Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 15:4 - ಕನ್ನಡ ಸತ್ಯವೇದವು J.V. (BSI)

4 ಆಹಾ, ಅದನ್ನು ಸೌದೆಯಾಗಿ ಬೆಂಕಿಯಲ್ಲಿ ಹಾಕುವರು; ಬೆಂಕಿಯು ಅದರ ಎರಡು ಕೊನೆಗಳನ್ನು ಸುಟ್ಟುಬಿಡುವದು, ಮಧ್ಯಭಾಗವು ಇದ್ದಲಾಗುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇಲ್ಲ, ಸೌದೆಯಾಗಿ ಬೆಂಕಿಯಲ್ಲಿ ಹಾಕುವರು; ಬೆಂಕಿಯು ಅದರ ಎರಡು ಕೊನೆಗಳನ್ನು ಸುಟ್ಟುಬಿಡುವುದು, ಮಧ್ಯಭಾಗವು ಇದ್ದಲಾಗಿ ಯಾವ ಕೆಲಸಕ್ಕೂ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇಲ್ಲ, ಬೆಂಕಿಗೆ ಹಾಕುತ್ತಾರೆ. ಸೌದೆಯಾಗಿ, ಅದನ್ನು ಬೆಂಕಿ ಸುಟ್ಟುಬಿಡುತ್ತದೆ. ಅದರ ಎರಡು ಕೊನೆಗಳೂ ಇದ್ದಲಾಗುತ್ತವೆ. ಅದರ ಮಧ್ಯಭಾಗವು ಬಾರದು ಯಾವ ತರದ ಬಳಕೆಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅದು ಕೇವಲ ಬೆಂಕಿಯಲ್ಲಿ ಸುಡಲಿಕ್ಕೆ ಯೋಗ್ಯವಾಗಿದೆ. ಕೆಲವು ಎರಡು ಕೊನೆಯಲ್ಲಿ ಉರಿಯುವವು; ಮಧ್ಯಭಾಗವು ಬೆಂಕಿಯಿಂದ ಕಪ್ಪಾಗಾಗುವುದು. ಕಟ್ಟಿಗೆಯು ಸಂಪೂರ್ಣವಾಗಿ ಸುಟ್ಟುಹೋಗುವುದಿಲ್ಲ. ಆ ಸುಟ್ಟ ಕಟ್ಟಿಗೆಯಿಂದ ಏನನ್ನಾದರೂ ತಯಾರಿಸಬಹುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದನ್ನು ಬೆಂಕಿಗೆ ಸೌದೆಯಾಗಿ ಹಾಕುತ್ತಾರೆ. ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡುತ್ತದೆ. ಅದರ ಮಧ್ಯ ಭಾಗವು ಸುಟ್ಟು ಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 15:4
13 ತಿಳಿವುಗಳ ಹೋಲಿಕೆ  

ಯಾವನು ನನ್ನಲ್ಲಿ ನೆಲೆಗೊಂಡಿರುವದಿಲ್ಲವೋ ಅವನು ಆ ಕೊಂಬೆಯಂತೆ ಹೊರಕ್ಕೆ ಬಿಸಾಡಲ್ಪಟ್ಟು ಒಣಗಿಹೋಗುವನು; ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುತ್ತಾರೆ, ಅವು ಸುಟ್ಟುಹೋಗುತ್ತವೆ.


ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗುವವು, ಹೆಂಗಸರು ಬಂದು ಬೆಂಕಿ ಹಚ್ಚಿ ಉರಿಸುವರು; ಆ ಪ್ರಜೆಯು ಬುದ್ಧಿಹೀನವಾದದ್ದೇ ಸರಿ; ಆದಕಾರಣ ಸೃಷ್ಟಿಸಿದಾತನು ಅದನ್ನು ಕರುಣಿಸನು, ನಿರ್ಮಿಸಿದಾತನು ಅದಕ್ಕೆ ದಯೆತೋರಿಸನು.


ಅದು ಕಡಿದು ಬೆಂಕಿಯಿಂದ ಸುಡಲ್ಪಟ್ಟಿದೆ. ಅವರು ನಿನ್ನ ಬಾಯಿಗದರಿಕೆಯಿಂದ ನಾಶವಾಗುತ್ತಾರೆ.


ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.


ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳಸಿದರೆ ಅಯೋಗ್ಯವೆನಿಸಿಕೊಂಡು ಶಾಪಕ್ಕೆ ಗುರಿಯಾಗುತ್ತದೆ, ಅದರ ಅಂತ್ಯವು ಸುಡಲ್ಪಡುವದೇ.


ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು ಎಂದು ಹೇಳಿದನು.


ಇಗೋ, ಆ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ ದುಷ್ಕರ್ಮಿಗಳೂ ಹೊಟ್ಟಿನಂತಿರುವರು; ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಲಯವಾಗುವದು; ಬುಡ ರೆಂಬೆಗಳಾವದನ್ನೂ ಉಳಿಸದು.


ಸೊದೋಮ್‍ಗೊಮೋರಗಳನ್ನು ಕೆಡವಿದಂತೆ ನಾನು ನಿಮ್ಮ ಅನೇಕ ಪಟ್ಟಣಗಳನ್ನು ಕೆಡವಲು ಉರಿಯಿಂದ ಎಳೆದ ಕೊಳ್ಳಿಯ ಹಾಗಿದ್ದಿರಿ; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.


ಬೆಂಕಿಯು ದಂಡರೂಪವಾದ ಅದರ ಶಾಖೆಗಳಿಂದ ಹೊರಟು ಅದರ ಫಲವನ್ನು ನುಂಗಿಬಿಟ್ಟದ್ದರಿಂದ ರಾಜದಂಡಕ್ಕೆ ಯೋಗ್ಯವಾದ ಯಾವ ಗಟ್ಟಿಕೊಂಬೆಯೂ ಅದರಲ್ಲಿ ಉಳಿದಿಲ್ಲ. ಇದು ಶೋಕಗೀತ, ಶೋಕಗೀತವಾಗಿ ವಾಡಿಕೆಯಲ್ಲಿದೆ.


ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ಗುಂಜು, ಅವನ ಕಾರ್ಯವೇ ಕಿಡಿ, ಎರಡು ಸೇರಿ ಯಾರೂ ನಂದಿಸಲಾಗದಂತೆ ಸುಟ್ಟುಹೋಗುವವು.


ದ್ರಾಕ್ಷೆಯ ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವದನ್ನಾದರೂ ಮಾಡುವರೋ? ಯಾವ ಸಾಮಾನನ್ನಾದರೂ ತಗಲಿಹಾಕುವದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?


ಆಗ ಯಾವ ಮುಟ್ಟಿಗಾದರೂ ಬರುವದೋ? ಇಗೋ, ಅದು ಇದ್ದ ಹಾಗೆಯೇ ಇದ್ದಾಗ ಯಾವ ಕೆಲಸಕ್ಕೂ ಬರಲಿಲ್ಲ; ಬೆಂಕಿಯಲ್ಲಿ ಸುಟ್ಟು ಇದ್ದಲಾದ ಮೇಲೆ ಯಾವ ಕೆಲಸಕ್ಕೆ ಬಂದೀತು?


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ವನವೃಕ್ಷಗಳಲ್ಲಿ ದ್ರಾಕ್ಷೆಯ ಗಿಡವನ್ನು ನಾನು ಹೇಗೆ ಬೆಂಕಿಗೆ ಸೌದೆಯಾಗಿ ಕೊಟ್ಟಿದ್ದೇನೋ ಹಾಗೆಯೇ ನಾನು ಯೆರೂಸಲೇವಿುನವರನ್ನು [ನಾಶನಕ್ಕೆ] ಕೊಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು