Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:15 - ಕನ್ನಡ ಸತ್ಯವೇದವು J.V. (BSI)

15 ನನ್ನ ಅಪ್ಪಣೆಯ ಮೇರೆಗೆ ದುಷ್ಟ ಮೃಗಗಳು ದೇಶದಲ್ಲಿ ತಿರುಗುತ್ತಾ ಅದನ್ನು ನಿರ್ಜನಪಡಿಸಿ ಹಾಳುಮಾಡಿ ಯಾರೂ ಹಾದುಹೋಗದಂತೆ ಹೆದರಿಸುವ ಪಕ್ಷದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ನನ್ನ ಅಪ್ಪಣೆಯ ಮೇರೆಗೆ ದುಷ್ಟ ಮೃಗಗಳು ದೇಶದಲ್ಲಿ ತಿರುಗುತ್ತಾ ಅದನ್ನು ನಿರ್ಜನಗೊಳ್ಳಿಸಿ, ಹಾಳುಮಾಡಿ, ಯಾರೂ ಹಾದು ಹೋಗದಂತೆ ಹೆದರಿಸುವ ಪಕ್ಷದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ನನ್ನ ಅಪ್ಪಣೆಯ ಮೇರೆಗೆ ದುಷ್ಟಮೃಗಗಳು ಆ ನಾಡಿನಲ್ಲಿ ತಿರುಗುತ್ತಾ ಅದನ್ನು ನಿರ್ಜನಗೊಳಿಸಿ, ಹಾಳುಮಾಡಿ, ಯಾರೂ ಹಾದುಹೋಗದಂತೆ ಹೆದರಿಸುವ ಪಕ್ಷದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದೇವರು ಹೇಳಿದ್ದೇನೆಂದರೆ: “ಒಂದುವೇಳೆ, ನಾನು ಕ್ರೂರಪ್ರಾಣಿಗಳನ್ನು ದೇಶದೊಳಗೆ ಕಳುಹಿಸಿ ಜನರನ್ನು ಕೊಂದರೆ, ಅವುಗಳ ದೆಸೆಯಿಂದ ಯಾವನೂ ದೇಶದಲ್ಲಿ ಪ್ರಯಾಣಮಾಡಲಾಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ನಾನು ದುಷ್ಟಮೃಗಗಳನ್ನು ದೇಶದಲ್ಲಿ ಹಾದುಹೋಗುವಂತೆ ಮಾಡಿ, ಅದನ್ನು ನಿರ್ಜನಪಡಿಸಿ, ಹಾಳು ಮಾಡಿ, ಯಾರೂ ಮೃಗಗಳ ನಿಮಿತ್ತ ಹಾದುಹೋಗದಂತೆ ಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:15
9 ತಿಳಿವುಗಳ ಹೋಲಿಕೆ  

ನಿನ್ನ ಜೀವನಾಧಾರವನ್ನು ಮುರಿದುಹಾಕುವೆನು; ನಾನು ಕಳುಹಿಸುವ ಕ್ಷಾಮವೂ ದುಷ್ಟಮೃಗಗಳೂ ನಿನಗೆ ಪುತ್ರಶೋಕವನ್ನುಂಟುಮಾಡುವವು; ವ್ಯಾಧಿಯೂ ರಕ್ತಪ್ರವಾಹವೂ ನಿನ್ನಲ್ಲಿ ವ್ಯಾಪಿಸುವವು; ನಿನ್ನನ್ನು ಖಡ್ಗಕ್ಕೆ ತುತ್ತುಮಾಡುವೆನು. ಇದು ಯೆಹೋವನಾದ ನನ್ನ ನುಡಿ.


ನಿಮ್ಮ ಮೇಲೆ ಕಾಡುಮೃಗಗಳನ್ನು ಬರಮಾಡುವೆನು; ಅವು ನಿಮ್ಮನ್ನು ಸಂತಾನವಿಲ್ಲದವರನ್ನಾಗಿ ಮಾಡುವವು; ನಿಮ್ಮ ಪಶುಗಳನ್ನು ಕೊಲ್ಲುವವು; ನಿಮ್ಮನ್ನು ಸ್ವಲ್ಪ ಮಂದಿಯನ್ನಾಗಿ ಮಾಡುವವು; ನಿಮ್ಮ ದಾರಿಗಳು ಹಾಳುಬೀಳುವವು.


ನಾನು ಅವರಿಗೆ ನಾಲ್ಕು ವಿಧವಾದ ಬಾಧೆಗಳನ್ನು, ಅಂದರೆ ಕಡಿಯುವದಕ್ಕೆ ಖಡ್ಗವನ್ನು, ಸೀಳುವದಕ್ಕೆ ನಾಯಿಗಳನ್ನು, ನುಂಗಿ ಹಾಳುಮಾಡುವದಕ್ಕೆ ಆಕಾಶಪಕ್ಷಿಗಳನ್ನೂ ಭೂಜಂತುಗಳನ್ನೂ ನೇವಿುಸುವೆನು ಎಂಬದು ಯೆಹೋವನಾದ ನನ್ನ ಮಾತು.


ಅವರಿಗೆ ಆರಂಭದಲ್ಲಿ ಯೆಹೋವನ ಭಯಭಕ್ತಿ ಇರಲಿಲ್ಲವಾದದರಿಂದ ಆತನು ಸಿಂಹಗಳನ್ನು ಕಳುಹಿಸಿದನು; ಅವು ಅವರಲ್ಲಿ ಅನೇಕರನ್ನು ಕೊಂದವು.


ಆಗ ಪ್ರವಾದಿಯು ಅವನಿಗೆ - ನೀನು ಯೆಹೋವನ ಮಾತನ್ನು ಕೇಳದೆಹೋದದರಿಂದ ನನ್ನನ್ನು ಬಿಟ್ಟು ಹೊರಟ ಕೂಡಲೆ ಒಂದು ಸಿಂಹವು ಬಂದು ನಿನ್ನನ್ನು ಕೊಲ್ಲುವದು ಅಂದನು. ಅವನು ಇವನನ್ನು ಬಿಟ್ಟು ಹೋದ ಕೂಡಲೆ ಒಂದು ಸಿಂಹವು ಬಂದು ಅವನನ್ನು ಕೊಂದುಹಾಕಿತು.


ಅದಕ್ಕೆ ಯೆಹೋವನು ಉರಿಮಂಡಲಗಳನ್ನು ಜನರೊಳಗೆ ಬರಮಾಡಿದನು; ಅವು ಜನರನ್ನು ಕಚ್ಚಿದ್ದರಿಂದ ಬಹುಜನ ಸತ್ತುಹೋದರು.


ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತವನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದುಹೋಗರು, ದನದ ಸದ್ದು ಕಿವಿಗೆ ಬೀಳದು, ಮೃಗಪಕ್ಷಿಗಳು ತೊಲಗಿಹೋಗಿವೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಖಡ್ಗ ಕ್ಷಾಮ ದುಷ್ಟಮೃಗ ವ್ಯಾಧಿ ಎಂಬೀ ನಾಲ್ಕು ಬಾಧೆಗಳನ್ನು ಯೆರೂಸಲೇವಿುನ ಮೇಲೆ ಒಟ್ಟಿಗೆ ತಂದು ಜನಪಶುಗಳನ್ನು ನಿರ್ಮೂಲಮಾಡುವಾಗ ಹೇಳತಕ್ಕದ್ದೇನು!


ಸಹತಾಪದಿಂದ ನಿನಗಾಗಿ ಬಡುಕೊಳ್ಳುವವರು ಯಾರಿದ್ದಾರೆ? ನಿನಗೆ ಈ ಎರಡು ಬಾಧೆಗಳು ಬಂದಿವೆ, [ನಿನ್ನ ದೇಶವು] ಹಾಳುಪಾಳಾಗಿದೆ, [ನಿನ್ನ ಪ್ರಜೆಗೆ] ಕ್ಷಾಮವೂ ಖಡ್ಗವೂ ಪ್ರಾಪ್ತವಾಗಿವೆ; ನಾನು ನಿನ್ನನ್ನು ಹೇಗೆ ಸಂತೈಸಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು