Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 61:8 - ಕನ್ನಡ ಸತ್ಯವೇದವು J.V. (BSI)

8 ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ, ಕೊಳ್ಳೆಯನ್ನೂ ಅನ್ಯಾಯವನ್ನೂ ದ್ವೇಷಿಸುತ್ತೇನೆ; ಸತ್ಯಸಂಧತೆಯನ್ನು ಅನುಸರಿಸಿ ಇವರ ನಷ್ಟಕ್ಕೆ ಪ್ರತಿಫಲವನ್ನು ಕೊಟ್ಟು ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ. ಕೊಳ್ಳೆಯನ್ನೂ, ಅನ್ಯಾಯವನ್ನೂ ದ್ವೇಷಿಸುತ್ತೇನೆ. ನಾನು ಇವರ ನಷ್ಟಕ್ಕೆ ಬದಲಾಗಿ ಪ್ರತಿಫಲವನ್ನು ಪ್ರಾಮಾಣಿಕವಾಗಿ ಕೊಟ್ಟು, ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಸರ್ವೇಶ್ವರ ಆದ ನಾನು ನ್ಯಾಯಪ್ರಿಯ. ಸುಲಿಗೆ ಅನ್ಯಾಯ, ನನಗೆ ಅಸಹ್ಯ. ಪ್ರಾಮಾಣಿಕವಾಗಿ ನೀಡುವೆನು ಇವರಿಗೆ ಪ್ರತಿಫಲ ಮಾಡಿಕೊಳ್ಳುವೆನು ಇವರೊಡನೆ ಅಳಿಯದ ಒಪ್ಪಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯಾಕೆಂದರೆ ನಾನೇ ಯೆಹೋವನು. ನಾನು ನ್ಯಾಯದಲ್ಲಿ ಸಂತೋಷಿಸುವೆನು. ನಾನು ಕದಿಯುವದನ್ನೂ ಎಲ್ಲಾ ದುಷ್ಟತ್ವಗಳನ್ನೂ ದ್ವೇಷಿಸುತ್ತೇನೆ. ಅದಕ್ಕಾಗಿ ನಾನು ಅಂಥಾ ಜನರಿಗೆ ದೊರಕಬೇಕಾದ ಶಿಕ್ಷೆಯನ್ನು ಕೊಡುವೆನು. ನನ್ನ ಜನರೊಂದಿಗೆ ನಿತ್ಯಕಾಲದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ಯೆಹೋವನಾದ ನಾನು ನ್ಯಾಯವನ್ನು ಪ್ರೀತಿಮಾಡುತ್ತೇನೆ. ಸುಲಿಗೆಯನ್ನೂ ಅನ್ಯಾಯವನ್ನೂ ಹಗೆಮಾಡುತ್ತೇನೆ. ನನ್ನ ನಿಷ್ಠೆಯಲ್ಲಿ ನಾನು ನನ್ನ ಜನರಿಗೆ ಪ್ರತಿಫಲ ನೀಡುತ್ತೇನೆ ಮತ್ತು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 61:8
34 ತಿಳಿವುಗಳ ಹೋಲಿಕೆ  

ಯಾಕಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ. ಸಜ್ಜನರು ಆತನ ಸಾನ್ನಿಧ್ಯದಲ್ಲಿ ಇರುವರು.


ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು ನಾನು ಲೋಕದಲ್ಲಿ ಪ್ರೀತಿನೀತಿನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬದಕ್ಕೇ ಹೆಚ್ಚಳಪಡಲಿ; ಪ್ರೀತಿನೀತಿನ್ಯಾಯಗಳೇ ನನಗೆ ಆನಂದವೆಂದು ಯೆಹೋವನು ಅನ್ನುತ್ತಾನೆ.


ನಾನು ನಿಮಗೆ ಹಿತಮಾಡುವದನ್ನು ಬಿಟ್ಟು ವಿಮುಖನಾಗೆನು ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವದು.


ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದು ನಾನು ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.


ನಾನು ಹಿಡಿದಿರುವ ದಾರಿಯು ನೀತಿಯೇ, ನ್ಯಾಯಮಾರ್ಗಗಳಲ್ಲಿ ನಡೆಯುತ್ತೇನೆ.


ಅರಸನ ಬಲವು ನೀತಿಯಲ್ಲಿ ಆಸಕ್ತವಾಗಿದೆ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.


ನಿನ್ನ ಎಲ್ಲಾ ನಡವಳಿಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.


ನೀನು ಧರ್ಮವನ್ನು ಪ್ರೀತಿಸಿದಿ, ಅಧರ್ಮವನ್ನು ದ್ವೇಷಿಸಿದಿ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.


ಆತನು ನೀತಿನ್ಯಾಯಗಳನ್ನು ಪ್ರೀತಿಸುವವನು; ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ.


ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಸ್ಥಿರವಾಗಿರುತ್ತದಲ್ಲವೋ? ಆತನು ನನ್ನೊಡನೆ ಒಡಂಬಡಿಕೆಮಾಡಿಕೊಂಡಿದ್ದಾನೆ; ಅದು ಎಂದಿಗೂ ಬಿದ್ದು ಹೋಗುವದಿಲ್ಲ, ಎಲ್ಲಾ ವಿಷಯಗಳಲ್ಲಿ ಖಂಡಿತವಾಗಿದೆ. ನನ್ನ ರಕ್ಷಣೆಯ ಮೂಲವೂ ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ?


ದೇವರ ಪ್ರೀತಿಯಲ್ಲಿಯೂ ಕ್ರಿಸ್ತನ ತಾಳ್ಮೆಯಲ್ಲಿಯೂ ಸೇರುವಂತೆ ಕರ್ತನೇ ನಿಮ್ಮನ್ನು ನಡಿಸಲಿ.


ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಪರಿಶುದ್ಧನಾದ ದೇವರು ಧರ್ಮವನ್ನು ನಡಿಸುವದರಲ್ಲಿ ಪರಿಶುದ್ಧನೆನಿಸಿಕೊಳ್ಳುವನು.


ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆಯನ್ನು ಮಾಡಿಕೊಂಡ ನನ್ನ ಭಕ್ತರನ್ನು ನನ್ನ ಬಳಿಗೆ ಕರಕೊಂಡು ಬನ್ನಿರಿ ಎಂದು ಆಜ್ಞಾಪಿಸುತ್ತಾನೆ.


[ಯೆಹೋವನು] - ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು [ಅನ್ನುತ್ತಾನಲ್ಲಾ].


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕರಾಜ್ಯದ ಬಾಗಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ; ನೀವಂತೂ ಒಳಕ್ಕೆ ಹೋಗುವದಿಲ್ಲ, ಒಳಕ್ಕೆ ಹೋಗಬೇಕೆಂದಿರುವವರನ್ನೂ ಹೋಗಗೊಡಿಸುವದಿಲ್ಲ.


ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಸೊಕ್ಕಿರಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.


ಅದು ರಾಜಶಾಸನದಂತಿರುವದೆಂದು ಯಾಕೋಬನಿಗೂ ಶಾಶ್ವತವಾದ ಒಡಂಬಡಿಕೆಯಾಗಿರುವದೆಂದು ಇಸ್ರಾಯೇಲನಿಗೂ ಮಾತುಕೊಟ್ಟನು.


ನಾನು ನ್ಯಾಯವನ್ನು ನೂಲನ್ನಾಗಿಯೂ ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಅಸತ್ಯದ ಆಶ್ರಯವನ್ನು ಬಡಿದುಕೊಂಡು ಹೋಗುವದು, ಜಲಪ್ರವಾಹವು [ಮೋಸದ] ಮರೆಯನ್ನು ಮುಣುಗಿಸುವದು.


ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ.


ಯೆಹೋವನು ಹೀಗನ್ನುತ್ತಾನೆ - ನ್ಯಾಯವನ್ನು ಅನುಸರಿಸಿರಿ, ಧರ್ಮವನ್ನು ಆಚರಿಸಿರಿ; ಏಕಂದರೆ ನನ್ನ ವಿಮೋಚನ ಕ್ರಿಯೆಯು ಬೇಗನೆ ಬರುವದು, ನನ್ನ ರಕ್ಷಣಧರ್ಮದ ಕಾರ್ಯವು ಶೀಘ್ರವಾಗಿ ವ್ಯಕ್ತವಾಗುವದು.


ನಾನು ಸೃಷ್ಟಿಸುವ ನೂತನಾಕಾಶಮಂಡಲವೂ ನೂತನಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, [ಈ ಸೇವೆಯು] ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ಛೀಗುಟ್ಟುತ್ತೀರಿ; ಕಳವಿನ ಪಶುವನ್ನೂ ಕುಂಟಾದದ್ದನ್ನೂ ರೋಗಿಯಾದದ್ದನ್ನೂ ತಂದೊಪ್ಪಿಸುತ್ತೀರಿ; ಇಂಥ ನೈವೇದ್ಯವನ್ನು ತಂದೊಪ್ಪಿಸುತ್ತಿರುವಲ್ಲಿ ನಾನು ಅದನ್ನು ನಿಮ್ಮ ಕೈಯಿಂದ ಸ್ವೀಕರಿಸಲೋ; ಇದು ಯೆಹೋವನ ನುಡಿ.


ಹೀಗಾದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಸಂಗಡ ಎಂದಿಗೂ ತಪ್ಪದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.


ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು