Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:8 - ಕನ್ನಡ ಸತ್ಯವೇದವು J.V. (BSI)

8 ಸಾಲಕ್ಕೆ ಬಡ್ಡಿ ತೆಗೆಯದೆ ಲಾಭಕ್ಕೆ ಹಣಕೊಡದೆ ಅನ್ಯಾಯಕ್ಕೆ ಕೈಹಾಕದೆ ವಾದಿಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸಾಲಕ್ಕೆ ಬಡ್ಡಿತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸಾಲಕ್ಕೆ ಬಡ್ಡಿ ತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವನು ಸಾಲ ಕೊಡುವಾಗ ಬಡ್ಡಿಹಾಕುವುದಿಲ್ಲ. ಅವನು ಕೆಡುಕುಗಳನ್ನು ಮಾಡುವುದಿಲ್ಲ. ಅವನು ತನ್ನ ವ್ಯವಹಾರಗಳಲ್ಲಿ ಪ್ರತಿಯೊಬ್ಬನೊಂದಿಗೂ ಯಥಾರ್ಥವಾಗಿಯೂ ನ್ಯಾಯವಾಗಿಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯದಿಂದ ತನ್ನ ಕೈಯನ್ನು ಹಿಂತೆಗೆದು ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:8
26 ತಿಳಿವುಗಳ ಹೋಲಿಕೆ  

ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಸಾಲಕೊಟ್ಟರೆ ಅವನನ್ನು ಸಾಲಗಾರನಂತೆ ನಡಿಸಬಾರದು; ಅವನಿಂದ ಬಡ್ಡಿಯನ್ನು ಕೇಳಬಾರದು.


ನೀವು ಮಾಡಬೇಕಾದ ಕಾರ್ಯಗಳು ಇವೇ - ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ ಸಮಾಧಾನಪ್ರದನ್ಯಾಯವನ್ನೂ ಸ್ಥಾಪಿಸಿರಿ;


ನಿನ್ನವರು ರಕ್ತಸುರಿಸುವದಕ್ಕೆ ಲಂಚತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ ದೋಚಿಕೊಂಡು ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಕರ್ತನಾದ ಯೆಹೋವನ ನುಡಿ.


ಬಡವನ ಮೇಲೆ ಕೈಮಾಡದೆ ಬಡ್ಡಿಯನ್ನು ಕೇಳದೆ ಲಾಭಕ್ಕೆ ಹಣಕೊಡದೆ ನನ್ನ ವಿಧಿಗಳನ್ನು ಆಚರಿಸಿ ನನ್ನ ನಿಯಮಗಳನ್ನು ಅನುಸರಿಸಿದರೆ ತನ್ನ ತಂದೆಯ ಅಧರ್ಮದ ನಿವಿುತ್ತ ಸಾಯನು, ಬಾಳೇ ಬಾಳುವನು.


ಸಾಲಕ್ಕೆ ಬಡ್ಡಿತೆಗೆದು ಲಾಭಕ್ಕೆ ಹಣಕೊಟ್ಟು ಬಲಾತ್ಕಾರಿಯೂ ರಕ್ತ ಸುರಿಸುವವನೂ ಆಗಿದ್ದರೆ ಬಾಳುವನೇ? ಬಾಳಲೇ ಬಾಳನು; ಈ ದುರಾಚಾರಗಳನ್ನೆಲ್ಲಾ ನಡಿಸಿದನಲ್ಲಾ; ಸತ್ತೇ ಸಾಯುವನು; ತನ್ನ ಮರಣದಂಡನೆಗೆ ತಾನೇ ಕಾರಣ.


ಅವನು ಸಾಲಕ್ಕೆ ಬಡ್ಡಿ ಕೇಳದವನೂ ನಿರಪರಾಧಿಯ ಕೇಡಿಗಾಗಿ ಲಂಚತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವದಿಲ್ಲ.


ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ ವ್ಯಾಜ್ಯಗಾರನೂ ಆಗಿದ್ದೇನಲ್ಲಾ. ನಾನು ಹಣವನ್ನು ಬಡ್ಡಿಗೆ ಕೊಟ್ಟವನಲ್ಲ, ತೆಗೆದುಕೊಂಡವನಲ್ಲ, ಆದರೂ ನನ್ನನ್ನು ಎಲ್ಲರೂ ಬಯ್ಯುತ್ತಾರೆ.


[ಕೇಳಿರಿ], ಸನ್ಮಾರ್ಗದಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ಕೊಲೆಯ ಮಾತಿಗೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು;


ಸದಾಚಾರವನ್ನು ಅಭ್ಯಾಸಮಾಡಿರಿ; ನ್ಯಾಯನಿರತರಾಗಿರಿ, ಹಿಂಸಕನನ್ನು ತಿದ್ದಿ ಸರಿಪಡಿಸಿರಿ, ಅನಾಥನಿಗೆ ನ್ಯಾಯತೀರಿಸಿರಿ, ವಿಧವೆಯ ಪಕ್ಷವಾಗಿ ವಾದಿಸಿರಿ.


ಬಡ್ಡಿಬಾಚಿಗಳಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವದು.


ನನಗಿಂತ ಮುಂಚೆಯಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ [ದಿನಕ್ಕೆ] ನಾಲ್ವತ್ತು ರೂಪಾಯಿಯ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡಿಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವದರಿಂದ ಹಾಗೆ ಮಾಡದೆ ಆ ಗೋಡೆ ಕಟ್ಟುವದರಲ್ಲಿ ನಿರತನಾಗಿದ್ದೆನು.


ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು; ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು.


ನ್ಯಾಯವಿಚಾರಣೆ, ತೂಕ, ಅಳತೆ, ಪರಿಮಾಣ ಇವುಗಳಲ್ಲಿ ನೀವು ನ್ಯಾಯವಿರುದ್ಧವಾಗಿ ನಡೆಯಬಾರದು.


ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.


ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು; ನೀವು ನನ್ನ ವಿಧಿಗಳನ್ನು ಕೈಕೊಳ್ಳದೆ ನನ್ನ ನಿಯಮಗಳನ್ನು ಅನುಸರಿಸದೆ ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವದು.


ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಆತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸದೆ ಹೋಗುವದು ಪಾಪ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ, ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನುಂಟುಮಾಡುವವು; ಹೀಗಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು