Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:12 - ಕನ್ನಡ ಸತ್ಯವೇದವು J.V. (BSI)

12 ನೀವೆಲ್ಲರೂ ಕೊಲೆಗೊಳಗಾಗಿ ಬೀಳುವಿರಿ; ಏಕಂದರೆ ನಾನು ಕೂಗಲು ನೀವು ಉತ್ತರಕೊಡಲಿಲ್ಲ. ನಾನು ಹೇಳಲು ನೀವು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡಿಸಿ ನನಗೆ ಇಷ್ಟವಲ್ಲದ್ದನ್ನು ಆರಿಸಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀವೆಲ್ಲರೂ ಕತ್ತಿಗೆ ಬೀಳುವಿರಿ, ನೀವೆಲ್ಲರೂ ಕೊಲೆಗೊಳಗಾಗಿ ಬೀಳುವಿರಿ, ಏಕೆಂದರೆ ನಾನು ಕೂಗಲು ನೀವು ಉತ್ತರಕೊಡಲಿಲ್ಲ. ನಾನು ಹೇಳಿದರೂ ನೀವು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ, ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನೀವೆಲ್ಲರು ಕೊಲೆಗೆ ಗುರಿಯಾಗುವಿರಿ, ಕತ್ತಿಗೆ ತುತ್ತಾಗುವಿರಿ. ಏಕೆಂದರೆ, ನಾನು ಕೂಗಿದಾಗ ನೀವು ಉತ್ತರಕೊಡಲಿಲ್ಲ, ನಾನು ಹೇಳಿದಾಗ ನೀವು ಕೇಳಲಿಲ್ಲ. ನನ್ನ ಚಿತ್ತಕ್ಕೆ ವಿರುದ್ಧವಾದುದನ್ನೇ ನಡೆಸಿ ನನಗೆ ಇಷ್ಟವಿಲ್ಲದ್ದನ್ನೇ ಆಯ್ಕೆಮಾಡಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ನಿಮ್ಮ ಭವಿಷ್ಯವನ್ನು ನಾನು ತೀರ್ಮಾನಿಸುವೆನು. ನೀವು ಖಡ್ಗದಿಂದ ಸಾಯುವಿರಿ ಎಂದು ನಾನು ತೀರ್ಮಾನಿಸಿದ್ದೇನೆ. ನೀವೆಲ್ಲರೂ ಕೊಲ್ಲಲ್ಪಡುವಿರಿ. ಯಾಕೆಂದರೆ ನಾನು ನಿಮ್ಮನ್ನು ಕರೆದಾಗ ನೀವು ಉತ್ತರ ಕೊಡಲಿಲ್ಲ. ನಾನು ಮಾತನಾಡಿದಾಗ ನೀವು ಆಲಿಸಲಿಲ್ಲ. ನಾನು ಕೆಟ್ಟದ್ದೆಂದು ಹೇಳಿದವುಗಳನ್ನು ನೀವು ಮಾಡಿದಿರಿ; ನನಗೆ ಇಷ್ಟವಿಲ್ಲದ್ದನ್ನು ನೀವು ಮಾಡುತ್ತಿರುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಖಡ್ಗವನ್ನೇ ಗತಿಯಾಗ ಮಾಡುವೆನು. ಆದ್ದರಿಂದ ನಿಮ್ಮನ್ನು ಖಡ್ಗಕ್ಕೆ ನೇಮಿಸುವೆನು. ನೀವೆಲ್ಲರು ಕೊಲೆಗೆ ಬೊಗ್ಗಿಕೊಳ್ಳುವಿರಿ. ಏಕೆಂದರೆ, ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ. ನಾನು ಹೇಳಿದಾಗ ನೀವು ಕೇಳಲಿಲ್ಲ. ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ. ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:12
34 ತಿಳಿವುಗಳ ಹೋಲಿಕೆ  

ನಾನು ಸಾವಕಾಶ ಮಾಡದೆ ನಿಮಗೆ ನುಡಿದ ಮಾತುಗಳನ್ನು ನೀವು ಕೇಳದೆ ನಿಮ್ಮನ್ನು ಕರೆದ ನನಗೆ ಉತ್ತರಕೊಡದೆ


ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ, ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ತರ್ಜನದಿಂದಲೇ ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ; ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.


ಆತನು ತನ್ನ ಸ್ವಾಸ್ಥ್ಯಕ್ಕೆ ಬಂದನು; ಆದರೆ ಸ್ವಂತಜನರು ಆತನನ್ನು ಅಂಗೀಕರಿಸಲಿಲ್ಲ.


ಅರಸನು ಸಿಟ್ಟುಗೊಂಡು ತನ್ನ ದಂಡುಗಳನ್ನು ಕಳುಹಿಸಿ ಆ ಕೊಲೆಗಾರರನ್ನು ನಾಶಮಾಡಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


ಅವನು ಮದುವೆಗೆ ಹೇಳಿಸಿಕೊಂಡವರನ್ನು ಕರೆಯುವದಕ್ಕೆ ತನ್ನ ಆಳುಗಳನ್ನು ಕಳುಹಿಸಲು ಬರುವದಕ್ಕೆ ಅವರಿಗೆ ಮನಸ್ಸಿರಲಿಲ್ಲ.


ಯೆರೂಸಲೇಮು ಸುತ್ತಣ ಪಟ್ಟಣಗಳ ಸಮೇತ ಜನಭರಿತವಾಗಿಯೂ ನೆಮ್ಮದಿಯಾಗಿಯೂ ಇದ್ದು ದಕ್ಷಿಣಪ್ರಾಂತದಲ್ಲಿಯೂ ಇಳಕಲಿನ ಪ್ರದೇಶದಲ್ಲಿಯೂ ಪ್ರಜೆಯು ತುಂಬಿದ್ದಾಗ ಆ ಪೂರ್ವಕಾಲದ ಪ್ರವಾದಿಗಳ ಮೂಲಕ ಯೆಹೋವನು ಪ್ರಕಟಿಸಿದ ಮಾತುಗಳನ್ನು ನೀವು ಕೇಳಬಾರದೋ?


ಆದಕಾರಣ ಯೆಹೋವನು ಇಂತೆನ್ನುತ್ತಾನೆ - ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ - ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗವ್ಯಾಧಿಕ್ಷಾಮಗಳಿಗೆ ಗುರಿಯಾಗುವಂತೆ ಬಿಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.


ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ ಕತ್ತಿಯ ಬಾಯಿಗೆ ಒಪ್ಪಿಸು; ಅವರ ಹೆಂಡಿರು ಮಕ್ಕಳನ್ನು ನೀಗಿಕೊಂಡು ವಿಧವೆಯರಾಗಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ;


ಅವರ ನಡತೆಯನ್ನೆಲ್ಲಾ ದೃಷ್ಟಿಸುತ್ತೇನೆ, ಅದು ನನ್ನ ಮುಖಕ್ಕೆ ಮರೆಯಾಗಿಲ್ಲ; ಅವರ ಅಧರ್ಮವು ನನಗೆ ಗುಟ್ಟಲ್ಲ, ಪ್ರತ್ಯಕ್ಷದಲ್ಲೇ ಇದೆ.


ಈ ಜನರು ವನಗಳಲ್ಲಿ ಯಜ್ಞಮಾಡುತ್ತಾ ಇಟ್ಟಿಗೆಯ ವೇದಿಯ ಮೇಲೆ ಧೂಪಹಾಕುತ್ತಾ ಗೋರಿಗಳಲ್ಲಿ ಕೂತುಕೊಳ್ಳುತ್ತಾ


ನಾನು ನೋಡಲು ಇವರಲ್ಲಿ ಸಮರ್ಥರು ಯಾರೂ ಇಲ್ಲ; ನಾನು ಪ್ರಶ್ನೆಮಾಡಿದರೆ ಒಂದು ಮಾತನ್ನಾದರೂ ಹೇಳಬಲ್ಲ ಆಲೋಚಕನು ಇಲ್ಲವೇ ಇಲ್ಲ.


ಆ ದಿನದಲ್ಲಿ ಯೆಹೋವನು ಕಠಿನವೂ ಮಹತ್ತೂ ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪ, ಡೊಂಕಾಗಿ ಹರಿಯುವ ಸರ್ಪ, ಈ ಎರಡು ಹೆಬ್ಬಾವುಗಳನ್ನು ಹೊಡೆದು ಮಹಾ ನದಿಯಲ್ಲಿನ ಘಟಸರ್ಪವನ್ನೂ ಕೊಂದುಹಾಕುವನು.


ಕೈದಿಗಳ [ಕಾಲ] ಕೆಳಗೆ ಮುದುರಿಕೊಂಡು ಹತರಾದವರ ಕೆಳಗೆ ಬಿದ್ದಿರುವದೇ ಇವರ ಗತಿ! ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.


[ಚೀಯೋನ್ ನಗರಿಯೇ,] ನಿನ್ನ ವೀರರು ಖಡ್ಗದಿಂದ ಬಿದ್ದುಹೋಗುವರು, ನಿನ್ನ ಶೌರ್ಯವು ಯುದ್ಧದಲ್ಲಿ ಅಡಗುವದು.


ನಿಮ್ಮನ್ನು ತೊಳೆದುಕೊಳ್ಳಿರಿ, ಶುದ್ಧಿಮಾಡಿಕೊಳ್ಳಿರಿ, ನನ್ನ ಕಣ್ಣೆದುರಿನ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿರಿ;


ಮನೆಯ ಹೊರಗೆ ಕತ್ತಿಯೂ ಒಳಗೆ ಭಯವೂ ಇರುವವು. ಯೌವನಸ್ಥರು, ಕನ್ಯೆಯರು, ಮೊಲೆಕೂಸುಗಳು, ನರೇತಲೆಯವರು ಇವರೆಲ್ಲರೂ ಕತ್ತಿಯಿಂದ ಕೊಲ್ಲಲ್ಪಡುವರು.


ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನವನ್ನು ಮೀರಿದದರಿಂದ ಆ ಕತ್ತಿಯು ಪ್ರತಿದಂಡನೆಮಾಡುವದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗವುಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.


ಒಪ್ಪದೆ ತಿರುಗಿ ಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಈ ಮಾತು ಯೆಹೋವನೇ ನುಡಿದದ್ದು.


ಯೆಹೋವನು ಸಕಲ ಜನಾಂಗಗಳಲ್ಲಿ ಕೋಪಮಾಡಿ ಅವುಗಳ ಸೈನ್ಯದ ಮೇಲೆ ರೋಷಗೊಂಡು ಅವರನ್ನು ಕೊಲೆಗೆ ಈಡುಮಾಡಿ ನಿಶ್ಶೇಷವಾಗಿ ಸಂಹರಿಸಿದ್ದಾನಷ್ಟೆ.


ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನಮಾಡಿ ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯತೀರಿಸುವದಕ್ಕೆ ದುಮುಕುವದು.


ಯೆಹೋವನ ಖಡ್ಗವು ರಕ್ತಮಯವಾಗಿದೆ; ಅದು ವಪೆಯಿಂದಲೂ ಕುರಿ ಹೋತಗಳ ರಕ್ತದಿಂದಲೂ ಟಗರುಗಳ ಹುರುಳಿಕಾಯಿಗಳ ಕೊಬ್ಬಿನಿಂದಲೂ ಭರಿತವಾಗಿದೆ; ಯೆಹೋವನು ಬೊಚ್ರದಲ್ಲಿ ಬಲಿಯನ್ನೂ ಎದೋಮ್ ಸೀಮೆಯಲ್ಲಿ ದೊಡ್ಡ ಕೊಲೆಯನ್ನೂ ಮಾಡಬೇಕೆಂದಿದ್ದಾನಷ್ಟೆ.


ನನ್ನ ಕೋಪದಿಂದ ಜನಾಂಗಗಳನ್ನು ತುಳಿದು ರೋಷವೇರಿದವನಾಗಿ ಅವುಗಳನ್ನು ಚೂರುಚೂರು ಮಾಡಿ ನೆಲದ ಮೇಲೆ ಅವುಗಳ ಸಾರವನ್ನು ಸುರಿಸಿದೆನು.


ಯೆಹೋವನು ಅಗ್ನಿಯಿಂದಲೂ ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು; ಆಗ ಆತನಿಂದ ಹತರಾಗುವವರು ಬಹುಜನ.


ನೀನು ಈ ಮಾತುಗಳನ್ನೆಲ್ಲಾ ಹೇಳುವಾಗ ಅವರು ಕಿವಿಗೊಡುವದಿಲ್ಲ, ಕರೆಯುವಾಗ ಉತ್ತರಕೊಡುವದಿಲ್ಲ.


ಇಗೋ, ನಾನು ಯೆಹೂದ್ಯರಿಗೂ ಯೆರೂಸಲೇವಿುನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾವಿುಯೂ ಇಸ್ರಾಯೇಲ್ಯರ ದೇವರೂ ಆದ ಯೆಹೋವನು ಅನ್ನುತ್ತಾನೆ.


ಅವಿಧೇಯಜನಾಂಗಗಳಿಗೆ ಉಗ್ರಕೋಪದಿಂದ ಮುಯ್ಯಿತೀರಿಸುವೆನು.


ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಸೂರೆಯಾಗುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು