Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:43 - ಕನ್ನಡ ಸತ್ಯವೇದವು J.V. (BSI)

43 ನೀನು ನಿನ್ನ ಯೌವನಕಾಲವನ್ನು ಜ್ಞಾಪಕಮಾಡಿಕೊಳ್ಳದೆ ಈ ದುಷ್ಕೃತ್ಯಗಳನ್ನೆಲ್ಲಾ ನಡಿಸಿ ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡಿಸಿದ್ದಲ್ಲದೆ ಈ ಅಸಹ್ಯ ಕಾರ್ಯವನ್ನೂ ಮಾಡಿದ್ದೀಯಲ್ಲಾ. ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 “ನೀನು ನಿನ್ನ ಯೌವನ ಕಾಲವನ್ನು ಜ್ಞಾಪಕಮಾಡಿಕೊಳ್ಳದೆ, ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿ ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡೆಸಿದ್ದಲ್ಲದೆ ಈ ಅಸಹ್ಯ ಕಾರ್ಯವನ್ನೂ ಮಾಡಿರುವೆ” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ನೀನು ನಿನ್ನ ಯೌವನಕಾಲವನ್ನು ನೆನೆಸಿಕೊಳ್ಳದೆ, ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿ, ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡೆಸಿದ್ದಲ್ಲದೆ ಈ ಅಸಹ್ಯಕಾರ್ಯವನ್ನೂ ಮಾಡಿರುವೆ. ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಇವೆಲ್ಲಾ ಯಾಕೆ ಸಂಭವಿಸಬೇಕು? ಯಾಕೆಂದರೆ ನೀನು ಎಳೆಯವಳಾಗಿದ್ದಾಗ ಏನು ಸಂಭವಿಸಿತೆಂದು ಮರೆತುಬಿಟ್ಟಿರುವೆ. ನೀನು ಕೆಟ್ಟಕೆಲಸಗಳನ್ನು ಮಾಡಿ ನಾನು ಕೋಪಿಸಿಕೊಳ್ಳುವಂತೆ ಮಾಡಿರುವೆ. ಆದ್ದರಿಂದ ಆ ಕೆಟ್ಟಕಾರ್ಯ ಮಾಡಿದ್ದಕ್ಕಾಗಿ ನಿನ್ನನ್ನು ಶಿಕ್ಷಿಸಬೇಕಾಗಿ ಬಂತು. ನೀನು ಅದಕ್ಕಿಂತಲೂ ಭಯಂಕರಕೃತ್ಯ ನಡಿಸಲು ಯೋಜನೆ ಹಾಕಿಕೊಂಡಿರುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 “ ‘ನೀನು ನಿನ್ನ ಯೌವನದ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ, ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿನ್ನ ಇತರ ಎಲ್ಲಾ ಅಸಹ್ಯವಾದವುಗಳ ಜೊತೆಗೆ, ಈ ಅಪವಿತ್ರತೆಯನ್ನು ನೀನು ಮಾಡಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:43
22 ತಿಳಿವುಗಳ ಹೋಲಿಕೆ  

ಈ ನಿನ್ನ ಅಸಹ್ಯಕಾರ್ಯಗಳನ್ನೂ ಸೂಳೆತನವನ್ನೂ ನೀನು ಪದೇಪದೇ ನಡಿಸುತ್ತಿದ್ದಾಗ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.


ಆದಕಾರಣ ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸಮಾಡಿ ಅವರ ದುರ್ನಡತೆಯನ್ನು ಅವರ ತಲೆಗೇ ಕಟ್ಟಿದ್ದೇನೆ; ಇದು ಕರ್ತನಾದ ಯೆಹೋವನ ನುಡಿ.


ಆದರೆ ಯಾರ ಚಿತ್ತವು ತಮ್ಮ ಅಸಹ್ಯವಸ್ತುಗಳನ್ನೂ ಹೇಯವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು. ಇದು ಕರ್ತನಾದ ಯೆಹೋವನ ನುಡಿ.


ಅವರು ಆತನ ಭುಜಬಲವನ್ನೂ ಶತ್ರುಗಳಿಂದ ಬಿಡಿಸಿದ ಸಮಯವನ್ನೂ ಮರೆತುಬಿಟ್ಟರು.


ಆಗ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದ ತಮ್ಮ ಹೃದಯವನ್ನೂ ತಮ್ಮ ಬೊಂಬೆಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು ತಾವು ಬಹಳ ಅಸಹ್ಯಕಾರ್ಯಗಳನ್ನು ನಡಿಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮನ್ನು ತಾವೇ ಹೇಸಿಕೊಳ್ಳುವರು.


ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮನನ್ನು ದುಃಖಪಡಿಸಿದರು; ಆದದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.


ಆದರೆ ಅವರು ಬೇಗನೆ ಆತನ ಕೆಲಸಗಳನ್ನು ಮರೆತು ಆತನ ಸಂಕಲ್ಪವನ್ನು ಕಾದಿರದೆ


ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ಚಂಡಿಗಳೇ, ಮನಶ್ಶುದ್ಧಿಯೂ ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.


ಇಗೋ, ನೀವು ನಿಂತಿರುವಲ್ಲಿಯೇ ನಿಮ್ಮನ್ನು ಸಿವುಡು ತುಂಬಿದ ಗಾಡಿಯಷ್ಟು ಭಾರವಾಗಿ ಅಮುಕಿಬಿಡುವೆನು.


ನಾನಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು ಎಂದು ಹೇಳಿದನು.


ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.


ನಾನು ನಾಲ್ವತ್ತು ವರುಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಮಾರ್ಗವನ್ನು ತಿಳಿಯದವರು, ಎಂದು ಹೇಳಿದೆನು.


ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ ಅಲ್ಲಿ ಆತನನ್ನು ನೋಯಿಸಿದರು.


ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಹುರುಡು ಹುಟ್ಟಿಸುವೆನು. ಅವರು ಅಚೇತನ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.


ಈಗ ನಿನ್ನ ದುರ್ನಡತೆಯ ಮತ್ತು ದುರಾಚಾರಗಳ ಫಲವನ್ನು ನೀನು ಅನುಭವಿಸಬೇಕಾಗಿ ಬಂತು. ಇದು ಯೆಹೋವನ ನುಡಿ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಗೆ ಕಟ್ಟುವೆನು.


ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.


ಆದಕಾರಣ ಯೆಹೋವನು ಆ ಕೇಡನ್ನು ನೋಡಿಕೊಂಡಿದ್ದು ನಮ್ಮ ಮೇಲೆ ಬರಮಾಡಿದ್ದಾನೆ; ನಮ್ಮ ದೇವರಾದ ಯೆಹೋವನು ತಾನು ಮಾಡುವ ಸಕಲ ಕಾರ್ಯಗಳಲ್ಲಿ ಧರ್ಮಸ್ವರೂಪನೇ; ನಾವೋ ಆತನ ಮಾತನ್ನು ಕೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು