Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 19:12 - ಕನ್ನಡ ಸತ್ಯವೇದವು J.V. (BSI)

12 ಆ ಲತೆಯನ್ನು ಕ್ರೋಧಿಗಳು ಕಿತ್ತು ನೆಲದ ಮೇಲೆ ಬಿಸಾಟುಬಿಟ್ಟರು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು, ಅದರ ಗಟ್ಟಿಕೊಂಬೆಗಳು ಮುರಿದು ಒಣಗಿಹೋದವು, ಬೆಂಕಿಯು ಅವುಗಳನ್ನು ನುಂಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದರೆ ಆ ಲತೆಯು ರೋಷದಲ್ಲಿ ಕೀಳಲ್ಪಟ್ಟು, ನೆಲದ ಮೇಲೆ ಬಿಸಾಡಲ್ಪಟ್ಟಿತು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು, ಅದರ ಗಟ್ಟಿ ಕೊಂಬೆಗಳು ಮುರಿದು ಒಣಗಿ ಹೋದವು, ಬೆಂಕಿಯು ಅವುಗಳನ್ನು ನುಂಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕಿತ್ತು ಬಿಸಾಡಿದರು ಕ್ರೋಧಿಗಳು ಆ ಲತೆಯನು ಬಾಡಿಸಿತು ಅದರ ಫಲವನು ಮೂಡಣಗಾಳಿಯು ಮುದುರಿ ಒಣಗಿಹೋದುವು ಅದರ ಗಟ್ಟಿಕೊಂಬೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ದ್ರಾಕ್ಷಾಲತೆಯು ಬೇರು ಸಮೇತ ಕಿತ್ತುಹಾಕಲ್ಪಟ್ಟಿತು. ಅದು ನೆಲದ ಮೇಲೆ ಬಿಸಾಡಲ್ಪಟ್ಟಿತು. ಪೂರ್ವದ ಬಿಸಿಗಾಳಿಯು ಅದರ ಹಣ್ಣುಗಳನ್ನು ಒಣಗಿಸಿತು. ಅದರ ಬಲವಾದ ಕೊಂಬೆಗಳು ಮುರಿಯಲ್ಪಟ್ಟವು. ಅವುಗಳನ್ನು ಬೆಂಕಿಯು ಸುಟ್ಟುಹಾಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಆ ಲತೆಯನ್ನು ರೋಷದಲ್ಲಿ ಕಿತ್ತು ನೆಲಕ್ಕೆ ಬಿಸಾಡಿದರು. ಪೂರ್ವದಿಕ್ಕಿನ ಗಾಳಿಯು ಅದರ ಫಲವನ್ನು ಒಣಗಿಸಿತು. ಅದರ ಬಲವಾದ ಬಳ್ಳಿಗಳು ಮುರಿದು ಒಣಗಿಹೋದವು. ಬೆಂಕಿಯು ಅವುಗಳನ್ನು ಸುಟ್ಟುಹಾಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 19:12
32 ತಿಳಿವುಗಳ ಹೋಲಿಕೆ  

ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವದು, ಅದರ ಒರತೆಯು ಒಣಗುವದು; [ಶತ್ರುವು] ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಗೊಂಬುವನು.


ಆಹಾ, ನಾಟಿಕೊಂಡಿದ್ದ ಆ ಲತೆಯು ಸಮೃದ್ಧವಾಗಿಯೇ ಇರುವದೋ? ಮೂಡಣ ಗಾಳಿಯು ಬಡಿಯುವಾಗ ಬಾಡೇ ಬಾಡುವದಲ್ಲವೆ; ಬೆಳೆದ ಪಾತಿಯಲ್ಲಿಯೇ ಒಣಗಿ ಹೋಗುವದು.


ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗುವವು, ಹೆಂಗಸರು ಬಂದು ಬೆಂಕಿ ಹಚ್ಚಿ ಉರಿಸುವರು; ಆ ಪ್ರಜೆಯು ಬುದ್ಧಿಹೀನವಾದದ್ದೇ ಸರಿ; ಆದಕಾರಣ ಸೃಷ್ಟಿಸಿದಾತನು ಅದನ್ನು ಕರುಣಿಸನು, ನಿರ್ಮಿಸಿದಾತನು ಅದಕ್ಕೆ ದಯೆತೋರಿಸನು.


ಅದರಲ್ಲಿ ರಾಜದಂಡಯೋಗ್ಯವಾದ ಗಟ್ಟಿ ಕೊಂಬೆಗಳಿದ್ದವು, ಅವುಗಳ ಎತ್ತರವು ವಿುಕ್ಕ ರೆಂಬೆಗಳಿಗಿಂತ ಹೆಚ್ಚಾಗಿತ್ತು, ಬಹು ರೆಂಬೆಗಳ ಮಧ್ಯದಲ್ಲಿ ಉದ್ದುದ್ದವಾಗಿ ಕಾಣಿಸಿದವು.


ಆಹಾ, ಅದನ್ನು ಸೌದೆಯಾಗಿ ಬೆಂಕಿಯಲ್ಲಿ ಹಾಕುವರು; ಬೆಂಕಿಯು ಅದರ ಎರಡು ಕೊನೆಗಳನ್ನು ಸುಟ್ಟುಬಿಡುವದು, ಮಧ್ಯಭಾಗವು ಇದ್ದಲಾಗುವದು;


ನಾನು ಮೊದಲು ಇವರನ್ನು ಕಿತ್ತುಹಾಕಲು, ಕೆಡವಲು, ಹಾಳುಮಾಡಲು, ನಾಶಪಡಿಸಲು, ಬಾಧಿಸಲು ಹೇಗೆ ಎಚ್ಚರಗೊಂಡಿದ್ದೆನೋ ಹಾಗೆಯೇ ಇನ್ನು ಮೇಲೆ ಇವರನ್ನು ಕಟ್ಟಲು, ನೆಡಲು ಎಚ್ಚರಗೊಳ್ಳುವೆನು. ಇದು ಯೆಹೋವನ ನುಡಿ.


ಯಾವನು ನನ್ನಲ್ಲಿ ನೆಲೆಗೊಂಡಿರುವದಿಲ್ಲವೋ ಅವನು ಆ ಕೊಂಬೆಯಂತೆ ಹೊರಕ್ಕೆ ಬಿಸಾಡಲ್ಪಟ್ಟು ಒಣಗಿಹೋಗುವನು; ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುತ್ತಾರೆ, ಅವು ಸುಟ್ಟುಹೋಗುತ್ತವೆ.


ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.


ನೀನು ನಿನ್ನ ಸೊಬಗಿನ ನಿವಿುತ್ತ ಉಬ್ಬಿದ ಮನಸ್ಸುಳ್ಳವನಾಗಿ ನಿನ್ನ ಮೆರೆತದಿಂದ ನಿನ್ನ ಬುದ್ಧಿಯನ್ನು ಹಾಳುಮಾಡಿಕೊಂಡಿ; ಇದರಿಂದ ನಾನು ನಿನ್ನನ್ನು ನೆಲಕ್ಕೆ ದೊಬ್ಬಿ ನೀನು ಅರಸರಿಗೆ ನೋಟವಾಗುವಂತೆ ಅವರ ಕಣ್ಣಮುಂದೆ ಹಾಕಿದೆನು.


ಯೆಹೋವನು ಇಂತೆನ್ನುತ್ತಾನೆ - ಇವನನ್ನು ಮಕ್ಕಳಿಲ್ಲದವನು, ವ್ಯರ್ಥಜನ್ಮದವನು ಎಂದು ಪಟ್ಟಿಯಲ್ಲಿ ಬರೆಯಿರಿ; ಇವನ ಸಂತಾನದಲ್ಲಿ ಇನ್ನು ಮೇಲೆ ಯಾವನೂ ದಾವೀದನ ಸಿಂಹಾಸನದಲ್ಲಿ ಕೂತು ಯೆಹೂದವನ್ನು ಆಳಿ ಬಾಳನು.


ಅದು ಕಡಿದು ಬೆಂಕಿಯಿಂದ ಸುಡಲ್ಪಟ್ಟಿದೆ. ಅವರು ನಿನ್ನ ಬಾಯಿಗದರಿಕೆಯಿಂದ ನಾಶವಾಗುತ್ತಾರೆ.


ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿ ಬಿಡುವನು; ನಿನ್ನನ್ನು ಹಿಡಿದು ನಿವಾಸದೊಳಗಿಂದ ಕಿತ್ತುಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು. ಸೆಲಾ.


ಅವನು ಪಿತೃಗಳ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಖೀನನು ಅರಸನಾದನು.


ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ನೇವಿುಸಿ ಅವನಿಗೆ ಯೆಹೋಯಾಕೀಮನೆಂಬ ಹೊಸ ಹೆಸರನ್ನಿಟ್ಟು ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ತೆಗೆದುಕೊಂಡು ಹೋದನು. ಯೆಹೋವಾಹಾಜನು ಅಲ್ಲಿ ಮೃತಿಹೊಂದಿದನು.


ಅವನ ಕಾಲದಲ್ಲಿ ಐಗುಪ್ತದ ಅರಸನಾದ ಫರೋಹ ನೆಕೋ ಎಂಬವನು ಅಶ್ಶೂರದ ಅರಸನಿಗೆ ವಿರೋಧವಾಗಿ ಯುದ್ಧಮಾಡುವದಕ್ಕೋಸ್ಕರ ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು ಕೂಡಲೆ ಅವನಿಂದ ಹತನಾದನು.


ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದವರೆಗೂ ವ್ಯಾಪಿಸಿ ಬೆಳೆ ಸಹಿತವಾಗಿ ಭೂವಿುಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವದು.


ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನೆಂದು ಉತ್ತರಕೊಡುವರು.


ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ವಿುತಿಮೀರದೆ ಹೋರಾಡುತ್ತಿದ್ದೀ; ಮೂಡಣ ಗಾಳಿಯು ಬೀಸಿದ ದಿನದಲ್ಲಿ ಅದರ ಕ್ರೂರವಾದ ಬಡಿತದಿಂದ ನಿನ್ನ ಜನವನ್ನು ತೊಲಗಿಸಿದಿ.


ಅಯ್ಯೋ, ಕರ್ತನು ಕೋಪಗೊಂಡು ಚೀಯೋನ್ ಪುರಿಗೆ ಮೋಡವು ಕವಿಯುವಂತೆ ಮಾಡಿದ್ದಾನಲ್ಲಾ! ಆತನು ತನ್ನ ಸಿಟ್ಟನ್ನು ತೀರಿಸಿಕೊಂಡ ದಿನದಲ್ಲಿ ತನ್ನ ಪಾದಪೀಠವನ್ನು ನೆನಪಿಗೆ ತಾರದೆ ಇಸ್ರಾಯೇಲಿನ ಶಿರೋಮಣಿಯನ್ನು ಆಕಾಶದಿಂದ ಭೂವಿುಗೆ ತಳ್ಳಿಬಿಟ್ಟನು.


ಸೂರ್ಯನು ಹುಟ್ಟಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆ ಹೋಗುವವನಾಗಿ ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ಮರಣವನ್ನು ಕೇಳಿಕೊಂಡನು.


ನರಪುತ್ರನೇ, ದ್ರಾಕ್ಷೆಯ ಗಿಡವು ವಿುಕ್ಕ ಗಿಡಗಳಿಗಿಂತ ಏನು ಹೆಚ್ಚು? ವನವೃಕ್ಷಗಳಲ್ಲಿ ದ್ರಾಕ್ಷಾಲತೆಯ ವಿಶೇಷವೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು