Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:6 - ಕನ್ನಡ ಸತ್ಯವೇದವು J.V. (BSI)

6 ಇವರ ಬಲೆಯ ದಾರವು ಬಟ್ಟೆಯಾಗದು, ಇವರು ನೇಯ್ದದ್ದು ಹೊದಿಕೆಯಾಗದು; ಇವರ ಕಾರ್ಯಗಳು ಅಧರ್ಮಕಾರ್ಯಗಳು, ಇವರ ಕೈಯಲ್ಲಿ ಬಲಾತ್ಕಾರವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇವರ ಬಲೆಯ ದಾರವು ಬಟ್ಟೆಯಾಗದು, ಇವರು ನೇಯ್ದದ್ದು ಹೊದಿಕೆಯಾಗದು; ಇವರ ಕಾರ್ಯಗಳು ಅಧರ್ಮಕಾರ್ಯಗಳು, ಇವರ ಕೈಯಲ್ಲಿ ಬಲಾತ್ಕಾರವೇ ತುಂಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿಮ್ಮ ಆ ಬಲೆಯು ನೂಲು ಬಟ್ಟೆಯಾಗದು. ನೀವು ನೇಯ್ದದ್ದು ಹೊದಿಕೆಯಾಗದು. ನಿಮ್ಮ ಕಾರ್ಯಗಳು ಅಕ್ರಮವಾದುವು. ನಿಮ್ಮ ಕೈಕೆಲಸಗಳು ಹಿಂಸಾತ್ಮಕವಾದುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಜೇಡರ ಬಲೆಗಳ ನೂಲಿನಿಂದ ಬಟ್ಟೆ ನೇಯಲಾಗದು. ಆ ಬಲೆಯಿಂದ ನಿಮ್ಮ ಶರೀರವನ್ನು ಮುಚ್ಚಲಾಗುವದಿಲ್ಲ. ಕೆಲವರು ತಮ್ಮ ಕೈಗಳಿಂದ ಇತರರಿಗೆ ಕೇಡುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರ ನೂಲು ವಸ್ತ್ರಕ್ಕಾಗದು. ತಮ್ಮ ಕೆಲಸಗಳಿಂದ ತಮ್ಮನ್ನು ಹೊದ್ದುಕೊಳ್ಳರು. ಅವರ ಕೆಲಸಗಳು ಅಕ್ರಮದ ಕೆಲಸಗಳೇ. ಅವರ ಕೈಗಳಲ್ಲಿ ಹಿಂಸೆಯ ಕ್ರಿಯೆಗಳು ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:6
31 ತಿಳಿವುಗಳ ಹೋಲಿಕೆ  

ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ; ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಬರುತ್ತದೆ; ರೋಗಗಳೂ ವ್ರಣಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.


ನಾನು ನಿನ್ನ ಧರ್ಮವನ್ನು ಬೈಲಿಗೆ ತರುವೆನು, ನಿನ್ನ ಕಾರ್ಯಗಳೇನೋ ನಿನಗೆ ನಿಷ್ಪ್ರಯೋಜನ.


ಹೊಸ್ತಿಲಹಾರಿ ನುಗ್ಗಿ ಮೋಸಹಿಂಸೆಗಳಿಂದ ದೋಚಿದ್ದನ್ನು ತಮ್ಮ ಒಡೆಯನ ಮನೆಯೊಳಗೆ ತುಂಬಿಸುವವರೆಲ್ಲರನ್ನು ಆ ದಿನದಲ್ಲಿ ದಂಡಿಸುವೆನು.


ಪಟ್ಟಣದ ಧನಿಕರು ತುಂಬಾ ಬಲಾತ್ಕಾರಿಗಳು, ಅದರ ನಿವಾಸಿಗಳು ಸುಳ್ಳುಗಾರರು, ಅವರ ಬಾಯನಾಲಿಗೆಯು ಮೋಸಕರ.


ನನ್ನ ಜನರೋ ಕೆಲವು ಕಾಲದಿಂದ ಶತ್ರುಗಳಾಗಿ ಎದ್ದಿದ್ದಾರೆ; ಜಗಳವನ್ನೊಲ್ಲದೆ ನಿರ್ಭಯವಾಗಿ ಹೋಗಿಬರುವವರ ಅಂಗಿಯ ಮೇಲಿನಿಂದ ಶಲ್ಯವನ್ನು ಕಸುಕೊಳ್ಳುತ್ತೀರಿ.


ಆಹಾ, ಆ ಮುಖಂಡರು ಆಪತ್ತಿನ ದಿನದ ಯೋಚನೆಯನ್ನು ದೂರಕ್ಕೆ ತಳ್ಳುತ್ತಾರೆ, ಅನ್ಯಾಯದ ಪೀಠವನ್ನು ಹತ್ತಿರಕ್ಕೆ ತಂದುಕೊಳ್ಳುತ್ತಾರೆ;


ತಮ್ಮ ಉಪ್ಪರಿಗೆಗಳಲ್ಲಿ ಬಾಧೆಕೊಳ್ಳೆಗಳಿಂದ ಸಂಪಾದಿಸಿದ್ದನ್ನು ಕೂಡಿಸಿಟ್ಟುಕೊಂಡಿರುವವರು ನ್ಯಾಯವಾಗಿ ನಡೆಯಲು ಅರಿಯರು; ಇದು ಯೆಹೋವನ ನುಡಿ.


ಒಂದು ಸರಪಣಿಯನ್ನು ಮಾಡು; ಏಕಂದರೆ ದೇಶವು ನರಹತ್ಯಭರಿತವಾಗಿದೆ, ಪಟ್ಟಣವು ಬಲಾತ್ಕಾರಪೂರ್ಣವಾಗಿದೆ.


ಹಿಂಸೆಯು ಬೆಳೆದು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ [ಉಳಿಯರು], ಆ ಜನಸಮೂಹದಲ್ಲಿಯೂ ಅವರ ಆಸ್ತಿಯಲ್ಲಿಯೂ [ಶೇಷವೇನೂ ಇರದು]. ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲದು.


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ತರಗೆಲೆಯೋಪಾದಿಯಲ್ಲಿ ಒಣಗಿ ಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ನೋಡಿರಿ, ನಿಮ್ಮ ಉಪವಾಸದ ಫಲವೇನಂದರೆ - ವ್ಯಾಜ್ಯ, ಕಲಹ, ಕೇಡಿನ ಗುದ್ದು, ಇವುಗಳೇ. ನೀವು ಈಗ ಮಾಡುವ ಉಪವಾಸವು ನಿಮ್ಮ ಪ್ರಾರ್ಥನೆಯನ್ನು ಉನ್ನತಲೋಕಕ್ಕೆ ಮುಟ್ಟಿಸತಕ್ಕದ್ದಲ್ಲ.


ಯೆಹೋವನು ಹೀಗೆ ನುಡಿಯುತ್ತಾನೆ :- ದ್ರೋಹಿಗಳಾದ [ನನ್ನ] ಮಕ್ಕಳ ಗತಿಯನ್ನು ಏನು ಹೇಳಲಿ! ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಸಾಗಿಸಿ ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೆಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ;


ಸೇನಾಧೀಶ್ವರನಾದ ಯೆಹೋವನ ದ್ರಾಕ್ಷೆಯ ತೋಟವು ಇಸ್ರಾಯೇಲ್ಯರ ಮನೆತನ, ಯೆಹೂದದ ಜನವೋ ಆತನ ಇಷ್ಟದ ಗಿಡವೇ; ಆತನು ನ್ಯಾಯವನ್ನು ನಿರೀಕ್ಷಿಸಿದಾಗ ಆಹಾ, ಸಿಕ್ಕಿದ್ದು ನರಹತ್ಯವೇ; ಧರ್ಮವನ್ನು ಎದುರುನೋಡಿದಾಗ ಆಹಾ, ದೊರಕಿದ್ದು ಅರಚಾಟವೇ.


ನಿಮ್ಮ ಮನಸ್ಸಿನ ಕಲ್ಪನೆಯೆಲ್ಲಾ ಕೆಟ್ಟತನವೇ; ನೀವು ದೇಶದವರಿಗೆ ಅನ್ಯಾಯವನ್ನೇ ತೂಗಿಕೊಡುವವರಾಗಿದ್ದೀರಲ್ಲಾ.


ಭೂಲೋಕದವರು ದೇವರ ದೃಷ್ಟಿಗೆ ಕೆಟ್ಟುಹೋಗಿದ್ದರು; ಅನ್ಯಾಯವು ಲೋಕವನ್ನು ತುಂಬಿಕೊಂಡಿತ್ತು.


ಆದರೆ ನನ್ನ ಕೈ ಯಾವ ಬಲಾತ್ಕಾರವನ್ನೂ ಮಾಡಿರಲಿಲ್ಲವಲ್ಲಾ, ನನ್ನ ವಿಜ್ಞಾಪನೆಯು ನಿರ್ಮಲವಾದದ್ದು.


ದೀನದರಿದ್ರರನ್ನು ಹಿಂಸಿಸಿ ಜನರ ಸೊತ್ತನ್ನು ಅಪಹರಿಸಿ ಸಾಲಗಾರನ ಒತ್ತೆಯನ್ನು ಬಿಗಿಹಿಡಿದು ವಿಗ್ರಹಗಳ ಕಡೆಗೆ ಕಣ್ಣೆತ್ತಿ ಅಸಹ್ಯಕಾರ್ಯವನ್ನು ಮಾಡಿ


ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ - ನಾನು ಪತ್ನೀತ್ಯಾಗವನ್ನೂ ಹೆಂಡತಿಗೆ ಅನ್ಯಾಯಮಾಡುವವನನ್ನೂ ಹಗೆಮಾಡುತ್ತೇನೆ; ಇದು ಸೇನಾಧೀಶ್ವರ ಯೆಹೋವನ ನುಡಿ; ಆದಕಾರಣ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ, ದ್ರೋಹಮಾಡಬೇಡಿರಿ.


ಅದರೊಳಗೆಲ್ಲಾ ನಾಶನವೇ; ತಿಪ್ಪಲಾಟವೂ ವಂಚನೆಯೂ ಅದರ ಬೀದಿಗಳಿಂದ ತೊಲಗವು.


ಆತನು ನನಗೆ - ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು - ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡನು ಎಂಬದಾಗಿ ಮಾತಾಡಿಕೊಳ್ಳುತ್ತಿದ್ದಾರಲ್ಲಾ;


ಅಯ್ಯೋ, ಅವಿಧೇಯವೂ ಮಲಿನವೂ ಆದ ಹಿಂಸಕ ನಗರಿಯ ಗತಿಯನ್ನು ಏನು ಹೇಳಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು