Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:9 - ಕನ್ನಡ ಸತ್ಯವೇದವು J.V. (BSI)

9 ಆದಕಾರಣ [ಯೆಹೋವನ] ನ್ಯಾಯನಿರ್ಣಯವು ನಮಗೆ ದೂರವಾಗಿದೆ. [ಆತನ] ರಕ್ಷಣಧರ್ಮದ ಕಾರ್ಯವು ನಮಗೆ ಸಂಧಿಸುವದಿಲ್ಲ; ಬೆಳಕನ್ನು ಎದುರುನೋಡುತ್ತಿರುವ ನಮ್ಮನ್ನು ಕತ್ತಲೆಯೇ ಆವರಿಸಿದೆ, ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಾವು ಅಂಧಕಾರದಲ್ಲೇ ನಡೆಯುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದಕಾರಣ ಯೆಹೋವನ ನ್ಯಾಯನಿರ್ಣಯವು ನಮಗೆ ದೂರವಾಗಿದೆ. ಆತನ ರಕ್ಷಣಾಧರ್ಮದ ಕಾರ್ಯವು ನಮಗೆ ಲಭಿಸುವುದಿಲ್ಲ; ಬೆಳಕನ್ನು ಎದುರುನೋಡುತ್ತಿರುವ ನಮ್ಮನ್ನು ಕತ್ತಲೆಯೇ ಆವರಿಸಿದೆ, ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಾವು ಅಂಧಕಾರದಲ್ಲೇ ನಡೆಯುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ಜನರು ಹೀಗೆನ್ನುತ್ತಾರೆ : ಈ ಕಾರಣದಿಂದಲೇ ನ್ಯಾಯನಿರ್ಣಯವು ನಮ್ಮಿಂದ ದೂರವಾಗಿದೆ, ಸದ್ಧರ್ಮವು ನಮಗೆ ದೊರಕದೆ ಇದೆ. ಬೆಳಕಿಗಾಗಿ ಕಾದಿರುವ ನಮ್ಮನ್ನು ಕತ್ತಲು ಆವರಿಸಿದೆ. ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಮ್ಮನ್ನು ಅಂಧಕಾರವೇ ಬೆನ್ನಟ್ಟುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಎಲ್ಲಾ ನ್ಯಾಯನೀತಿಗಳು ಇಲ್ಲವಾಗಿವೆ. ನಮ್ಮ ಬಳಿಯಲ್ಲಿ ಅಂಧಕಾರವು ಇರುವದರಿಂದ ನಾವು ಬೆಳಕಿಗಾಗಿ ಕಾಯಬೇಕಾಗಿದೆ. ಪ್ರಕಾಶಮಾನವಾದ ಬೆಳಕಿಗಾಗಿ ಆಶಿಸುತ್ತಿರುವಾಗ ನಮಗೆ ಸಿಕ್ಕಿದ್ದು ಕೇವಲ ಕತ್ತಲೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದಕಾರಣ ನ್ಯಾಯ ನಿರ್ಣಯವು ನಮಗೆ ದೂರವಾಗಿದೆ. ನೀತಿಯು ನಮ್ಮನ್ನು ತಲುಪುವುದಿಲ್ಲ, ಬೆಳಕನ್ನು ಎದುರು ನೋಡುತ್ತಿರುವ ನಮ್ಮನ್ನು ಕತ್ತಲೆಯೇ ಆವರಿಸಿದೆ; ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಾವು ಅಂಧಕಾರದಲ್ಲಿಯೇ ನಡೆಯುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:9
21 ತಿಳಿವುಗಳ ಹೋಲಿಕೆ  

ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರ ಮೇಲೆ ಗುರುಗುಟ್ಟುವರು; ದೇಶದಲ್ಲಿಯೋ, ಆಹಾ, ಅಂಧಕಾರವೂ ವ್ಯಾಕುಲವೂ ತುಂಬಿರುವವು, ಮೋಡ ಕವಿದು ಬೆಳಕು ಕತ್ತಲಾಗುವದು.


ನಾನು ಒಳ್ಳೇದನ್ನು ನಿರೀಕ್ಷಿಸುತ್ತಿರುವಲ್ಲಿ ಕೇಡು ಬಂತು, ಬೆಳಕನ್ನು ಎದುರುನೋಡುತ್ತಿರುವಾಗ ಕತ್ತಲಾಯಿತು.


ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಕೇಡನ್ನು ನೋಡಲಾರದ ಅತಿಪವಿತ್ರ ದೃಷ್ಟಿಯುಳ್ಳವನೇ, ಕೆಡುಕನ್ನು ಕಟಾಕ್ಷಿಸಲಾರದವನೇ, ಏಕೆ ಕೆಡುಕರನ್ನು ಕಟಾಕ್ಷಿಸುತ್ತೀ? ದುಷ್ಟನು ತನಗಿಂತ ಯೋಗ್ಯನನ್ನು ನುಂಗಿಬಿಡುವಾಗ ಏಕೆ ಸುಮ್ಮನಿದ್ದೀ?


ಕೇಡು ಯೆಹೋವನಿಂದಿಳಿದು ಯೆರೂಸಲೇವಿುನ ಪುರದ್ವಾರಕ್ಕೆ ತಗಲಿದ ಕಾರಣ ಮಾರೋತಿನವರು ಮೇಲುಂಟಾಗುವದಿಲ್ಲವೋ ಎಂದು ವೇದನೆಪಡುತ್ತಾರೆ.


ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? ಚೀಯೋನಿನ ಮೇಲೆ ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದೀಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!


ನಾವು ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!


ಇವರು ಬುದ್ಧಿಹೀನರೂ ವಿವೇಕ ಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ. ಭೂವಿುಯ ಅಸ್ತಿವಾರಗಳೆಲ್ಲಾ ಕದಲುತ್ತವೆ.


ದುಷ್ಟರ ಮಾರ್ಗವೋ ಕತ್ತಲಿನಂತಿದೆ; ತಾವು ಯಾವದಕ್ಕೆ ಎಡವಿಬಿದ್ದೆವೆಂದು ಅವರಿಗೆ ಗೊತ್ತಾಗದು.


ಅವರು ಘೋರಕಷ್ಟಕ್ಕೊಳಗಾಗಿ ಹಸಿದುಕೊಂಡು ದೇಶದಲ್ಲಿ ಅಲೆಯುವರು; ಹಸಿದಾಗ ರೇಗಿಕೊಂಡು ತಮ್ಮ ರಾಜನನ್ನೂ ತಮ್ಮ ದೇವರನ್ನೂ ಶಪಿಸುವರು;


ಮೇಲಕ್ಕೆ ಕಣ್ಣೆತ್ತಿದರೂ ಭೂವಿುಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವವು; ಕಾರ್ಗತ್ತಲೆಗೆ ತಳ್ಳಲ್ಪಡುವರು.


ಇವರು ಸಮಾಧಾನದ ಮಾರ್ಗವನ್ನೇ ಅರಿಯರು, ಇವರ ಹಾದಿಗಳಲ್ಲಿ ಯಾವ ನ್ಯಾಯವೂ ಇಲ್ಲ, ತಮ್ಮ ಮಾರ್ಗಗಳನ್ನು ವಕ್ರಮಾಡಿಕೊಂಡಿದ್ದಾರೆ, ಅವುಗಳಲ್ಲಿ ನಡೆಯುವ ಯಾವನೂ ಸಮಾಧಾನವನ್ನರಿಯನು.


ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮೂಲುಗುತ್ತಲೇ ಇದ್ದೇವೆ; ನಾವು [ಯೆಹೋವನ] ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ಸಿಕ್ಕದು, [ಆತನ] ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರ.


ನ್ಯಾಯವು ಹಿಂದಕ್ಕೆ ತಳ್ಳಲ್ಪಟ್ಟಿದೆ, ಧರ್ಮವು ದೂರದಲ್ಲಿ ನಿಂತಿದೆ, ಸತ್ಯವು ಚಾವಡಿಯಲ್ಲಿ ಬಿದ್ದುಹೋಗಿದೆ, ಯಥಾರ್ಥವು ಪ್ರವೇಶಿಸಲಾರದು.


ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು, ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.


ಆತನು ನನ್ನನ್ನು ಕರೆದುಕೊಂಡು ಹೋಗಿ ಬೆಳಕಿನಲ್ಲಲ್ಲ, ಕತ್ತಲಲ್ಲೇ ನಡೆಯಮಾಡಿದ್ದಾನೆ,


ಆಹಾ, ಆ ಯಾಜಕಪ್ರವಾದಿಗಳು ಕುರುಡರಂತೆ ಬೀದಿಗಳಲ್ಲಿ ಅಲೆಯುತ್ತಾರೆ; ರಕ್ತದಿಂದ ಹೊಲಸಾಗಿ ಹೋಗಿದ್ದಾರೆ, ಅವರ ಬಟ್ಟೆಯನ್ನು ಯಾರೂ ಮುಟ್ಟರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂವಿುಯನ್ನು ಹಗಲಿನಲ್ಲೇ ಮೊಬ್ಬುಮಾಡುವೆನು.


ನಾನು ಮುಂದೆ ಹೋಗದ ಹಾಗೆ ಆತನು ನನ್ನ ದಾರಿಗೆ ಅಡ್ಡಗೋಡೆ ಹಾಕಿ ನನ್ನ ಹಾದಿಗಳನ್ನು ಕತ್ತಲು ಕವಿಯುವಂತೆ ಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು