Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 62:7 - ಕನ್ನಡ ಸತ್ಯವೇದವು J.V. (BSI)

7 ಯೆಹೋವನಿಗೆ ಜ್ಞಾಪಿಸುವವರೇ, ಆತನು ಯೆರೂಸಲೇಮನ್ನು ಭದ್ರಪಡಿಸಿ ಲೋಕಪ್ರಸಿದ್ಧಿಗೆ ತರುವ ತನಕ ನಿಮಗೆ ವಿರಾಮವಿಲ್ಲದಿರಲಿ, ಆತನಿಗೂ ವಿರಾಮಕೊಡದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನು ಯೆರೂಸಲೇಮನ್ನು ಭದ್ರಪಡಿಸಿ, ಲೋಕಪ್ರಸಿದ್ಧಿಗೆ ತರುವ ತನಕ ನಿಮಗೂ ವಿರಾಮ ಇಲ್ಲದಿರಲಿ, ಅತನಿಗೂ ವಿರಾಮ ಇಲ್ಲದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಜೆರುಸಲೇಮನ್ನು ಭದ್ರಪಡಿಸಿ ಲೋಕಪ್ರಸಿದ್ಧಿಗೆ ತರುವತನಕ ನೆನಪಿಸುತ್ತಿರಬೇಕು ಭದ್ರಪಡಿಸಿ ಲೋಕಪ್ರಸಿದ್ಧಿಗೆ ತರುವತನಕ ನಿಮಗಿರದಿರಲಿ ವಿಶ್ರಾಂತಿ, ಆತನಿಗೂ ಕೊಡದಿರಿ ವಿರಾಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಜೆರುಸಲೇಮ್ ನಗರವು ಜನರ ಹೊಗಳಿಕೆಗೆ ಪಾತ್ರವಾಗುವಂತೆ ಯೆಹೋವನು ಮಾಡುವ ತನಕ ನೀವು ಆತನಿಗೆ ಪ್ರಾರ್ಥಿಸುತ್ತಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆರೂಸಲೇಮನ್ನು ಸ್ಥಾಪಿಸಿ, ಲೋಕಪ್ರಸಿದ್ಧಿಗೆ ತರುವ ತನಕ ಆತನಿಗೂ ವಿಶ್ರಾಂತಿ ಕೊಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 62:7
10 ತಿಳಿವುಗಳ ಹೋಲಿಕೆ  

ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ ಮಹಿಮೆಯೂ ಆನಂದದ ಬಿರುದೂ ಆಗುವದು.


ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಬರುವದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.


ಭೂವಿುಯು ತನ್ನೊಳಗಿಂದ ಮೊಳಿಕೆಯನ್ನು ಹೊರಡಿಸುವಂತೆಯೂ ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೂ ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಸ್ತೋತ್ರವನ್ನೂ ಮೊಳೆಯಿಸುವನು.


ಏಳನೆಯ ದೇವದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾ ಶಬ್ದಗಳುಂಟಾಗಿ - ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ಉಂಟಾಯಿತು; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು ಎಂದು ಹೇಳಿದವು.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ಇಗೋ, ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿದ್ದೇನೆ; ನಿನ್ನ ಪೌಳಿಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.


ಯೆರೂಸಲೇವಿುನ ಶುಭಕ್ಕೋಸ್ಕರ ಪ್ರಾರ್ಥಿಸಿರಿ. [ಯೆರೂಸಲೇಮೇ,] ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು