Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:2 - ಕನ್ನಡ ಸತ್ಯವೇದವು J.V. (BSI)

2 ಇಗೋ, ಕತ್ತಲು ಭೂವಿುಯನ್ನು ಆವರಿಸಿದೆ, ಕಾರ್ಗತ್ತಲು ಜನಾಂಗಗಳನ್ನು ಮುಚ್ಚಿದೆ; ನಿನ್ನ ಮೇಲಾದರೋ ಯೆಹೋವನು ಉದಯಿಸುವನು, ಆತನ ತೇಜಸ್ಸು ನಿನ್ನಲ್ಲಿ ಕಾಣಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಗೋ, ಕತ್ತಲು ಭೂಮಿಯನ್ನು ಆವರಿಸಿದೆ, ಕಾರ್ಗತ್ತಲು ಜನಾಂಗಗಳನ್ನು ಮುಚ್ಚಿದೆ; ನಿನ್ನ ಮೇಲಾದರೋ ಯೆಹೋವನು ಉದಯಿಸುವನು, ಆತನ ತೇಜಸ್ಸು ನಿನ್ನಲ್ಲಿ ಕಾಣಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇಗೋ ಜಗತ್ತನು ಮುತ್ತಿದೆ ಕತ್ತಲು ಜನಾಂಗಗಳನು ಆವರಿಸಿದೆ ಕಾರ್ಗತ್ತಲು. ನಿನ್ನ ಮೇಲಾದರೋ ಉದಯಿಸುವನು ಸರ್ವೇಶ್ವರನು ನಿನ್ನಲ್ಲಿ ಗೋಚರವಾಗುವುದು ಆತನಾ ತೇಜಸ್ಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಕತ್ತಲೆಯು ಈಗ ಭೂಮಿಯನ್ನು ಕವಿದಿದೆ. ಜನರು ಕತ್ತಲೆಯಲ್ಲಿದ್ದಾರೆ. ಆದರೆ ಯೆಹೋವನ ಪ್ರಕಾಶವು ನಿನ್ನ ಮೇಲಿರುವದು. ಆತನ ಮಹಿಮೆಯು ನಿನ್ನ ಮೇಲೆ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇಗೋ, ಕತ್ತಲೆ ಭೂಮಿಯನ್ನೂ, ಗಾಢಾಂಧಕಾರವು ಜನರನ್ನೂ ಮುಚ್ಚುವುದು. ಆದರೆ ನಿನ್ನ ಮೇಲೆ ಯೆಹೋವ ದೇವರು ಉದಯಿಸುವರು. ಆತನ ಮಹಿಮೆಯು ನಿನ್ನ ಮೇಲೆ ಕಾಣಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:2
35 ತಿಳಿವುಗಳ ಹೋಲಿಕೆ  

ದೇವರು ನಮ್ಮನ್ನು ಅಂಧಕಾರದ ದೊರೆತನದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ರಾಜ್ಯದೊಳಗೆ ಸೇರಿಸಿದನು.


ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ಅವರು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು ನನ್ನಲ್ಲಿ ನಂಬಿಕೆಯಿಡುವದರಿಂದ ಪಾಪಪರಿಹಾರವನ್ನೂ ಪವಿತ್ರರಾದವರಲ್ಲಿ ಹಕ್ಕನ್ನೂ ಹೊಂದುವಂತೆ ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ;


ನಾವೆಲ್ಲರೂ ಮುಸುಕುತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ಪ್ರಭಾವದಿಂದ ಅಧಿಕಪ್ರಭಾವಕ್ಕೆ ಹೋಗುತ್ತಾ ಆ ಪ್ರಭಾವದ ಸಾರೂಪ್ಯವುಳ್ಳವರೇ ಆಗುತ್ತೇವೆ; ಇದು ದೇವರಾತ್ಮನಾಗಿರುವ ಕರ್ತನ ಕೆಲಸಕ್ಕನುಸಾರವಾದದ್ದೇ.


ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ.


ಗತಿಸಿಹೋದ ಕಾಲದಲ್ಲಿ ಆತನು ಎಲ್ಲಾ ಜನಾಂಗಗಳನ್ನು ತಮ್ಮ ತಮ್ಮ ಮನಸ್ಸಿಗೆ ತೋಚಿದ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟನು.


ನಾನಂತು ಆತನನ್ನು ಬಲ್ಲೆನು; ಆತನನ್ನು ಅರಿಯೆನೆಂದು ಹೇಳಿದರೆ ನಿಮ್ಮ ಹಾಗೆ ಸುಳ್ಳುಗಾರನಾಗುವೆನು; ಆದರೆ ಆತನನ್ನು ತಿಳಿದಿದ್ದೇನೆ, ಆತನ ವಾಕ್ಯವನ್ನು ಕೈಕೊಂಡು ನಡೆಯುತ್ತೇನೆ.


ದೇವರನ್ನು ಯಾರೂ ಎಂದೂ ಕಂಡಿಲ್ಲ; ಯಾವನು ಏಕಪುತ್ರನೂ ಸ್ವತಃ ದೇವರೂ ಆಗಿದ್ದು ತಂದೆಯ ಎದೆಯಲ್ಲಿದ್ದಾನೋ ಆತನೇ ತಿಳಿಯಪಡಿಸಿದನು.


ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಪ್ರಾಕಾರದಲ್ಲೆಲ್ಲಾ ವ್ಯಾಪಿಸಿತ್ತು.


ಅದಲ್ಲದೆ ಕೋರಹನು ತಮಗೆ ಎದುರಾಗಿ ಸರ್ವಸಮೂಹದವರನ್ನು ದೇವದರ್ಶನದ ಗುಡಾರದ ಬಾಗಲಿನ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ತೇಜಸ್ಸು ಸಮೂಹದವರೆಲ್ಲರಿಗೂ ಹೊಳೆಯಿತು.


ತರುವಾಯ ಮೋಶೆಯೂ ಆರೋನನೂ ದೇವದರ್ಶನದ ಗುಡಾರದೊಳಗೆ ಹೋದರು. ಅವರು ಅಲ್ಲಿಂದ ಹೊರಗೆ ಬಂದಾಗ ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು.


ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರ ಬಳಿಯಲ್ಲಿತ್ತು; ಆ ವಾಕ್ಯವು ದೇವರಾಗಿತ್ತು.


ಕುರುಡರೇ, ಯಾವದು ಹೆಚ್ಚಿನದು? ಕಾಣಿಕೆಯೋ, ಆ ಕಾಣಿಕೆಯನ್ನು ಪಾವನ ಮಾಡುವ ಯಜ್ಞವೇದಿಯೋ?


ಅವರ ಮಾತನ್ನು ಬಿಡಿರಿ; ತಾವೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸುವದಕ್ಕೆ ಹೋಗುತ್ತಾರೆ; ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಕುಣಿಯಲ್ಲಿ ಬೀಳುವರು ಅಂದನು.


ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು, ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.


ಇಸ್ರಾಯೇಲ್ಯರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.


ಯೆಹೋವನ ತೇಜಸ್ಸಿನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದವರಾದರು.


ದಾರಿತೋರಿಸುವ ಕುರುಡರೇ, ನೀವು ಸೊಳ್ಳೇ ಸೋಸುವವರು, ಒಂಟೇ ನುಂಗುವವರು.


ಆತನು ಮಹಿಮೆಯಲ್ಲಿ ಬಂದು ಚೀಯೋನನ್ನು ತಿರಿಗಿ ಕಟ್ಟಿಸಿದನೆಂದೂ


ಯಾಕೋಬನ ಮನೆತನದವರೇ, ಬನ್ನಿರಿ, ಯೆಹೋವನ ಜ್ಞಾನಪ್ರಕಾಶದಲ್ಲಿ ನಡೆಯುವ!


ಚೀಯೋನ್ ಪರ್ವತದ ಸಂಪೂರ್ಣ ಮಂದಿರದ ಮೇಲೆಯೂ ಅಲ್ಲಿನ ಕೂಟಗಳ ಮೇಲೆಯೂ ಹಗಲಲ್ಲಿ ಧೂಮಮೇಘವನ್ನು, ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನು, ಉಂಟು ಮಾಡುವನು. [ಈ] ಪ್ರಭಾವದ ಮೇಲೆಲ್ಲಾ ಆವರಣವಿರುವದು.


ನಿಮಗೆ ಪ್ರಿಯವಾದದ್ದನ್ನು ಹಸಿದವರಿಗೆ ಒದಗಿಸಿ ಕುಗ್ಗಿದವರ ಆಶೆಯನ್ನು ನೆರವೇರಿಸಿದರೆ ಆಗ ನಿಮಗೆ ಕತ್ತಲಲ್ಲಿ ಬೆಳಕು ಉದಯಿಸುವದು, ನಿಮ್ಮ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವದು.


ಆಕೆಯ ನಿವಿುತ್ತ ದುಃಖಿಸುವವರೇ, ನೀವೆಲ್ಲರೂ - ಆಕೆಯ ಸಮಾಧಾಯಕ ಸ್ತನ್ಯವನ್ನು ಕುಡಿದು ತೃಪ್ತಿಗೊಳ್ಳುವೆವು. ಹೌದು, ಆಕೆಯ ವೈಭವದ ಸಮೃದ್ಧಿಯನ್ನು ಹೀರುತ್ತಾ ಹಿಗ್ಗುವೆವು ಎಂದು ಆಕೆಯೊಂದಿಗೆ ಉತ್ಸಾಹದಿಂದ ಉಲ್ಲಾಸಿಸಿರಿ.


ಮೇಲಕ್ಕೆ ಕಣ್ಣೆತ್ತಿದರೂ ಭೂವಿುಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವವು; ಕಾರ್ಗತ್ತಲೆಗೆ ತಳ್ಳಲ್ಪಡುವರು.


ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಭೇದಿಸಿಕೊಂಡು ಬರುವದು, ನಿಮ್ಮ ಕ್ಷೇಮವು ಬೇಗನೆ ವಿಕಸಿಸುವದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿ ಮುಂದರಿಯುವದು, ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವದು.


ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇವಿುನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಸುಮ್ಮನಿರದೆ ಯೆರೂಸಲೇವಿುನ ಕ್ಷೇಮವನ್ನು ಚಿಂತಿಸುತ್ತಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು