Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:23 - ಕನ್ನಡ ಸತ್ಯವೇದವು J.V. (BSI)

23 ನೀವು ವಿುಥ್ಯಾದರ್ಶನವನ್ನು ಹೊಂದಿ ಕಣಿಹೇಳುವ ಕೆಲಸವು ಇನ್ನು ನಡಿಯುವದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದಕಾರಣ ನೀವು ಮಿಥ್ಯ ದರ್ಶನವನ್ನು ಹೊಂದಿ, ಕಣಿಹೇಳುವ ಕೆಲಸವು ಇನ್ನು ನಡೆಯುವುದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು, ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದಕಾರಣ ನೀವು ಮಿಥ್ಯದರ್ಶನವನ್ನು ಹೊಂದಿ, ಸುಳ್ಳುಭವಿಷ್ಯ ಹೇಳುವ ಕೆಲಸ ಇನ್ನು ನಡೆಯುವುದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈವಶದಿಂದ ಬಿಡಿಸುವೆನು; ನಾನೆ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದ್ದರಿಂದ ನೀವು ಪ್ರಯೋಜನವಿಲ್ಲದ ದರ್ಶನವನ್ನು ಇನ್ನು ಮೇಲೆ ನೋಡುವುದಿಲ್ಲ. ನೀವು ನಿಮ್ಮ ಮಂತ್ರತಂತ್ರಗಳನ್ನು ಇನ್ನು ಮಾಡುವುದಿಲ್ಲ. ನನ್ನ ಶಕ್ತಿಯಿಂದ ನಾನು ನನ್ನ ಜನರನ್ನು ಕಾಪಾಡುತ್ತೇನೆ. ಆಗ ನಾನು ಯೆಹೋವನು ಎಂದು ನೀವು ತಿಳಿಯುವಿರಿ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದ್ದರಿಂದ ನೀವು ಇನ್ನು ಮೇಲೆ ಸುಳ್ಳು ದರ್ಶನಗಳನ್ನು ಕಾಣುವುದಿಲ್ಲ ಮತ್ತು ಸುಳ್ಳು ದೈವೋಕ್ತಿಗಳನ್ನು ಅಭ್ಯಾಸಿಸುವುದಿಲ್ಲ. ಏಕೆಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ಬಿಡಿಸುವೆನು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:23
20 ತಿಳಿವುಗಳ ಹೋಲಿಕೆ  

ನಾನು ನಿಮ್ಮ ಮುಸುಕುಗಳನ್ನೂ ಹರಿದು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವದಿಲ್ಲ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ನೀವು ಇಂಥವರಾದಕಾರಣ ನಿಮಗೆ ರಾತ್ರಿಯಾಗುವದು, ದಿವ್ಯದರ್ಶನವಾಗದು; ನಿಮಗೆ ಕತ್ತಲುಕವಿಯುವದು, ಕಣಿಹೇಳಲಾಗದು; ಸೂರ್ಯನು ಪ್ರವಾದಿಗಳಿಗೆ ಮುಣುಗುವನು, ಹಗಲು ಅವರಿಗೆ ಕಾರ್ಗತ್ತಲಾಗುವದು;


ಇನ್ನು ಮೇಲೆ ಇಸ್ರಾಯೇಲ್ ವಂಶದವರಲ್ಲಿ ಯಾರಿಗೂ ವಿುಥ್ಯಾದರ್ಶನವಾಗದು, ಮೋಸದ ಕಣಿಯೂ ಇರದು.


ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಮರಣಕ್ಕೆ ಹಿಂತೆಗೆಯದೆ ಯಜ್ಞದ ಕುರಿಯಾದಾತನ ರಕ್ತದ ಬಲದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಜಯಿಸಿದರು.


ಭೂಲೋಕದವರನ್ನೆಲ್ಲಾ ಮರುಳುಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾತನ ಸರ್ಪವು ದೊಬ್ಬಲ್ಪಟ್ಟು ಭೂವಿುಗೆ ಬಿದ್ದನು;


ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ - ನೀನುಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತೀ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿವಿುತ್ತ ಅವನನ್ನು ಇರಿದುಬಿಡುವರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನನ್ನ ಜೀವದಾಣೆ, ನಾನು ಕುರುಬರಿಗೆ ವಿರುದ್ಧನಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳರು; ನನ್ನ ಕುರಿಗಳು ಆಹಾರವಾಗಿ ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.


ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗದ ವಿಗ್ರಹಕ್ಕೆ ನಮಸ್ಕರಿಸದೆಯೂ ಅದರ ಹೆಸರಿನ ಅಂಕೆಯನ್ನು ಮುದ್ರೆಹಾಕಿಸಿಕೊಳ್ಳದೆಯೂ ಅದರ ಮೇಲೆ ಜಯ ಹೊಂದಿದವರು ದೇವರ ಸೇವಾರ್ಥವಾದ ವೀಣೆಗಳನ್ನು ಕೈಯಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ ಬಳಿಯಲ್ಲಿ ನಿಂತು


ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ನಮಸ್ಕಾರ ಮಾಡುವರು.


ಬಡಾಯಿ ಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ಮತ್ತು ನಾಲ್ವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು.


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ ಹರ್ಷದೊಡನೆ ನಿಲ್ಲಿಸುವದಕ್ಕೂ


ಆದರೆ ಅವರ ಪ್ರಯತ್ನವು ಇನ್ನು ಸಾಗುವದಿಲ್ಲ; ಆ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪರಿಷ್ಕಾರವಾಗಿ ತಿಳಿದುಬಂದ ಪ್ರಕಾರ ಇವರದೂ ತಿಳಿದುಬರುವದು.


ನಿಮ್ಮಲ್ಲಿ ಇಂಥಿಂಥವರು ಯೋಗ್ಯರೆಂದು ಕಾಣಬರುವಂತೆ ಭಿನ್ನಾಭಿಪ್ರಾಯಗಳೂ ಇರುವದು ಅವಶ್ಯವೇ.


ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರಾದುಕೊಂಡವರನ್ನು ಮೋಸಗೊಳಿಸುವದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಸುಳ್ಳುಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರಾದುಕೊಂಡವರನ್ನು ಸಹ ಮೋಸಗೊಳಿಸುವದಕ್ಕೋಸ್ಕರ ದೊಡ್ಡ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಅವರ ಮೇಲೆ ಕೋಪದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ ಬೆಂಕಿಯು ಅವರನ್ನು ನುಂಗಿಬಿಡುವದು; ನಾನು ಅವರ ಮೇಲೆ ಕೋಪದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಅವನ ಮೇಲೆ ಉಗ್ರಕೋಪಗೊಂಡು ಅವನ ಗತಿಯನ್ನು ಬೆರಗಿಗೂ ಎಚ್ಚರಿಕೆಯ ಮಾತುಗಳಿಗೂ ಕಟ್ಟುಗಾದೆಗಳಿಗೂ ಈಡುಮಾಡಿ ಅವನನ್ನು ನನ್ನ ಜನರೊಳಗಿಂದ ಕಿತ್ತುಹಾಕುವೆನು; ಹೀಗೆ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.


ಯೆರೂಸಲೇವಿುನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಮೋಸದಲ್ಲಿ ನಡೆದು ದುಷ್ಟರಲ್ಲಿ ಯಾವನೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ; ಅವರೆಲ್ಲರು ಸೊದೋವಿುನಂತೆ, ಆ ಪುರನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು