Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:6 - ಕನ್ನಡ ಸತ್ಯವೇದವು J.V. (BSI)

6 ಸಕಲದೇಶ ಶಿರೋಮಣಿಯಾದ ದೇಶವನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಉದ್ಧರಿಸಿ ಹಾಲೂ ಜೇನೂ ಹರಿಯುವ ಆ ದೇಶಕ್ಕೆ ಸೇರಿಸುವೆನು ಎಂದು ಪ್ರಮಾಣಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ದಿನದಲ್ಲಿ ನಾನು ಅವರಿಗೆ, ‘ಸಕಲ ದೇಶ ಶಿರೋಮಣಿಯಾದ ದೇಶವನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿ ಹಾಲೂ ಮತ್ತು ಜೇನೂ ಹರಿಯುವ ಆ ದೇಶಕ್ಕೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾನು ಅವರಿಗೆ ‘ನಾಡುಗಳಲ್ಲೆಲ್ಲ ಶ್ರೀಮಂತವಾದ ನಾಡನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಈಜಿಪ್ಟ್ ದೇಶದಿಂದ ಉದ್ಧರಿಸಿ ಹಾಲೂ ಜೇನೂ ಹರಿಯುವ ಆ ನಾಡಿಗೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರನ್ನು ಈಜಿಪ್ಟಿನಿಂದ ಹೊರಗೆ ತಂದು, ನಾನು ಅವರಿಗಾಗಿ ಹುಡುಕಿಟ್ಟಿರುವ ದೇಶಕ್ಕೆ ಕರೆದುಕೊಂಡು ಹೋಗುವುದಾಗಿ ವಾಗ್ದಾನ ಮಾಡಿದೆನು. ಅದು ಹಾಲೂ ಜೇನೂ ಹರಿಯುವ ದೇಶವಾಗಿತ್ತು. ಅದು ಎಲ್ಲಾ ದೇಶಗಳಿಗಿಂತಲೂ ಸುಂದರವಾದ ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ಅವರಿಗೆ ಪ್ರಮಾಣಮಾಡಿ ಈಜಿಪ್ಟ್ ದೇಶದಿಂದ ಹೊರಗೆ ತಂದು, ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ದೇಶಕ್ಕೆ ಅವರನ್ನು ಆ ದಿವಸದಲ್ಲಿ ಕರೆತಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:6
40 ತಿಳಿವುಗಳ ಹೋಲಿಕೆ  

ಆಮೇಲೆ ಸಕಲದೇಶಶಿರೋಮಣಿಯಾದ ಯಾವ ದೇಶವನ್ನು ಅವರಿಗೆ ವಾಗ್ದಾನ ಮಾಡಿದೆನೋ ಹಾಲೂ ಜೇನೂ ಹರಿಯುವ ಆ ದೇಶಕ್ಕೆ ನಿಮ್ಮನ್ನು ಸೇರಿಸೆನೆಂದು ಅರಣ್ಯದಲ್ಲಿ ಅವರಿಗೆ ಪ್ರಮಾಣ ಮಾಡಿದೆನು;


ಅವರ ಪಿತೃಗಳಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ;


ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ ರಮ್ಯವಾಗಿಯೂ ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವದು.


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ತಪ್ಪಿಸುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ನಡಿಸಿಕೊಂಡು ಹೋಗುವದಕ್ಕೂ ಇಳಿದುಬಂದಿದ್ದೇನೆ.


ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು, ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯದೇಶವನ್ನು ಹಾಳುಗತಿಗೆ ತಂದರಷ್ಟೆ.


ಅವುಗಳೊಳಗೆ ಒಂದರಲ್ಲಿ ಒಂದು ಚಿಕ್ಕ ಕೊಂಬು ಮೊಳೆತು ಬಹು ದೊಡ್ಡದಾಗಿ ಬೆಳೆದು ತೆಂಕಲಲ್ಲಿಯೂ ಮೂಡಲಲ್ಲಿಯೂ ಅಂದಚಂದದ ದೇಶದಲ್ಲಿಯೂ ಪ್ರಬಲವಾಯಿತು.


ಅದು ಹಾಲೂ ಜೇನೂ ಹರಿಯುವ ದೇಶವೇ. ಆದರೆ ನಾನೇ ನಿಮ್ಮ ಸಂಗಡ ಬರುವದಿಲ್ಲ; ನೀವು ನನ್ನ ಆಜ್ಞೆಗೆ ಬೊಗ್ಗದವರಾದ್ದರಿಂದ ನಾನು ದಾರಿಯಲ್ಲಿ ನಿಮ್ಮನ್ನು ಸಂಹರಿಸೇನು ಅಂದನು.


ಅಂದಚಂದದ ದೇಶಕ್ಕೂ ನುಗ್ಗುವನು; ಅನೇಕ ಸೀಮೆಗಳು ಅವನಿಂದ ಹಾಳಾಗುವವು; ಆದರೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿನ ಹೆಚ್ಚಿನ ಭಾಗದವರು, ಇವರುಗಳು ಅವನ ಕೈಯಿಂದ ತಪ್ಪಿಸಿಕೊಳ್ಳುವರು.


ದಕ್ಷಿಣರಾಜನಿಗೆ ವಿರುದ್ಧವಾಗಿ ಬರುವವನು ಇಚ್ಫಾನುಸಾರ ನಡೆಯುವನು; ಅವನಿಗೆ ಎದುರೇ ಇಲ್ಲ; ನಾಶನವನ್ನು ಕೈಯಲ್ಲಿಟ್ಟುಕೊಂಡು ಅಂದಚಂದದ ದೇಶದಲ್ಲಿ ನಿಂತಿರುವನು.


ನಾನು ಪ್ರಮಾಣಮಾಡಿ ನಿಮ್ಮ ಪಿತೃಗಳಿಗೆ ಯಾವ ದೇಶವನ್ನು ಕೊಟ್ಟೆನೋ ಆ ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ಬರಮಾಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಆಮೇಲೆ ಅವರು ನನ್ನ ಆಜ್ಞೆಗಳನ್ನು ಕೈಕೊಳ್ಳದೆ ನನ್ನ ವಿಧಿಗಳನ್ನು ನಿರಾಕರಿಸಿ ನಾನು ನೇವಿುಸಿದ ಸಬ್ಬತ್‍ದಿನಗಳನ್ನು ಹೊಲೆಮಾಡಿ ತಮ್ಮ ಪಿತೃಗಳ ಬೊಂಬೆಗಳ ಮೇಲೆ ಕಣ್ಣುಹಾಕಿದ್ದರಿಂದ


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಯಾವ ದಿವಸದಲ್ಲಿ ನಾನು ಇಸ್ರಾಯೇಲನ್ನು ಆರಿಸಿಕೊಂಡು ಯಾಕೋಬ ಸಂತಾನದವರಿಗೆ ಮಾತುಕೊಟ್ಟು ನಾನು ನಿಮ್ಮ ದೇವರಾದ ಯೆಹೋವನು ಎಂದು ಐಗುಪ್ತ ದೇಶದಲ್ಲಿ ಪ್ರಮಾಣಪೂರ್ವಕವಾಗಿ ತಿಳಿಯಪಡಿಸಿದೆನೋ ಆ ದಿವಸದಲ್ಲಿ ನಾನು ಅವರಿಗೆ -


ನಾನು ನಿಮ್ಮ ದೇವರಾಗಿದ್ದು ಹಾಲೂ ಜೇನೂ ಹರಿಯುವ ದೇಶವನ್ನು ಕೊಡುವದಾಗಿ ನಿಮ್ಮ ಮೂಲಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು ಎಂದು ಹೇಳಿದೆನಷ್ಟೆ; ಆ ನನ್ನ ಮಾತು ಈಗ ಕೈಗೂಡಿದೆ. ನಾನು ಅವರಿಗೆ ವಿಧಿಸಿದ ನಿಬಂಧನವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ ಎಂಬದಾಗಿ ಇಸ್ರಾಯೇಲ್ಯರ ದೇವರಾದ ಯೆಹೋವನು ನುಡಿಯುತ್ತಾನೆಂದೇ ಸಾರಬೇಕು. ಆಗ ನಾನು - ಅಪ್ಪಣೆಯಂತಾಗಲಿ, ಯೆಹೋವನೇ, ಎಂದು ಉತ್ತರಕೊಟ್ಟೆನು.


ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋದದರಿಂದ ಅವರು ತಮ್ಮ ಭಟರೆಲ್ಲರೂ ಸಂಹಾರವಾಗುವ ತನಕ ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಅವರ ಪಿತೃಗಳಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಆಣೆಯಿಟ್ಟನು.


ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇವಿುಸಿಕೊಟ್ಟಾಗ ಇಸ್ರಾಯೇಲ್ಯರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದ್ದೂ;


ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆ. ನಾನು ಇವರ ಪಿತೃಗಳಿಗೆ ಪ್ರಮಾಣಮಾಡಿದಂತೆ ಹಾಲೂ ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಉಂಡು ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು. ಅನಂತರ ಅನೇಕ ಕಷ್ಟಗಳೂ ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವದು ಎಂದು ಹೇಳಿದನು.


ನೀನು ನಿನ್ನ ಪರಿಶುದ್ಧವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ ನಿನ್ನ ಜನರಾದ ಇಸ್ರಾಯೇಲ್ಯರನ್ನೂ ಹಾಲೂ ಜೇನೂ ಹರಿಯುವ ದೇಶವೆಂದು ನೀನು ನಮ್ಮ ಪಿತೃಗಳಿಗೆ ವಾಗ್ದಾನಮಾಡಿದ ಮೇರೆಗೆ ನಮಗೆ ಕೊಟ್ಟಿರುವ ಈ ಭೂವಿುಯನ್ನೂ ಆಶೀರ್ವದಿಸು ದೇವರೇ ಎಂದು ಹೇಳಬೇಕು.


ನಮ್ಮನ್ನು ಬಿಡಿಸಿ ಐಗುಪ್ತದೇಶದಿಂದ ಕರತಂದು ಹಾಲೂ ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿದ್ದಾನೆ.


ಮತ್ತು ಯೆಹೋವನು ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಆ ದೇಶದಲ್ಲಿ ನೀವು ಬಹುಕಾಲ ಬದುಕಿಕೊಳ್ಳುವಿರಿ; ಅದು ಹಾಲೂ ಜೇನೂ ಹರಿಯುವ ದೇಶ.


ಆದದರಿಂದ ಇಸ್ರಾಯೇಲ್ಯರೇ, ನಿಮ್ಮ ಪಿತೃಗಳ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವದಕ್ಕೂ ನೀವು ಬಹಳವಾಗಿ ಹೆಚ್ಚುವದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.


ಅದು ಹಾಲೂ ಜೇನೂ ಹರಿಯುವ ದೇಶ; ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಅದರಲ್ಲಿ ನಮ್ಮನ್ನು ಸೇರಿಸಿ ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು;


ಅವರು ಮೋಶೆಗೆ - ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು; ಅದು ಹಾಲೂ ಜೇನೂ ಹರಿಯುವ ದೇಶವೇ; ಅಲ್ಲಿನ ಹಣ್ಣುಗಳು ಇಂಥವು.


ನಿಮಗಾದರೋ - ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ; ಹಾಲೂ ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.


ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣವಾಗಿ ಹೇಳಿದಂತೆ ನಿಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ಕರತಂದು, ಅದನ್ನು ನಿಮಗೆ ಕೊಟ್ಟಾಗ ನೀವು ಈ ತಿಂಗಳಲ್ಲಿ ಈ ಆಚಾರವನ್ನು ನಡಿಸಬೇಕು.


ಐಗುಪ್ತದೇಶದಲ್ಲಿ ನಿಮಗುಂಟಾಗಿರುವ ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ಬರಮಾಡುವೆನೆಂದು ನಿರ್ಣಯಿಸಿದ್ದೇನೆ ಎಂಬದಾಗಿ ನನಗೆ ಹೇಳಿದನೆಂದು ತಿಳಿಸು.


ಇದಲ್ಲದೆ ಅಬ್ರಹಾಮ ಇಸಾಕ ಯಾಕೋಬರಿಗೆ ಕೊಡುವೆನೆಂದು ನಾನು ಪ್ರಮಾಣವಾಗಿ ಹೇಳಿದ ದೇಶಕ್ಕೆ ನಿಮ್ಮನ್ನು ಸೇರಿಸಿ ಅದನ್ನು ನಿಮಗೆ ಸ್ವದೇಶವನ್ನಾಗಿ ಕೊಡುವೆನು; ಯೆಹೋವನೇ ನಾನು; ಹೀಗೆ ಅವರಿಗೆ ಹೇಳು ಅಂದನು.


ನಾನು ಆಕಾಶದ ಕಡೆಗೆ ಕೈಯೆತ್ತಿ ನಾನು ಸದಾಕಾಲ ಜೀವಿಸುವವನೆಂಬದು ಎಷ್ಟು ನಿಶ್ಚಯವೋ ಅಷ್ಟು ಖಂಡಿತವಾಗಿ ಪ್ರಮಾಣಮಾಡುವೆನು; ಏನಂದರೆ -


ಮತ್ತು ಅವರು ಆ ರಮಣೀಯದೇಶವನ್ನು ತಿರಸ್ಕರಿಸಿ ಆತನ ಮಾತನ್ನು ನಂಬಲಿಲ್ಲ.


ನಾನು ನಿಮ್ಮ ಪಿತೃಗಳಿಗೆ ಪ್ರಮಾಣವಾಗಿ ವಾಗ್ದಾನಮಾಡಿದ ಈ ದೇಶವನ್ನು ನೀವೆಲ್ಲರೂ ಸರಿಸಮಾನವಾಗಿ ಅನುಭವಿಸುವಿರಿ; ಇದು ನಿಮಗೆ ಸ್ವಾಸ್ತ್ಯವಾಗಿಯೇ ಇರುವದು.


ಕರ್ತನೇ, ನಾನೂ ಈ ಹೊಳೆಯನ್ನು ದಾಟಿ ಆಚೆಯಿರುವ ಒಳ್ಳೆಯ ದೇಶವನ್ನು ಅಂದರೆ ಆ ಅಂದವಾದ ಬೆಟ್ಟದ ಸೀಮೆಯನ್ನೂ ಲೆಬನೋನ್ ಪರ್ವತವನ್ನೂ ನೋಡುವದಕ್ಕೆ ಅಪ್ಪಣೆಯಾಗಲಿ ಎಂದು ಬಿನ್ನೈಸಿದೆನು.


ಐಗುಪ್ತದೇಶದಲ್ಲಿ ನಮ್ಮ ಪಿತೃಗಳಿಗಿದ್ದ ಕಷ್ಟವನ್ನು ನೋಡಿದಿ; ಕೆಂಪುಸಮುದ್ರದ ಬಳಿಯಲ್ಲಿ ಅವರು ಮೊರೆಯಿಟ್ಟಾಗ ನೀನು ಲಾಲಿಸಿದಿ.


ಹಗಲುಹೊತ್ತಿನಲ್ಲಿ ಮೇಘಸ್ತಂಭದಲ್ಲಿಯೂ ರಾತ್ರಿವೇಳೆಯಲ್ಲಿ ಅವರು ನಡೆಯ ತಕ್ಕ ದಾರಿಯಲ್ಲಿ ಬೆಳಕುಕೊಡುವದಕ್ಕೆ ಅಗ್ನಿ ಸ್ತಂಭದಲ್ಲಿಯೂ ಅವರ ಮುಂದೆ ಹೋದಿ.


ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತೂರಿಯ ಧ್ವನಿಯೊಡನೆ ಆರೋಹಣಮಾಡಿದ್ದಾನೆ.


ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಎಣಿಸಿ ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತಜನಾಂಗಗಳ ಬಾಧ್ಯಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ತಂದೆಯೆನ್ನುವಿ ಅಂದುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು