Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 62:12 - ಕನ್ನಡ ಸತ್ಯವೇದವು J.V. (BSI)

12 ನಿನ್ನ ಜನರು ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು ಎಂದು ಅನ್ನಿಸಿಕೊಳ್ಳುವರು, ನಿನಗೋ ಪತಿಯು ವರಿಸಿ ತ್ಯಜಿಸದ ಪುರಿ ಎಂದು ಹೆಸರು ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನ ಜನರು, “ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು” ಎಂದು ಅನ್ನಿಸಿಕೊಳ್ಳುವರು, ನಿನಗೋ, “ಪತಿಯು ವರಿಸಿ, ತ್ಯಜಿಸದ ಪಟ್ಟಣ” ಎಂದು ಹೆಸರು ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ‘ಪವಿತ್ರ ಪ್ರಜೆ’ ಎನಿಸಿಕೊಳ್ಳುವುದು ನಿಮ್ಮ ಜನತೆ ‘ಸರ್ವೇಶ್ವರ ಸ್ವಾಮಿಯೇ ಉದ್ಧರಿಸಿದ ಜನತೆ’. ನಿನ್ನ ಹೆಸರೋ, ‘ಪ್ರಾಪ್ತ ನಗರಿ’ ಪತಿ ವರಿಸಿ ಕೈ ಬಿಡದ ಪುರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆತನ ಜನರು “ಪವಿತ್ರಜನ”ರೆಂದೂ, “ಯೆಹೋವನಿಂದ ರಕ್ಷಿಸಲ್ಪಟ್ಟವ”ರೆಂದೂ ಕರೆಯಲ್ಪಡುವರು. ಜೆರುಸಲೇಮ್, “ದೇವರಿಗೆ ಬೇಕಾದ ಪಟ್ಟಣ”ವೆಂದೂ, “ದೇವರಿರುವ ಪಟ್ಟಣ”ವೆಂದೂ ಕರೆಯಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಅವರು, ಪರಿಶುದ್ಧ ಜನರೂ, ಯೆಹೋವ ದೇವರು ವಿಮೋಚಿಸಿದವರೂ ಎಂದು ಎನಿಸಿಕೊಳ್ಳುವರು ನಿನಗೆ ಹುಡುಕಿದ ಹಾಗೂ ಕೈ ಬಿಡದ ಪಟ್ಟಣ, ಎಂದು ಹೆಸರು ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 62:12
30 ತಿಳಿವುಗಳ ಹೋಲಿಕೆ  

ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ನೀನು ಇನ್ನು ಮೇಲೆ ಗಂಡಬಿಟ್ಟವಳು ಎನಿಸಿಕೊಳ್ಳೆ, ನಿನ್ನ ಸೀಮೆಗೆ ಬಂಜೆ ಎಂಬ ಹೆಸರು ಇನ್ನಿರದು; ನೀನು ಎನ್ನುಲ್ಲಾಸಿನಿ ಎನಿಸಿಕೊಳ್ಳುವಿ, ನಿನ್ನ ಸೀಮೆಗೆ ವಿವಾಹಿತೆ ಎಂಬ ಹೆಸರಾಗುವದು; ಏಕಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವದು,


ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತಲೂ ಇವರಿಗೆ ಹೆಚ್ಚಾದ ಕೀರ್ತಿಘನಮಾನಗಳನ್ನುಂಟುಮಾಡುವೆನೆಂದೂ ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಯೆಹೋವನಿಗೋಸ್ಕರ ಮೀಸಲಾದ ಜನರಾಗುವರೆಂದೂ ಒಡಂಬಟ್ಟಿದ್ದಾನೆ.


ಸಿಂಹವು ಅಲ್ಲಿರದು, ಕ್ರೂರ ಜಂತು ಅಲ್ಲಿ ಸೇರದು, ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು;


ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸಿ ಆತನು ಹೇಳಿದ ಮಾರ್ಗದಲ್ಲೇ ನಡೆದರೆ ಆತನು ವಾಗ್ದಾನ ಮಾಡಿದಂತೆ ನಿಮ್ಮನ್ನು ತನಗೋಸ್ಕರ ಮೀಸಲಾದ ಜನರನ್ನಾಗಿ ಸ್ಥಾಪಿಸುವನು.


ಯಾಕಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನವಾಗುವದಕ್ಕೆ ಆದುಕೊಂಡನು.


ದ್ರವ್ಯಾಶೆಯಿಲ್ಲದವರಾಗಿರಿ; ನಿಮಗಿರುವವುಗಳಲ್ಲಿ ತೃಪ್ತರಾಗಿರಿ; ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ, ಎಂದಿಗೂ ತೊರೆಯುವದಿಲ್ಲವೆಂದು ದೇವರು ತಾನೇ ಹೇಳಿದ್ದಾನೆ.


ಮತ್ತು ನಾನೂ ನಿನಗೆ ಒಂದು ಮಾತನ್ನು ಹೇಳುತ್ತೇನೆ, ಅದೇನಂದರೆ - ನೀನು ಪೇತ್ರನು, ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುವೆನು; ಪಾತಾಳಲೋಕದ ಬಲವು ಅದನ್ನು ಸೋಲಿಸಲಾರದು.


ಮತ್ತು ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಯಿಸುವೆನು; ಅವರೆದುರಿನ ಕತ್ತಲನ್ನು ಬೆಳಕುಮಾಡಿ ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು.


ಯೆಹೋವನ ವಿಮುಕ್ತರು ಅಂದರೆ ಆತನು ಶತ್ರುಗಳಿಂದ ಬಿಡಿಸಿ


ಇದಲ್ಲದೆ ಈ ಹಟ್ಟಿಗೆ ಸೇರದಿರುವ ಇನ್ನು ಬೇರೆ ಕುರಿಗಳು ನನಗೆ ಅವೆ, ಅವುಗಳನ್ನೂ ನಾನು ತರಬೇಕು; ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು, ಒಬ್ಬನೇ ಕುರುಬನಿರುವನು.


ಅದಿರಲಿ; ಸತ್ಯಭಾವದಿಂದ ದೇವಾರಾಧನೆ ಮಾಡುವವರು ಆತ್ಮೀಯ ರೀತಿಯಲ್ಲಿ ಸತ್ಯಕ್ಕೆ ತಕ್ಕ ಹಾಗೆ ತಂದೆಯನ್ನು ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ; ತಂದೆಯು ತನ್ನನ್ನು ಆರಾಧಿಸುವವರು ಇಂಥವರೇ ಆಗಿರಬೇಕೆಂದು ಅಪೇಕ್ಷಿಸುತ್ತಾನಲ್ಲವೇ.


ಮನುಷ್ಯಕುಮಾರನು ಕೆಟ್ಟುಹೋಗಿರುವದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದೆನು, ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ನಾಮವನ್ನೆತ್ತಿ ಪ್ರಾರ್ಥಿಸದ ಜನಾಂಗಕ್ಕೂ - ಇಗೋ, ನಾನಿದ್ದೇನೆ ನಾನಿದ್ದೇನೆ ಎನ್ನುತ್ತಿದ್ದೆನು.


ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನವೂ ಆಗಿರುವಿರಿ. ಇವೇ ನೀನು ಇಸ್ರಾಯೇಲ್ಯರಿಗೆ ಹೇಳಬೇಕಾದ ಮಾತುಗಳು ಎಂದನು.


ಚೀಯೋನ್ ಪಟ್ಟಣಕ್ಕೆ [ನನ್ನ] ನ್ಯಾಯದ ಮೂಲಕವೂ ದೇಶಾಂತರದಿಂದ ಬಿಡುಗಡೆಯಾಗಿ ಬರುವ ಅದರ ಪ್ರಜೆಗಳಿಗೆ [ನನ್ನ] ಧರ್ಮದ ಮೂಲಕವೂ ವಿಮೋಚನೆಯಾಗುವದು.


ಮತ್ತು ಚೀಯೋನಿನಲ್ಲಿ ಉಳಿದವರು, ಯೆರೂಸಲೇವಿುನಲ್ಲಿ ನಿಂತವರು, ಅಂತು ಜೀವಬಾಧ್ಯರ ಪಟ್ಟಿಯಲ್ಲಿ ಹೆಸರುಬಿದ್ದ ಯೆರೂಸಲೇವಿುನವರೆಲ್ಲರೂ ದೇವರ ಜನರೆನಿಸಿಕೊಳ್ಳುವರು.


ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.


ಸಮುದ್ರವನ್ನೂ ಮಹಾಸಾಗರದ ಜಲರಾಶಿಯನ್ನೂ ಬತ್ತಿಸಿ ವಿಮುಕ್ತಜನರು ಹಾದುಹೋಗುವದಕ್ಕೆ ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದ ಬಾಹು ನೀನೇ ಹೌದು.


ಯೆಹೋವನ ಈ ಮಾತನ್ನು ಕೇಳಿರಿ, ಲಾಭಪಡೆಯದೆ ನಿಮ್ಮನ್ನು ಮಾರಿದೆನು, ಹಣತಕ್ಕೊಳ್ಳದೆ ನಿಮ್ಮನ್ನು ಬಿಡುಗಡೆ ಮಾಡುವೆನು.


ಜನಾಂಗಗಳು ನಿನ್ನ ಧರ್ಮವನ್ನು, ಸಕಲ ರಾಜರು ನಿನ್ನ ವೈಭವವನ್ನು ನೋಡುವರು; ಯೆಹೋವನ ಬಾಯಿ ನೇವಿುಸಿದ ಹೊಸ ಹೆಸರು ನಿನಗೆ ದೊರೆಯುವದು.


ಅಲ್ಲಿ ರಾಜಮಾರ್ಗವಿರುವದು, ಹೌದು [ಹೋಗಿಬರುವ] ದಾರಿ; ಅದು ಪರಿಶುದ್ಧಮಾರ್ಗ ಎನಿಸಿಕೊಳ್ಳುವದು; ಯಾವ ಅಶುದ್ಧನೂ ಅಲ್ಲಿ ನಡೆಯನು, ಅದು ದೇವಜನರಿಗಾಗಿಯೇ ಇರುವದು, ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.


ನಿನ್ನ ಸ್ವಕೀಯಜನರು ಸ್ವಲ್ಪಕಾಲ ಮಾತ್ರ [ನಿನ್ನ ಸ್ವಾಸ್ತ್ಯವನ್ನು] ಅನುಭವಿಸುತ್ತಿದ್ದರು; ಈಗ ನಮ್ಮ ವೈರಿಗಳು ನಿನ್ನ ಪವಿತ್ರಾಲಯವನ್ನು ತುಳಿದುಬಿಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು