Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:11 - ಕನ್ನಡ ಸತ್ಯವೇದವು J.V. (BSI)

11 ಮತ್ತು ನಾನು ನಿನ್ನ ಕೈಗಳಿಗೆ ಬಳೆಗಳನ್ನು, ಕಂಠಕ್ಕೆ ಮಾಲೆಯನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮತ್ತು ನಾನು ನಿನ್ನ ಕೈಗಳಿಗೆ ಬಳೆಗಳನ್ನು, ಕಂಠಕ್ಕೆ ಮಾಲೆಯನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮತ್ತು ನಾನು ನಿನ್ನ ಕೈಗಳಿಗೆ ಬಳೆಗಳನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅನಂತರ ನಿನಗೆ ಕೆಲವು ಆಭರಣಗಳನ್ನು ಕೊಟ್ಟೆನು. ನಿನ್ನ ತೋಳುಗಳಿಗೆ ತೋಳುಕಟ್ಟುಗಳನ್ನು, ಕುತ್ತಿಗೆಗೆ ಹಾರವನ್ನು ತೊಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಭರಣಗಳಿಂದ ನಿನ್ನನ್ನು ಅಲಂಕರಿಸಿದೆನು: ನಾನು ನಿನ್ನ ಕೈಗಳಿಗೆ ಕಡಗಗಳನ್ನು ನಿನ್ನ ಕೊರಳಿಗೆ ಸರವನ್ನು ಹಾಕಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:11
31 ತಿಳಿವುಗಳ ಹೋಲಿಕೆ  

ಒಂಟೆಗಳು ಕುಡಿದ ನಂತರ ಅವನು ಆಕೆಯ ಮೂಗಿಗೆ ಅರ್ಧ ತೊಲೆಯ ತೂಕವುಳ್ಳ ಒಂದು ಚಿನ್ನದ ಮೂಗುತಿಯನ್ನೂ ಆಕೆಯ ಕೈಗಳಿಗೆ ಹತ್ತು ತೊಲೆಯ ತೂಕವುಳ್ಳ ಎರಡು ಚಿನ್ನದ ಬಳೆಗಳನ್ನೂ ಇಟ್ಟು - ನೀನು ಯಾರ ಮಗಳು? ದಯವಿಟ್ಟು ನನಗೆ ಹೇಳು.


ಜುಮಕಿ, ಬಳೆ, ಮುಸುಕು, ಮುಂಡಾಸ, ಕಾಲಸರಪಣಿ, ನಡುಕಟ್ಟು, ಗಂಧದ ಡಬ್ಬಿ, ತಾಯಿತಿ,


ತನ್ನ ಕೈಯಿಂದ ಮುದ್ರಿಕೆಯನ್ನು ತೆಗೆದು ಯೋಸೇಫನ ಕೈಗೆ ಇಟ್ಟು ಅವನಿಗೆ ನಾರುಮಡಿಯನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಸರಪಣಿಯನ್ನು ಹಾಕಿಸಿ


ನೀನು ಯಾರ ಮಗಳೆಂದು ನಾನು ಕೇಳಿದ್ದಕ್ಕೆ ಆಕೆ - ನಾಹೋರನಿಗೆ ವಿುಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು ಅಂದಳು. ಅದನ್ನು ಕೇಳಿ ನಾನು ಆಕೆಯ ಮೂಗಿಗೆ ಮೂಗುತಿಯನ್ನೂ ಕೈಗಳಿಗೆ ಬಳೆಗಳನ್ನೂ ಇಟ್ಟು


ಅವು ನಿನ್ನ ತಲೆಗೆ ಅಂದದ ಪುಷ್ಪ ಕಿರೀಟ; ಕೊರಳಿಗೆ ಹಾರ.


ಅಲ್ಲಿ ವಿನೋದಪಡುತ್ತಿರುವ ದೊಡ್ಡ ಗುಂಪಿನವರ ಕಳಕಳವಾಯಿತು; ಅರಣ್ಯದಿಂದ ಕರೆಯಿಸಿಕೊಂಡ ಕುಡಿಕರು ನಾಡಾಡಿಗರೊಂದಿಗೆ ಸೇರಿ ಅವರಿಬ್ಬರ ಕೈಗೆ ಕಡಗವನ್ನು ತೊಡಿಸಿ ಅವರ ತಲೆಗೆ ಸುಂದರ ಕಿರೀಟವನ್ನಿಟ್ಟರು.


ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳನ್ನು ಅಂದರೆ ತೋಳ್ಬಳೆ, ಕಡಗ, ಮುದ್ರೆಯುಂಗರ, ಮುರುವು, ಕಂಠಮಾಲೆ ಮುಂತಾದವುಗಳನ್ನು ತಂದಿದ್ದೇವೆ ಅಂದರು.


ಆ ಇಪ್ಪತ್ತುನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಾತನ ಪಾದಕ್ಕೆ ಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ -


ಇದಲ್ಲದೆ ಸಿಂಹಾಸನದ ಸುತ್ತಲು ಇಪ್ಪತ್ತುನಾಲ್ಕು ಸಿಂಹಾಸನಗಳಿದ್ದವು; ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತುನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.


ನಿನಗೆ ಸಂಭವಿಸುವದಕ್ಕಿರುವ ಬಾಧೆಗಳಿಗೆ ಹೆದರಬೇಡ. ಇಗೋ ನೀವು ದುಷ್ಪ್ರೇರಣೆಗೆ ಒಳಗಾಗುವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವದಕ್ಕಿದ್ದಾನೆ; ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವದು. ನೀನು ಸಾಯಬೇಕಾದರೂ ನಂಬಿಗಸ್ತನಾಗಿರು; ನಾನು ನಿನಗೆ ಜೀವವೆಂಬ ಜಯಮಾಲೆಯನ್ನು ಕೊಡುವೆನು.


ಅವಳು ನನ್ನನ್ನು ಮರೆತು ಮೂಗುತಿ ಮೊದಲಾದ ಒಡವೆಗಳಿಂದ ತನ್ನನ್ನು ಸಿಂಗರಿಸಿಕೊಂಡು ವಿುಂಡರ ಹಿಂದೆಹೋಗಿ ಬಾಳ್‍ದೇವತೆಗಳ ಉತ್ಸವದಿನಗಳಲ್ಲಿ ಧೂಪಹಾಕಿದ್ದಕ್ಕೆ ನಾನು ಅವಳನ್ನು ದಂಡಿಸುವೆನು; ಇದು ಯೆಹೋವನ ನುಡಿ.


ಆಗ ಬೇಲ್ಶಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ಈತನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು ಎಂದು ಪ್ರಕಟಿಸಿದರು.


ನೀನೋ ಗೂಢಾರ್ಥಗಳನ್ನು ವಿವರಿಸಿ ಗುಂಜುಗಂಟುಗಳನ್ನು ಬಿಚ್ಚಬಲ್ಲವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ನಿನ್ನನ್ನು ರಾಜ್ಯದ - ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇವಿುಸುವೆನು ಎಂದು ಹೇಳಿದನು.


ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ ಪಂಡಿತ ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ - ಯಾವನು ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇವಿುಸುವೆನು ಎಂದು ಹೇಳಿದನು.


ಇಷ್ಟಲ್ಲದೆ ದೂತನನ್ನು ಕಳುಹಿಸಿ ಪುರುಷರನ್ನು ದೂರದಿಂದ ಕರೆಯಿಸಿಕೊಂಡರು; ಇಗೋ, ಅವರು ಬಂದರು; [ಎಲೈ ಹೆಂಗಸೇ,] ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆಹಚ್ಚಿ


ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ, ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ.


ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನೇ ತನ್ನ ಜನರಲ್ಲಿ ಉಳಿದವರಿಗೆ ಅಂದದ ಕಿರೀಟವೂ ಸುಂದರ ಮುಕುಟವೂ ಆಗಿರುವನು;


ಮುದ್ರಿಕೆ, ಮೂಗುತಿ, ಹಬ್ಬದ ಬಟ್ಟೆ, ಮೇಲಂಗಿ,


ಪ್ರಿಯಳೇ, ವಧುವೇ, ನನ್ನ ಹೃದಯವನ್ನು ಅಪಹರಿಸಿದ್ದೀ, ನಿನ್ನ ಒಂದು ಕಡೆಗಣ್ಣಿನಿಂದ, ನಿನ್ನ ಕಂಠಹಾರದ ಒಂದು ಸರದಿಂದ, ನನ್ನ ಹೃದಯವನ್ನು ವಶಮಾಡಿಕೊಂಡಿದ್ದೀ.


ನಿನ್ನ ಕೆನ್ನೆಗಳು ಜಡೆಗಳಿಂದಲೂ ನಿನ್ನ ಕಂಠವು ಹಾರಗಳಿಂದಲೂ ಎಷ್ಟೋ ಅಂದವಾಗಿವೆ!


ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು ಹೊನ್ನಿನ ಮುರುವಿಗೂ ಅಪರಂಜಿಯ ಆಭರಣಕ್ಕೂ ಸಮಾನ.


ಆಕೆಯು ನಿನ್ನ ತಲೆಗೆ ಅಂದದ ಪುಷ್ಪ ಮಾಲೆಯನ್ನಿಟ್ಟು ಸುಂದರ ಕಿರೀಟವನ್ನು ನಿನಗೆ ಒಪ್ಪಿಸುವಳು.


ಆಗ ಅವನ ಎಲ್ಲಾ ಅಣ್ಣತಮ್ಮಂದಿರೂ ಎಲ್ಲಾ ಅಕ್ಕತಂಗಿಯರೂ ಮೊದಲು ಅವನ ಮನೆಯಲ್ಲಿ ಅವನೊಂದಿಗೆ ಭೋಜನಮಾಡುತ್ತಿದ್ದ ಎಲ್ಲಾ ಪರಿಚಿತರೂ ಅವನ ಬಳಿಗೆ ಬಂದು ಯೆಹೋವನು ಅವನ ಮೇಲೆ ಬರಮಾಡಿದ್ದ ಆಪತ್ತಿನ ವಿಷಯವಾಗಿ ತಮ್ಮ ತಮ್ಮ ಅನುತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸಿದರು. ಇದಲ್ಲದೆ ಪ್ರತಿಯೊಬ್ಬರೂ ಒಂದೊಂದು ವರಹವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.


ಎಲ್ಲಾ ಕನ್ಯೆಯರಲ್ಲಿ ಆಕೆಯು ಅವನ ದಯೆಗೂ ಪ್ರೀತಿಗೂ ಪಾತ್ರಳಾದದರಿಂದ ಅವನು ರಾಜಮುಕುಟವನ್ನು ಆಕೆಯ ತಲೆಯ ಮೇಲಿಟ್ಟು ಆಕೆಯನ್ನು ವಷ್ಟಿಗೆ ಬದಲಾಗಿ ರಾಣಿಯನ್ನಾಗಿ ಮಾಡಿಕೊಂಡು


ಆದರೆ ನಿಮಗೆ ಒಂದು ಬಿನ್ನಹ ಮಾಡುತ್ತೇನೆ; ಪ್ರತಿಯೊಬ್ಬನು ತಾನು ಕೊಳ್ಳೆ ಹೊಡೆದ ಮುರುವುಗಳನ್ನು ನನಗೆ ಕೊಡಲಿ ಅಂದನು. ವಿುದ್ಯಾನ್ಯರು ಇಷ್ಮಾಯೇಲ್ಯರಾಗಿದ್ದದರಿಂದ ಬಂಗಾರದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು. ಗಿದ್ಯೋನನ ಬಿನ್ನಹಕ್ಕೆ ಇಸ್ರಾಯೇಲ್ಯರು -


ಅವನ ತಲೆಗೆ ಮುಂಡಾಸವನ್ನು ಇಟ್ಟು ಅದರ ಮುಂಭಾಗದಲ್ಲಿ ಬಂಗಾರದ ಪಟ್ಟವನ್ನು ಕಟ್ಟಿದನು; ಅದೇ ಅವನಿಗೆ ಪರಿಶುದ್ಧ ಕಿರೀಟವು.


ಸಿದ್ಧಚಿತ್ತರಾದ ಗಂಡಸರೂ ಹೆಂಗಸರೂ ಬಂದು ಯೆಹೋವನಿಗೆ ಚಿನ್ನದ ಕಾಣಿಕೆಗಳನ್ನು ಅಂದರೆ ಕಡಗ, ಮೂಗುತಿ, ಮುದ್ರೆಯುಂಗುರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.


ಅದಕ್ಕೆ ಆರೋನನು - ನಿಮ್ಮ ಹೆಂಡರೂ ಗಂಡುಮಕ್ಕಳೂ ಹೆಣ್ಣುಮಕ್ಕಳೂ ಕಿವಿಗೆ ಹಾಕಿಕೊಂಡಿರುವ ಚಿನ್ನದ ಮುರುವುಗಳನ್ನು ನೀವು ಕಿತ್ತು ನನಗೆ ಒಪ್ಪಿಸಿರಿ ಎಂದು ಹೇಳಲಾಗಿ


ಆಗ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವುಗಳನ್ನೂ ಯಾಕೋಬನಿಗೆ ಒಪ್ಪಿಸಲು ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರವಿರುವ ಏಲಾವೃಕ್ಷದ ಬುಡದಲ್ಲಿ ಹೂಳಿಟ್ಟನು.


ಆಮೇಲೆ ತಾನು ತಂದಿದ್ದ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಸಹ ಬೆಲೆಯುಳ್ಳ ಉಡುಗೊರೆಗಳನ್ನು ಕೊಟ್ಟನು.


ಮತ್ತು ನಾನು ನನ್ನ ಬೆಳ್ಳಿಬಂಗಾರದಿಂದ ಮಾಡಿಸಿ ನಿನಗೆ ಕೊಟ್ಟಿದ್ದ ನಿನ್ನ ಚಂದವಾದ ಆಭರಣಗಳನ್ನು ನೀನು ತೆಗೆದು ಅವುಗಳಿಂದ ಪುರುಷಮೂರ್ತಿಗಳನ್ನು ರೂಪಿಸಿಕೊಂಡು ಅವುಗಳೊಡನೆ ಹಾದರಮಾಡಿದಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು