Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 57:18 - ಕನ್ನಡ ಸತ್ಯವೇದವು J.V. (BSI)

18 ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡಿಸುತ್ತಾ ಅವರಿಗೆ, ಅವರಲ್ಲಿಯೂ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡೆಸುತ್ತಾ ಅವರಿಗೆ, ಅವರಲ್ಲಿನ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಅವರ ವರ್ತನೆಯನ್ನು ನೋಡಿದ್ದೇನೆ. ಆದರೂ ಅವರನ್ನು ಸ್ವಸ್ಥಪಡಿಸುತ್ತೇನೆ. ಅವರಿಗೆ ದಾರಿತೋರಿಸುತ್ತಾ, ಅವರಿಗೂ ಅವರಿಗಾಗಿ ದುಃಖಿಸುವವರಿಗೂ ಸಾಂತ್ವನ ಸಂಭಾವನೆಯನ್ನು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇಸ್ರೇಲ್ ಎಲ್ಲಿಗೆ ಹೋದನೆಂದು ನಾನು ನೋಡಿದೆನು. ನಾನು ಅವನನ್ನು ಸ್ವಸ್ಥ ಮಾಡುವೆನು. ಅವನನ್ನು ಆದರಿಸುವೆನು. ಒಳ್ಳೆಯ ಮಾತುಗಳಿಂದ ಅವನನ್ನು ರಮಿಸುವೆನು. ಆಗ ಅವನೂ ಅವನ ಜನರೂ ವ್ಯಸನಪಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ, ಅವನನ್ನು ನಡೆಸುತ್ತೇನೆ. ಅವನಿಗೂ, ಅವನ ದುಃಖಿತರಿಗೂ ಆದರಣೆಗಳನ್ನು ಪುನಃಸ್ಥಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 57:18
32 ತಿಳಿವುಗಳ ಹೋಲಿಕೆ  

ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ ಅದಕ್ಕೆ ಸೌಖ್ಯವನ್ನು ಕೊಟ್ಟು ನಿವಾಸಿಗಳನ್ನು ಗುಣಪಡಿಸುವೆನು; ಸ್ಥೈರ್ಯಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು;


ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ನಡಿಸುತ್ತಾನೆ. ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.


ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು [ಎಂದು ಯೆಹೋವನು ಅನ್ನುತ್ತಾನೆ. ಅದಕ್ಕೆ ಜನರು] - ಇಗೋ, ನಿನ್ನ ಬಳಿಗೆ ಬಂದೆವು. ನೀನು ಯೆಹೋವನು, ನಮ್ಮ ದೇವರು.


ನಾನು ನಿನ್ನನ್ನು ಪ್ರೀತಿಸಿರುವದು ಶಾಶ್ವತ ಪ್ರೇಮದಿಂದಲೇ; ಆದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ,


ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿವಿುತ್ತ ಗೋಳಾಡುವದು; ಯೆಹೋವನ ಮಂದೆಯು ಸೆರೆಯಾಗಿ ಹೋದದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವದು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಅವರಿಗೆ ಹಸಿವೆ ಬಾಯಾರಿಕೆಗಳು ಆಗವು. ಝಳವೂ ಬಿಸಿಲೂ ಬಡಿಯವು; ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರುಕ್ಕುವ ಒರತೆಗಳ ಬಳಿಯಲ್ಲಿ ನಡಿಸುವನು.


ಇದಲ್ಲದೆ ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನ ಗಾಯವನ್ನು ಗುಣಮಾಡುವ ದಿವಸದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವದು, ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಿ ಏಳು ದಿನಗಳ ಬೆಳಕಿನಂತಾಗುವದು.


ಆ ದಿನದಲ್ಲಿ ನೀನು ಹೇಳುವದೇನಂದರೆ - ಯೆಹೋವನೇ, ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀಯಲ್ಲವೆ.


ಬನ್ನಿರಿ ವಾದಿಸುವ ಎಂದು ಯೆಹೋವನು ಅನ್ನುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದ ಹಾಗೆ ಬಿಳುಪಾಗುವವು; ಕಿರಮಂಜಿಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.


ಜೀವಿತರ ಗುಂಪಿನಲ್ಲಿ ಸೇರಿದವನಿಗೆ ನಿರೀಕ್ಷೆಯುಂಟು;


ನಿನ್ನ ರಕ್ಷಣಾನಂದವನ್ನು ನಾನು ತಿರಿಗಿ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು.


ಆತನು ಹಸುರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ.


ಅಪರಾಧಗಳು ಹೆಚ್ಚಾಗಿ ಕಂಡುಬರುವ ಹಾಗೆ ಧರ್ಮಶಾಸ್ತ್ರವು ಮಧ್ಯೆ ಬಂತು. ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.


ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಬಹಳವಾಗಿ ಮುದ್ದಿಟ್ಟನು.


ನನ್ನಲ್ಲಿ ಅನೇಕ ಚಿಂತೆಗಳಿರುವಾಗ ನಿನ್ನ ಸಂತೈಸುವಿಕೆಯಿಂದಲೇ ನನ್ನ ಪ್ರಾಣಕ್ಕೆ ಸಂತೋಷವುಂಟಾಗುತ್ತದೆ.


ಇದಲ್ಲದೆ ಯೆಹೋವನು ಐಗುಪ್ತ್ಯರನ್ನು ಹೊಡೆಯುವನು, ಗಾಯಮಾಡಿ ವಾಸಿಮಾಡುವವನಾಗಿಯೇ ಹೊಡೆಯುವನು; ಅವರು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಆತನು ಅವರ ವಿಜ್ಞಾಪನೆಯನ್ನು ಲಾಲಿಸಿ ಅವರನ್ನು ಗುಣಪಡಿಸುವನು.


ನೀವು ಅವಸರದಿಂದ ಹೊರಡಬೇಕಾಗಿಲ್ಲ, ಓಡಿಹೋಗಬೇಕಾಗಿಲ್ಲ; ಯೆಹೋವನು ನಿಮಗೆ ಮುಂಬಲವಾಗಿ ಮುಂದರಿಯುವನು, ಇಸ್ರಾಯೇಲಿನ ದೇವರು ನಿಮಗೆ ಹಿಂಬಲವಾಗಿಯೂ ಇರುವನು.


ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿವಿುತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನುಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡಿಸುತ್ತಾ ಮರುಭೂವಿುಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ ನಿಮ್ಮ ಎಲುಬುಗಳನ್ನು ಸಸಾರಮಾಡುವನು; ನೀವು ತಂಪಾದ ತೋಟಕ್ಕೂ ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.


ನನಗೆ ವಿವರಿಸುವ ದೂತನಿಗೆ ಯೆಹೋವನು ಕರುಣೆಯ ಒಳ್ಳೆಯ ಮಾತುಗಳಿಂದ ಉತ್ತರಕೊಟ್ಟನು.


ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ನಾನೇ, ನಾನೇ ನಿನ್ನನ್ನು ಸಂತೈಸುವವನಾಗಿರುವಲ್ಲಿ ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?


ಯೆಹೋವನು ಇಂತೆನ್ನುತ್ತಾನೆ - ಇಗೋ, ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರಿ ಎಂದು ಜನರು ಹೇಳಿ ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ ನಿನಗೆ ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು