Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 64:6 - ಕನ್ನಡ ಸತ್ಯವೇದವು J.V. (BSI)

6 ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ತರಗೆಲೆಯೋಪಾದಿಯಲ್ಲಿ ಒಣಗಿ ಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾವೆಲ್ಲರೂ ಅಶುದ್ಧರು, ನಮ್ಮ ಸತ್ಕಾರ್ಯಗಳೆಲ್ಲ ಕೊಳಕು, ತರಗೆಲೆಯಂತೆ ಒಣಗಿಹೋಗಿದ್ದೇವೆ. ಬಿರುಗಾಳಿಯಂತೆ ನಮ್ಮನ್ನು ತಳ್ಳಿಕೊಂಡು ಬಂದಿವೆ, ನಮ್ಮ ಅಪರಾಧಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾವೆಲ್ಲರೂ ಪಾಪದಿಂದ ಮಲಿನರಾಗಿದ್ದೇವೆ. ನಮ್ಮ ಸುಕಾರ್ಯಗಳೆಲ್ಲಾ ಹಳೇ ಕೊಳಕು ಬಟ್ಟೆಯಂತಿವೆ. ನಾವೆಲ್ಲಾ ಒಣಗಿಹೋದ ಎಲೆಗಳಂತಿದ್ದೇವೆ. ನಮ್ಮ ಪಾಪಗಳು ಬಿರುಗಾಳಿಯಂತೆ ನಮ್ಮನ್ನು ಬಡಿದುಕೊಂಡುಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾವೆಲ್ಲರೂ ಅಶುದ್ಧನ ಹಾಗೆ ಇದ್ದೇವೆ. ನಮ್ಮ ನೀತಿ ಕಾರ್ಯಗಳೆಲ್ಲಾ ಮೈಲಿಗೆ ವಸ್ತ್ರದ ಹಾಗೆ ಇವೆ. ನಾವೆಲ್ಲರೂ ಎಲೆಯ ಹಾಗೆ ಒಣಗಿಹೋಗಿದ್ದೇವೆ. ನಮ್ಮ ಪಾಪಗಳು ಗಾಳಿಯಂತೆ ನಮ್ಮನ್ನು ಬಡಿದುಕೊಂಡು ಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 64:6
38 ತಿಳಿವುಗಳ ಹೋಲಿಕೆ  

ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೇದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ. ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.


ಅಯ್ಯೋ, ನಾನು ಎಂಥ ದುರವಸ್ಥೆಯಲ್ಲಿ ಬಿದ್ದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹದಿಂದ ನನ್ನನ್ನು ಬಿಡಿಸುವವನು ಯಾರು?


ಯೆಹೋಶುವನು ದೇವದೂತನ ಮುಂದೆ ಕೊಳೆಬಟ್ಟೆಯಾಗಿ ನಿಂತಿರಲು


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲುತ್ತಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.


ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಕಾಲಕಳೆಯುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.


ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವದು ಹೇಗೆ? ಸ್ತ್ರೀಯಲ್ಲಿ ಹುಟ್ಟಿದವನು ಪರಿಶುದ್ಧನಾಗಿರುವದು ಸಾಧ್ಯವೋ?


ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ.


ಇದರಲ್ಲಿ ನನ್ನ ಉದ್ದೇಶವೇನಂದರೆ - ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ನೇಮನಿಷ್ಠೆಗಳ ಫಲವಾಗಿರುವ ಸ್ವನೀತಿಯನ್ನಾಶ್ರಯಿಸದೆ ಕ್ರಿಸ್ತನನ್ನು ನಂಬುವದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿ ಕಾಣಿಸಿಕೊಳ್ಳಬೇಕೆಂಬದೇ.


ಧರ್ಮಕ್ಕೆ ದೂರರಾದ ಹಟಗಾರರೇ, ನನ್ನ ಮಾತಿಗೆ ಕಿವಿಗೊಡಿರಿ;


ಹುಟ್ಟಿದಂದಿನಿಂದ ನಾನು ಪಾಪಿಯೇ; ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ.


ಇದನ್ನು ನೋಡಿ ಹಿರಿಯರಲ್ಲಿ ಒಬ್ಬನು - ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಎಲ್ಲಿಂದ ಬಂದರು ಎಂದು ನನ್ನನ್ನು ಕೇಳಲು - ಅಯ್ಯಾ, ನೀನೇ ಬಲ್ಲೆ ಅಂದೆನು.


ಆಗ ನಾನು - ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ನಾಶವಾದೆನಲ್ಲಾ; ನಾನು ಹೊಲಸು ತುಟಿಯವನು, ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು; ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡವು ಎಂದು ಕೂಗಿಕೊಳ್ಳಲು


ಗಾಳಿಯು ಅವರನ್ನು ತನ್ನ ರೆಕ್ಕೆಗಳಲ್ಲಿ ಸುತ್ತಿಕೊಂಡು ಹೋಗುವದು; ತಾವು ಮಾಡುತ್ತಿದ್ದ ಯಜ್ಞಗಳಿಗೆ ನಾಚಿಕೆಪಡುವರು.


ಇಸ್ರಾಯೇಲೆಂಬ ಹೆಸರಿನವರೂ ಯೆಹೂದವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ, ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ ಧರ್ಮಕ್ಕೂ ಅನುಸಾರವಾಗಿಲ್ಲ.


ದುಷ್ಟರೋ ಹಾಗಲ್ಲ; ಗಾಳಿ ಬಡುಕೊಂಡು ಹೋಗುವ ಹೊಟ್ಟಿನಂತಿದ್ದಾರೆ.


ಅಯ್ಯೋ, ನಾನು ಅಲ್ಪನೇ ಸರಿ, ನಿನಗೆ ಪ್ರತ್ಯುತ್ತರವಾಗಿ ಏನು ಹೇಳಲಿ? ಬಾಯ ಮೇಲೆ ಕೈಯಿಟ್ಟುಕೊಳ್ಳುವೆನು.


ಎಲೆ ಒಣಗಿದ ಏಲಾಮರದಂತೆಯೂ ಜಲವಿಲ್ಲದ ವನದ ಹಾಗೂ ಇರುವಿರಿ.


ಯೆಹೋವನು ಹೀಗನ್ನುತ್ತಾನೆ - ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ ನೋಡಿರಿ, ನಿಮ್ಮ ದೋಷಗಳ ನಿವಿುತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.


ಆದರೆ ಒಬ್ಬನ ಚರ್ಮದಲ್ಲಿ ತೊನ್ನು ಹತ್ತಿ ಯಾಜಕನು ನೋಡುವ ಎಲ್ಲಾ ಕಡೆಯಲ್ಲಿಯೂ ತಲೆ ಮೊದಲುಗೊಂಡು ಅಂಗಾಲಿನವರೆಗೂ ಹರಡಿಕೊಂಡಿದ್ದರೆ


ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು.


ದುಷ್ಟತ್ವವನ್ನು ನಡಿಸುವವರೆಲ್ಲರು ತಿಳಿಯುವದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಯೆಹೋವನನ್ನು ಸ್ಮರಿಸುವದಿಲ್ಲ.


ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶನವಾಗುವರು; ಹೌದು, ಯೆಹೋವನನ್ನು ತೊರೆದವರು ನಿರ್ಮೂಲರಾಗುವರು.


ಯಾಕೋಬನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.


ಯಾಕೋಬೇ, ನೀನಾದರೋ ನನ್ನನ್ನು ಪ್ರಾರ್ಥಿಸಲಿಲ್ಲ, ಇಸ್ರಾಯೇಲೇ, ನೀನು ನನ್ನ ವಿಷಯದಲ್ಲಿ ಬೇಸರಗೊಂಡಿದ್ದೀ.


ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ, ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ತರ್ಜನದಿಂದಲೇ ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ; ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.


ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.


ಎಲ್ಲರೂ ಒಲೆಯಂತೆ ಝಳವೇರಿ ತಮ್ಮ ನ್ಯಾಯಾಧೀಶ್ವರರನ್ನು ನುಂಗಿಬಿಡುತ್ತಾರೆ; ಅವರ ಸಕಲರಾಜರು ಬಿದ್ದಿರುತ್ತಾರೆ, ಅವರೊಳಗೆ ನನ್ನನ್ನು ಪ್ರಾರ್ಥಿಸುವವರೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು