Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:8 - ಕನ್ನಡ ಸತ್ಯವೇದವು J.V. (BSI)

8 ಇವರು ಸಮಾಧಾನದ ಮಾರ್ಗವನ್ನೇ ಅರಿಯರು, ಇವರ ಹಾದಿಗಳಲ್ಲಿ ಯಾವ ನ್ಯಾಯವೂ ಇಲ್ಲ, ತಮ್ಮ ಮಾರ್ಗಗಳನ್ನು ವಕ್ರಮಾಡಿಕೊಂಡಿದ್ದಾರೆ, ಅವುಗಳಲ್ಲಿ ನಡೆಯುವ ಯಾವನೂ ಸಮಾಧಾನವನ್ನರಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇವರು ಸಮಾಧಾನದ ಮಾರ್ಗವನ್ನೇ ಅರಿಯರು, ಇವರ ಹಾದಿಗಳಲ್ಲಿ ಯಾವ ನ್ಯಾಯವೂ ಇಲ್ಲ, ತಮ್ಮ ಮಾರ್ಗಗಳನ್ನು ಡೊಂಕು ಮಾಡಿಕೊಂಡಿದ್ದಾರೆ, ಅವುಗಳಲ್ಲಿ ನಡೆಯುವವರು ಸಮಾಧಾನವನ್ನು ಅರಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಶಾಂತಿಸಮಾಧಾನದ ಮಾರ್ಗವನ್ನು ನೀವು ಅರಿಯಿರಿ. ನಿಮ್ಮ ನಡತೆಯಲ್ಲಿ ನ್ಯಾಯನೀತಿ ಎಂಬುದು ಇಲ್ಲ. ನಿಮ್ಮ ಮಾರ್ಗ ಅಂಕುಡೊಂಕಾಗಿದೆ, ಅವುಗಳಲ್ಲಿ ನಡೆಯುವವನು ಶಾಂತಿಸಮಾಧಾನವನ್ನು ಮುಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವರಿಗೆ ಸಮಾಧಾನದ ದಾರಿಯೇ ತಿಳಿಯದು. ಅವರ ಜೀವಿತದಲ್ಲಿ ಒಳ್ಳೆಯತನವೆಂಬುದು ಇಲ್ಲ. ಅವರ ಮಾರ್ಗವು ಕಪಟತನದಿಂದ ತುಂಬಿದೆ. ಅವರಂತೆ ಜೀವಿಸುವವರಿಗೆ ಶಾಂತಿಯೇ ಇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಸಮಾಧಾನದ ಮಾರ್ಗವನ್ನೇ ಅವರು ಅರಿಯರು. ಅವರ ದಾರಿಗಳಲ್ಲಿ ನ್ಯಾಯವಿಲ್ಲ. ತಮ್ಮ ಹಾದಿಗಳನ್ನು ವಕ್ರಮಾಡಿಕೊಂಡಿದ್ದಾರೆ. ಅವುಗಳಲ್ಲಿ ನಡೆಯುವವರೆಲ್ಲರೂ ಸಮಾಧಾನವನ್ನರಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:8
20 ತಿಳಿವುಗಳ ಹೋಲಿಕೆ  

ಸಮಾಧಾನದ ಮಾರ್ಗವನ್ನೇ ಅರಿಯರು.


ಕತ್ತಲಲ್ಲಿಯೂ ಮರಣಾಂಧಕಾರದಲ್ಲಿಯೂ ವಾಸಿಸಿರುವವರಾದ ನಮಗೆ ಪ್ರಕಾಶ ಕೊಟ್ಟು ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವದು ಅಂದನು.


ಸೇನಾಧೀಶ್ವರನಾದ ಯೆಹೋವನ ದ್ರಾಕ್ಷೆಯ ತೋಟವು ಇಸ್ರಾಯೇಲ್ಯರ ಮನೆತನ, ಯೆಹೂದದ ಜನವೋ ಆತನ ಇಷ್ಟದ ಗಿಡವೇ; ಆತನು ನ್ಯಾಯವನ್ನು ನಿರೀಕ್ಷಿಸಿದಾಗ ಆಹಾ, ಸಿಕ್ಕಿದ್ದು ನರಹತ್ಯವೇ; ಧರ್ಮವನ್ನು ಎದುರುನೋಡಿದಾಗ ಆಹಾ, ದೊರಕಿದ್ದು ಅರಚಾಟವೇ.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಮರುಗ ಸೋಪು ಜೀರಿಗೆಗಳಲ್ಲಿ ಹತ್ತರಲ್ಲೊಂದು ಪಾಲುಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಗೌರವವಾದದ್ದನ್ನು, ಅಂದರೆ ನ್ಯಾಯವನ್ನೂ ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿರಿ. ಇವುಗಳನ್ನು ಮಾಡಬೇಕಾಗಿತ್ತು; ಅವುಗಳನ್ನೂ ಬಿಡಬಾರದು.


ಯೆರೂಸಲೇವಿುನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನನುಸರಿಸುವ ಒಬ್ಬನಾದರೂ ಇದ್ದಾನೋ, ಇಂಥ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷವಿುಸುವೆನು.


ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಯೆಹೋವನು ನುಡಿಯುತ್ತಾನೆ.


ಸನ್ಮಾರ್ಗಿಗೆ ಉದ್ಧಾರ, ವಕ್ರಮಾರ್ಗಿಗೆ ತಟ್ಟನೆ ಪತನ.


ಆಕೆಯ ದಾರಿಗಳು ಸುಖಕರವಾಗಿವೆ, ಆಕೆಯ ಮಾರ್ಗಗಳೆಲ್ಲಾ ಸಮಾಧಾನವೇ.


ಅವರ ಮಾರ್ಗಗಳು ವಕ್ರವಾಗಿವೆ. ಅವರ ನಡತೆಗಳು ದುರ್ನಡತೆಗಳೇ.


ಯೆಹೋವನು ಡೊಂಕುದಾರಿಹಿಡಿದವರನ್ನು ಪಾತಕಿಗಳ ಗತಿಗೆ ಹೋಗಮಾಡಲಿ. ಇಸ್ರಾಯೇಲ್ಯರಿಗೆ ಶುಭವುಂಟಾಗಲಿ.


ಆದಕಾರಣ [ಯೆಹೋವನ] ನ್ಯಾಯನಿರ್ಣಯವು ನಮಗೆ ದೂರವಾಗಿದೆ. [ಆತನ] ರಕ್ಷಣಧರ್ಮದ ಕಾರ್ಯವು ನಮಗೆ ಸಂಧಿಸುವದಿಲ್ಲ; ಬೆಳಕನ್ನು ಎದುರುನೋಡುತ್ತಿರುವ ನಮ್ಮನ್ನು ಕತ್ತಲೆಯೇ ಆವರಿಸಿದೆ, ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಾವು ಅಂಧಕಾರದಲ್ಲೇ ನಡೆಯುತ್ತೇವೆ.


ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮೂಲುಗುತ್ತಲೇ ಇದ್ದೇವೆ; ನಾವು [ಯೆಹೋವನ] ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ಸಿಕ್ಕದು, [ಆತನ] ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರ.


ಅವರಾದರೋ ಕತ್ತಲ ಹಾದಿಗಳನ್ನು ಹಿಡಿಯಬೇಕೆಂದು ಧರ್ಮಮಾರ್ಗಗಳನ್ನು ತೊರೆದುಬಿಡುವರು;


ದೋಷಿಯ ದಾರಿಡೊಂಕು; ಶುದ್ಧನ ನಡತೆ ಸರಲ.


ನನ್ನನ್ನು ತೊರೆದು ಮನಸ್ಸುಬಂದ ಹಾಗೆ ದುರ್ಮಾರ್ಗದಲ್ಲಿ ನಡೆಯುವ ಜನರನ್ನು ನಾನು ದಿನವೆಲ್ಲಾ ಕೈ ಚಾಚಿ ಕರೆದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು