Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:21 - ಕನ್ನಡ ಸತ್ಯವೇದವು J.V. (BSI)

21 ಮಾರ್ಗವು ಒಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಮೊದಲಲ್ಲಿ ಬಾಬೆಲಿನ ಅರಸನು ಶಕುನನೋಡುವದಕ್ಕೆ ನಿಂತಿದ್ದಾನೆ; ಬಾಣಗಳನ್ನು ಕಲಕಿ ವಿಗ್ರಹಗಳನ್ನು ಪ್ರಶ್ನೆಕೇಳಿ ಕಾಳಿಜವನ್ನು ಪರೀಕ್ಷಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಮಾರ್ಗವು ಕವಲೊಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಮೊದಲಲ್ಲಿ ಬಾಬೆಲಿನ ಅರಸನು ಶಕುನ ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಕಲಕಿ, ವಿಗ್ರಹಗಳನ್ನು ಪ್ರಶ್ನೆಕೇಳಿ, ಕಾಳಿಜವನ್ನು ಪರೀಕ್ಷಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮಾರ್ಗ ಕವಲೊಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಪ್ರಾರಂಭದಲ್ಲಿ ಬಾಬಿಲೋನಿನ ಅರಸ ಶಕುನ ನೋಡಲು ನಿಂತಿರುವನು. ಬಾಣಗಳನ್ನು ಕಲಕಿ, ವಿಗ್ರಹಗಳನ್ನು ಪ್ರಶ್ನೆ ಕೇಳಿ, ಹಸ್ತರೇಖೆಯನ್ನು ಪರೀಕ್ಷಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇದರ ಅರ್ಥವೇನೆಂದರೆ, ರಸ್ತೆಯು ಶಾಖೆಗಳಾಗಿ ಒಡೆಯುವ ಸ್ಥಳದಲ್ಲಿ ಬಾಬಿಲೋನಿನ ರಾಜನು ಶಕುನವನ್ನು ಕೇಳಲು ನಿಂತಿದ್ದಾನೆ. ಅವನು ಕೆಲವು ಬಾಣಗಳನ್ನು ಅಲುಗಾಡಿಸಿದ್ದಾನೆ. ಅವನು ಕೆಲವು ಬಾಣಗಳನ್ನು ಚದರಿಸಿ, ತನ್ನ ವಂಶದ ವಿಗ್ರಹಗಳಿಗೆ ಕೆಲವು ಪ್ರಶ್ನೆಗಳನ್ನು ಕೇಳಿದನು, ಮತ್ತು ತಾನು ಕೊಂದ ಪ್ರಾಣಿಯ ಕಾಳಿಜವನ್ನು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಬಾಬಿಲೋನಿನ ಅರಸನು, ಮಾರ್ಗವು ಒಡೆಯುವ ಸ್ಥಳದಲ್ಲಿ ಶಕುನವನ್ನು ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಅಲ್ಲಾಡಿಸಿದನು; ಮೂರ್ತಿಗಳ ಹತ್ತಿರ ವಿಚಾರಿಸಿದನು; ಅವನು ಹತ್ಯೆ ಮಾಡಿದ ಪ್ರಾಣಿಯ ಯಕೃತ್ತನ್ನು ಪರೀಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:21
22 ತಿಳಿವುಗಳ ಹೋಲಿಕೆ  

ಉಡಿಯಲ್ಲಿ ಚೀಟು ಹಾಕಬಹುದು; ಅದರ ತೀರ್ಪು ಯೆಹೋವನದೇ.


ಯಾಜಕನು ಈ ಮಾತನ್ನು ಕೇಳಿ ಸಂತೋಷಪಟ್ಟು ಏಫೋದನ್ನೂ ದೇವತಾಪ್ರತಿಮೆಗಳನ್ನೂ ಕೆತ್ತನೆಯ ವಿಗ್ರಹವನ್ನೂ ತೆಗೆದುಕೊಂಡು ಅವರ ಬಳಿಗೆ ಬಂದನು.


ಈ ಮೀಕನು ಏಫೋದನ್ನೂ ವಿಗ್ರಹಗಳನ್ನೂ ಮಾಡಿಸಿ ಅವುಗಳನ್ನು ತಾನು ಕಟ್ಟಿಸಿದ ದೇವಸ್ಥಾನದಲ್ಲಿಟ್ಟು ತನ್ನ ಕುಮಾರರಲ್ಲೊಬ್ಬನನ್ನು ಅರ್ಚಕ ಸೇವೆಗೆ ಪ್ರತಿಷ್ಠಿಸಿದನು.


ಆದರೆ ತಂದೆಯ ಮನೆಗೆ ಹೋಗುವದಕ್ಕೆ ನಿನಗೆ ಬಹಳ ಆಶೆಯಿರುವದರಿಂದ ಹೋಗಬೇಕಾಯಿತು. ಅದಿರಲಿ; ನನ್ನ ದೇವರುಗಳನ್ನು ಕದ್ದದ್ದು ಯಾಕೆ ಎಂದು ಹೇಳಿದನು.


ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.


ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ ಒಬ್ಬ ದಾಸಿಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು.


ವಿಗ್ರಹಗಳು ನುಡಿಯುವದು ಜೊಳ್ಳು; ಕಣಿಯವರು ಕಾಣುವದು ಸುಳ್ಳು, ತಿಳಿಸುವ ಕನಸುಗಳು ಕಲ್ಪಿತ, ಹೇಳುವ ಸಮಾಧಾನವು ವ್ಯರ್ಥ, ಆದದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ.


ನನ್ನ ಜನರು ತಮ್ಮ ಮರದ ತುಂಡನ್ನು ಪ್ರಶ್ನೆ ಕೇಳುತ್ತಾರೆ, ಅವರ ಕೋಲು ಅವರಿಗೆ ಅರುಹನ್ನು ಉಂಟುಮಾಡುತ್ತದೆ; ವ್ಯಭಿಚಾರ ಗುಣವು ಅವರನ್ನು ಭ್ರಾಂತಿಗೊಳಿಸಿದೆ; ತಮ್ಮ ದೇವರಿಗೆ ಪತಿಭಕ್ತಿಯನ್ನು ಸಲ್ಲಿಸದೆ ದ್ರೋಹಿಗಳಾಗಿದ್ದಾರೆ.


ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹ, ಇವುಗಳಿಲ್ಲದೆ ಇಸ್ರಾಯೇಲ್ಯರು ಬಹು ದಿವಸ ತಾಳಿಕೊಂಡಿರುವರು;


ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ನೀರಿನ ಕಾಲುವೆಗಳಂತೆ ಇವೆ; ತನಗೆ ಬೇಕಾದ ಕಡೆಗೆ ತಿರುಗಿಸುತ್ತಾನೆ.


ರಾಜನ ತುಟಿಗಳಲ್ಲಿ ದೈವೋಕ್ತಿ; ನ್ಯಾಯತೀರಿಸುವದರಲ್ಲಿ ಅವನ ಬಾಯಿ ತಪ್ಪಿಹೋಗದು.


ಇದಲ್ಲದೆ ಅವನು ಸತ್ತವರಲ್ಲಿ ವಿಚಾರಿಸುವವರನ್ನೂ ಬೈತಾಳಿಕರನ್ನೂ ಯೆರೂಸಲೇಮ್ ಯೆಹೂದಪ್ರಾಂತ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ ಧರ್ಮೋಪದೇಶಗ್ರಂಥದ ವಾಕ್ಯಗಳನ್ನು ನೆರವೇರಿಸಿದನು.


ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವದು; ಹಟವು ವಿುಥ್ಯಾಭಕ್ತಿಗೂ ವಿಗ್ರಹಾರಾಧನೆಗೂ ಸಮಾನವಾಗಿರುವದು. ನೀನು ಯೆಹೋವನ ಮಾತನ್ನು ತಳ್ಳಿಬಿಟ್ಟದ್ದರಿಂದ ಆತನು ನಿನ್ನನ್ನು ಅರಸುತನದಿಂದ ತಳ್ಳಿಬಿಟ್ಟಿದ್ದಾನೆ ಎಂದು ನುಡಿದನು.


ಅವನು - ನೀವು ಯಾಜಕನನ್ನೂ ನಾನು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವು ನನ್ನನ್ನು ಕೇಳುವದು ಹೇಗೆ ಅಂದನು.


ಅವರು ಮೀಕನ ಮನೆಯನ್ನು ಹೊಕ್ಕು ಅವುಗಳನ್ನು ತೆಗೆದುಕೊಂಡು ಬರುವಾಗ ಯಾಜಕನು ಕಂಡು ಅವರಿಗೆ - ನೀವು ಮಾಡಿದ್ದೇನು ಅಂದನು.


ಆಗ ಲಯಿಷ್ ದೇಶವನ್ನು ಸಂಚರಿಸಿ ನೋಡುವದಕ್ಕೆ ಹೋಗಿದ್ದ ಐದು ಮಂದಿ ತಮ್ಮ ಬಂಧುಗಳಿಗೆ - ಈ ಗ್ರಾಮದಲ್ಲಿ ಒಂದು ಏಫೋದೂ ದೇವತಾಪ್ರತಿಮೆಗಳೂ ಕೆತ್ತನೆಯ ಮತ್ತು ಎರಕದ ವಿಗ್ರಹಗಳೂ ಇರುತ್ತವೆಂಬದು ನಿಮಗೆ ಗೊತ್ತುಂಟೋ?


ಮಕ್ಕಳನ್ನು ಆಹುತಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರಮಂತ್ರಗಳನ್ನು ಮಾಡುವವರು,


ಅವನನ್ನು ಪೆಗೋರ್ ಎಂಬ ಬೆಟ್ಟದ ತುದಿಗೆ ಕರಕೊಂಡು ಹೋದನು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಯೆಷೀಮೋನ್ ಎಂಬ ಅರಣ್ಯಪ್ರದೇಶವು ಕಾಣಿಸುತ್ತದೆ.


ಯಾಕೋಬ್ಯರಲ್ಲಿ ಶಕುನನೋಡುವದು ಇಲ್ಲ; ಇಸ್ರಾಯೇಲ್ಯರಲ್ಲಿ ಕಣಿಕೇಳುವದು ಇಲ್ಲ. ದೇವರು ತಾನು ಮಾಡುವ ಕೆಲಸವನ್ನು ತತ್ಕಾಲದಲ್ಲೇ ಯಾಕೋಬ್ಯರಿಗೆ ತಿಳಿಸುತ್ತಾನೆ; ಸಮಯೋಚಿತವಾಗಿ ಅದನ್ನು ಇಸ್ರಾಯೇಲ್ಯರಿಗೆ ತೋರಿಸುತ್ತಾನೆ.


ಮೋವಾಬ್ಯರ ಹಿರಿಯರೂ ವಿುದ್ಯಾನ್ಯರ ಹಿರಿಯರೂ ಶಕುನದ ಕಾಣಿಕೆಯನ್ನು ಕೈಯಲ್ಲಿ ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದಾಗ ಅವನು -


ನೀವು ಈಗ ನಾಲ್ಕು ಹಾದಿಗಳು ಕೂಡುವ ಸ್ಥಳಗಳಿಗೆ ಹೋಗಿ ಕಂಡವರನ್ನೆಲ್ಲಾ ಮದುವೆಯ ಊಟಕ್ಕೆ ಕರೆಯಿರಿ ಎಂದು ಹೇಳಿದನು.


ಯಾಜಕನೂ ಬಂದು ಇವರೊಡನೆ ಬಾಗಲಲ್ಲಿ ನಿಂತಿದ್ದಾಗ ಆ ಐದು ಮಂದಿ ಮನೆಯನ್ನು ಹೊಕ್ಕು ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ ಏಫೋದನ್ನೂ ದೇವತಾ ಪ್ರತಿಮೆಗಳನ್ನೂ ತೆಗೆದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು