Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:11 - ಕನ್ನಡ ಸತ್ಯವೇದವು J.V. (BSI)

11 ಕೈಕೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅಲ್ಲಿ ಅವರಿಗೆ ಧರ್ಮಶಾಸ್ತ್ರವನ್ನು ಕೊಟ್ಟೆನು. ನನ್ನ ವಿಧಿನಿಯಮಗಳನ್ನು ತಿಳಿಸಿದೆನು. ಅವುಗಳನ್ನು ಕೈಕೊಂಡು ನಡೆಯುವ ಎಲ್ಲರೂ ಜೀವಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು, ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:11
18 ತಿಳಿವುಗಳ ಹೋಲಿಕೆ  

ನೇಮನಿಷ್ಠೆಗಳಿಂದಾಗುವ ನೀತಿಯ ವಿಷಯದಲ್ಲಿ - ಅದನ್ನು ಅನುಸರಿಸಿದವನೇ ಅದರಿಂದ ಜೀವಿಸುವನೆಂದು ಮೋಶೆಯು ಬರೆಯುತ್ತಾನೆ.


ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಇಂಥ ನ್ಯಾಯವಾದ ಆಜ್ಞಾವಿಧಿಗಳುಳ್ಳ ಈ ಧರ್ಮಶಾಸ್ತ್ರಕ್ಕೆ ಸಮಾನವಾದದ್ದು ಬೇರೆ ಯಾವ ಜನಾಂಗಕ್ಕೆ ಉಂಟು?


ನನ್ನ ಆಜ್ಞಾವಿಧಿಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾವಿಧಿಗಳ ಮೂಲಕ ಬದುಕುವರು. ಆದದರಿಂದ ನೀವು ಅವುಗಳನ್ನೇ ಅನುಸರಿಸಬೇಕು; ನಾನು ಯೆಹೋವನು.


ಆದರೆ ಕರ್ಮಮಾರ್ಗಕ್ಕೆ ನಂಬಿಕೆಯು ಆಧಾರವಲ್ಲ, ಅದರ ನೇಮಗಳನ್ನು ಆಚರಿಸಿದವನೇ ಅವುಗಳ ಮೂಲಕ ಬದುಕುವನು ಎಂದು ಬರೆದದೆ.


ಆತನು ಅವನಿಗೆ - ನೀನು ಸರಿಯಾಗಿ ಉತ್ತರಕೊಟ್ಟಿ; ಇದರಂತೆ ಮಾಡು, ಮಾಡಿದರೆ ಜೀವಿಸುವಿ ಎಂದು ಹೇಳಿದನು.


ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿಬಿದ್ದರು. ಕೈಕೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇವಿುಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಅವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು ಅಂದುಕೊಂಡೆನು.


ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು. ಮೊದಲನೇದಾಗಿ ದೈವೋಕ್ತಿಗಳು ಅವರ ವಶಕ್ಕೆ ಒಪ್ಪಿಸಲ್ಪಟ್ಟವು.


ಆ ಸಂತಾನದವರಾದರೋ ನನ್ನ ಮೇಲೆ ತಿರುಗಿಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಕೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಕೈಕೊಂಡು ನಡಿಸಲಿಲ್ಲ; ನಾನು ನೇವಿುಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿದರು; ಆದದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಅಂದುಕೊಂಡೆನು.


ಇಸ್ರಾಯೇಲ್ಯರೇ, ಕೇಳಿರಿ; ನೀವು ಬದುಕಿಕೊಂಡು ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಂತೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.


ಅಂದರೆ ಆ ದುಷ್ಟನು ಒತ್ತೆಯನ್ನು ಬಿಗಿಹಿಡಿಯದೆ ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು ಜೀವಾಧಾರವಾದ ವಿಧಿಗಳನ್ನು ಅನುಸರಿಸಿ ಸಕಲ ದುಷ್ಕರ್ಮಗಳಿಗೂ ದೂರನಾಗಿರುವ ಪಕ್ಷದಲ್ಲಿ ಸಾಯನು, ಬಾಳೇಬಾಳುವನು.


ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ನಾನು ಜೀವಮರಣಗಳನ್ನೂ ಆಶೀರ್ವಾದಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮ್ಯಾಕಾಶಗಳು ಸಾಕ್ಷಿಗಳಾಗಿರಲಿ. ಆದದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆದುಕೊಳ್ಳಿರಿ;


ಆಜ್ಞೆಯೇ ದೀಪ, ಉಪದೇಶವೇ ಬೆಳಕು, ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ.


ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಸತ್ಯಪರನಾಗಿಯೇ ನಡೆದರೆ ಇಂಥವನು ಸದ್ಧರ್ಮಿಯಾಗಿರುವದರಿಂದ ಬಾಳೇ ಬಾಳುವನು; ಇದು ಕರ್ತನಾದ ಯೆಹೋವನ ನುಡಿ.


ಅವನು ಮಾಡಿದ ಯಾವ ಪಾಪವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು; ನೀತಿನ್ಯಾಯಗಳನ್ನು ನಡಿಸುತ್ತಿದ್ದಾನಲ್ಲಾ; ಬಾಳೇಬಾಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು