Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 17:20 - ಕನ್ನಡ ಸತ್ಯವೇದವು J.V. (BSI)

20 ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು, ಅವನನ್ನು ಬಾಬೆಲಿಗೆ ತಂದು ಅಲ್ಲೇ ಅವನೊಂದಿಗೆ ವಾದಿಸಿ ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು, ಅವನನ್ನು ಬಾಬಿಲೋನಿಗೆ ತಂದು ಅಲ್ಲೇ ಅವನೊಂದಿಗೆ ವಾದಿಸಿ, ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾನು ಅವನಿಗೆ ನನ್ನ ಬಲೆಯೊಡ್ಡುವೆನು; ನಾನು ಹಾಕಿದ ಉರುಳಿನಲ್ಲಿ ಸಿಕ್ಕಿಬೀಳುವನು. ಅವನನ್ನು ಬಾಬಿಲೋನಿಗೆ ತಂದು, ಅಲ್ಲೇ ಅವನೊಂದಿಗೆ ವಾದಿಸಿ, ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ಅವನಿಗೆ ಉರುಲನ್ನೊಡ್ಡುವೆನು; ಅವನು ಅದರೊಳಗೆ ಸಿಕ್ಕಿಕೊಳ್ಳುವನು. ನಾನು ಅವನನ್ನು ಬಾಬಿಲೋನಿಗೆ ತಂದು ಅಲ್ಲಿ ಶಿಕ್ಷಿಸುವೆನು. ಯಾಕೆಂದರೆ ಅವನು ನನಗೆ ಅಪನಂಬಿಗಸ್ತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ. ಆಗ ಅವನು ನನ್ನ ಉರುಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಬಾಬಿಲೋನಿಗೆ ಕರೆತಂದಿದ್ದೇನೆ ಮತ್ತು ಅವನು ನನಗೆ ನಂಬಿಕೆದ್ರೋಹ ಮಾಡಿದ ಕಾರಣ ಅಲ್ಲಿ ಅವನಿಗೆ ನ್ಯಾಯತೀರ್ಪು ವಿಧಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 17:20
24 ತಿಳಿವುಗಳ ಹೋಲಿಕೆ  

ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರ್ಲಿನಲ್ಲಿ ಸಿಕ್ಕಿಬೀಳುವನು; ಕಸ್ದೀಯ ದೇಶದ ಬಾಬೆಲಿಗೆ ಅವನನ್ನು ಒಯ್ಯುವೆನು, ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಗುಂಪಾಗಿ ಕೂಡಿದ ಬಹುಜನಾಂಗಗಳವರ ಕೈಯಿಂದ ನಾನು ನನ್ನ ಬಲೆಯನ್ನು ನಿನ್ನ ಮೇಲೆ ಬೀಸುವೆನು; ಅವರು ನಿನ್ನನ್ನು ಆ ಬಲೆಯಿಂದ ಮೇಲಕ್ಕೆ ಎಳೆಯುವರು.


ನೀನಾದರೆ - ನಾನು ನಿರ್ದೋಷಿ, ಆತನ ಕೋಪವು ನನ್ನ ಮೇಲಿಂದ ತೊಲಗಿ ಹೋಗಿದೆ ನಿಶ್ಚಯ ಎಂದುಕೊಂಡಿದ್ದೀ; ನಾನು ಪಾಪಮಾಡಲಿಲ್ಲವೆಂದು ನೀನು ಹೇಳಿದ ಕಾರಣ, ಇಗೋ ನಾನು ನಿನಗೆ ನ್ಯಾಯತೀರಿಸುವೆನು.


ನಾನು ಗೋಗನ ಸಂಗಡ ವ್ಯಾಜ್ಯವಾಡುತ್ತಾ ಅವನನ್ನು ವ್ಯಾಧಿಗೂ ವಧೆಗೂ ಗುರಿಮಾಡಿ ಅವನ ಮೇಲೂ ಅವನ ಗುವ್ಮಿುಗಳ ಮೇಲೂ ಅವನೊಂದಿಗಿರುವ ಬಹುಜನಾಂಗಗಳ ಮೇಲೂ ವಿಪರೀತ ಮಳೆ, ದೊಡ್ಡ ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು.


ಆ ದಿವಸವು ಭೂನಿವಾಸಿಗಳೆಲ್ಲರ ಮೇಲೆ ಬರುವದು.


ಬೆಟ್ಟಗಳೇ, ಯೆಹೋವನ ವ್ಯಾಜ್ಯವನ್ನು ಕೇಳಿರಿ! ಭೂವಿುಯ ಶಾಶ್ವತವಾದ ಅಸ್ತಿವಾರಗಳೇ, ಕಿವಿಗೊಡಿರಿ; ಯೆಹೋವನಿಗೆ ಆತನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಆತನು ಇಸ್ರಾಯೇಲಿನೊಂದಿಗೆ ವಿವಾದಿಸುತ್ತಾನೆ.


ಹೊರಟ ಕೂಡಲೆ ಅವರ ಮೇಲೆ ನನ್ನ ಬಲೆಯನ್ನು ಬೀಸಿ ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಕ್ಕೆ ಎಳೆಯುವೆನು; ಅವರೆಲ್ಲರ ಕಿವಿಗೆ ಬಿದ್ದ ಮಾತಿಗನುಸಾರವಾಗಿ ಅವರನ್ನು ಶಿಕ್ಷಿಸುವೆನು.


ನಿಮ್ಮ ತಾಯಿಯ ಸಂಗಡ ವಾದಿಸಿರಿ, ವಾದಿಸಿರಿ; ಅವಳು ನನ್ನ ಹೆಂಡತಿಯಲ್ಲ. ನಾನು ಅವಳ ಗಂಡನಲ್ಲ; ಅವಳು ಸೂಳೆತನವನ್ನು ತನ್ನ ಮುಖದಿಂದ, ವ್ಯಭಿಚಾರದ ಬೆಡಗನ್ನು ತನ್ನ ಸ್ತನಮಧ್ಯದಿಂದ ತೊಲಗಿಸಲಿ;


ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.


ಆತನು ಮೇಲಣಲೋಕದಿಂದ ಬೆಂಕಿಯನ್ನು ಕಳುಹಿಸಿದ್ದಾನೆ, ಅದು ನನ್ನ ಎಲುಬುಗಳಲ್ಲಿ ವ್ಯಾಪಿಸಿದೆ; ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ, ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ, ನಾನು ಹಾಳುಬಿದ್ದು ಸದಾ ಬಳಲುವಂತೆ ಮಾಡಿದ್ದಾನೆ.


ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೋರ್ದನಿನ ದಟ್ಟಡವಿಯಿಂದ [ಕಸ್ದೀಯರಿಗೆ] ನಿತ್ಯನೆಲೆಯಾದ ಗೋಮಾಳಕ್ಕೆ ಏರಿ ಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವದಕ್ಕೆ ನೇವಿುಸುವೆನು; ನನ್ನ ಸಮಾನನು ಯಾವನು? ನನ್ನನ್ನು ನ್ಯಾಯವಿಚಾರಣೆಗೆ ಯಾವನು ಕರೆದಾನು? ಮಂದೆಯನ್ನು ಕಾಯುವ ಯಾವನು ನನ್ನೆದುರಿಗೆ ನಿಲ್ಲಬಲ್ಲನು?


ಆದಕಾರಣ ನಾನು ನಿಮ್ಮೊಂದಿಗೆ ಇನ್ನೂ ವ್ಯಾಜ್ಯವಾಡುವೆನು; ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯವಾಡುವೆನು ಎಂದು ಯೆಹೋವನು ಅನ್ನುತ್ತಾನೆ.


ಮನುಷ್ಯನೋ ತನ್ನ ಕಾಲಗತಿಯನ್ನು ತಿಳಿಯನಷ್ಟೆ; ಮೀನುಗಳು ಕೆಟ್ಟ ಬಲೆಗೂ ಪಕ್ಷಿಗಳು ಜಾಲಕ್ಕೂ ಸಿಕ್ಕಿಬೀಳುವ ಹಾಗೆ ನರಜನ್ಮದವರು ತಮ್ಮ ಮೇಲೆ ತಟ್ಟನೆ ಬೀಳುವ ಕೆಟ್ಟ ಕಾಲಪಾಶಕ್ಕೆ ಸಿಕ್ಕಿಕೊಳ್ಳುವರು.


ತಲೆಯೆತ್ತಿದರೆ ಸಿಂಹದಂತೆ ನನ್ನನ್ನು ಬೇಟೆಯಾಡುವಿ. ನಿನ್ನ ಅದ್ಭುತಚಮತ್ಕಾರವನ್ನು ತಿರಿಗಿ ನನ್ನಲ್ಲಿ ತೋರಿಸುವಿ.


ಆದದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬೆಲಿಗೆ ಒಯ್ದರು.


ಅಬ್ಷಾಲೋಮನು ದಾವೀದನ ಸೇವಕರಿಗೆ ಸಿಕ್ಕಿದನು; ಹೇಗಂದರೆ - ಅವನು ಹತ್ತಿದ ಹೇಸರಕತ್ತೆಯು ಒಂದು ದೊಡ್ಡ ಏಲಾಮರದ ಕೆಳಗೆ ಹಾದುಹೋಗುವಾಗ ಅವನ ತಲೆಯು ನಿಬಿಡವಾದ ಅದರ ಕೊಂಬೆಗಳಲ್ಲಿ ಸಿಕ್ಕಿಕೊಂಡಿತು; ಹೇಸರಕತ್ತೆಯು ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂವಿುಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುವವನಾದನು.


ಅರಸನಾದ ಚಿದ್ಕೀಯನು ಅವನನ್ನು ಕರತರಿಸಿ ಯೆಹೋವನಿಂದ ದೈವೋಕ್ತಿಯು ದೊರೆಯಿತೋ ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು - ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿ ಬೀಳುವಿ ಅಂದನು.


ಅವರು ದ್ರೋಹಮಾಡಿದ್ದರಿಂದ ನಾನು ದೇಶವನ್ನು ಹಾಳುಮಾಡುವೆನು; ಇದು ಕರ್ತನಾದ ಯೆಹೋವನ ನುಡಿ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಗೆ ಕಟ್ಟುವೆನು.


ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿ ದುಷ್ಟನು ನಡಿಸುವ ದುರಾಚಾರಗಳನ್ನೆಲ್ಲಾ ನಡಿಸಿದರೆ ಅವನು ಬಾಳುವನೋ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.


ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಪ್ರಾಣ ಹುಡುಕುವ ಶತ್ರುಗಳ ಕೈಗೆ, ಅಂದರೆ ನಿಮ್ಮನ್ನು ಬಿಟ್ಟುಹೋಗಿರುವ ಬಾಬೆಲಿನ ಅರಸನ ಕೈಗೆ ಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು