Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 2:1 - ಕನ್ನಡ ಸತ್ಯವೇದವು J.V. (BSI)

1 ಆತನು ನನಗೆ - ನರಪುತ್ರನೇ, ಎದ್ದು ನಿಂತುಕೋ, ನಿನ್ನ ಸಂಗಡ ಮಾತಾಡುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ನನಗೆ, “ನರಪುತ್ರನೇ, ಎದ್ದು ನಿಂತುಕೋ, ನಿನ್ನ ಸಂಗಡ ಮಾತನಾಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ನನಗೆ, “ನರಪುತ್ರನೇ, ಎದ್ದು ನಿಲ್ಲು; ನಿನ್ನ ಸಂಗಡ ಮಾತಾಡಬೇಕು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ಸ್ವರವು, “ನರಪುತ್ರನೇ, ಎದ್ದೇಳು ನಾನು ನಿನ್ನೊಂದಿಗೆ ಮಾತನಾಡುತ್ತೇನೆ” ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ನನಗೆ, “ಮನುಷ್ಯಪುತ್ರನೇ, ಎದ್ದು ನಿಲ್ಲು, ನಿನ್ನ ಸಂಗಡ ಮಾತನಾಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 2:1
32 ತಿಳಿವುಗಳ ಹೋಲಿಕೆ  

ಆಗ ಅವನು ನನಗೆ - ದಾನಿಯೇಲನೇ, ಅತಿಪ್ರಿಯನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು; ನಿಂತುಕೋ, ಈಗ ನಿನ್ನ ಬಳಿಗೇ ಕಳುಹಿಸಲ್ಪಟ್ಟಿದ್ದೇನೆ ಎಂದು ಹೇಳಿದನು; ಹೇಳಿದ ಕೂಡಲೆ ನಾನು ನಡುಗುತ್ತಾ ನಿಂತುಕೊಂಡೆನು.


ನರಪುತ್ರನೇ, ನೀನು ಒಂದು ಚದರ ಬಿಲ್ಲೆಯನ್ನು ತೆಗೆದುಕೊಂಡು ನಿನ್ನ ಮುಂದೆ ಇಟ್ಟು ಅದರಲ್ಲಿ ಪಟ್ಟಣದ ನಕ್ಷೆಯನ್ನು ಅಂದರೆ ಯೆರೂಸಲೇವಿುನ ನಕ್ಷೆಯನ್ನು ಬರೆದು


ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇವಿುಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ಪರವಾಗಿ ಅವರನ್ನು ಎಚ್ಚರಿಸು.


ನರಪುತ್ರನೇ, ಹದವಾದ ಖಡ್ಗವನ್ನು ತೆಗೆದುಕೊಂಡು ಕ್ಷೌರಕನ ಕತ್ತಿಯನ್ನಾಗಿ ಉಪಯೋಗಿಸಿ ನಿನ್ನ ತಲೆಯನ್ನೂ ಗಡ್ಡವನ್ನೂ ಬೋಳಿಸಿಬಿಟ್ಟು ತ್ರಾಸನ್ನು ತಂದು ಅದರಿಂದ ಆ ಕೂದಲನ್ನು ಸರಿಯಾಗಿ ಮೂರು ಭಾಗ ಮಾಡು.


ಆಮೇಲೆ ಆತನು ನನಗೆ ಹೀಗೆ ಹೇಳಿದನು - ನರಪುತ್ರನೇ, ನೀನು ಇಸ್ರಾಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ನುಡಿ.


ಆತನು ನನಗೆ - ನರಪುತ್ರನೇ, ನಿನಗೆ ಸಿಕ್ಕಿದ ಈ ಸುರಳಿಯನ್ನು ತಿನ್ನು; [ಇದರಲ್ಲಿನ ಸಂಗತಿಗಳನ್ನು] ಇಸ್ರಾಯೇಲ್ ವಂಶದವರಿಗೆ ಸಾರು, ನಡೆ ಎಂದು ಅಪ್ಪಣೆಕೊಟ್ಟನು.


ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.


ನಿನ್ನನ್ನು ನನ್ನ ಸೇವಕನಾಗಿಯೂ ಸಾಕ್ಷಿಯಾಗಿಯೂ ನೇವಿುಸುವದಕ್ಕೋಸ್ಕರ ನಿನಗೆ ಕಾಣಿಸಿಕೊಂಡಿದ್ದೇನೆ. ನಾನು ಈಗಲೂ ಮುಂದೆ ನಿನಗೆ ಕೊಡಲಿಕ್ಕಿರುವ ದರ್ಶನಗಳಲ್ಲಿಯೂ ನಿನಗೆ ಕಾಣಿಸಿಕೊಂಡದ್ದನ್ನು ಕುರಿತು ನೀನು ಸಾಕ್ಷಿಯಾಗಿರಬೇಕು.


ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.


ಪರಲೋಕದಿಂದ ಇಳಿದುಬಂದವನೇ ಅಂದರೆ ಮನುಷ್ಯಕುಮಾರನೇ ಹೊರತು ಮತ್ತಾರೂ ಪರಲೋಕಕ್ಕೆ ಏರಿಹೋದವನಲ್ಲ.


ಆದರೆ ಯೇಸು ಹತ್ತರಕ್ಕೆ ಬಂದು ಅವರನ್ನು ಮುಟ್ಟಿ - ಏಳಿರಿ, ಹೆದರಬೇಡಿರಿ ಅಂದನು.


ಆಮೇಲೆ ಆ ಪುರುಷನು ನನಗೆ - ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು ಎಂದು ಹೇಳಿದನು. ಅವನು ಆ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು - ಎನ್ನೊಡೆಯನೇ, ಮಾತಾಡು; ನನ್ನನ್ನು ಬಲಗೊಳಿಸಿದ್ದೀ ಎಂದರಿಕೆಮಾಡಲು


ಅದರಂತೆ ಅವನು ನನ್ನ ಬಳಿಗೆ ಬಂದನು; ಅವನು ಬರಲು ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು; ನನಗೆ ಅವನು - ನರಪುತ್ರನೇ, ಇದು ಮಂದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು ಎಂದು ಹೇಳಿದನು.


ಆತನು ನನ್ನನ್ನು - ನರಪುತ್ರನೇ, ಈ ಎಲುಬುಗಳಿಗೆ ಜೀವವು ಬರಬಹುದೋ ಎಂದು ಕೇಳಲು ನಾನು - ಕರ್ತನಾದ ಯೆಹೋವನೇ, ನೀನೇ ಬಲ್ಲೆ ಎಂದುತ್ತರಕೊಟ್ಟೆನು.


ನರಪುತ್ರನೇ, ಇಸ್ರಾಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನನ್ನು ಪ್ರಶ್ನೆಕೇಳುವದಕ್ಕೆ ಬಂದಿರೊ? ನನ್ನ ಜೀವದಾಣೆ, ನಾನು ನಿಮಗೆ ಉತ್ತರಕೊಡುವದೇ ಇಲ್ಲ; ಇದು ಕರ್ತನಾದ ಯೆಹೋವನ ನುಡಿ.


ನರಪುತ್ರನೇ, ನೀನು ಇಸ್ರಾಯೇಲ್ ವಂಶದವರಿಗೆ ಈ ಸಾಮ್ಯವನ್ನು ಒಗಟಾಗಿ ಹೇಳು -


ನರಪುತ್ರನೇ, ನೀನು ಯೆರೂಸಲೇವಿುಗೆ ಅದರ ಅಸಹ್ಯಕಾರ್ಯಗಳನ್ನು ತಿಳಿಯಪಡಿಸಿ ಹೀಗೆ ನುಡಿ -


ನರಪುತ್ರನೇ, ದ್ರಾಕ್ಷೆಯ ಗಿಡವು ವಿುಕ್ಕ ಗಿಡಗಳಿಗಿಂತ ಏನು ಹೆಚ್ಚು? ವನವೃಕ್ಷಗಳಲ್ಲಿ ದ್ರಾಕ್ಷಾಲತೆಯ ವಿಶೇಷವೇನು?


ನರಪುತ್ರನೇ, ಅಪರಾಧವನ್ನು ನಡಿಸಿ ನನಗೆ ವಿರುದ್ಧವಾಗಿ ಪಾಪಮಾಡಿದ ದೇಶದ ಮೇಲೆ ನಾನು ಕೈಯೆತ್ತಿ ಅದರ ಜೀವನಾಧಾರವನ್ನು ತೆಗೆದುಬಿಟ್ಟು ಕ್ಷಾಮವನ್ನು ಬರಮಾಡಿ ಜನಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ


ನರಪುತ್ರನೇ, ಇವರು ತಮ್ಮ ಬೊಂಬೆಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ ತಮಗೆ ಪಾಪಕಾರಿಯಾದ ವಿಘ್ನವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವದು ಯುಕ್ತವೋ? ಎಂದಿಗೂ ಅಲ್ಲ.


ನರಪುತ್ರನೇ, ಪ್ರವಾದನೆಮಾಡಿ ಸ್ವಕಲ್ಪಿತವಾದದ್ದನ್ನೇ ಸಾರುತ್ತಲಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತಾ ಹೀಗೆ ಹೇಳು - ಯೆಹೋವನ ವಾಕ್ಯವನ್ನು ಕೇಳಿರಿ,


ನರಪುತ್ರನೇ, ವಲಸೆಹೋಗುವದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೆ ಹೊರಡು, ಅಂದರೆ ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು; ಅವರು ದ್ರೋಹಿವಂಶದವರಾಗಿದ್ದರೂ ಒಂದು ವೇಳೆ ಮನಸ್ಸಿಗೆ ತಂದಾರು.


ನರಪುತ್ರನೇ, ಕರ್ತನಾದ ಯೆಹೋವನು ಇಸ್ರಾಯೇಲ್ ದೇಶಕ್ಕೆ ಹೀಗೆ ನುಡಿಯುತ್ತಾನೆ - ಪ್ರಳಯವು, ಪೂರ್ಣಪ್ರಳಯವು ದೇಶದ ಚತುರ್ದಿಕ್ಕಿನಲ್ಲಿಯೂ ಸಂಭವಿಸಿದೆ.


ಇದಲ್ಲದೆ ಆತನು ನನಗೆ ಹೀಗೆ ಹೇಳಿದನು - ನರಪುತ್ರನೇ, ನಾನು ನಿನಗೆ ನುಡಿಯುವ ಮಾತುಗಳನ್ನೆಲ್ಲಾ ಕಿವಿಯಿಂದ ಕೇಳಿ ಹೃದಯದಲ್ಲಿಟ್ಟುಕೋ.


ಇದಲ್ಲದೆ ಆತನು - ನರಪುತ್ರನೇ, ನಾನು ನಿನಗೆ ನುಡಿಯುವ ಮಾತನ್ನು ಕೇಳು; ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಿರಬೇಡ; ನಾನು ಕೊಡುವದನ್ನು ಬಾಯಿತೆರೆದು ತಿಂದುಬಿಡು ಅಂದನು.


ನರಪುತ್ರನೇ, ನೀನು ಮುಳ್ಳುಕೊಂಪೆಗಲಿಗೆ ಸಿಕ್ಕಿಕೊಂಡು ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ದ್ರೋಹಿವಂಶದವರು; ಅವರ ಬಿರುನುಡಿಗೆ ದಿಗಿಲುಪಡಬೇಡ, ಅವರ ಬಿರುನೋಟಕ್ಕೆ ಬೆಚ್ಚದಿರು.


ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಯಾಕೆ ನೆನಸಬೇಕು? ಮಾನವನು ಎಷ್ಟರವನು, ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು?


ಆತನು ನನಗೆ ಹೀಗೆ ಹೇಳಿದನು - ನರಪುತ್ರನೇ, ನನಗೆ ವಿರುದ್ಧವಾಗಿ ತಿರುಗಿಬಿದ್ದು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲ್ಯರ ಬಳಿಗೆ ನಿನ್ನನ್ನು ಕಳುಹಿಸುವೆನು; ಈ ದಿನದವರೆಗೆ ಅವರೂ ಅವರ ಪಿತೃಗಳೂ ನನಗೆ ಅಪರಾಧಮಾಡುತ್ತಲೇ ಇದ್ದಾರೆ.


ಮಳೆಗಾಲದಲ್ಲಿ ಮೇಘಮಂಡಲದೊಳಗೆ ಬಿಲ್ಲು ಹೊಳೆಯುವಂತೆ ಆತನ ಸುತ್ತಣ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದು ಕಣ್ಣಿಗೆ ಬೀಳಲು ನಾನು ಅಡ್ಡಬಿದ್ದು ಮಾತಾಡುವಾತನ ವಾಣಿಯನ್ನು ಕೇಳಿದೆನು.


ಆ ಪುರುಷನು ನನಗೆ - ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ; ನಾನು ನಿನಗೆ ತೋರಿಸುವದನ್ನು ನೀನು ನೋಡಬೇಕೆಂದೇ ಇಲ್ಲಿಗೆ ತರಲ್ಪಟ್ಟಿ; ನೀನು ನೋಡುವದನ್ನೆಲ್ಲಾ ಇಸ್ರಾಯೇಲ್ ವಂಶದವರಿಗೆ ಪ್ರಕಟಿಸು ಎಂದು ಹೇಳಿದನು.


ಆಗ ಆ ಪುರುಷನು ನನಗೆ ಹೀಗೆ ಹೇಳಿದನು - ನರಪುತ್ರನೇ, ಕರ್ತನಾದ ಯೇಹೋವನು ಇಂತೆನ್ನುತ್ತಾನೆ - ಸರ್ವಾಂಗಹೋಮಕ್ಕೂ ರಕ್ತವೆರಚುವ ಸಂಸ್ಕಾರಕ್ಕೂ ಯಜ್ಞವೇದಿಯನ್ನು ನಿರ್ಮಿಸುವಾಗ ಈ ವಿಧಿಗಳನ್ನು ಕೈಕೊಳ್ಳಬೇಕು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು