Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 2:5 - ಕನ್ನಡ ಸತ್ಯವೇದವು J.V. (BSI)

5 ಅವರು ದ್ರೋಹಿವಂಶದವರು, ಒಂದು ವೇಳೆ ಕೇಳದೆ ಹೋದಾರು; ಕೇಳಿದರೂ ಕೇಳದೆ ಹೋದರೂ ಒಬ್ಬ ಪ್ರವಾದಿಯು ತಮ್ಮ ಮಧ್ಯದಲ್ಲಿ ಕಾಣಿಸಿಕೊಂಡಿದ್ದಾನೆಂದು ತಿಳಿದೇ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ಕೇಳಲಿ ಅಥವಾ ಕೇಳದೇ ಇರಲಿ ಏಕೆಂದರೆ ಅವರು ತಿರುಗಿ ಬೀಳುವ ವಂಶದವರು. ಆದರೆ ಒಬ್ಬ ಪ್ರವಾದಿಯು ತಮ್ಮ ಮಧ್ಯದಲ್ಲಿ ಇದ್ದಾನೆಂದು ತಿಳಿದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವರು ದ್ರೋಹಿ ವಂಶದವರು, ಒಂದು ವೇಳೆ ಕೇಳದೆ ಹೋಗಬಹುದು; ಕೇಳಿದರೂ ಕೇಳದೆ ಹೋದರೂ ಒಬ್ಬ ಪ್ರವಾದಿ ತಮ್ಮ ಮಧ್ಯೆ ಕಾಣಿಸಿಕೊಂಡಿದ್ದಾನೆಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಜನರು ನಿನ್ನ ಮಾತನ್ನು ಕೇಳಬಹುದು ಅಥವಾ ಕೇಳದಿರಬಹುದು: ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ. ನನ್ನ ಮುಂದೆ ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರು ಯಾವಾಗಲೂ ನನ್ನ ವಿರುದ್ಧ ದಂಗೆ ಏಳುವರು. ಆದ್ದರಿಂದ ನಾನು ತಿಳಿಸಿದ್ದನ್ನೆ ನೀನು ಹೇಳಬೇಕು. ಆಗ ಅವರು ತಮ್ಮ ಮಧ್ಯೆ ಒಬ್ಬ ಪ್ರವಾದಿ ಇದ್ದಾನೆಂದು ಗ್ರಹಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಕೇಳಲಿ ಅಥವಾ ಕೇಳದೇ ಇರಲಿ, ಏಕೆಂದರೆ ಅವರು ತಿರುಗಿಬೀಳುವ ಜನರು, ಆದರೆ ತಮ್ಮೊಳಗೆ ಪ್ರವಾದಿ ಇರುವನೆಂದು ತಿಳಿದುಕೊಂಡರೆ ಸಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 2:5
20 ತಿಳಿವುಗಳ ಹೋಲಿಕೆ  

ನೀನು ಮುಂತಿಳಿಸಿದ್ದು ಸಂಭವಿಸುವಾಗ [ಆಹಾ, ಸಂಭವಿಸಿತು] ತಮ್ಮ ಮಧ್ಯದಲ್ಲಿದ್ದವನು ಪ್ರವಾದಿಯೇ ಎಂದು ಅವರಿಗೆ ನಿಶ್ಚಿತವಾಗುವದು.


ನಾನು ನಿನ್ನೊಡನೆ ಮತ್ತೆ ಮಾತಾಡುವ ಕಾಲದಲ್ಲಿ ನಿನ್ನ ಬಾಯನ್ನು ಬಿಚ್ಚುವೆನು; ಆಗ ನೀನು ಅವರಿಗೆ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ನುಡಿಯಬೇಕು; ಕೇಳುವವನು ಕೇಳಲಿ. ಕೇಳದವನು ಬಿಡಲಿ; ಅವರು ದ್ರೋಹದ ಜನವೇ.


ನಾನು ಬಂದು ಅವರ ಕೂಡ ಮಾತಾಡದಿದ್ದರೆ ಅವರಿಗೆ ಪಾಪವು ಇರುತ್ತಿದ್ದಿಲ್ಲ; ಆದರೆ ಅವರು ಮಾಡಿದ ಪಾಪಕ್ಕಾಗಿ ಅವರಿಗೆ ಈಗ ನೆವವಿಲ್ಲ.


ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತಾಡಿ - ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪುಮಾಡಿಕೊಂಡದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.


ಅವರು ಕೇಳಿದರೂ ಕೇಳದೆಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ನುಡಿಯಲೇಬೇಕು; ಅವರು ದ್ರೋಹಿಗಳೇ ಹೌದು.


ಅವರಲ್ಲಿ ಕೆಲವರು ನಂಬದೆ ಹೋಗಿದ್ದರೇನು? ಅವರು ನಂಬದೆ ಹೋದದರಿಂದ ದೇವರು ವಚನಕ್ಕೆ ತಪ್ಪುವವನಾದನೋ? ಎಂದಿಗೂ ಇಲ್ಲ;


ಆದರೆ ನೀನು ದುಷ್ಟನನ್ನು ದುರ್ಮಾಗದಿಂದ ತಪ್ಪಿಸಲು ಅವನನ್ನು ಎಚ್ಚರಿಸಿದರೂ ಅವನು ಅದನ್ನು ಬಿಡದೆಹೋದರೆ ತನ್ನ ಅಪರಾಧದಲ್ಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.


ನೀನು ದುಷ್ಟನನ್ನು ಎಚ್ಚರಿಸಿದರೂ ಅವನು ತನ್ನ ದುಷ್ಟತನವನ್ನೂ ದುರ್ಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧದಿಂದ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.


ಕೂಡಲೇ ಅರಸನು ಸುರಳಿಯನ್ನು ತರುವದಕ್ಕೆ ಯೆಹೂದಿಯನ್ನು ಕಳುಹಿಸಿದನು; ಅವನು ಲೇಖಕನಾದ ಎಲೀಷಾಮನ ಕೋಣೆಯೊಳಗಿಂದ ಅದನ್ನು ತೆಗೆದುಕೊಂಡು ಬಂದು ಅರಸನ ಮತ್ತು ಅವನ ಪಕ್ಕದಲ್ಲಿ ನಿಂತಿದ್ದ ಸಕಲ ಪ್ರಧಾನರ ಮುಂದೆ ಓದಿದನು.


ಯೆಹೂದ್ಯರಲ್ಲಿ ಉಳಿದವರೇ, ಯೆಹೋವನು ನಿಮ್ಮನ್ನು ಕುರಿತು - ಐಗುಪ್ತಕ್ಕೆ ಹೋಗಬೇಡಿರಿ ಎಂದು ಅಪ್ಪಣೆಮಾಡಿದ್ದಾನೆ; ನಾನು ಈ ದಿವಸ [ಆ ಮಾತನ್ನು] ನಿಮಗೆ ಪ್ರಕಟಿಸಿದ್ದೇನೆ, ಚೆನ್ನಾಗಿ ತಿಳಿದಿರಲಿ.


ನರಪುತ್ರನೇ, ದ್ರೋಹಿವಂಶದವರಾದ ಇಸ್ರಾಯೇಲ್ಯರು - ನೀನು ಏನು ಮಾಡುತ್ತೀ ಎಂದು ನಿನ್ನನ್ನು ಕೇಳಿದ್ದಾರಲ್ಲವೆ.


ಇದಲ್ಲದೆ ನೀನು ಆ ದ್ರೋಹಿಗಳಿಗೆ ಅಂದರೆ ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ -


ಇಸ್ರಾಯೇಲ್ಯರ ಅರಸನು ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬದನ್ನು ದೇವರ ಮನುಷ್ಯನಾದ ಎಲೀಷನು ಕೇಳಿ ದೂತರ ಮುಖಾಂತರವಾಗಿ ಅವನಿಗೆ - ನೀನು ನಿನ್ನ ಬಟ್ಟೆಗಳನ್ನು ಹರಿದುಕೊಂಡದ್ದೇಕೆ? ಅವನನ್ನು ನನ್ನ ಬಳಿಗೆ ಕಳುಹಿಸು; ಇಸ್ರಾಯೇಲ್ಯರಲ್ಲಿ ಒಬ್ಬ ಪ್ರವಾದಿಯಿದ್ದಾನೆಂಬದು ಅವನಿಗೆ ಗೊತ್ತಾಗಲಿ ಎಂದು ಹೇಳಿ ಕಳುಹಿಸಿದನು.


ಇದಲ್ಲದೆ ನಿನ್ನ ನಾಲಿಗೆಯು ಸೇದಿಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ನೀನು ಅವರನ್ನು ಖಂಡಿಸದಿರುವಿ; ಅವರು ದ್ರೋಹಿವಂಶದವರು.


ದ್ರೋಹಿವಂಶದವರಾದ ಈ ಜನರಿಗೆ ಹೀಗೆ ಹೇಳು - ಇದರ ಅಭಿಪ್ರಾಯವು ನಿಮಗೆ ಗೊತ್ತಿಲ್ಲವೋ? ಇಗೋ, ಬಾಬೆಲಿನ ಅರಸನು ಯೆರೂಸಲೇವಿುಗೆ ಬಂದು ಅಲ್ಲಿನ ಅರಸನನ್ನೂ ಪ್ರಧಾನರನ್ನೂ ಹಿಡಿದು ಬಾಬೆಲಿಗೆ ಒಯ್ದುಕೊಂಡು ಹೋದನು;


ಈ ದ್ರೋಹಿವಂಶಕ್ಕೆ ದೃಷ್ಟಾಂತವನ್ನೆತ್ತಿ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು