವರ ದೇಶವು ಬೆಳ್ಳಿ ಬಂಗಾರಗಳಿಂದ ತುಂಬಿದೆ, ಇವರ ನಿಧಿ ನಿಕ್ಷೇಪಗಳಿಗೆ ವಿುತಿಯಿಲ್ಲ; ಇವರ ದೇಶವು ಅಶ್ವಬಲಭರಿತವಾಗಿದೆ, ಇವರ ರಥಗಳಿಗೆ ಪಾರವಿಲ್ಲ;


ಯಾಕೋಬನ್ನು ಸುಲಿಗೆಗೂ ಇಸ್ರಾಯೇಲನ್ನು ಕೊಳ್ಳೆಗೂ ಕೊಟ್ಟವನು ಯಾರು? ಯಾವನಿಗೆ ವಿರುದ್ಧವಾಗಿ ನಾವು ದ್ರೋಹ ಮಾಡಿದೆವೋ ಆ ಯೆಹೋವನಲ್ಲವೇ. ಆತನ ಜನರು ಆತನ ಮಾರ್ಗಗಳಲ್ಲಿ ನಡೆಯಲೊಲ್ಲದೆ ಆತನ ಉಪದೇಶವನ್ನು ಕೇಳದೆ ಹೋದರಷ್ಟೆ.


ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಸ್ವಾಮೀ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ.


ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;


ಇದೇ ಯೆಹೋವನ ನುಡಿ - ಭ್ರಷ್ಟರಾದ ಮಕ್ಕಳೇ, ತಿರುಗಿಕೊಳ್ಳಿರಿ, ನಾನು ನಿಮಗೆ ಪತಿ; ಒಂದು ಪಟ್ಟಣಕ್ಕೆ ಒಬ್ಬನಂತೆಯೂ ಗೋತ್ರಕ್ಕೆ ಇಬ್ಬರಂತೆಯೂ ಆರಿಸಿ ಚೀಯೋನಿಗೆ ಕರತರುವೆನು.


ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು [ಎಂದು ಯೆಹೋವನು ಅನ್ನುತ್ತಾನೆ. ಅದಕ್ಕೆ ಜನರು] - ಇಗೋ, ನಿನ್ನ ಬಳಿಗೆ ಬಂದೆವು. ನೀನು ಯೆಹೋವನು, ನಮ್ಮ ದೇವರು.


ಆಹಾ, ಬಹುಜಲಮಧ್ಯನಿವಾಸಿನಿಯಾದ ನಗರಿಯೇ, ಧನಭರಿತ ಪುರಿಯೇ, ನಿನ್ನ ಅಂತ್ಯವು ಬಂದಿದೆ, ನೀನು ಸೂರೆಮಾಡಿದ್ದು ಸಾಕು.


ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತಾಡಿಕೊಳ್ಳುತ್ತಿರಲಿಲ್ಲ; ಯಾವನೂ ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು - ಆಹಾ, ನಾನು ಎಂಥಾ ಕೆಲಸ ಮಾಡಿದೆ ಎಂದು ಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೇ ತ್ವರೆಪಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು