Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:17 - ಕನ್ನಡ ಸತ್ಯವೇದವು J.V. (BSI)

17 ನರಪುತ್ರನೇ, ಸ್ವಕಲ್ಪಿತವಾದದ್ದನ್ನು ಕಣಿಹೇಳುವ ನಿನ್ನ ಸ್ವಕುಲಸ್ತ್ರೀಯರ ಕಡೆಗೆ ಮುಖಮಾಡಿಕೊಂಡು ಅವರಿಗೆ ಖಂಡನೆಯಾಗಿ ಹೀಗೆ ಪ್ರವಾದಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “‘ನರಪುತ್ರನೇ, ಸ್ವಕಲ್ಪಿತವಾದುದನ್ನು ಕಣಿ ಎಂದು ಹೇಳುವ ನಿನ್ನ ಸ್ವಕುಲ ಸ್ತ್ರೀಯರ ಕಡೆಗೆ ಮುಖ ಮಾಡಿಕೊಂಡು ಅವರನ್ನೂ ಖಂಡಿಸಿ ಹೀಗೆ ಪ್ರವಾದಿಸು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ನರಪುತ್ರನೇ, ಸ್ವಕಲ್ಪಿತವಾದದ್ದನ್ನು ಭವಿಷ್ಯವಾಣಿ ಎಂದು ಹೇಳುವ ನಿನ್ನ ಸ್ವಕುಲ ಮಹಿಳೆಯರ ಕಡೆಗೆ ಮುಖಮಾಡಿಕೊಂಡು ಅವರನ್ನೂ ಖಂಡಿಸಿ ಹೀಗೆ ಪ್ರವಾದಿಸು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದೇವರು ಹೀಗೆ ನುಡಿದನು: “ನರಪುತ್ರನೇ, ಇಸ್ರೇಲಿನ ಪ್ರವಾದಿನಿಯರನ್ನು ನೋಡು. ಆ ಪ್ರವಾದಿನಿಯರು ನನ್ನ ಪರವಾಗಿ ಮಾತಾಡುತ್ತಿಲ್ಲ. ಅವರು ತಮ್ಮ ಇಚ್ಛೆಯ ಪ್ರಕಾರ ಮಾತನಾಡುತ್ತಾರೆ. ಆದ್ದರಿಂದ ನೀನು ನನ್ನ ಪರವಾಗಿ ಅವರ ವಿರುದ್ಧವಾಗಿ ಮಾತನಾಡಬೇಕು. ಅವರಿಗೆ ಈ ಮಾತುಗಳನ್ನು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಈಗ ಮನುಷ್ಯಪುತ್ರನೇ, ನೀನು ತಮ್ಮ ಸ್ವಂತ ಕಲ್ಪನೆಯಿಂದ ಪ್ರವಾದಿಸುವ ನಿನ್ನ ಜನರ ಪುತ್ರಿಯರಿಗೆ ವಿರೋಧವಾಗಿ ನಿನ್ನ ಮುಖವನ್ನಿಟ್ಟು, ಅವರಿಗೆ ವಿರೋಧವಾಗಿ ಪ್ರವಾದಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:17
13 ತಿಳಿವುಗಳ ಹೋಲಿಕೆ  

ನರಪುತ್ರನೇ, ಪ್ರವಾದನೆಮಾಡಿ ಸ್ವಕಲ್ಪಿತವಾದದ್ದನ್ನೇ ಸಾರುತ್ತಲಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತಾ ಹೀಗೆ ಹೇಳು - ಯೆಹೋವನ ವಾಕ್ಯವನ್ನು ಕೇಳಿರಿ,


ಆದರೆ ನಿನ್ನ ಮೇಲೆ ಒಂದು ತಪ್ಪುಹೊರಿಸಬೇಕಾಗುತ್ತದೆ; ಅದೇನಂದರೆ ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ಜಾರತ್ವಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ಸೇರಿಸುತ್ತಿರುವಲ್ಲಿ ನೀನು ಅವಳನ್ನು ತಡೆಯದೆ ಬಿಟ್ಟಿರುವದೇ.


ಆಗ ಯಾಜಕನಾದ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ ಎಂಬವರು ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜ ವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಗಂಡನು. ಈಕೆಯು ಯೆರೂಸಲೇವಿುನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು.


ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿಯಾದ ದೆಬೋರಳೆಂಬ ಪ್ರವಾದಿನಿಯು ಇಸ್ರಾಯೇಲ್ಯರಲ್ಲಿ ನ್ಯಾಯತೀರಿಸುತ್ತಿದ್ದಳು.


ಇದಲ್ಲದೆ ಅಸೇರನ ಕುಲದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆ ಬಹಳ ಮುಪ್ಪಿನವಳು; ಆಕೆ ತನ್ನ ಕನ್ಯಾವಸ್ಥೆ ಕಳೆದ ತರುವಾಯ ಗಂಡನ ಕೂಡ ಏಳು ವರುಷ ಬಾಳುವೆಮಾಡಿ ಎಂಭತ್ತು ನಾಲ್ಕು ವರುಷ ವಿಧವೆಯಾಗಿದ್ದಳು.


ಆದರೆ ಇಸ್ರಾಯೇಲ್ ಜನರಲ್ಲಿ ಸುಳ್ಳುಪ್ರವಾದಿಗಳೂ ಎದ್ದರಲ್ಲಾ; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ನಾಶಕರವಾದ ಮತಭೇದಗಳನ್ನು ಕಳ್ಳತನದಿಂದ ಹುಟ್ಟಿಸುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನು ಕೂಡ ತಾವು ಅರಿಯೆವು ಎಂದು ಹೇಳುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶವನ್ನು ಬರಮಾಡಿಕೊಳ್ಳುವರು.


ನರಪುತ್ರನೇ, ನೀನು ಯೆರೂಸಲೇವಿುಗೆ ಅಭಿಮುಖನಾಗಿ ಅಲ್ಲಿನ ಪವಿತ್ರಸ್ಥಾನಗಳ ಕಡೆಗೆ ಮಾತಾಡುತ್ತಾ ಇಸ್ರಾಯೇಲ್ ದೇಶದ ಪ್ರಸ್ತಾಪವನ್ನೆತ್ತಿ ಆ ದೇಶಕ್ಕೆ ಹೀಗೆ ಸಾರಿಹೇಳು -


ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ ಆ ಕಡೆಗೆ ಮಾತಾಡುತ್ತಾ ದಕ್ಷಿಣಸೀಮೆಯ ವನದ ಪ್ರಸ್ತಾಪವನ್ನೆತ್ತಿ ಆ ವನಕ್ಕೆ ಹೀಗೆ ಸಾರಿ ಹೇಳು -


ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು ಅದನ್ನು ನಿನಗೂ ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಲ್ಪಡುವದು, ನೀನು ಅದನ್ನು ಮುತ್ತಿದಂತಾಗುವದು. ಇದು ಇಸ್ರಾಯೇಲ್ ವಂಶದವರಿಗೆ ಗುರುತು.


ಆಗ ಕರ್ತನಾದ ಯೆಹೋವನು ನ್ಯಾಯತೀರ್ಪಿನ ಆತ್ಮದಿಂದಲೂ ದಹಿಸುವ ಆತ್ಮದಿಂದಲೂ ಚೀಯೋನಿನ ಸ್ತ್ರೀಯರ ಕಲ್ಮಷವನ್ನೂ ಯೆರೂಸಲೇವಿುನ ಮಧ್ಯದಲ್ಲಿನ ರಕ್ತವನ್ನೂ ತೊಳೆದುಬಿಟ್ಟ ಮೇಲೆ


ಅವನಿಗೆ ಮದುವೆಯಾಗದ ನಾಲ್ಕು ಮಂದಿ ಹೆಣ್ಣುಮಕ್ಕಳಿದ್ದರು; ಅವರು ಪ್ರವಾದಿಸುವವರಾಗಿದ್ದರು.


ನನ್ನ ದೇವರೇ, ಟೋಬೀಯ ಸನ್ಬಲ್ಲಟರು ಮಾಡಿದ ಈ ದುಷ್ಕೃತ್ಯಗಳು ನಿನ್ನ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮುಂತಾದ ಪ್ರವಾದಿಗಳನ್ನು ಮರೆಯಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು