Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:3 - ಕನ್ನಡ ಸತ್ಯವೇದವು J.V. (BSI)

3 ಜನಾಂಗಗಳು ನಿನ್ನ ಬೆಳಕಿಗೆ ನೆರೆಯುವವು, ಅರಸರು ನಿನ್ನಲ್ಲಿನ ಉದಯಪ್ರಕಾಶಕ್ಕೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಜನಾಂಗಗಳು ನಿನ್ನ ಬೆಳಕಿಗೆ ನೆರೆದು ಬರುವವು, ಅರಸರೂ ನಿನ್ನಲ್ಲಿನ ಉದಯಪ್ರಕಾಶಕ್ಕೆ ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ರಾಷ್ಟ್ರಗಳು ಬರುವುವು ನಿನ್ನ ಬೆಳಕಿಗೆ ಅರಸರು ನಿನ್ನ ಉದಯದ ಶೋಭೆಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜನಾಂಗಗಳು ನಿನ್ನ ಬೆಳಕಿನ ಕಡೆಗೆ ಬರುವರು. ಅರಸರುಗಳು ನಿನ್ನ ಪ್ರಕಾಶಮಾನವಾದ ಬೆಳಕಿನತ್ತ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇತರ ಜನಾಂಗಗಳು ನಿನ್ನ ಪ್ರಕಾಶಕ್ಕೂ, ಅರಸರು ನಿನ್ನ ಉದಯದ ಕಾಂತಿಗೂ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:3
43 ತಿಳಿವುಗಳ ಹೋಲಿಕೆ  

ಹಾಗೆಯೇ ಕರ್ತನು ನಮಗೆ ಅಪ್ಪಣೆಕೊಟ್ಟಿದ್ದಾನೆ; ಹೇಗಂದರೆ - ನೀನು ಲೋಕದ ಕಟ್ಟಕಡೆಯವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇವಿುಸಿದ್ದೇನೆ ಎಂದು ದೇವರು ಹೇಳಿದ್ದಾನೆ ಅಂದರು.


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಗಳು ನಿನಗೆ ಸಾಕುತಾಯಿಯರು ಆಗುವರು; ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳಿಯನ್ನು ನೆಕ್ಕುವರು; ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡರು ಎಂದು ನಿನಗೆ ಗೊತ್ತಾಗುವದು.


ಅದರ ಬೆಳಕಿನಿಂದ ಸರ್ವಜನಾಂಗದವರು ಸಂಚಾರಮಾಡುವರು; ಭೂರಾಜರು ತಮ್ಮ ವೈಭವವನ್ನು ಅಲ್ಲಿಗೆ ತರುವರು.


ಆದರೆ ನಾನು ಭೂವಿುಯಲ್ಲಿಂದ ಮೇಲಕ್ಕೆ ಎತ್ತಲ್ಪಟ್ಟಾಗ ಎಲ್ಲರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಎಂದು ಹೇಳಿದನು.


ಯೆಹೋವನ ಈ ಮಾತನ್ನು ಕೇಳಿರಿ - ಐಗುಪ್ತದ ಆದಾಯವೂ ಕೂಷಿನ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು - ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.


ಮನುಷ್ಯಜಾತಿಯ ಉಳಿದ ಜನಗಳೂ ಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ ಕರ್ತನನ್ನು ಹುಡುಕುವವರಾಗಿರಬೇಕೆಂದು


ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವವು; ನಾನು ನಿನ್ನ ಮಧ್ಯದಲ್ಲಿ ವಾಸಿಸುವೆನು; ಆಗ ಸೇನಾಧೀಶ್ವರ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬದು ನಿನಗೆ ಗೊತ್ತಾಗುವದು.


ಇಗೋ, ಇವರು ದೂರದಿಂದ ಬರುತ್ತಾರೆ, ಇಗೋ, ಇವರು ಬಡಗಲಿಂದ ಮತ್ತು ಪಡುವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.


ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಮ ಸ್ಥಾನವು ವೈಭವವುಳ್ಳದ್ದಾಗಿರುವದು.


ಯೆಹೋವನೇ, ಭೂರಾಜರೆಲ್ಲರು ನೀನು ಉಸಿರಿದ ನುಡಿಗಳನ್ನು ಕೇಳಿ ನಿನ್ನನ್ನು ಸ್ತುತಿಸುವರು;


ಅರಸುಗಳು ಯೆರೂಸಲೇಮ್ ಪಟ್ಟಣಕ್ಕೆ ನಿನಗೋಸ್ಕರ ಕಾಣಿಕೆಗಳನ್ನು ತಂದು ಸಮರ್ಪಿಸಲಿ.


ಏಳನೆಯ ದೇವದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾ ಶಬ್ದಗಳುಂಟಾಗಿ - ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ಉಂಟಾಯಿತು; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು ಎಂದು ಹೇಳಿದವು.


ಪಾಪಪರಿಹಾರಕ್ಕೋಸ್ಕರ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಮಾತು ಯೆರೂಸಲೇಮು ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡುವದೆಂತಲೂ ಬರೆದದೆ.


ಆದ್ದರಿಂದ ನೀವು ಹೊರಟುಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ; ಅವರಿಗೆ ತಂದೆಯ, ಮಗನ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿ


ನನ್ನ ಜನರು ಎದೋವಿುನ ವಿುಕ್ಕ ಭಾಗವನ್ನೂ ಯೆಹೋವನ ಪ್ರಜೆ ಎನಿಸಿಕೊಂಡಿದ್ದ ಸಕಲ ಜನಾಂಗಗಳನ್ನೂ ಸ್ವಾಧೀನಮಾಡಿಕೊಳ್ಳುವ ಹಾಗೆ ಹಾಳಾದದ್ದನ್ನು ನಾನು ನಿಲ್ಲಿಸಿ ಪೂರ್ವಕಾಲದಲ್ಲಿದ್ದಂತೆ ಅದನ್ನು ತಿರಿಗಿ ಕಟ್ಟಿಸುವೆನು ಎಂಬದಾಗಿ ಈ ಕಾರ್ಯಗಳನ್ನು ನೆರವೇರಿಸುವ ಯೆಹೋವನು ನುಡಿದಿದ್ದಾನೆ.


ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು; ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು.


ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.


ವಿದೇಶೀಯರು ನಿನ್ನ ಪೌಳಿಗೋಡೆಗಳನ್ನು ಕಟ್ಟುವರು, ಅವರ ಅರಸರು ನಿನ್ನನ್ನು ಸೇವಿಸುವರು; ನನ್ನ ಕೋಪದಿಂದ ನಿನ್ನನ್ನು ಹೊಡೆದುಬಿಟ್ಟು ನನ್ನ ಕೃಪೆಯಿಂದ ನಿನ್ನನ್ನು ಕರುಣಿಸಿದ್ದೇನಷ್ಟೆ.


ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಅವನನ್ನು ಸೇವಿಸಲಿ.


ಭೂಮಂಡಲದವರೆಲ್ಲರು ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; [ಯೆಹೋವನೇ,] ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.


ಆದದರಿಂದ ಅರಸುಗಳಿರಾ, ವಿವೇಕಿಗಳಾಗಿರ್ರಿ; ದೇಶಾಧಿಪತಿಗಳಿರಾ, ಬುದ್ಧಿಮಾತುಗಳಿಗೆ ಕಿವಿಗೊಡಿರಿ.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.


ಜನಾಂಗಗಳೂ ರಾಜ್ಯಗಳೂ ಕೂಡಿಬಂದು ಇವರೊಡನೆ ಯೆಹೋವನನ್ನು ಸೇವಿಸುತ್ತವೆ ಎಂದು ಹೇಳುವದು.


ನೀನು ಕುರುಡರಿಗೆ ಕಣ್ಣುಕೊಟ್ಟು ಬಂದಿಗಳನ್ನು ಸೆರೆಯಿಂದಲೂ ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ಕರತರಬೇಕು ಎಂದು


ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ.


ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನಂದರೆ - ನಾನು ಕೂಡಿಸಿದ ಇಸ್ರಾಯೇಲ್ಯರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು ಎಂಬದೇ.


ಜನಾಂಗಗಳು ನಿನ್ನ ಧರ್ಮವನ್ನು, ಸಕಲ ರಾಜರು ನಿನ್ನ ವೈಭವವನ್ನು ನೋಡುವರು; ಯೆಹೋವನ ಬಾಯಿ ನೇವಿುಸಿದ ಹೊಸ ಹೆಸರು ನಿನಗೆ ದೊರೆಯುವದು.


ಆತನು ಮಹಿಮೆಯಲ್ಲಿ ಬಂದು ಚೀಯೋನನ್ನು ತಿರಿಗಿ ಕಟ್ಟಿಸಿದನೆಂದೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು