Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:16 - ಕನ್ನಡ ಸತ್ಯವೇದವು J.V. (BSI)

16 ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮೊಲೆಯೂಡಿಸುವರು ಜನಾಧಿಪತಿಗಳು ನಿನಗೆ ಮೊಲೆಗೂಸಾಗುವೆ ನೀನು ಜನಾಂಗಗಳಿಗೆ. ಆಗ ತಿಳಿಯುವೆ ನಿನ್ನನುದ್ಧರಿಸಿದ ಸರ್ವೇಶ್ವರ ನಾನೆಂದು ನಿನ್ನ ವಿಮೋಚಕನು, ಯಕೋಬ್ಯರ ಪರಾಕ್ರಮಿಯು ನಾನೆಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜನಾಂಗಗಳು ನಿನಗೆ ಬೇಕಾದದ್ದೆಲ್ಲವನ್ನು ಕೊಡುವರು. ಒಂದು ಮಗು ಹೇಗೆ ತಾಯಿಯ ಹಾಲನ್ನು ಕುಡಿಯುವದೋ ಅದೇ ರೀತಿಯಲ್ಲಿ ಅರಸರುಗಳಿಂದ ನೀನು ಧನವನ್ನು ಕುಡಿಯುವಿ. ಆಗ ಯೆಹೋವನಾದ ನಾನೇ ನಿನ್ನನ್ನು ರಕ್ಷಿಸಿದೆನೆಂದು ತಿಳಿದುಕೊಳ್ಳುವಿ. ಆಗ ಯಾಕೋಬ್ಯರ ಮಹಾದೇವರು ನಿಮ್ಮನ್ನು ಕಾಪಾಡುವನೆಂದು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇತರ ಜನಾಂಗಗಳವರಿಂದ ಹಾಲನ್ನು ಕುಡಿಯುವೆ. ಅರಸರು ನಿನಗೆ ಹಾಲು ಕುಡಿಸುವರು. ಯೆಹೋವನಾದ ನಾನೇ ನಿನ್ನ ರಕ್ಷಕನೂ, ನಿನ್ನ ವಿಮೋಚಕನೂ, ಯಾಕೋಬಿನ ಪರಾಕ್ರಮಿಯೂ ಎಂದು ತಿಳಿದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:16
25 ತಿಳಿವುಗಳ ಹೋಲಿಕೆ  

ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಗಳು ನಿನಗೆ ಸಾಕುತಾಯಿಯರು ಆಗುವರು; ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳಿಯನ್ನು ನೆಕ್ಕುವರು; ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡರು ಎಂದು ನಿನಗೆ ಗೊತ್ತಾಗುವದು.


ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವದು, ನಿಮ್ಮ ಎಲುಬುಗಳು ಹಸಿಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.


ನೀವೋ ಯೆಹೋವನ ಯಾಜಕರೆಂಬ ಬಿರುದನ್ನು ಹೊಂದುವಿರಿ, ಜನರು ನಿಮ್ಮನ್ನು ನಮ್ಮ ದೇವರ ಸೇವಕರು ಎಂದು ಕರೆಯುವರು; ಜನಾಂಗಗಳ ಆಸ್ತಿಯನ್ನನುಭವಿಸುವಿರಿ, ಅವುಗಳ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.


ಆಗ ಅವರು ತಮ್ಮ ದೇವರಾದ ಯೆಹೋವನೆಂಬ ನಾನು ತಮ್ಮೊಂದಿಗಿದ್ದೇನೆಂತಲೂ ಇಸ್ರಾಯೇಲ್ ವಂಶದವರಾದ ತಾವು ನನ್ನ ಜನರಾಗಿದ್ದೇವೆಂತಲೂ ನಿಶ್ಚಯಿಸಿಕೊಳ್ಳುವರು; ಇದು ಕರ್ತನಾದ ಯೆಹೋವನ ನುಡಿ.


ಆದರೆ ಚೀಯೋನಿಗೂ ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ವಿಮೋಚಕನಾಗಿ ಬರುವನು. ಯೆಹೋವನೇ ಇದನ್ನು ನುಡಿದಿದ್ದಾನೆ.


ಅದರ ಬೆಳಕಿನಿಂದ ಸರ್ವಜನಾಂಗದವರು ಸಂಚಾರಮಾಡುವರು; ಭೂರಾಜರು ತಮ್ಮ ವೈಭವವನ್ನು ಅಲ್ಲಿಗೆ ತರುವರು.


ಜನಾಂಗಗಳ ವೈಭವವೂ ಘನವೂ ಅಲ್ಲಿಗೆ ಬರುವವು.


ನಾನು ನಿಮ್ಮನ್ನು ನನ್ನ ಪ್ರಜೆಯೆಂದು ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನು ಎಂಬ ನಾನೇ ನಿಮ್ಮ ದೇವರಾಗಿದ್ದೇನೆಂಬದು ನಿಮಗೆ ತಿಳಿದುಬರುವದು.


ಇಂತಿರಲು ಕರ್ತನೂ ಸೇನಾಧೀಶ್ವರನೂ ಇಸ್ರಾಯೇಲ್ಯರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ - ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು;


ಚೀಯೋನಿನ ನಿವಾಸಿಗಳೇ, ಕೂಗಿರಿ, ಉತ್ಸಾಹ ಧ್ವನಿಮಾಡಿರಿ; ಇಸ್ರಾಯೇಲ್ಯರ ಸದಮಲಸ್ವಾವಿುಯು ನಿಮ್ಮ ಮಧ್ಯದಲ್ಲಿ ಮಹತ್ತಾಗಿದ್ದಾನಷ್ಟೆ ಎಂಬದೇ.


ಅವು ಐಗುಪ್ತದೇಶದಲ್ಲಿ ಸೇನಾಧೀಶ್ವರನಾದ ಯೆಹೋವನ ಗುರುತಾಗಿಯೂ ಸಾಕ್ಷಿಯಾಗಿಯೂ ಇರುವವು; ಹಿಂಸಕರ ದೆಸೆಯಿಂದ ಯೆಹೋವನನ್ನು ಕೂಗಿಕೊಳ್ಳಲು ಆತನು ಅವರಿಗಾಗಿ ಹೋರಾಡುವ ಶೂರನಾದ ರಕ್ಷಕನನ್ನು ಕಳುಹಿಸಿ ಅವರನ್ನುದ್ಧರಿಸುವನು.


ಆ ದಿನದಲ್ಲಿ ಜನರು - ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನೇ ಯೆಹೋವನು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ, ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು ಎಂದು ಹೇಳಿಕೊಳ್ಳುವರು.


ತಪ್ಪಿದ ಹೃದಯವುಳ್ಳವರೆಲ್ಲರೂ ವಿವೇಕಿಗಳಾಗುವರು, ಗುಣುಗುಟ್ಟುವವರು ಉಪದೇಶವನ್ನು ಗಮನಿಸುವರು ಎಂದು ಹೇಳುತ್ತಾನೆ.


ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಧರ್ಮವಿಧಾಯಕ, ಯೆಹೋವನು ನಮ್ಮ ರಾಜ; ಆತನೇ ನಮ್ಮನ್ನು ರಕ್ಷಿಸುವನು.


ನಾನೇ, ನಾನೇ ಯೆಹೋವನು; ನಾನು ಹೊರತು ಯಾವ ರಕ್ಷಕನೂ ಇಲ್ಲ.


ಇಸ್ರಾಯೇಲ್ಯರ ದೇವರೇ, ರಕ್ಷಕನೇ, ನಿಶ್ಚಯವಾಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.


ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವದಕ್ಕೆ ಮುಂಚೆ ಯಾರು ತಿಳಿಸಿದರು? ಯೆಹೋವನೆಂಬ ನಾನಲ್ಲವೆ. ನಾನು ಹೊರತು ಇನ್ನು ಯಾವ ದೇವರೂ ಇಲ್ಲ, ನನ್ನ ವಿನಹ ಸತ್ಯಸ್ವರೂಪನೂ ರಕ್ಷಕನೂ ಆದ ದೇವರು ಇಲ್ಲವೇ ಇಲ್ಲ.


ತಾಮ್ರಕ್ಕೆ ಬದಲಾಗಿ ಚಿನ್ನವನ್ನು, ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನ್ನು, ಮರವಿದ್ದಲ್ಲಿ ತಾಮ್ರವನ್ನು, ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನ್ನು ಒದಗಿಸುವೆನು; ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ ಧರ್ಮವನ್ನು ನಿನಗೆ ಅಧಿಕಾರಿಯನ್ನಾಗಿ ನೇವಿುಸುವೆನು.


ನಿಜವಾಗಿ ಇವರು ನನ್ನ ಜನರು, ನನ್ನ ಮಕ್ಕಳು, ಮೋಸ ಮಾಡಲಾರರು ಎಂದು ಆತನು ಅಂದುಕೊಂಡು ಅವರಿಗೆ ರಕ್ಷಕನಾದನು.


ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವಾ, ನೀನೇ ನಮ್ಮ ಪಿತೃ; ಆದಿಯಿಂದಲೂ ನಮ್ಮ ವಿಮೋಚಕನು ಅನ್ನಿಸಿಕೊಂಡಿದ್ದೀ.


ನಾನು ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು; ಹೌದು, ಕ್ರೂರರ ಕೈಯಿಂದ ರಕ್ಷಿಸುವೆನು.


ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವದು.


ಹೀಗಿರಲು ನನ್ನ ಜನರು ನನ್ನ ನಾಮದ ಮಹತ್ತನ್ನು ತಿಳಿದು [ತಮ್ಮ ಸಂಗಡ] ಮಾತಾಡುವವನು ನಾನೇ, ಹೌದು ನಾನೇ, ಎಂದು [ರಕ್ಷಣೆಯ] ಆ ದಿನದಲ್ಲಿ ಗ್ರಹಿಸಿಕೊಳ್ಳುವ ಹಾಗೆ ಮಾಡುವೆನು. ಇದೇ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು