Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:2 - ಕನ್ನಡ ಸತ್ಯವೇದವು J.V. (BSI)

2 ಅಲ್ಲಿ ಆತನು ನನಗೆ - ನರಪುತ್ರನೇ, ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ ದುರಾಲೋಚನೆಯನ್ನು ಹೇಳಿಕೊಡುವವರು ಈ ಜನರೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಲ್ಲಿ ದೇವರು ನನಗೆ, “ನರಪುತ್ರನೇ, ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ ದುರಾಲೋಚನೆಯನ್ನು ಹೇಳಿಕೊಡುವವರು ಈ ಜನರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಲ್ಲಿ ದೇವರು ನನಗೆ, “ನರಪುತ್ರನೇ, ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ ದುರಾಲೋಚನೆಯನ್ನು ಹೇಳಿಕೊಡುವವರು ಈ ಜನರೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದ ದೇವರು ನನ್ನೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ, “ನರಪುತ್ರನೇ, ಈ ಪಟ್ಟಣದಲ್ಲಿ ದುಷ್ಟಯೋಜನೆಗಳನ್ನು ಮಾಡುವವರೂ ಕೆಡುಕಿನ ಸಲಹೆಗಳನ್ನು ನೀಡುವವರೂ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಮೇಲೆ ಯೆಹೋವ ದೇವರು ನನಗೆ, “ಮನುಷ್ಯಪುತ್ರನೇ, ಈ ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ, ದುರಾಲೋಚನೆಗಳನ್ನು ಹೇಳಿಕೊಡುವವರು ಈ ಜನರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:2
12 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆ ನುಡಿಯುತ್ತಾನೆ :- ದ್ರೋಹಿಗಳಾದ [ನನ್ನ] ಮಕ್ಕಳ ಗತಿಯನ್ನು ಏನು ಹೇಳಲಿ! ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಸಾಗಿಸಿ ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೆಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ;


ನಾನು ದೊಡ್ಡ ಮನುಷ್ಯರ ಬಳಿಗೆ ಹೋಗಿ ಅವರ ಸಂಗಡ ಮಾತಾಡುವೆನು; ಯೆಹೋವನ ಮಾರ್ಗವೂ ಅವರ ದೇವರ ನ್ಯಾಯವಿಧಿಗಳೂ ಅವರಿಗೆ ಗೊತ್ತು ಅಂದುಕೊಂಡೆನು. ಆದರೆ ಈ ದೊಡ್ಡ ಮನುಷ್ಯರು ಒಮ್ಮನವಾಗಿ [ತಮ್ಮ ಹೆಗಲ] ನೊಗವನ್ನು ಮುರಿದು ಕಣ್ಣಿಗಳನ್ನು ಕಿತ್ತುಬಿಟ್ಟಿದ್ದಾರೆ.


ಮೋಸಗಾರನೇ, ನಿನ್ನ ನಾಲಿಗೆಯು ಹದವಾದ ಕ್ಷೌರಕತ್ತಿಯಂತೆ ಅಪಾಯಗಳನ್ನೇ ಕಲ್ಪಿಸುತ್ತದೆ.


[ಇವರಲ್ಲಿ] ಯಾರೂ ನ್ಯಾಯವಾಗಿ ನ್ಯಾಯಾಸ್ಥಾನಕ್ಕೆ ಹೋಗುವದಿಲ್ಲ, ಯಾರೂ ಸತ್ಯವಾಗಿ ವಾದಿಸುವದಿಲ್ಲ; ಇವರು ಶೂನ್ಯವಾಗಿರುವದನ್ನು ನಂಬಿಕೊಂಡು ಅಬದ್ಧವನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ.


ಆಗ ಅವರು - ಯೆರೆಮೀಯನಿಗೆ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದಷ್ಟೆ. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ ಎಂದುಕೊಂಡರು.


ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ಅಲ್ಲದ ದಾರಿಯಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವದಿಲ್ಲ.


ಎಸ್ತೇರಳು ತಿರಿಗಿ ಅರಸನನ್ನು ಮಾತಾಡಿಸುವದಕ್ಕೆ ಹೋಗಿ ಅವನ ಪಾದಗಳಿಗೆ ಬಿದ್ದು ಅತ್ತು - ಅಗಾಗನ ವಂಶದವನಾದ ಹಾಮಾನನು ಯೆಹೂದ್ಯರ ಹಾನಿಗಾಗಿ ಕಲ್ಪಿಸಿದ ಅಪಾಯಗಳನ್ನು ನಿವಾರಿಸಬೇಕೆಂದು ವಿಜ್ಞಾಪಿಸಲು


ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ, ಬರುವವು; ದಿವ್ಯದರ್ಶನವಾಯಿತೇ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವದು, ಹಿರಿಯರಲ್ಲಿ ಮಂತ್ರಾಲೋಚನೆಯು ಇಲ್ಲವಾಗುವದು.


[ನಿನೆವೆಯೇ,] ಯೆಹೋವನಿಗೆ ವಿರುದ್ಧವಾಗಿ ದುರಾಲೋಚನೆಮಾಡಿ ಕೇಡನ್ನು ಸಂಕಲ್ಪಿಸುವವನು ನಿನ್ನೊಳಗಿಂದ ಹೊರಟಿದ್ದಾನೆ.


ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು