Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:10 - ಕನ್ನಡ ಸತ್ಯವೇದವು J.V. (BSI)

10 ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮನನ್ನು ದುಃಖಪಡಿಸಿದರು; ಆದದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರಾದರೋ ಬಂಡಾಯವೆದ್ದರು; ಸ್ವಾಮಿಯ ಪವಿತ್ರಾತ್ಮನನ್ನು ದುಃಖಪಡಿಸಿದರು. ಎಂತಲೇ ಸರ್ವೇಶ್ವರ ಅವರಿಗೆ ಶತ್ರುವಾಗಿ ಮಾರ್ಪಟ್ಟರು, ತಾವೇ ಅವರಿಗೆ ವಿರುದ್ಧವಾಗಿ ಹೋರಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಜನರು ಯೆಹೋವನಿಗೆ ವಿರುದ್ಧವಾಗಿ ಎದ್ದರು. ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಯೆಹೋವನು ಅವರ ಶತ್ರುವಾಗಿ ಪರಿಣಮಿಸಿದನು. ಅಂಥಾ ಜನರಿಗೆ ವಿರುದ್ಧವಾಗಿ ಯೆಹೋವನು ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಅವರು ತಿರುಗಿಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಆದ್ದರಿಂದ ಆತನು ಬೇರೆಯಾಗಿ ಅವರಿಗೆ ಶತ್ರುವಾದನು. ಆತನೇ ಅವರಿಗೆ ವಿರೋಧವಾಗಿ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:10
48 ತಿಳಿವುಗಳ ಹೋಲಿಕೆ  

ಚಂಡಿಗಳೇ, ಮನಶ್ಶುದ್ಧಿಯೂ ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.


ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ಆದರೂ ಅವರು ಪರಾತ್ಪರನಾದ ದೇವರನ್ನು ಪರೀಕ್ಷಿಸಿ ಅವಿಧೇಯರಾದರು. ಆತನ ವಿಧಿಗಳನ್ನು ಕೈಕೊಳ್ಳದೆ


ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ ಅಲ್ಲಿ ಆತನನ್ನು ನೋಯಿಸಿದರು.


ನಾನೇ ಕೋಪರೋಷ ಮಹಾಕ್ರೋಧಭರಿತನಾಗಿ ಶಿಕ್ಷಾಹಸ್ತದಿಂದಲೂ ಭುಜಪರಾಕ್ರಮದಿಂದಲೂ ನಿಮಗೆ ವಿರುದ್ಧವಾಗಿ ಯುದ್ಧಮಾಡುವೆನು.


ಅವರಾದರೋ ನನ್ನ ಮಾತನ್ನು ಕೇಳಲೊಲ್ಲದೆ ನನ್ನ ಮೇಲೆ ತಿರುಗಿಬಿದ್ದರು; ತಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಯಾರೂ ಬಿಸಾಟುಬಿಡಲಿಲ್ಲ. ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಅಂದುಕೊಂಡೆನು.


ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ.


ಆ ಸಂತಾನದವರಾದರೋ ನನ್ನ ಮೇಲೆ ತಿರುಗಿಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಕೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಕೈಕೊಂಡು ನಡಿಸಲಿಲ್ಲ; ನಾನು ನೇವಿುಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿದರು; ಆದದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಅಂದುಕೊಂಡೆನು.


ಆಗ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದ ತಮ್ಮ ಹೃದಯವನ್ನೂ ತಮ್ಮ ಬೊಂಬೆಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು ತಾವು ಬಹಳ ಅಸಹ್ಯಕಾರ್ಯಗಳನ್ನು ನಡಿಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮನ್ನು ತಾವೇ ಹೇಸಿಕೊಳ್ಳುವರು.


ಅವರು ಕೇಳಿದರೂ ಕೇಳದೆಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ನುಡಿಯಲೇಬೇಕು; ಅವರು ದ್ರೋಹಿಗಳೇ ಹೌದು.


ನನ್ನ ಮಹತ್ಕೃತ್ಯಗಳನ್ನು ಮರೆಯದೆ ನನ್ನಲ್ಲಿಯೇ ಭರವಸವಿಟ್ಟು ನನ್ನ ಆಜ್ಞೆಗಳನ್ನು ಕೈಕೊಂಡಾರು ಎಂಬದೇ.


ನನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಎಚ್ಚರಿಸಿದಿ. ಆದರೂ ಅವರು ಲಾಲಿಸದೆ ಗರ್ವಿಗಳೂ ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು; ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿ ನ್ಯಾಯಗಳನ್ನು ಮೀರಿ ಪಾಪಮಾಡಿ ಹೆಗಲು ಕೊಡದೆ ಮೊಂಡಬಿದ್ದು ನಿನ್ನ ಮಾತನ್ನು ಕೇಳದೆ ಹೋದರು.


ನೀವು ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಕೋಪಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿರಿ; ಅದನ್ನು ಮರೆಯಬೇಡಿರಿ. ನೀವು ಐಗುಪ್ತದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಯೆಹೋವನ ಆಜ್ಞೆಗಳನ್ನು ಧಿಕ್ಕರಿಸುವವರಾಗಿದ್ದಿರಿ.


ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ಕಿವಿಗೊಡಬೇಕು; ಆತನಿಗೆ ಅವಿಧೇಯರಾಗಿರಬಾರದು; ಅವಿಧೇಯರಾದರೆ ನಿಮ್ಮನ್ನು ಕ್ಷವಿುಸಲಾರನು; ನನ್ನ ನಾಮಮಹಿಮೆ ಆತನಲ್ಲಿ ಇರುವದು.


ಮೋಶೆ - ಯೆಹೋವನು ಸಾಯಂಕಾಲದ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಯೆಹೋವನಿಗೆ ಕೇಳಿಸಿದವು; ಆ ಗುಣುಗುಟ್ಟುವಿಕೆ ಯೆಹೋವನಿಗೇ ಹೊರತು ನಮಗಲ್ಲ; ನಾವು ಎಷ್ಟು ಮಾತ್ರದವರು ಎಂದನು.


ಜನರು - ನಾವೇನು ಕುಡಿಯಬೇಕೆಂದು ಮೋಶೆಯ ಮೇಲೆ ಗುಣುಗುಟ್ಟುತ್ತಿರಲು ಮೋಶೆಯು ಯೆಹೋವನನ್ನು ಪ್ರಾರ್ಥಿಸಿದನು.


ಅರಸನು ಸಿಟ್ಟುಗೊಂಡು ತನ್ನ ದಂಡುಗಳನ್ನು ಕಳುಹಿಸಿ ಆ ಕೊಲೆಗಾರರನ್ನು ನಾಶಮಾಡಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿಬಿದ್ದರು. ಕೈಕೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇವಿುಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಅವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು ಅಂದುಕೊಂಡೆನು.


ಆತನು ನನಗೆ ಹೀಗೆ ಹೇಳಿದನು - ನರಪುತ್ರನೇ, ನನಗೆ ವಿರುದ್ಧವಾಗಿ ತಿರುಗಿಬಿದ್ದು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲ್ಯರ ಬಳಿಗೆ ನಿನ್ನನ್ನು ಕಳುಹಿಸುವೆನು; ಈ ದಿನದವರೆಗೆ ಅವರೂ ಅವರ ಪಿತೃಗಳೂ ನನಗೆ ಅಪರಾಧಮಾಡುತ್ತಲೇ ಇದ್ದಾರೆ.


ಯೆಹೋವನೇ, ಕಟಾಕ್ಷಿಸು; ನಾನು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ, ನನ್ನ ಕರುಳು ಕುದಿಯುತ್ತದೆ. ನಾನು ಕೇವಲ ದ್ರೋಹಮಾಡಿದ್ದರಿಂದ ನನ್ನ ಹೃದಯವು ಮಗಚಿಕೊಂಡಿದೆ; ಮನೆಯ ಹೊರಗೆ ಸಂಹಾರ, ಒಳಗೆ ಪ್ರಾಣಸಂಕಟ.


ಯೆಹೋವನು ನ್ಯಾಯಸ್ವರೂಪನು, ನಾನಾದರೋ ಆತನ ಆಜ್ಞೆಯನ್ನು ಮೀರಿದವಳು; ಜನಾಂಗಗಳೇ, ನೀವೆಲ್ಲರೂ ಕಿವಿಗೊಡಿರಿ, ನನ್ನ ವ್ಯಥೆಯನ್ನು ನೋಡಿರಿ; ನನ್ನ ಯುವತೀ ಯುವಕರು ಸೆರೆ ಹೋಗಿದ್ದಾರಲ್ಲಾ!


ನಿನ್ನ ವಿುಂಡರಾರೂ ನಿನ್ನನ್ನು ಹುಡುಕುವದಿಲ್ಲ, ಮರೆತುಬಿಟ್ಟರು; ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದದರಿಂದ ನಾನು ಶತ್ರುವಾಗಿ ನಿನ್ನನ್ನು ಹೊಡೆದೆನು, ಕ್ರೂರನಾಗಿ ದಂಡಿಸಿದೆನು.


ನನ್ನನ್ನು ತೊರೆದು ಮನಸ್ಸುಬಂದ ಹಾಗೆ ದುರ್ಮಾರ್ಗದಲ್ಲಿ ನಡೆಯುವ ಜನರನ್ನು ನಾನು ದಿನವೆಲ್ಲಾ ಕೈ ಚಾಚಿ ಕರೆದೆನು.


ಆಕಾಶಮಂಡಲವೇ, ಆಲಿಸು! ಭೂಮಂಡಲವೇ, ಕೇಳು! ಯೆಹೋವನು ಮಾತಾಡುತ್ತಿದ್ದಾನೆ; ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹಮಾಡಿದ್ದಾರೆ.


ಆತನು ಅವರ ಮೇಲೆ ತನ್ನ ಕೋಪ ರೌದ್ರಗಳನ್ನೂ ಉಗ್ರಹಿಂಸೆಗಳನ್ನೂ ಸಂಹಾರದೂತಗಣವನ್ನೋ ಎಂಬಂತೆ ಕಳುಹಿಸಿದನು.


ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವದಕ್ಕೂ ನಿನ್ನ ಕಡೆಗೆ ತಿರುಗಿಸುವದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದುಹಾಕಿ ನಿನ್ನನ್ನು ಅಸಡ್ಡೆಮಾಡಿದರು.


ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಲೋಹದ ಬಸವನನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ - ಇಸ್ರಾಯೇಲ್ಯರೇ, ನೋಡಿರಿ; ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಹೇಳಿದನು.


ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರ ಗಣವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ - ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಾಲ್ವತ್ತು ವರುಷ ನನಗೆ ಯಜ್ಞಗಳನ್ನೂ ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ;


ಯೆಹೋವನು ನೋಡಿ ತಾನು ಭೂವಿುಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ಪಶ್ಚಾತ್ತಾಪಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.


ಆದರೂ ಅವರು ನಿರ್ಜಲಪ್ರದೇಶದಲ್ಲಿ ಪರಾತ್ಪರನಿಗೆ ಪದೇಪದೇ ಅವಿಧೇಯರಾಗಿ ಇನ್ನೂ ಹೆಚ್ಚು ಪಾಪಮಾಡುತ್ತಾ ಬಂದರು.


ಅವರು ದೇವರಾತ್ಮನಿಗೆ ವಿರೋಧವಾಗಿ ನಿಂತದ್ದರಿಂದ ಮೋಶೆ ದುಡುಕಿ ಮಾತಾಡಿದನು.


ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗಂದರು - ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?


ಇಸ್ರಾಯೇಲ್ ವಂಶವೂ ಯೆಹೂದ ವಂಶವೂ ತಮ್ಮ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿವೆ; ಹೌದು, ಇಸ್ರಾಯೇಲ್ ವಂಶದವರು ತಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ. ಇದು ಯೆಹೋವನ ನುಡಿ.


ನೀನು ನಿನ್ನ ಯೌವನಕಾಲವನ್ನು ಜ್ಞಾಪಕಮಾಡಿಕೊಳ್ಳದೆ ಈ ದುಷ್ಕೃತ್ಯಗಳನ್ನೆಲ್ಲಾ ನಡಿಸಿ ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡಿಸಿದ್ದಲ್ಲದೆ ಈ ಅಸಹ್ಯ ಕಾರ್ಯವನ್ನೂ ಮಾಡಿದ್ದೀಯಲ್ಲಾ. ಇದು ಕರ್ತನಾದ ಯೆಹೋವನ ನುಡಿ.


ಆದರೂ ನೀವು ಹತ್ತಲೊಲ್ಲದೆ ನಿಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಉಲ್ಲಂಘಿಸಿ ನಿಮ್ಮ ನಿಮ್ಮ ಡೇರೆಗಳಲ್ಲಿ ಗುಣುಗುಟ್ಟುತ್ತಾ -


ಅವರು ಗಿಲ್ಯಾದಿನಲ್ಲಿದ್ದ ರೂಬೇನ್ಯರು, ಗಾದ್ಯರು ಮನಸ್ಸೆ ಕುಲದ ಅರ್ಧಜನರು ಇವರ ಬಳಿಗೆ ಬಂದು -


ಅವರು ಯೆಹೋವನಿಗೆ ದ್ರೋಹಿಗಳಾದದರಿಂದ ಅರಸನಾದ ರೆಹಬ್ಬಾಮನ ಆಳಿಕೆಯ ಐದನೆಯ ವರುಷದಲ್ಲಿ


ಯೆಹೋವನು ಕೇಳಿ ರೋಷಗೊಂಡನು. ಅವರು ದೇವರಲ್ಲಿ ಭರವಸವಿಡದೆಯೂ ಆತನ ರಕ್ಷಣೆಯನ್ನು ನಂಬದೆಯೂ ಹೋದದರಿಂದ


ಅವರು ದೇವರ ಕಟ್ಟಳೆಗಳಿಗೆ ವಿರೋಧವಾಗಿ ನಿಂತು ಪರಾತ್ಪರನ ಸಂಕಲ್ಪವನ್ನು ನಿರಾಕರಿಸಿದ್ದರಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು