Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:13 - ಕನ್ನಡ ಸತ್ಯವೇದವು J.V. (BSI)

13 ಸೇನಾಧೀಶ್ವರನಾದ ಯೆಹೋವನನ್ನೇ ಪ್ರತಿಷ್ಠೆಪಡಿಸಿರಿ; ಆತನಿಗೇ ಹೆದರಿಕೊಳ್ಳಿರಿ, ನಡುಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸೇನಾಧೀಶ್ವರನಾದ ಯೆಹೋವನನ್ನೇ ಪ್ರತಿಷ್ಠೆಪಡಿಸಿರಿ; ಆತನಿಗೆ ಹೆದರಿಕೊಳ್ಳಿರಿ, ನಡುಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸೇನಾಧೀಶ್ವರ ಸ್ವಾಮಿಯಾದ ನಾನು ಪವಿತ್ರನೆಂದು ಎಣಿಸಿ ನನಗೆ ಭಯಭಕ್ತಿಯಿಂದ ಸನ್ಮಾನಮಾಡು, ನನಗೆ ಹೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಸರ್ವಶಕ್ತನಾದ ಯೆಹೋವನೊಬ್ಬನಿಗೇ ನೀನು ಭಯಪಡಬೇಕು. ಆತನನ್ನೇ ನೀನು ಗೌರವಿಸಬೇಕು. ನೀನು ಭಯಪಡಬೇಕಾದದ್ದು ಆತನೊಬ್ಬನಿಗೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸೇನಾಧೀಶ್ವರ ಯೆಹೋವ ದೇವರನ್ನೇ ಪ್ರತಿಷ್ಠೆ ಪಡಿಸಿಕೊಳ್ಳಿರಿ; ನೀವು ಭಯಪಡಬೇಕಾದುದು ಅವರಿಗೇ, ನೀವು ಹೆದರಬೇಕಾಗಿರುವುದು ಅವರಿಗೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:13
18 ತಿಳಿವುಗಳ ಹೋಲಿಕೆ  

ನೀವು ಯಾರಿಗೆ ಹೆದರಬೇಕೋ ನಿಮಗೆ ತಿಳಿಸುತ್ತೇನೆ; ಕೊಂದ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳವನಿಗೆ ಹೆದರಬೇಕು; ಹೌದು, ಆತನಿಗೇ ಹೆದರಬೇಕೆಂದು ನಿಮಗೆ ಹೇಳುತ್ತೇನೆ.


ಕರ್ತನೇ, ನಿನ್ನ ನಾಮಕ್ಕೆ ಭಯಪಡದವರೂ ಅದನ್ನು ಘನವಾದದ್ದೆಂದು ಒಪ್ಪಿಕೊಳ್ಳದವರೂ ಯಾರಾದರೂ ಇದ್ದಾರೇ? ನೀನೊಬ್ಬನೇ ಪರಿಶುದ್ಧನು; ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಾಶಕ್ಕೆ ಬಂದದರಿಂದ ಎಲ್ಲಾ ಜನಾಂಗಗಳು ಬಂದು ನಿನ್ನ ಸನ್ನಿಧಾನದಲ್ಲಿ ನಮಸ್ಕಾರ ಮಾಡುವರು ಎಂದು ಹೇಳಿದರು.


ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ದೇಹ ಎರಡನ್ನೂ ಕೂಡ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ನೀನು ಮಹಾಭಯಂಕರನು; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?


ನಾನು ಅವರೊಂದಿಗೆ ಮಾಡಿಕೊಂಡ ಒಡಂಬಡಿಕೆಯಲ್ಲಿ [ವಾಗ್ದಾನ ಮಾಡಿದ್ದು] ಜೀವ, ಸುಖ; ಅದರಂತೆ ಇವುಗಳನ್ನು ಅವರಿಗೆ ದಯಪಾಲಿಸಿದೆನು; [ಒಡಂಬಡಿಕೆಯಲ್ಲಿ ವಿಧಿಸಿದ್ದು] ಭಯಭಕ್ತಿ; ಅದರಂತೆ ಅವರು ನನ್ನಲ್ಲಿ ಭಯಭಕ್ತಿಯಿಟ್ಟು ನನ್ನ ನಾಮಕ್ಕೆ ಅಂಜಿದರು.


ಯಾಕೋಬ ವಂಶದವರು ತಮ್ಮ ಮಧ್ಯದಲ್ಲಿ ನಾನು ನಡಿಸುವ ಕೆಲಸವನ್ನು ನೋಡಿ ನನ್ನ ನಾಮವೇ ಆರಾಧನೆಗೆ ಅರ್ಹವೆಂದು ಪ್ರತಿಷ್ಠಿಸುವರು; ಹೌದು, ಯಾಕೋಬ್ಯರ ಸದಮಲಸ್ವಾವಿುಯನ್ನು ಪ್ರತಿಷ್ಠೆಪಡಿಸಿ ಇಸ್ರಾಯೇಲ್ಯರ ದೇವರಿಗೆ ನಡುಗುವರು.


ಅಬ್ರಹಾಮ ನಾಹೋರರ ದೇವರು ಅಂದರೆ ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ ಅಂದನು. ಅದೇ ಮೇರೆಗೆ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು.


ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ.


ಚಿನ್ ಅರಣ್ಯದಲ್ಲಿ ಇಸ್ರಾಯೇಲ್ಯರ ಸಮೂಹದವರು ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಗೌರವವನ್ನು ಅವರ ಎದುರಿನಲ್ಲಿ ಕಾಪಾಡದೆ ನನ್ನ ಆಜ್ಞೆಯನ್ನು ಉಲ್ಲಂಘಿಸಿದದರಿಂದ ಆ ದೇಶವನ್ನು ಸೇರಬಾರದು ಎಂದು ಹೇಳಿದನು. ಚಿನ್ ಅರಣ್ಯದಲ್ಲಿ ಮೆರೀಬಾ ಕಾದೇಶಿನ ಪ್ರವಾಹದ ಹತ್ತಿರ ನಡೆದ ಸಂಗತಿಯನ್ನು ಸೂಚಿಸಿ ಇದನ್ನು ಹೇಳಿದನು.


ಆಗ ಮೋಶೆ ಆರೋನನಿಗೆ - ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನಂದರೆ - ನಾನು ಪರಿಶುದ್ಧನೆಂಬದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬದೇ ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ಅದಕ್ಕೆ ಮೋಶೆ - ಭಯಪಡಬೇಡಿರಿ. ದೇವರು ನಿಮ್ಮನ್ನು ಪರೀಕ್ಷಿಸಬೇಕೆಂತಲೂ ತನಗೆ ಭಯಪಟ್ಟು ನೀವು ಪಾಪವನ್ನು ಮಾಡದೆ ಇರಬೇಕೆಂತಲೂ ಬಂದಿದ್ದಾನೆ ಅಂದನು.


ಧಾನ್ಯ, ದ್ರಾಕ್ಷೆ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನೂ ದನಕುರಿಗಳ ಚೊಚ್ಚಲುಮರಿಗಳನ್ನೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಯೆಹೋವನಲ್ಲೇ ಯಾವಾಗಲೂ ಭಯಭಕ್ತಿಯುಳ್ಳವರಾಗಿರುವದನ್ನು ಅಭ್ಯಾಸಮಾಡಿಕೊಳ್ಳುವಿರಿ.


ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಪರಿಶುದ್ಧನಾದ ದೇವರು ಧರ್ಮವನ್ನು ನಡಿಸುವದರಲ್ಲಿ ಪರಿಶುದ್ಧನೆನಿಸಿಕೊಳ್ಳುವನು.


ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ಬಿದ್ದು ಕಾರ್ಮುಗಿಲಿನೋಪಾದಿಯಲ್ಲಿ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶನದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರನಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.


ನನ್ನ ಪರಿಶುದ್ಧ ನಾಮದ ಘನತೆಗೆ ಕುಂದುತರಬಾರದು; ಇಸ್ರಾಯೇಲ್ಯರಲ್ಲಿ ನಾನು ಪರಿಶುದ್ಧನೆಂದೆಣಿಸಲ್ಪಡಬೇಕು; ನಾನು ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು.


ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡು ತುಂಡು ಮಾಡಿ ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಾಯೇಲ್ಯರ ಎಲ್ಲಾ ಪ್ರಾಂತಗಳಿಗೆ ಕಳುಹಿಸಿ - ಯಾರು ಸೌಲ ಸಮುವೇಲರನ್ನು ಹಿಂಬಾಲಿಸುವದಿಲ್ಲವೋ ಅವರ ಎತ್ತುಗಳು ಹೀಗೆಯೇ ಕಡಿಯಲ್ಪಡುವವು ಎಂದು ಹೇಳಿಸಿದನು. ಯೆಹೋವನ ಭಯಪ್ರೇರಿತರಾಗಿ ಜನರೆಲ್ಲರೂ ಏಕಮನಸ್ಸಿನಿಂದ ಕೂಡಿ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು