Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:19 - ಕನ್ನಡ ಸತ್ಯವೇದವು J.V. (BSI)

19 ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪ ನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವರ ಮಧ್ಯೆ ಒಂದು ಸೂಚಕಕಾರ್ಯವನ್ನು ಮಾಡುವೆನು. ಅವರಲ್ಲಿ ಅಳಿದುಳಿದವರನ್ನು ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ಕಾಣದೆಯೂ ಇರುವವರ ಬಳಿಗೆ ಕಳಿಸುವೆನು. ತಾರ್ಷೀಷ್, ಲಿಬಿಯಾ, ಧನುರ್ಧಾರಿಗಳಾದ ಲೂದಿಯಾ, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ದೂರದ ದ್ವೀಪನಿವಾಸಿಗಳ ಬಳಿಗೂ ಕಳಿಸುವೆನು. ಈ ಅನ್ಯಜನಾಂಗಗಳಿಗೆ ಅವರು ನನ್ನ ಮಹಿಮೆಯನ್ನು ಪ್ರಕಟಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಅವರ ಮಧ್ಯದಲ್ಲಿ ಗುರುತನ್ನಿಟ್ಟು, ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ, ತಾರ್ಷೀಷ್, ಪೂಲ್, ಬಿಲ್ಲು ಪ್ರಯೋಗಿಸುವುದರಲ್ಲಿ ಪ್ರವೀಣರಾದ ಲೂದ್, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ನನ್ನ ಸಮಾಚಾರವನ್ನು ಕೇಳದ ನನ್ನ ಮಹಿಮೆಯನ್ನು ಕಾಣದೆ ಇರುವ ದೂರ ದ್ವೀಪನಿವಾಸಿಗಳಿಗೂ ಕಳುಹಿಸುವೆನು. ಅವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:19
48 ತಿಳಿವುಗಳ ಹೋಲಿಕೆ  

ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಮಕಿತರಾಗುವರು; ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು; ಏಕಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದ ವಿಷಯವನ್ನು ಗ್ರಹಿಸಿಕೊಳ್ಳುವರು.


ಯಾರಿಗೆ ಆತನ ಸಮಾಚಾರ ಬಂದಿರಲಿಲ್ಲವೋ ಅವರೇ ಆತನನ್ನು ನೋಡುವರು; ಯಾರು ಆತನ ವರ್ತಮಾನವನ್ನು ಕೇಳಿರಲಿಲ್ಲವೋ ಅವರೇ ಗ್ರಹಿಸಿಕೊಳ್ಳುವರು ಎಂಬದಾಗಿ ಬರೆದಿರುವ ಪ್ರಕಾರ ನನ್ನ ಕೆಲಸವನ್ನು ನಡಿಸಿದ್ದೇನೆ.


ಪಾರಸಿಯರೂ ಲೂದ್ಯರೂ ಪೂಟ್ಯರೂ ನಿನ್ನ ಸೈನ್ಯದ ಭಟರಾಗಿ ಖೇಡ್ಯಶಿರಸ್ತ್ರಾಣಗಳನ್ನು ನಿನ್ನಲ್ಲಿ ನೇತು ಹಾಕಿ ನಿನ್ನನ್ನು ಭೂಷಿಸುತ್ತಿದ್ದರು.


ಎಲೈ, [ಇಸ್ರಾಯೇಲೇ], [ಅವನಂತೆ ನೀನೂ] ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ವಾವಿು ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವದು.


ಯೆಹೋವನು ನಿನ್ನನ್ನು ವೈಭವಪಡಿಸಿರುವದನ್ನು ಕೇಳಿ ತಾರ್ಷೀಷಿನ ಹಡಗುಗಳು ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ವಿಧಿಯೂ ಇಸ್ರಾಯೇಲಿನ ಸದಮಲಸ್ವಾವಿುಯ ಸನ್ನಿಧಿಯೂ ಆದ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವದರಲ್ಲಿ ಮುಂದಾಗುತ್ತಿವೆ.


ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಎತ್ತರಿಸಿರಿ, ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಿಗೆ ಧ್ವಜವನ್ನೆತ್ತಿರಿ!


ಜನಾಂಗಗಳಲ್ಲಿ ಆತನ ಘನತೆಯನ್ನೂ ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ.


ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ - ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವದಕ್ಕೂ ಅನೇಕರು ಏಳುವದಕ್ಕೂ ಕಾರಣನಾಗಿರುವನು; ಮತ್ತು ಜನರು ಎದುರು ಮಾತಾಡುವದಕ್ಕೆ ಗುರುತಾಗಿರುವನು; ಹೀಗೆ ಬಹುಜನರ ಅಂತರಂಗದ ವಿಚಾರಗಳು ಬೈಲಿಗೆ ಬಂದಾವು; ಇದಕ್ಕೆ ಈತನು ಹುಟ್ಟಿದ್ದು.


ಆಮೇಲೆ ಅವರಿಗೆ - ನೀವು ಲೋಕದ ಎಲ್ಲಾ ಕಡೆಗೆ ಹೋಗಿ ಜಗತ್ತಿಗೆಲ್ಲಾ ಸುವಾರ್ತೆಯನ್ನು ಸಾರಿರಿ.


ಆದ್ದರಿಂದ ನೀವು ಹೊರಟುಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ; ಅವರಿಗೆ ತಂದೆಯ, ಮಗನ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿ


ಕೂಷ್ಯರು, ಪೂಟ್ಯರು, ಲೂದ್ಯರು, ಬಗೆಬಗೆಯ ಸಕಲ ವಿದೇಶೀಯರು, ಕೂಬ್ಯರು, ವಿುತ್ರರಾಜ್ಯದವರು, ಇವರೆಲ್ಲಾ ಐಗುಪ್ತ್ಯರೊಂದಿಗೆ ಖಡ್ಗದಿಂದ ಹತರಾಗುವರು.


ಯಾವಾನಿನವರೂ ತೂಬಲಿನವರೂ ಮೆಷೆಕಿನವರೂ ನಿನ್ನ ಪರವಾಗಿ ವ್ಯಾಪಾರಮಾಡಿ ನರಪ್ರಾಣಿಗಳನ್ನೂ ತಾಮ್ರದ ಪಾತ್ರೆಗಳನ್ನೂ ನಿನಗೆ ಸರಬರಾಯಿಮಾಡಿದರು.


ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದೆನು, ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ನಾಮವನ್ನೆತ್ತಿ ಪ್ರಾರ್ಥಿಸದ ಜನಾಂಗಕ್ಕೂ - ಇಗೋ, ನಾನಿದ್ದೇನೆ ನಾನಿದ್ದೇನೆ ಎನ್ನುತ್ತಿದ್ದೆನು.


ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ ಜಜ್ಜಿಹೋಗದೆಯೂ [ತನ್ನ ಕಾರ್ಯದಲ್ಲಿ ನಿರತನಾಗಿರುವನು]; ದ್ವೀಪದ್ವೀಪಾಂತರಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.


ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ, ಬೆಟ್ಟಗಳಲ್ಲಿ ಧ್ವಜವನ್ನೆತ್ತುವಾಗ ನೋಡಿರಿ, ತುತೂರಿಯನ್ನೂದುವಾಗ ಕೇಳಿರಿ!


ಯೆಫೆತನ ಸಂತಾನದವರು ಯಾರಂದರೆ - ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್, ತೀರಾಸ್ ಎಂಬವರೇ.


ನಾನು ಕ್ರಿಸ್ತನ ಅಪ್ರಮೇಯವಾದ ಐಶ್ವರ್ಯದ ವಿಷಯವಾದ ಶುಭಸಮಾಚಾರವನ್ನು ಅನ್ಯಜನರಿಗೆ ಪ್ರಸಿದ್ಧಿಪಡಿಸುವ ಹಾಗೆಯೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಮರೆಯಾಗಿದ್ದ ಮರ್ಮವು ಪ್ರಕಟವಾಗುವ ವಿಧ ಎಂಥದೆಂದು ತಿಳಿಸುವ ಹಾಗೆಯೂ ದೇವಜನರೊಳಗೆ ಅತ್ಯಲ್ಪನಾದ ನನಗೆ ಅನುಗ್ರಹಿಸೋಣವಾಯಿತು.


ಸೂರ್ಯನು ಮೂಡುವ ದಿಕ್ಕಿನಿಂದ ಮುಣುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನೂ ಶುದ್ಧನೈವೇದ್ಯವನ್ನೂ ಅರ್ಪಿಸುತ್ತಾರೆ; ಹೌದು, ಅನ್ಯಜನಾಂಗಗಳಲ್ಲಿಯೇ ನನ್ನ ನಾಮವು ಘನವಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಯೆಹೋವನು ಅವರಿಗೆ ಭಯಂಕರವಾಗುವನು; ಲೋಕದ ದೇವರುಗಳನ್ನೆಲ್ಲಾ ಕ್ಷಯಿಸಿಬಿಡುವನು; ಸಮಸ್ತ ಜನರು, ಅಂದರೆ ಸಮುದ್ರ ಪ್ರಾಂತದ ನಿವಾಸಿಗಳಾದ ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.


ನರಪುತ್ರನೇ, ನೀನು ಗೋಗನಿಗೆ ವಿರುದ್ಧವಾಗಿ ಈ ದೈವೋಕ್ತಿಯನ್ನು ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ರೋಷ್ ಮೆಷೆಕ್ ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ,


ನನ್ನ ರಕ್ಷಣಧರ್ಮದ ಕಾರ್ಯವು ಸಮೀಪಿಸಿದೆ, ನನ್ನ ವಿಮೋಚನಕ್ರಿಯೆಯು ತಲೆದೋರಿದೆ, ನನ್ನ ಹಸ್ತವು ಜನಾಂಗಗಳಿಗೆ ನ್ಯಾಯತೀರಿಸುವದು; ದ್ವೀಪನಿವಾಸಿಗಳು ನನ್ನನ್ನು ನಿರೀಕ್ಷಿಸಿಕೊಂಡು ನನ್ನ ಹಸ್ತಕಾರ್ಯಕ್ಕೆ ಕಾದಿರುವರು.


ಕರ್ತನಾದ ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಜನಾಂಗಗಳಿಗೆ ಕೈಸನ್ನೆಮಾಡಿ ದೇಶಾಂತರಗಳವರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಎದೆಗಪ್ಪಿಕೊಂಡು ಬರುವರು, ನಿನ್ನ ಕುಮಾರ್ತೆಯರನ್ನು ಹೆಗಲ ಮೇಲೆ ಕರತರುವರು.


ಇಗೋ, ಇವರು ದೂರದಿಂದ ಬರುತ್ತಾರೆ, ಇಗೋ, ಇವರು ಬಡಗಲಿಂದ ಮತ್ತು ಪಡುವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.


ದ್ವೀಪನಿವಾಸಿಗಳೇ, ನನ್ನ ಕಡೆಗೆ ಕಿವಿಗೊಡಿರಿ, ದೂರದ ಜನಾಂಗಗಳೇ, ಆಲಿಸಿರಿ! ನಾನು ಗರ್ಭದಲ್ಲಿದ್ದಾಗಲೇ ಯೆಹೋವನು ನನ್ನನ್ನು ಕರೆದನು, ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.


ನಾನು ಒಪ್ಪಿಸಿಬಿಡು ಎಂದು ಬಡಗಲಿಗೂ ತಡೆಯಬೇಡ ಎಂದು ತೆಂಕಲಿಗೂ ಹೇಳಿ ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ


ತಪ್ಪಿದ ಹೃದಯವುಳ್ಳವರೆಲ್ಲರೂ ವಿವೇಕಿಗಳಾಗುವರು, ಗುಣುಗುಟ್ಟುವವರು ಉಪದೇಶವನ್ನು ಗಮನಿಸುವರು ಎಂದು ಹೇಳುತ್ತಾನೆ.


ಆ ಕಾಲದಲ್ಲಿ ಉನ್ನತರಾದ ನುಣುಪಿನ ಮೈಯವರೂ ಸರ್ವದಾ ಭಯಂಕರರೂ ಮಹಾಬಲದಿಂದ [ಶತ್ರುಗಳನ್ನು] ತುಳಿಯುವವರೂ ನದಿಗಳಿಂದ ವಿಂಗಡವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮಮಹತ್ತಿರುವ ಚೀಯೋನ್ ಪರ್ವತಕ್ಕೆ ಆತನಿಗೋಸ್ಕರ ಕಾಣಿಕೆಯನ್ನು ತರುವರು.


ಎಲ್ಲಾ ದೊಡ್ಡ ದೊಡ್ಡ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಪ್ರತಿಯೊಂದು ವಸ್ತುವಿಗೂ ಆ ದಿನವು ತಪ್ಪದೆ ಬರುವದು.


ತಾರ್ಷೀಷ್‍ಪ್ರಾಂತದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.


ವಿುಚ್ರಯಿಮ್ಯರಿಂದ ಲೂದ್ಯರೂ ಅನಾಮ್ಯರೂ ಲೆಹಾಬ್ಯರೂ ನಫ್ತೂಹ್ಯರೂ ಪತ್ರುಸ್ಯರೂ


ಯಾವಾನನ ಸಂತಾನದವರು - ಎಲೀಷ, ತಾರ್ಷೀಷ್, ಕಿತ್ತೀಮ್, ದೋದಾನೀಮ್ ಎಂಬ ಸ್ಥಳಗಳವರು.


ವಿುಚ್ರಯಿಮ್ಯರಿಂದ ಲೂದ್ಯರೂ ಅನಾಮ್ಯರೂ ಲೆಹಾಬ್ಯರೂ ನಫ್ತುಹ್ಯರೂ ಪತ್ರುಸ್ಯರೂ ಕಸ್ಲುಹ್ಯರೂ ಕಫ್ತೋರ್ಯರೂ ಹುಟ್ಟಿದರು.


ಯಾವಾನನ ಸಂತಾನದವರು - ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾ ಎಂಬ ಸ್ಥಳಗಳವರು; ಇವರು ಸಮುದ್ರದ ರೇವುಗಳಲ್ಲಿ ಹರಡಿಕೊಂಡರು.


ಯೆಫೆತನನ್ನು ದೇವರು ವಿಸ್ತರಿಸಲಿ. ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ. ಕಾನಾನನು ಅವರಿಗೆ ದಾಸನಾಗಿರಲಿ ಎಂಬದು.


ಶೇಮನ ಸಂತಾನದವರು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್ ಎಂಬವರೇ.


ಅವನು ಜನಾಂಗಗಳಿಗೆ ಧ್ವಜವನ್ನೆತ್ತಿ ಇಸ್ರಾಯೇಲ್ಯರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ ಯೆಹೂದದಿಂದ ಚದರಿದವರನ್ನೂ ಭೂವಿುಯ ಚತುರ್ದಿಕ್ಕುಗಳಿಂದಲೂ ಕೂಡಿಸಿಕೊಳ್ಳುವನು.


ಯೆಹೋವನನ್ನು ಘನಪಡಿಸಿ ದ್ವೀಪಾಂತರಗಳಲ್ಲಿ ಆತನ ಸ್ತೋತ್ರವನ್ನು ಹಬ್ಬಿಸಲಿ.


ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ; ಭೂವಿುಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಕಾರ್ಯವನ್ನು ನೋಡುವರು.


ಅಶ್ವಗಳೇ, ಕುಣಿದಾಡಿರಿ! ರಥಗಳೇ, ರಭಸವಾಗಿರಿ! ಶೂರರು ಹೊರಡಲಿ! ಖೇಡ್ಯಸನ್ನದ್ಧರಾದ ಕೂಷ್ಯರು, ಪೂಟ್ಯರು, ಧನುರ್ಧಾರಿಗಳಾದ ಲೂದ್ಯರು ಮುಂದರಿಯಲಿ!


ಮೆಷೆಕೂ ತೂಬಲೂ ಅವುಗಳ ಎಲ್ಲಾ ಪ್ರಜೆಯೂ ಅಲ್ಲಿರುತ್ತವೆ; ಆ ಪ್ರಜೆಗಳ ಗೋರಿಗಳು ಅವುಗಳನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗಹತರು; ಜೀವಲೋಕದಲ್ಲಿ ಭೀಕರರಾಗಿದ್ದರಲ್ಲಾ;


ನಾನು ಮಾಗೋಗ್ ದೇಶದ ಮೇಲೂ ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು; ಆಗ ನಾನೇ ಯೆಹೋವನು ಎಂದು ಅವರಿಗೆ ನಿಶ್ಚಿತವಾಗುವದು.


ಆಮೇಲೆ ಅವನು ಕರಾವಳಿಯ ಕಡೆಗೆ ಕಣ್ಣಿಟ್ಟು ಅಲ್ಲಿ ಬಹು ದೇಶಗಳನ್ನು ಆಕ್ರವಿುಸುವನು; ಆದರೆ ಅವನು ಮಾಡುವ ಅವಮಾನವನ್ನು ಒಬ್ಬ ಸರದಾರನು ನಿಲ್ಲಿಸಿಬಿಡುವದಲ್ಲದೆ ಅದು ಅವನಿಗೇ ತಗಲುವಂತೆ ಮಾಡುವನು.


ಚದರಿಹೋಗಿರುವ ನನ್ನ ಜನರು, ನನ್ನ ಭಕ್ತರು, ಕೂಷಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದು ಸಮರ್ಪಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು