Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 58:3 - ಕನ್ನಡ ಸತ್ಯವೇದವು J.V. (BSI)

3 ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವದೇಕೆ ಅಂದುಕೊಳ್ಳುತ್ತಾರೆ. ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡಿಸಿ ನಿಮ್ಮ ಆಳುಗಳನ್ನು ದುಡಿತಕ್ಕೆಳೆಯುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ” ಅಂದುಕೊಳ್ಳುತ್ತಾರೆ. ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡೆಸಿ ನಿಮ್ಮ ಆಳುಗಳನ್ನು ದುಡಿತಕ್ಕೆ ಎಳೆಯುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ? ನಮ್ಮನ್ನು ನಾವೇ ತಗ್ಗಿಸಿಕೊಂಡಿದ್ದೇವೆ, ನೀನು ಗಮನಿಸದೆ ಇರುವುದೇಕೆ?” ಎಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈಗ ಆ ಜನರು ಹೀಗೆ ಹೇಳುತ್ತಾರೆ, “ನಾವು ನಿನ್ನನ್ನು ಗೌರವಿಸಲು ಉಪವಾಸಮಾಡಿದೆವು. ನೀನು ನಮ್ಮನ್ನೇಕೆ ಗಮನಿಸುವದಿಲ್ಲ? ನಿನ್ನನ್ನು ಗೌರವಿಸುವದಕ್ಕಾಗಿ ನಾವು ನಮ್ಮ ದೇಹಗಳನ್ನು ದಂಡಿಸಿದೆವು. ನೀನೇಕೆ ನಮ್ಮನ್ನು ಗಮನಿಸುವದಿಲ್ಲ?” ಆದರೆ ಯೆಹೋವನು ಹೇಳುವುದೇನೆಂದರೆ: “ವಿಶೇಷ ದಿವಸಗಳಲ್ಲಿ ನಿಮ್ಮ ಇಷ್ಟಾನುಸಾರ ಉಪವಾಸ ಮಾಡುವಿರಿ. ನೀವು ನಿಮ್ಮ ಸ್ವಂತ ದೇಹಗಳನ್ನು ದಂಡಿಸದೆ ನಿಮ್ಮ ಸೇವಕರನ್ನು ದಂಡಿಸುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ‘ನಾವು ಉಪವಾಸ ಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸಲಿಲ್ಲ?’ ‘ನಮ್ಮ ಪ್ರಾಣವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ?’ ಎಂದು ಅವರು ಅಂದುಕೊಳ್ಳುತ್ತಾರೆ. “ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ಇಷ್ಟದ ಕೆಲಸವನ್ನು ನಡೆಸಿ ಮತ್ತು ನಿಮ್ಮ ಕೆಲಸದವರನ್ನು ದುಡಿತಕ್ಕೆ ಎಳೆಯುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 58:3
23 ತಿಳಿವುಗಳ ಹೋಲಿಕೆ  

ನೀವು - ದೇವರನ್ನು ಸೇವಿಸುವದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದರಿಂದ ಆದ ಲಾಭವೇನು;


ಇದು ನಿಮಗೆ ಶಾಶ್ವತವಾದ ನಿಯಮ; ಯಾವದಂದರೆ ಸ್ವದೇಶಸ್ಥರಾದ ನೀವೂ ನಿಮ್ಮಲ್ಲಿ ಇಳುಕೊಂಡಿರುವ ಅನ್ಯದೇಶದವರೂ ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನೂ ಬಿಟ್ಟು [ಉಪವಾಸಮಾಡಿ] ಪ್ರಾಣವನ್ನು ಕುಂದಿಸಿಕೊಳ್ಳಬೇಕು.


ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.


ನಾನು ತುಸು ಆಲೋಚಿಸಿಕೊಂಡು ಶ್ರೀಮಂತರಿಗೂ ಅಧಿಕಾರಿಗಳಿಗೂ - ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವದೆಂದರೇನು ಎಂದು ಹೇಳಿ ಅವರೊಡನೆ ಬಹಳವಾಗಿ ಹೆಣಗಾಡಿ ಅವರಿಗೆ ವಿರೋಧವಾಗಿ ಮಹಾಸಭೆಯನ್ನು ಕೂಡಿಸಿ -


ಆದರೆ ಅವನು ತನ್ನ ತಂದೆಗೆ - ನೋಡು, ಇಷ್ಟು ವರುಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಒಂದಪ್ಪಣೆಯನ್ನಾದರೂ ಎಂದೂ ಮೀರಲಿಲ್ಲ; ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ.


ನಾನು ನನ್ನ ಜನರ ಮೇಲೆ ರೋಷಗೊಂಡು ಅವರನ್ನು ನಿನ್ನ ಕೈವಶ ಮಾಡಿ ನನ್ನ ಸ್ವಾಸ್ತ್ಯವನ್ನು ಹೊಲೆಗೆಡಿಸಿದೆನು; ನೀನು ಅವರನ್ನು ಹೇಗೂ ಕರುಣಿಸದೆ ಮುದುಕರ ಮೇಲೆಯೂ ಬಹುಭಾರವಾದ ನೊಗವನ್ನು ಹೊರಿಸಿದಿ.


ಆದರೆ ಇಗೋ, ಉಲ್ಲಾಸ, ಹರ್ಷ, ದನಕೊಯ್ಯುವದು, ಕುರಿಕಡಿಯುವದು, ಮಾಂಸತಿನ್ನುವದು, ದ್ರಾಕ್ಷಾರಸ ಕುಡಿಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯುವದು [ಇವೇ ನಿಮ್ಮ ಕಾರ್ಯ].


ನಾನು ಅತ್ತತ್ತು ಉಪವಾಸ ಬಿದ್ದದ್ದೆಲ್ಲಾ ಪರಿಹಾಸ್ಯಕ್ಕೆ ಕಾರಣವಾಯಿತು.


ದೇವರು ಬಿಳಾಮನಿಗೆ ಎದುರಾಗಿ ಬಂದಾಗ ಬಿಳಾಮನು ಆತನಿಗೆ - ನಾನು ಆ ಏಳು ಯಜ್ಞಪೀಠಗಳನ್ನು ಕಟ್ಟಿಸಿ ಒಂದೊಂದು ಪೀಠದಲ್ಲಿ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದ್ದೇನೆ ಎಂದು ಹೇಳಲಾಗಿ


ಅದೇ ಏಳನೆಯ ತಿಂಗಳಿನ ಹತ್ತನೆಯ ದಿನವು ಸರ್ವದೋಷಪರಿಹಾರಕ ದಿನ. ಅದರಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು; ನೀವು ಪೂರ್ಣವಾಗಿ ಉಪವಾಸಮಾಡಬೇಕು, ಮತ್ತು ಯೆಹೋವನ ಸನ್ನಿಧಿಯಲ್ಲಿ ಹೋಮವನ್ನು ಮಾಡಬೇಕು.


ಇದು ನಿಮಗೆ ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿರಬೇಕು; ಇದರಲ್ಲಿ ನೀವು ಉಪವಾಸವಾಗಿರಬೇಕು; ಇದೇ ನಿಮಗೆ ಶಾಶ್ವತ ನಿಯಮ.


ಆಮೇಲೆ ಆ ಅಹವಾ ನದಿಯ ಬಳಿಯಲ್ಲಿ - ನಾವು ಉಪವಾಸದಿಂದಿದ್ದು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಕೇಳಿಕೊಳ್ಳಬೇಕೆಂದು ಪ್ರಕಟಿಸಿದೆನು.


ಕಣ್ಣೀರುಸುರಿಸಿ ಅಂಗಲಾಚಿ ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು;


ಒಬ್ಬನು ದೇವರ ಅನ್ಯೋನ್ಯತೆಯಲ್ಲಿ ಸಂತೋಷಪಟ್ಟರೂ ಅವನಿಗೆ ಯಾವ ಪ್ರಯೋಜನವೂ ಇಲ್ಲವೆಂದು ಹೇಳಿದ್ದಾನಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು