Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:19 - ಕನ್ನಡ ಸತ್ಯವೇದವು J.V. (BSI)

19 ನಾನು ಆ ದೇಶದ ಮೇಲೆ ನನ್ನ ಕೋಪವನ್ನು ಹೊಯ್ದು ರಕ್ತವನ್ನು ಸುರಿಸಿ ವ್ಯಾಧಿಯನ್ನು ಕಳುಹಿಸಿ ಜನಪಶುಗಳನ್ನು ನಿರ್ಮೂಲಮಾಡುವ ಪಕ್ಷದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ನಾನು ಆ ದೇಶದ ಮೇಲೆ ನನ್ನ ಕೋಪವನ್ನು ಹೊಯ್ದು, ರಕ್ತವನ್ನು ಸುರಿಸಿ, ವ್ಯಾಧಿಯನ್ನು ಕಳುಹಿಸಿ, ಜನರನ್ನು, ಪಶುಗಳನ್ನು ನಿರ್ಮೂಲಮಾಡುವ ಪಕ್ಷದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ನಾನು ಆ ನಾಡಿನ ಮೇಲೆ ಕೋಪಕಾರಿ, ರಕ್ತವನ್ನು ಸುರಿಸಿ, ವ್ಯಾಧಿಯನ್ನು ಕಳುಹಿಸಿ, ಜನ ಜಾನುವಾರುಗಳನ್ನು ನಿರ್ಮೂಲಮಾಡುವ ಪಕ್ಷದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವರು ಹೇಳಿದ್ದೇನೆಂದರೆ, “ಒಂದುವೇಳೆ, ನಾನು ದೇಶದ ಮೇಲೆ ರೋಗಗಳನ್ನು ಬರಮಾಡಿದರೆ, ಅಥವಾ ನನ್ನ ಕೋಪವನ್ನು ಸುರಿದು ಜನರನ್ನು ಕೊಂದುಹಾಕಿದರೆ ಮತ್ತು ಪ್ರಾಣಿಗಳನ್ನು ನಾಶಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಮರಣದಂಡನೆಯಾಗಿ ಅದರ ಮೇಲೆ ನನ್ನ ರೋಷವನ್ನು ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ತೆಗೆದುಹಾಕುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:19
29 ತಿಳಿವುಗಳ ಹೋಲಿಕೆ  

ನಾನು ಗೋಗನ ಸಂಗಡ ವ್ಯಾಜ್ಯವಾಡುತ್ತಾ ಅವನನ್ನು ವ್ಯಾಧಿಗೂ ವಧೆಗೂ ಗುರಿಮಾಡಿ ಅವನ ಮೇಲೂ ಅವನ ಗುವ್ಮಿುಗಳ ಮೇಲೂ ಅವನೊಂದಿಗಿರುವ ಬಹುಜನಾಂಗಗಳ ಮೇಲೂ ವಿಪರೀತ ಮಳೆ, ದೊಡ್ಡ ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು.


ಇನ್ನು ಸ್ವಲ್ಪ ಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿದು ನನ್ನ ಕೋಪವನ್ನು ತೀರಿಸಿಕೊಂಡು ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ಉಣ್ಣಿಸುವೆನು.


ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲು ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ಇವರು ಉಪವಾಸ ಮಾಡುವಾಗ ಇವರ ಮೊರೆಯನ್ನು ಕೇಳೆನು; ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು; ಖಡ್ಗ ಕ್ಷಾಮ ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು ಎಂದು ಹೇಳಿದನು.


ಆಗ ಯೆಹೋವನು ಇಸ್ರಾಯೇಲ್ಯರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನವರೆಗೂ ಇತ್ತು. ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿರುವ ಇಸ್ರಾಯೇಲ್ಯರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.


ಜನಕ್ಕೆ ವಿರೋಧವಾಗಿ ಜನವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಭೂಕಂಪಗಳು ಆಗುವವು;


ಐಗುಪ್ತದ ವ್ಯಾಧಿಗಳಂಥ ವ್ಯಾಧಿಯನ್ನು ನಿಮಗೆ ಕಳುಹಿಸಿದೆನು; ನಿಮ್ಮ ಯುವಕರನ್ನು ಖಡ್ಗದಿಂದ ಹತಿಸಿದೆನು, ನಿಮ್ಮ ಅಶ್ವಗಳನ್ನು ಸೂರೆಮಾಡಿಸಿದೆನು; ನಿಮ್ಮ ದಂಡಿನ ಗಬ್ಬು ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆನು; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.


ಅವರು ದೇಶದ ಮೇಲೆ ರಕ್ತವನ್ನು ಸುರಿಸಿ ತಮ್ಮ ಬೊಂಬೆಗಳಿಂದ ಅದನ್ನು ಹೊಲೆಗೈದ ಕಾರಣ ನಾನು ಅವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ


ನಾನು ಅವರಿಗೂ ಅವರ ಪಿತೃಗಳಿಗೂ ಅನುಗ್ರಹಿಸಿದ ದೇಶದೊಳಗಿಂದ ಅವರು ನಿರ್ಮೂಲರಾಗುವ ತನಕ ಖಡ್ಗಕ್ಷಾಮವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು.


ಪಟ್ಟಣದಲ್ಲಿ ನಿಲ್ಲುವವನು ಖಡ್ಗಕ್ಷಾಮವ್ಯಾಧಿಗಳಿಂದ ಸಾಯುವನು; ನಿಮ್ಮನ್ನು ಮುತ್ತುವ ಕಸ್ದೀಯರನ್ನು ಮರೆಹೊಗಲು ಪಟ್ಟಣವನ್ನು ಬಿಡುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು.


ಈ ಪಟ್ಟಣದಲ್ಲಿ ವಾಸಿಸುವ ಮನುಷ್ಯರನ್ನೂ ಪಶುಗಳನ್ನೂ ಬಾಧಿಸುವೆನು; ಘೋರವ್ಯಾಧಿಯು ಸಾಯಿಸುವದು.


ಆಗ ಯೆಹೋವನ ದೂತನು ಹೊರಟುಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲಾ ಹೆಣಗಳಾಗಿದ್ದರು.


ಕತ್ತಲೆಯಲ್ಲಿ ಸಂಚರಿಸುವ ವಿಪತ್ತಿಗೂ ಹಾನಿಕರವಾದ ಮಧ್ಯಾಹ್ನದ ಕೇಡಿಗೂ ಅಂಜ ಕಾರಣವಿಲ್ಲ.


ನಿನ್ನನ್ನು ಬೇಟೆಗಾರನ ಬಲೆಯಿಂದಲೂ ಮರಣಕರವ್ಯಾಧಿಯಿಂದಲೂ ತಪ್ಪಿಸುವವನು ಆತನೇ.


ತಮ್ಮ ಮೇಲೆ ಖಡ್ಗವಿಧಿ ಘೋರವ್ಯಾಧಿ ಕ್ಷಾಮ ಮೊದಲಾದ ಆಪತ್ತುಗಳು ಬರುವಾಗ ತಾವು ನಿನ್ನ ನಾಮಮಹತ್ತು ಇರುವ ಈ ಆಲಯದ ಮುಂದೆಯೂ ನಿನ್ನ ಮುಂದೆಯೂ ನಿಂತು ತಮ್ಮ ಇಕ್ಕಟ್ಟಿನಲ್ಲಿ ನಿನಗೆ ಮೊರೆಯಿಡುವದಾದರೆ ನೀನು ಕೇಳಿ ರಕ್ಷಿಸುವಿ ಎಂದುಕೊಂಡರಷ್ಟೆ.


ನಾನು ಆಕಾಶವನ್ನು ಮಳೆಗರೆಯದಂತೆ ಮುಚ್ಚುವಾಗಲೂ ದೇಶವನ್ನು ತಿಂದುಬಿಡುವದಕ್ಕೆ ವಿುಡಿತೆಗಳನ್ನು ಕಳುಹಿಸುವಾಗಲೂ ನನ್ನ ಪ್ರಜೆಯ ಮೇಲೆ ಘೋರ ವ್ಯಾಧಿಯನ್ನು ಬರಮಾಡುವಾಗಲೂ


ದೇಶಕ್ಕೆ ಕ್ಷಾಮ, ಘೋರವ್ಯಾದಿ, [ಬೆಳೆಗೆ] ಬಿಸಿಗಾಳಿ, ಬೂದಿ, ವಿುಡಿತೆ, ಜಿಟ್ಟೇಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ ಅಂತು ಯಾವ ಉಪದ್ರವದಿಂದಾಗಲಿ ವ್ಯಾಧಿಯಿಂದಾಗಲಿ ಬಾಧೆಯುಂಟಾಗುವಲ್ಲಿ


ದೇಶಕ್ಕೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಬೂದಿ, ವಿುಡಿತೆ, ಜಿಟ್ಟೇಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಅಂತು ಯಾವ ಉಪದ್ರವದಿಂದಾಗಲಿ


ಆಗ ಗಾದನು ದಾವೀದನ ಬಳಿಗೆ ಹೋಗಿ - ನಿನ್ನ ದೇಶದಲ್ಲಿ ಏಳು ವರುಷಗಳ ಬರವು ಉಂಟಾಗಬೇಕೋ, ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳುಗಳವರೆಗೆ ಓಡಿಸಿ ಬಿಡಬೇಕೋ, ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು ಅಂದನು.


ಆಗಲಿ, ನಾನು ಇವರಿಗೆ ವ್ಯಾಧಿಯನ್ನುಂಟುಮಾಡಿ ಇವರನ್ನು ನಿರ್ಮೂಲಮಾಡಿ ಈ ಜನಕ್ಕಿಂತ ಹೆಚ್ಚಾಗಿಯೂ ಬಲಿಷ್ಠವಾಗಿಯೂ ಇರುವ ಜನಾಂಗವನ್ನು ನಿನ್ನ ಮೂಲಕವೇ ಹುಟ್ಟಿಸುವೆನು ಎಂದು ಹೇಳಿದನು.


ಅವರಲ್ಲಿ ಹತರಾದವರು ಬಿಸಾಡಲ್ಪಡುವರು, ಅವರ ಶವಗಳ ದುರ್ವಾಸನೆಯು ಮೇಲಕ್ಕೆ ಬಡಿಯುವದು; ಅವರ ರಕ್ತಪ್ರವಾಹದಿಂದ ಗುಡ್ಡಗಳು ಕರಗುವವು.


ಈ ಮೂವರು ಪುರುಷರು ಅದರಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಕ್ಕಳನ್ನಾಗಲಿ ಹೆಣ್ಣುಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ಇದು ಕರ್ತನಾದ ಯೆಹೋವನ ನುಡಿ.


ನೊಹ ದಾನಿಯೇಲ ಯೋಬ ಎಂಬಿವರು ಅದರಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಗನನ್ನಾಗಲೀ ಹೆಣ್ಣುಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ಇದು ಕರ್ತನಾದ ಯೆಹೋವನ ನುಡಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಖಡ್ಗ ಕ್ಷಾಮ ದುಷ್ಟಮೃಗ ವ್ಯಾಧಿ ಎಂಬೀ ನಾಲ್ಕು ಬಾಧೆಗಳನ್ನು ಯೆರೂಸಲೇವಿುನ ಮೇಲೆ ಒಟ್ಟಿಗೆ ತಂದು ಜನಪಶುಗಳನ್ನು ನಿರ್ಮೂಲಮಾಡುವಾಗ ಹೇಳತಕ್ಕದ್ದೇನು!


ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ ರೋಷಾಗ್ನಿಯನ್ನು ಊದಿ ನಿನ್ನನ್ನು ಮೃಗಪ್ರಾಯರೂ ಹಾಳುಮಾಡುವದರಲ್ಲಿ ಗಟ್ಟಿಗರೂ ಆದವರ ಕೈಗೆ ಸಿಕ್ಕಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು