Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:9 - ಕನ್ನಡ ಸತ್ಯವೇದವು J.V. (BSI)

9 ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಸತ್ಯಪರನಾಗಿಯೇ ನಡೆದರೆ ಇಂಥವನು ಸದ್ಧರ್ಮಿಯಾಗಿರುವದರಿಂದ ಬಾಳೇ ಬಾಳುವನು; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು, ಸತ್ಯಪರನಾಗಿಯೇ ನಡೆದರೆ ಇಂಥವನು ಸದ್ಧರ್ಮಿಯಾಗಿರುವುದರಿಂದ ಖಂಡಿತವಾಗಿ ಜೀವಿಸುವನು” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಗೊಂಡು, ಸತ್ಯಪರನಾಗಿಯೇ ನಡೆದರೆ, ಇಂಥವನು ಸದ್ಧರ್ಮಿ. ಆದುದರಿಂದ ಅವನು ಜೀವಿಸುವುದು ನಿಶ್ಚಯ. ಇದು ಸರ್ವೇಶ್ವರನಾದ ದೇವರ ನುಡಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವನು ನನ್ನ ನಿಯಮಗಳಿಗನುಸಾರವಾಗಿ ಜೀವಿಸುವನು ಮತ್ತು ನನ್ನ ಕಟ್ಟಳೆಗಳಿಗೆ ನಂಬಿಗಸ್ತಿಕೆಯಿಂದ ವಿಧೇಯನಾಗುವನು. ಅಂಥಾ ಮನುಷ್ಯನು ನೀತಿವಂತನಾಗಿದ್ದಾನೆ ಮತ್ತು ಅವನು ಖಂಡಿತವಾಗಿಯೂ ಬದುಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸತ್ಯವನ್ನು ನಡೆಸುವುದಕ್ಕಾಗಿ ನನ್ನ ನಿಯಮಗಳಲ್ಲಿ ನಡೆದು, ನನ್ನ ನ್ಯಾಯಗಳನ್ನು ಕೈಗೊಂಡು ಸತ್ಯಪರನಾಗಿ ನಡೆದರೆ, ಅವನು ನೀತಿವಂತನು ಮತ್ತು ನಿಶ್ಚಯವಾಗಿ ಬದುಕುವನು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:9
37 ತಿಳಿವುಗಳ ಹೋಲಿಕೆ  

ಇಗೋ, ಆ ದುಷ್ಟನ ಅಂತರಾತ್ಮವು ಉಬ್ಬಿಕೊಂಡಿದೆ, ಯಥಾರ್ಥವಲ್ಲ; ನೀತಿವಂತನೋ ತನ್ನ ನಂಬಿಕೆಯಿಂದಲೇ ಬದುಕುವನು.


ಕೈಕೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.


ಯೆಹೋವನು ಇಸ್ರಾಯೇಲ್ ವಂಶಕ್ಕೆ ಹೀಗೆ ನುಡಿಯುತ್ತಾನೆ - ನನ್ನನ್ನೇ ಆಶ್ರಯಿಸಿ ಬದುಕಿಕೊಳ್ಳಿರಿ;


ಬಡವನ ಮೇಲೆ ಕೈಮಾಡದೆ ಬಡ್ಡಿಯನ್ನು ಕೇಳದೆ ಲಾಭಕ್ಕೆ ಹಣಕೊಡದೆ ನನ್ನ ವಿಧಿಗಳನ್ನು ಆಚರಿಸಿ ನನ್ನ ನಿಯಮಗಳನ್ನು ಅನುಸರಿಸಿದರೆ ತನ್ನ ತಂದೆಯ ಅಧರ್ಮದ ನಿವಿುತ್ತ ಸಾಯನು, ಬಾಳೇ ಬಾಳುವನು.


ಆತನು ನೀತಿವಂತನಾಗಿದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.


ಹೇಗಂದರೆ ದೇವರಿಂದ ದೊರಕುವ ನೀತಿಯು ಅದರಲ್ಲಿ ತೋರಿಬರುತ್ತದೆ. ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುವಂಥದಾಗಿದೆ.


ಪ್ರಿಯರಾದ ಮಕ್ಕಳೇ, ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸುವದಕ್ಕೆ ಯಾರಿಗೂ ಅವಕಾಶ ಕೊಡಬೇಡಿರಿ. ಕ್ರಿಸ್ತನು ಹೇಗೆ ನೀತಿವಂತನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.


ಇದರ ದೆಸೆಯಿಂದ ದೇವರ ವಿಷಯದಲ್ಲಿಯೂ ಮನುಷ್ಯರ ವಿಷಯದಲ್ಲಿಯೂ ನಾನು ನಿರ್ದೋಷಿ ಎಂದು ಸಾಕ್ಷಿ ಹೇಳುವ ಮನಸ್ಸು ನನಗೆ ಯಾವಾಗಲೂ ಇರಬೇಕೆಂದು ಅಭ್ಯಾಸಮಾಡಿಕೊಳ್ಳುತ್ತೇನೆ.


ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು; ನಾನೂ ಅವನನ್ನು ಪ್ರೀತಿಸಿ ಅವನಿಗೆ ಕಾಣಿಸಿಕೊಳ್ಳುವೆನು ಎಂದು ಹೇಳಿದನು.


ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.


ನ್ಯಾಯವು ಹೊಳೆಯ ಹಾಗೆ ಹರಿಯಲಿ, ಧರ್ಮವು ಮಹಾನದಿಯಂತೆ ಪ್ರವಹಿಸಲಿ.


ಕೆಟ್ಟದ್ದನ್ನಲ್ಲ, ಒಳ್ಳೆಯದನ್ನು ಅನುಸರಿಸಿರಿ, ಬಾಳುವಿರಿ; ನೀವು ಅಂದುಕೊಂಡಂತೆ ಸೇನಾಧೀಶ್ವರ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು.


ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು; ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.


ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ.


ಅಂದರೆ ಆ ದುಷ್ಟನು ಒತ್ತೆಯನ್ನು ಬಿಗಿಹಿಡಿಯದೆ ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು ಜೀವಾಧಾರವಾದ ವಿಧಿಗಳನ್ನು ಅನುಸರಿಸಿ ಸಕಲ ದುಷ್ಕರ್ಮಗಳಿಗೂ ದೂರನಾಗಿರುವ ಪಕ್ಷದಲ್ಲಿ ಸಾಯನು, ಬಾಳೇಬಾಳುವನು.


ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿಬಿದ್ದರು. ಕೈಕೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇವಿುಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಅವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು ಅಂದುಕೊಂಡೆನು.


ಆದದರಿಂದ ನಿಮ್ಮ ದೇವರಾದ ಯೆಹೋವನಲ್ಲಿ ಪ್ರೀತಿಯಿಟ್ಟು ಆತನ ನಿಯಮಗಳನ್ನು ಕೈಕೊಂಡು ಆತನ ಆಜ್ಞಾವಿಧಿನಿರ್ಣಯಗಳನ್ನು ಯಾವಾಗಲೂ ಅನುಸರಿಸಬೇಕು.


ಮೋಶೆ ಇಸ್ರಾಯೇಲ್ಯರೆಲ್ಲರನ್ನು ಕರೆದು ಹೀಗಂದನು - ಇಸ್ರಾಯೇಲ್ಯರೇ, ನಾನು ಈಗ ನಿಮಗೆ ತಿಳಿಸುವ ಆಜ್ಞಾವಿಧಿಗಳನ್ನು ಕೇಳಿರಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಬೇಕು.


ಇಸ್ರಾಯೇಲ್ಯರೇ, ಕೇಳಿರಿ; ನೀವು ಬದುಕಿಕೊಂಡು ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಂತೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.


ನನ್ನ ಆಜ್ಞಾವಿಧಿಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾವಿಧಿಗಳ ಮೂಲಕ ಬದುಕುವರು. ಆದದರಿಂದ ನೀವು ಅವುಗಳನ್ನೇ ಅನುಸರಿಸಬೇಕು; ನಾನು ಯೆಹೋವನು.


ಆದದರಿಂದ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ಅಪರಾಧನಿರ್ಣಯವು ಈಗ ಇಲ್ಲವೇ ಇಲ್ಲ.


ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು; ನೀವು ನನ್ನ ವಿಧಿಗಳನ್ನು ಕೈಕೊಳ್ಳದೆ ನನ್ನ ನಿಯಮಗಳನ್ನು ಅನುಸರಿಸದೆ ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವದು.


ಇಂಥವನು ಪಡೆದ ಮಗನು ಈಗ ಹೇಳಿದ ದುಷ್ಕೃತ್ಯಗಳಲ್ಲಿ ಯಾವದನ್ನಾದರೂ ನಡಿಸಿ


ಆದರೆ ನೀವು - ತಂದೆಯ ದೋಷಫಲವನ್ನು ಮಗನು ಹೇಗೆ ಅನುಭವಿಸುವದಿಲ್ಲ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡಿಸಿ ನನ್ನ ವಿಧಿಗಳನ್ನೆಲ್ಲಾ ಕೈಕೊಂಡು ಆಚರಿಸಿದರೆ ಬಾಳೇ ಬಾಳುವನು.


ನಮ್ಮ ದೇವರಾದ ಯೆಹೋವನು ನಿರೂಪಿಸಿದ ಈ ಧರ್ಮೋಪದೇಶವನ್ನೆಲ್ಲಾ ನಾವು ಅನುಸರಿಸಿದರೆ ಆತನ ದೃಷ್ಟಿಯಲ್ಲಿ ನೀತಿವಂತರೆಂದು ಎಣಿಸಲ್ಪಡುವೆವೆಂಬದಾಗಿ ನೀವು ಉತ್ತರಕೊಡಬೇಕು.


ನೀನು ನಿನ್ನ ತಂದೆಯಾದ ದಾವೀದನಂತೆ ಪೂರ್ಣಮನಸ್ಸಿನಿಂದಲೂ ಯಥಾರ್ಥಚಿತ್ತದಿಂದಲೂ ನನಗೆ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುತ್ತಾ ಬರುವದಾದರೆ


ಧರ್ಮಮಾರ್ಗದಿಂದ ಜೀವಲಾಭವು; ಆ ಸುಪಥಮಾರ್ಗವು ಅಮರಣವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು