Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:13 - ಕನ್ನಡ ಸತ್ಯವೇದವು J.V. (BSI)

13 ನನ್ನ ಪವಿತ್ರಾಲಯವನ್ನು ಭೂಷಿಸುವದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವದು; ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನ ಪವಿತ್ರಾಲಯವನ್ನು ಭೂಷಿಸುವುದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವುದು; ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬರುವುದು ನಿನ್ನಲ್ಲಿಗೆ ಲೆಬನೋನಿನ ವೈಭವವು ಅದರ ತುರಾಯಿ, ಅಗಸೆ, ತಿಲಕ ಈ ಮರಗಳಾವುವು. ಅಲಂಕರಿಸುವುವು ನನ್ನ ಪವಿತ್ರಾಲಯವನು ಮಹಿಮೆಪಡಿಸುವೆನು ನನ್ನ ಪಾದಪೀಠದ ಮಂದಿರವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಲೆಬನೋನಿನ ಎಲ್ಲಾ ಅಮೂಲ್ಯವಸ್ತುಗಳನ್ನು ನಿನಗೆ ಕೊಡಲಾಗುವುದು. ಜನರು ದೇವದಾರು ಮರಗಳನ್ನೂ ಇತರ ವಿಶೇಷ ಮರಗಳನ್ನೂ ನಿನಗೆ ತಂದುಕೊಡುವರು. ಈ ಮರಗಳಿಂದ ತೊಲೆಗಳನ್ನು ಮಾಡಿ ನನ್ನ ಪವಿತ್ರ ಆಲಯವನ್ನು ಸೌಂದರ್ಯಗೊಳಿಸುವರು. ಅದು ನನ್ನ ಸಿಂಹಾಸನದ ಮುಂದಿರುವ ಪಾದಪೀಠದಂತಿರುವದು. ಅದಕ್ಕೆ ನಾನು ಹೆಚ್ಚಾದ ಗೌರವ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಲೆಬನೋನಿನ ವೈಭವವು ತುರಾಯಿ, ಅಗಸೆ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವುದಕ್ಕೆ ನಿನ್ನ ಬಳಿಗೆ ಬರುವುವು. ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:13
13 ತಿಳಿವುಗಳ ಹೋಲಿಕೆ  

ಅದು ಸಮೃದ್ಧಿಯಾಗಿ ಹೂಬಿಟ್ಟು ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವದು; ಲೆಬನೋನಿನ ಮಹಿಮೆಯೂ ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ ನಮ್ಮ ದೇವರ ವೈಭವವನ್ನೂ ಕಾಣುವವು.


ಅವರು ಕೂಡಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನಂದರೆ - ನನ್ನ ಸಹೋದರರೇ, ಪ್ರಜೆಗಳೇ, ಕೇಳಿರಿ. ಯೆಹೋವನ ನಿಬಂಧನಮಂಜೂಷಕ್ಕೋಸ್ಕರವೂ ನಮ್ಮ ದೇವರ ಪಾದಪೀಠಕ್ಕೋಸ್ಕರವೂ ಆಲಯವನ್ನು ಕಟ್ಟಿಸಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.


ಬನ್ನಿರಿ, ಆತನ ಮಂದಿರಕ್ಕೆ ಹೋಗಿ ಆತನ ಪಾದಪೀಠದ ಮುಂದೆ ಅಡ್ಡಬೀಳೋಣ.


ಆತನ ಸಾನ್ನಿಧ್ಯದಲ್ಲಿ ಮಾನಮಹಿಮೆಗಳೂ ಆತನ ಪವಿತ್ರಾಲಯದಲ್ಲಿ ಬಲಸೌಂದರ್ಯಗಳೂ ಇರುತ್ತವೆ.


ಯೆಹೋವನು ಹೀಗನ್ನುತ್ತಾನೆ - ಆಕಾಶವು ನನಗೆ ಸಿಂಹಾಸನ, ಭೂವಿುಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?


ಮುಳ್ಳಿಗೆ ಬದಲಾಗಿ ತುರಾಯಿಯೂ ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು; ಆ ವನವು ಯೆಹೋವನಾಮಸ್ಮರಣೆಗೆ ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.


[ಎಜ್ರನು ಹೇಳಿದ್ದು - ] ನಮ್ಮ ಪಿತೃಗಳ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇವಿುನಲ್ಲಿರುವ ಯೆಹೋವನ ಆಲಯವನ್ನು ಶೋಭಿಸುವ ಸ್ಥಿತಿಗೆ ತರುವದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸು ಮಾಡಿದ್ದಾನೆ;


ನಮ್ಮ ಯೆಹೋವದೇವರನ್ನು ಘನಪಡಿಸಿರಿ; ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ. ಆತನು ಪರಿಶುದ್ಧನು.


ಕೇದಾರಿನ ಹಿಂಡುಗಳೆಲ್ಲಾ ನಿನ್ನಲ್ಲಿ ಕೂಡುವವು; ನೆಬಾಯೋತಿನ ಟಗರುಗಳು ನೀನು ಮಾಡುವ ಯಜ್ಞಕ್ಕೆ ಅನುಕೂಲಿಸಿ ನನ್ನ ಯಜ್ಞವೇದಿಯ ಮೇಲೆ ಸಮರ್ಪಕವಾಗಿ ಒಯ್ಯಲ್ಪಡುವವು; ನನ್ನ ಸುಂದರಾಲಯವನ್ನು ಚಂದಗೊಳಿಸುವೆನು.


ನಾನು ಹಿಂದಿರುಗಲು ಆಹಾ, ತೊರೆಯ ಎರಡು ದಡಗಳಲ್ಲಿಯೂ ಅನೇಕಾನೇಕ ವೃಕ್ಷಗಳು ಕಾಣಿಸಿದವು.


ಈಗ ನನ್ನ ಒಡೆಯನು ತಾನು ಮಾತುಕೊಟ್ಟ ಮೇರೆಗೆ ಗೋದಿ ಜವೆಗೋದಿ ಎಣ್ಣೆ ದ್ರಾಕ್ಷಾರಸ ಇವುಗಳನ್ನು ತನ್ನ ದಾಸರಿಗೆ ಕಳುಹಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು