Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:7 - ಕನ್ನಡ ಸತ್ಯವೇದವು J.V. (BSI)

7 ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನೂ ಸ್ತುತ್ಯಕೃತ್ಯಗಳನ್ನೂ ಆತನು ಕನಿಕರದಿಂದಲೂ ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನು ಮತ್ತು ಸ್ತುತ್ಯಕೃತ್ಯಗಳನ್ನು, ಆತನು ಕನಿಕರದಿಂದಲೂ, ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸ್ಮರಿಸುವೆನು ಸರ್ವೇಶ್ವರನ ಸ್ತುತ್ಯಕಾರ್ಯಗಳನು ಆತನ ಅಚಲಪ್ರೀತಿಯನು, ಕೃಪಾತಿಶಯಗಳನು. ಹೊಗಳುವೆನು ಆತನೆಮಗೆ ಅನುಗ್ರಹಿಸಿದ ಎಲ್ಲ ವರದಾನಗಳಿಗಾಗಿ ಇಸ್ರಯೇಲ್ ವಂಶಜರಿಗೆ ಮಾಡಿದ ಮಹೋಪಕಾರಗಳಿಗಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಕರುಣಾಶೀಲನೆಂಬುದನ್ನು ನೆನಪು ಮಾಡಿಕೊಳ್ಳುವೆನು. ಆತನನ್ನು ಸ್ತುತಿಸಲು ನೆನಪುಮಾಡಿಕೊಳ್ಳುವೆನು. ಇಸ್ರೇಲ್ ಕುಟುಂಬಕ್ಕೆ ಯೆಹೋವನು ಎಷ್ಟೋ ಮೇಲನ್ನು ಮಾಡಿದ್ದಾನೆ. ನಮ್ಮ ಮೇಲೆ ಯೆಹೋವನು ತನ್ನ ದಯೆಯನ್ನು ಸುರಿಸಿದ್ದಾನೆ. ನಮಗೆ ಕರುಣೆಯನ್ನು ತೋರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ನಮಗೆ ಮಾಡಿದ್ದೆಲ್ಲದರ ಪ್ರಕಾರ, ಯೆಹೋವ ದೇವರ ಪ್ರೀತಿ ಕೃಪೆಗಳನ್ನೂ, ಯೆಹೋವ ದೇವರ ಕಾರ್ಯಗಳನ್ನು ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು. ಆತನು ತನ್ನ ಅಂತಃಕರುಣೆಯ ಪ್ರಕಾರವೂ, ತನ್ನ ಕೃಪೆಯ ಮಹಾ ಒಳ್ಳೆಯತನದ ಪ್ರಕಾರವೂ, ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:7
46 ತಿಳಿವುಗಳ ಹೋಲಿಕೆ  

ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮ ಮೇಲೆ ಮಹಾ ಪ್ರೀತಿಯನ್ನಿಟ್ಟು


ಕರ್ತನೇ, ನೀನು ಒಳ್ಳೆಯವನೂ ಕ್ಷವಿುಸುವವನೂ ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದೀಯಲ್ಲಾ.


ಕರ್ತನೇ, ನೀನು ಕನಿಕರವೂ ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ ನಂಬಿಕೆಯೂ ಉಳ್ಳವನು.


ಆತನ ಅಪಾರವಾದ ದಯಾ ಸಹನ ದೀರ್ಘಶಾಂತಿಗಳನ್ನು ಅಸಡ್ಡೆಮಾಡುತ್ತೀಯಾ? ಮನಸ್ಸನ್ನು ಬೇರೆಮಾಡಿಕೊಳ್ಳುವದಕ್ಕೆ ದೇವರ ಉಪಕಾರವು ನಿನ್ನನ್ನು ಪ್ರೇರಿಸುತ್ತದೆಂಬದು ನಿನಗೆ ಗೊತ್ತಿಲ್ಲವೇ?


ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.


ಎಂಟನೆಯ ದಿವಸ ಜನರಿಗೆ ಹೋಗುವದಕ್ಕೆ ಅಪ್ಪಣೆಯಾಗಲು ಅವರು ಅರಸನನ್ನು ವಂದಿಸಿ ಯೆಹೋವನು ತನ್ನ ಸೇವಕನಾದ ದಾವೀದನಿಗೂ ತನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೂ ಮಾಡಿದ ಸರ್ವೋಪಕಾರಗಳನ್ನು ನೆನಸಿ ಆನಂದಚಿತ್ತರಾಗಿ ಹರ್ಷಿಸುತ್ತಾ ತಮ್ಮತಮ್ಮ ನಿವಾಸಗಳಿಗೆ ತೆರಳಿದರು.


ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಂಟುಮಾಡಿತು.


ಅಪರಾಧಗಳು ಹೆಚ್ಚಾಗಿ ಕಂಡುಬರುವ ಹಾಗೆ ಧರ್ಮಶಾಸ್ತ್ರವು ಮಧ್ಯೆ ಬಂತು. ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.


ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವದು.


ನಾನು ನಿನ್ನನ್ನು ಶಾಶ್ವತವಾಗಿ ವರಿಸುವೆನು; ಹೌದು, ನೀತಿನ್ಯಾಯ ಪ್ರೀತಿದಯೆಗಳಿಂದ ನಿನ್ನನ್ನು ವರಿಸುವೆನು.


ಆತನು ವ್ಯಥೆಗೊಳಿಸಿದರೇನು, ತನ್ನ ಕೃಪಾತಿಶಯದಿಂದ ಕನಿಕರಿಸುವನು;


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾ ಕೃಪೆಯಿಂದ ಕ್ಷವಿುಸುವನು.


ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು, ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ.


ನಿಮ್ಮ ಪಿತೃವಾದ ಅಬ್ರಹಾಮನನ್ನೂ ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ; ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು ಆಶೀರ್ವದಿಸಿ ಸಂತಾನದಿಂದ ಹೆಚ್ಚಿಸಿದೆನಲ್ಲವೆ.


ಅವರು ಯೆಹೋವನ ಕೃಪೆಗೋಸ್ಕರವೂ ಆತನು ಮಾನವರಿಗಾಗಿ ನಡಿಸಿದ ಅದ್ಭುತಗಳಿಗೋಸ್ಕರವೂ ಆತನನ್ನು ಕೊಂಡಾಡಲಿ.


ಅವರು ಯೆಹೋವನ ಕೃಪೆಗೋಸ್ಕರವೂ ಆತನು ಮಾನವರಿಗಾಗಿ ನಡಿಸಿದ ಅದ್ಭುತಗಳಿಗೋಸ್ಕರವೂ ಆತನನ್ನು ಕೊಂಡಾಡಲಿ.


ಅವರು ಯೆಹೋವನ ಕೃಪೆಗೋಸ್ಕರವೂ ಆತನು ಮಾನವರಿಗಾಗಿ ನಡಿಸಿದ ಅದ್ಭುತಗಳಿಗೋಸ್ಕರವೂ ಆತನನ್ನು ಕೊಂಡಾಡಲಿ.


ಅವರು ಯೆಹೋವನ ಕೃಪೆಗೋಸ್ಕರವೂ ಆತನು ಮಾನವರಿಗಾಗಿ ನಡಿಸಿದ ಅದ್ಭುತಗಳಿಗೋಸ್ಕರವೂ ಆತನನ್ನು ಕೊಂಡಾಡಲಿ.


ನಿನ್ನ ಪ್ರೇಮಾನುಭವವು ಜೀವಕ್ಕಿಂತಲೂ ಶ್ರೇಷ್ಠ; ನನ್ನ ಬಾಯಿ ನಿನ್ನನ್ನು ಕೀರ್ತಿಸುವದು.


ಅವರು ಸ್ವರಾಜ್ಯದಲ್ಲಿದ್ದುಕೊಂಡು ನೀನು ದಯಪಾಲಿಸಿದ ಸಮೃದ್ಧಿಯನ್ನು ಅನುಭವಿಸುತ್ತಾ ನಿನ್ನ ಅನುಗ್ರಹದಿಂದ ದೊರಕಿದ ಸಾರವುಳ್ಳ ವಿಸ್ತಾರದೇಶದಲ್ಲಿ ವಾಸಿಸುತ್ತಾ ಇರುವಾಗ ನಿನ್ನನ್ನು ಸೇವಿಸದೆಯೂ ತಮ್ಮ ದುಷ್ಕೃತ್ಯಗಳನ್ನು ಬಿಡದೆಯೂ ಇದ್ದದರಿಂದಲೇ ನಾವು ಈಗ ದಾಸರಾಗಿದ್ದೇವೆ.


ಆದರೆ ನೀನು ದಯೆಯೂ ಕನಿಕರವೂ ಉಳ್ಳ ದೇವರಾಗಿರುವದರಿಂದ ನಿನ್ನ ಮಹಾ ಕೃಪಾನುಸಾರವಾಗಿ ಅವರನ್ನು ನಾಶಮಾಡಿಬಿಡಲಿಲ್ಲ, ಕೈಬಿಡಲೂ ಇಲ್ಲ.


ಆದದರಿಂದ ನೀನು ಅವರನ್ನು ಬಾಧಿಸುವ ವಿರೋಧಿಗಳ ಕೈಗೆ ಒಪ್ಪಿಸಿದಿ. ಅವರು ಆ ಕಷ್ಟಕಾಲದಲ್ಲಿ ನಿನಗೆ ಮೊರೆಯಿಡಲು ಪರಲೋಕದಿಂದ ನೀನು ಅವರಿಗೆ ಕಿವಿಗೊಟ್ಟು ನಿನ್ನ ಕರುಣಾತಿಶಯದಿಂದ ರಕ್ಷಕರನ್ನು ಕಳುಹಿಸಿ ವಿರೋಧಿಗಳ ಕೈಯಿಂದ ಅವರನ್ನು ಬಿಡಿಸಿದಿ.


ಅವರು ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸಾರವುಳ್ಳ ಭೂವಿುಯನ್ನೂ ಸಮಸ್ತ ವಿಧವಾದ ಉತ್ತಮವಸ್ತುಗಳಿಂದ ತುಂಬಿದ ಮನೆಗಳನ್ನೂ ತೋಡಿದ ಬಾವಿಗಳನ್ನೂ ದ್ರಾಕ್ಷೇತೋಟ, ಎಣ್ಣೇಮರಗಳ ತೋಪು, ಎಷ್ಟೋ ಹಣ್ಣಿನ ಮರ ಇವುಗಳನ್ನೂ ವಶಮಾಡಿಕೊಂಡು ಚೆನ್ನಾಗಿ ತಿಂದು ತೃಪ್ತರಾಗಿ ಕೊಬ್ಬಿ ನೀನು ಕೊಟ್ಟ ಸಮೃದ್ಧಿಯಲ್ಲಿ ಆನಂದಿಸುತ್ತಿದ್ದರು.


ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನದಲ್ಲಿ ಅರಸನು ಜನರಿಗೆ ಅಪ್ಪಣೆಕೊಡಲು ಅವರು ಯೆಹೋವನಿಂದ ದಾವೀದ ಸೊಲೊಮೋನರಿಗೂ ಆತನ ಪ್ರಜೆಗಳಾದ ಇಸ್ರಾಯೇಲ್ಯರಿಗೂ ಉಂಟಾದ ಉಪಕಾರಗಳನ್ನು ನೆನಸಿಕೊಂಡು ಆನಂದಭರಿತರಾಗಿ ಹರ್ಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ಹೋದರು.


ಯೆಹೋವನು ಐಗುಪ್ತ್ಯರ ಕೈಯಿಂದ ಇಸ್ರಾಯೇಲ್ಯರನ್ನು ಬಿಡಿಸಿ ಅವರಿಗೆ ಇಷ್ಟೆಲ್ಲಾ ಉಪಕಾರವನ್ನು ಮಾಡಿದ್ದಕ್ಕಾಗಿ ಇತ್ರೋವನು ಸಂತೋಷಿಸಿ -


ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ.


ವೀಣಾಸ್ವರಮಂಡಲಗಳಿಂದಲೂ ಕಿನ್ನರಿಯ ಘನಸ್ವರದಿಂದಲೂ


ಜನರು ನಿನ್ನ ಮಹೋಪಕಾರವನ್ನು ನೆನಪಿನಲ್ಲಿಟ್ಟುಕೊಂಡು ಪ್ರಕಟಿಸುವರು; ನಿನ್ನ ನೀತಿಯನ್ನು ಹೊಗಳುವರು.


ನಮ್ಮ ದೇವರಾದ ಯೆಹೋವನೇ, ನಿನ್ನ ಸ್ಥಾನದಲ್ಲಿ ಬೇರೆ ಒಡೆಯರು ನಮ್ಮ ಮೇಲೆ ದೊರೆತನಮಾಡುತ್ತಿದ್ದರು; ಈಗ ನಿನ್ನ ನಾಮವನ್ನು ಹೊಗಳುವದಕ್ಕೆ ನಿನ್ನಿಂದಲೇ ನಮಗೆ ಅವಕಾಶವಾಯಿತು.


ಕ್ಷಣಮಾತ್ರ ನಿನ್ನನ್ನು ಬಿಟ್ಟಿದ್ದೆನು, ಮಹಾಕೃಪೆಯಿಂದ ಸೇರಿಸಿಕೊಳ್ಳುವೆನು.


ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ.


ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದೀ; ನಮ್ಮ ಮೇಲಾದರೋ ರೋಷಗೊಂಡಿದ್ದೀ; ಆದರೂ ನಾವು ಪಾಪವನ್ನು ನಡಿಸುತ್ತಾ ಬಂದೆವು; ಬಹುಕಾಲದಿಂದ ಪಾಪದಲ್ಲಿ ಮುಣುಗಿರುವ ನಮಗೆ ರಕ್ಷಣೆಯಾದೀತೇ?


ನನ್ನ ಮನವೇ, ಯೆಹೋವನನ್ನು ಕೊಂಡಾಡು; ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು