Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:41 - ಕನ್ನಡ ಸತ್ಯವೇದವು J.V. (BSI)

41 ನಾನು ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ ನೀವು ಚದರಿಹೋಗಿರುವ ದೇಶಗಳಿಂದ ತಂದು ಕೂಡಿಸುವಾಗ ನಿಮ್ಮ ಸುಗಂಧಹೋಮವನ್ನು ಆಘ್ರಾಣಿಸಿ ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ನಾನು ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಕೂಡಿಸುವಾಗ ನಿಮ್ಮ ಸುಗಂಧಹೋಮವನ್ನು ಅಂಗೀಕರಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡುಗಡೆಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಸೇರಿಸುವಾಗ, ನಿಮ್ಮ ಸುಗಂಧಹೋಮವನ್ನು ಆಘ್ರಾಣಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ, ನಿಮ್ಮ ರಕ್ಷಣೆಯ ಮೂಲಕ, ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಆಗ ನಿಮ್ಮ ಕಾಣಿಕೆಯ ಸುವಾಸನೆಯಿಂದ ಸಂತೋಷಭರಿತನಾಗುವೆನು. ಇದು ನಿಮ್ಮನ್ನು ಹಿಂದಕ್ಕೆ ನಿಮ್ಮ ದೇಶಕ್ಕೆ ಕರೆತಂದಾಗ ಆಗುವದು. ನಾನು ನಿಮ್ಮನ್ನು ಅನೇಕ ದೇಶಗಳಲ್ಲಿ ಚದರಿಸಿದೆನು. ಆದರೆ ನಾನು ನಿಮ್ಮನ್ನು ಒಟ್ಟುಗೂಡಿಸಿ ನಿಮ್ಮ ಮೂಲಕ ನನ್ನ ಪವಿತ್ರತೆಯನ್ನು ಪ್ರದರ್ಶಿಸುವೆನು. ಆ ಎಲ್ಲಾ ದೇಶಗಳವರು ಇದನ್ನು ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ನಾನು ನಿಮ್ಮನ್ನು ಇತರ ಜನಾಂಗಗಳೊಳಗಿಂದ ಹೊರತಂದು, ನೀವು ಚದರಿಸುವ ದೇಶದೊಳಗಿಂದ ಕೂಡಿಸುವಾಗ, ನಿಮ್ಮನ್ನು ಸುವಾಸನೆಯಂತೆ ಅಂಗೀಕರಿಸುವೆನು. ಇತರ ಜನಾಂಗಗಳ ಮುಂದೆ ನನ್ನನ್ನು ಪರಿಶುದ್ಧನೆಂದು ತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:41
36 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಜನಾಂಗಗಳಲ್ಲಿ ಚದರಿಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ ಎಲ್ಲಾ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಂಡ ಮೇಲೆ ಆ ಇಸ್ರಾಯೇಲ್ ವಂಶದವರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ಸ್ವದೇಶದಲ್ಲಿ ವಾಸಿಸುವರು.


ಆಮೇಲೆ ಅವರನ್ನು ಜನಾಂಗಗಳೊಳಗಿಂದ ಕೂಡಿಸುವೆನು, ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಾಯೇಲ್ ದೇಶವನ್ನು ಅವರಿಗೆ ದಯಪಾಲಿಸುವೆನು.


ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ ನನ್ನ ಗೌರವವನ್ನು ಕಾಪಾಡಿಕೊಂಡು ಬಹುಜನಾಂಗಳು ನಾನೇ ಯೆಹೋವನು ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತನಾಗುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಚೀದೋನೇ, ನಾನು ನಿನಗೆ ವಿರುದ್ಧವಾಗಿ ನಿನ್ನ ಮಧ್ಯದಲ್ಲಿ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣವನ್ನು ದಂಡಿಸಿ ನನ್ನ ಗೌರವವನ್ನು ಕಾಪಾಡಿಕೊಂಡ ಮೇಲೆ ನಾನೇ ಯೆಹೋವನು ಎಂದು ಎಲ್ಲರಿಗೂ ಗೊತ್ತಾಗುವದು.


ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.


ಇಗೋ, ನಾನು ಕೋಪರೋಷ ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರತಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಇಗೋ ನಾನು ನನ್ನ ಜನರಾದ ಇಸ್ರಾಯೇಲ್ಯರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪಿತೃಗಳಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ.


ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ ತಮ್ಮ ತಮ್ಮ ಹಟ್ಟಿಗಳಿಗೆ ತಿರಿಗಿ ಬರಮಾಡುವೆನು; ಅವು ದೊಡ್ಡ ಪೀಳಿಗೆಯಾಗಿ ಹೆಚ್ಚುವವು.


ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಪರಿಶುದ್ಧನಾದ ದೇವರು ಧರ್ಮವನ್ನು ನಡಿಸುವದರಲ್ಲಿ ಪರಿಶುದ್ಧನೆನಿಸಿಕೊಳ್ಳುವನು.


ಮೇಲಣಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ಮನುಷ್ಯರೊಳಗೆ ಸಮಾಧಾನ ದೇವರು ಅವರಿಗೆ ಒಲಿಯುತ್ತಾನೆ ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.


ನಾನು ನನ್ನ ಜನರಾದ ಇಸ್ರಾಯೇಲ್ಯರ ದುರವಸ್ಥೆಯನ್ನು ತಪ್ಪಿಸುವೆನು; ಅವರು ಹಾಳುಬಿದ್ದ ಪಟ್ಟಣಗಳನ್ನು ಪುನಃ ಕಟ್ಟಿ ಅವುಗಳಲ್ಲಿ ವಾಸಿಸುವರು; ದ್ರಾಕ್ಷೆಯ ತೋಟಗಳನ್ನು ಮಾಡಿಕೊಂಡು ಅವುಗಳ ದ್ರಾಕ್ಷಾರಸವನ್ನು ಕುಡಿಯುವರು; ಫಲವೃಕ್ಷಗಳನ್ನು ಬೆಳೆಯಿಸಿ ಅವುಗಳ ಹಣ್ಣುಗಳನ್ನು ತಿನ್ನುವರು.


ಬಹುದಿವಸಗಳ ಮೇಲೆ ನಿನಗೆ ಅಪ್ಪಣೆಯಾಗುವದು; ಖಡ್ಗದಿಂದ ನಾಶವಾಗಿ ಪುನರ್ಜೀವಿತವಾದ ದೇಶದೊಳಗೆ ನೀನು ಕಾಲಾನುಕಾಲಕ್ಕೆ ನುಗ್ಗಿ ಅನೇಕ ಜನಾಂಗಗಳೊಳಗಿಂದ ಒಟ್ಟುಗೂಡಿದ [ನನ್ನ] ಜನರ ಮೇಲೆ ಬೀಳುವಿ; ಹೌದು, ಜನಾಂಗಗಳೊಳಗಿಂದ ಪಾರಾದ ಆ ಜನರೆಲ್ಲರು ಬಹುಕಾಲ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳಲ್ಲಿ ನೆಮ್ಮದಿಯಾಗಿ ವಾಸಿಸುತ್ತಿರಲು ನೀನು ಅವರ ಮೇಲೆ ಬೀಳುವಿ.


ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪಿತೃಗಳು ವಾಸಿಸಿದ ದೇಶದಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.


ನೀವು ತುಳಿದು ಕಾಲಕಸಮಾಡಿದ್ದನ್ನು ನನ್ನ ಕುರಿಗಳು ಮೇಯಬೇಕಾಯಿತು; ನೀವು ಕಾಲಿನಿಂದ ಕಲಕಿ ಬದಿಮಾಡಿದ್ದನ್ನು ಅವು ಕುಡಿಯಬೇಕಾಯಿತು.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ ನನ್ನನ್ನು ರೇಗಿಸುವ ನೈವೇದ್ಯವನ್ನವರ್ಪಿಸಿ ಸುಗಂಧಹೋಮಮಾಡಿ ಪಾನದ್ರವ್ಯವನ್ನು ಸುರಿದು ಒಪ್ಪಿಸುತ್ತಿದ್ದರು.


ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ ಎಲ್ಲಾ ಬೆಟ್ಟಗಳ ತುದಿಗಳಲ್ಲಿಯೂ ಸೊಂಪಾದ ಎಲ್ಲಾ ಮರಗಳ ಕೆಳಗೂ ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮಮಾಡುತ್ತಿದ್ದ ದಟ್ಟವಾದ ಎಲ್ಲಾ ಏಲಾ ಮರಗಳ ಕೆಳಗೂ ಹತರಾಗಿ ತಮ್ಮ ಯಜ್ಞವೇದಿಗಳ ಸುತ್ತಲು ತಮ್ಮ ಬೊಂಬೆಗಳ ನಡುವೆ ಬಿದ್ದಿರುವಾಗ ನಾನೇ ಯೆಹೋವನು ಎಂದು ಗೊತ್ತಾಗುವದು.


ಯೆಹೋವನು ಹೀಗನ್ನುತ್ತಾನೆ - ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ ಅದರ ನಿವಾಸಗಳನ್ನು ಕರುಣಿಸುವೆನು; ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವದು.


ಆಗ ಮೋಶೆ ಆರೋನನಿಗೆ - ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನಂದರೆ - ನಾನು ಪರಿಶುದ್ಧನೆಂಬದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬದೇ ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ಅವನು ಆ ಪಕ್ಷಿಯನ್ನು ರೆಕ್ಕೆಗಳ ಸಂದುಗಳಲ್ಲಿ ಹರಿಯಬೇಕು, ಆದರೆ ರೆಕ್ಕೆಗಳನ್ನು ಪೂರಾ ಕಿತ್ತು ಹಾಕಕೂಡದು. ಅನಂತರ ಅವನು ಅದನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವ ಸರ್ವಾಂಗಹೋಮವಾಗಿದೆ.


ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆಸಿದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟು ಮಾಡುವ ಸರ್ವಾಂಗಹೋಮವಾಗಿದೆ.


ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವ ಸರ್ವಾಂಗಹೋಮವಾಗಿದೆ.


ಅದರ ಸುವಾಸನೆಯು ಯೆಹೋವನಿಗೆ ಗಮಗವಿುಸಲು ಆತನು ಹೃದಯದೊಳಗೆ - ಮನುಷ್ಯರ ಮನಸ್ಸಂಕಲ್ಪವು ಚಿಕ್ಕಂದಿನಿಂದಲೇ ಕೆಟ್ಟದ್ದು; ಆದರೂ ನಾನು ಇನ್ನು ಮೇಲೆ ಅವರ ನಿವಿುತ್ತವಾಗಿ ಭೂವಿುಯನ್ನು ಶಪಿಸುವದಿಲ್ಲ; ನಾನು ಎಲ್ಲಾ ಜೀವಿಗಳನ್ನೂ ಈಗ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವದಿಲ್ಲ.


ಅವರ ಬೆದರಿಸುವಿಕೆಗೆ ಹೆದರದೆ ಕಳವಳಪಡದೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರಿ; ಆದರೆ ಅದನ್ನು ಸಾತ್ವಿಕತ್ವದಿಂದಲೂ ಮನೋಭೀತಿಯಿಂದಲೂ ಹೇಳಿರಿ.


ಕ್ರಿಸ್ತನು ನಿಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.


ಕ್ರಿಸ್ತನ ಅನ್ಯೋನ್ಯತೆಯಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರವು.


ರಕ್ಷಣಾಮಾರ್ಗದಲ್ಲಿರುವವರಲ್ಲಿಯೂ ನಾಶನಮಾರ್ಗದಲ್ಲಿರುವವರಲ್ಲಿಯೂ ನಾವು ದೇವರ ಮುಂದೆ ಕ್ರಿಸ್ತನ ಪರಿಮಳವಾಗಿದ್ದೇವೆ.


ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಡುತ್ತೇನೆ. ನಿನ್ನ ದೇವರಾದ ಯೆಹೋವನು ನಿನಗೆ ಪ್ರಸನ್ನನಾಗಲಿ ಎಂದು ಹೇಳಿದನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನೇ ನನ್ನ ಕುರಿಗಳನ್ನು ಹಿಂಬಾಲಿಸಿ ಹುಡುಕುವೆನು.


ಇಸ್ರಾಯೇಲ್ಯರು ಅಲ್ಲಿ ಯೆಹೋವನ ಸಂಗಡ ವಿವಾದಮಾಡಿದ್ದರಿಂದ ಆ ನೀರಿನ ಪ್ರವಾಹಕ್ಕೆ ಮೆರೀಬಾ ಎಂದು ಹೆಸರಾಯಿತು. ಅದಲ್ಲದೆ ಅಲ್ಲಿ ಯೆಹೋವನು ತನ್ನ ಮಹಾಮಹಿಮೆಯನ್ನು ತೋರ್ಪಡಿಸಿದನು.


ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ಬಿದ್ದು ಕಾರ್ಮುಗಿಲಿನೋಪಾದಿಯಲ್ಲಿ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶನದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರನಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು