Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:25 - ಕನ್ನಡ ಸತ್ಯವೇದವು J.V. (BSI)

25 ಇಸ್ರಾಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ! ನಿನಗೆ ಸಮಯವು ಹತ್ತರಿಸಿದೆ; ಇದೇ ನಿನ್ನ ಅಪರಾಧದ ಕಡೆಗಾಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇಸ್ರಾಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ! ನಿನಗೆ ಸಮಯವು ಹತ್ತಿರವಾಗಿದೆ; ಇದೇ ನಿನ್ನ ಅಪರಾಧದ ಕಡೆಗಾಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇಸ್ರಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ, ನಿನಗೆ ಸಮಯವು ಸಮೀಪಿಸಿದೆ; ಇದೇ ನಿನ್ನ ಅಪರಾಧದ ಕಡೆಗಾಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಇಸ್ರೇಲಿನ ದುಷ್ಟ ಅಧಿಪತಿಯೇ, ನೀನು ಸಾಯುವಿ. ನಿನಗೆ ನನ್ನ ಶಿಕ್ಷೆಯು ಬಂದಾಯಿತು. ನಿನ್ನ ಅಂತ್ಯವು ಹತ್ತಿರವೇ ಇದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ ‘ದುಷ್ಟನಾದ ಭ್ರಷ್ಟ ಇಸ್ರಾಯೇಲಿನ ರಾಜಕುಮಾರನೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:25
21 ತಿಳಿವುಗಳ ಹೋಲಿಕೆ  

ನೀನು ಇಸ್ರಾಯೇಲ್ಯರ ಮೇಲೆ ದೀರ್ಘದ್ವೇಷವಿಟ್ಟು ಅವರ ಅಪರಾಧದ ಕಡೆಗಾಲದಲ್ಲಿ ಆಪತ್ತು ಸಂಭವಿಸಿದಾಗ ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದ್ದರಿಂದ


[ಅಮ್ಮೋನೇ,] ನಿನ್ನ ಜೋಯಿಸರು ವಿುಥ್ಯೆಯನ್ನು ಸಾಕ್ಷಾತ್ಕರಿಸಿ ಸುಳ್ಳುಸುಳ್ಳಾಗಿ ಕಣಿ ಹೇಳುತ್ತಿದ್ದಾರೆ. ಸಮಯವು ಹತ್ತರಿಸಿ ಅಪರಾಧದ ಕಡೆಗಾಲವು ಸಂಭವಿಸಿ ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು! ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಒರಗಿಹೋಗುವಿ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಗೆ ಕಟ್ಟುವೆನು.


ಇವನು ಯೆಹೋಯಾಕೀಮನಂತೆ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಇದಲ್ಲದೆ ನೆಬೂಕದ್ನೆಚ್ಚರನಿಗೆ ಒಳಗಾಗುತ್ತೇನೆಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದ್ದರೂ ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ಇಸ್ರಾಯೇಲ್‍ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲೊಲ್ಲದೆ ಹಟಹಿಡಿದು ಮನಸ್ಸನ್ನು ಕಠಿನಮಾಡಿಕೊಂಡನು.


ದಿನವು ಹತ್ತಿರವಾಯಿತು; ಹೌದು, ಯೆಹೋವನ ದಿನ, ಕಾರ್ಮುಗಿಲಿನ ದಿನ ಸಮೀಪಿಸಿತು; ಅದು ಜನಾಂಗಗಳಿಗೆ ನ್ಯಾಯ ತೀರಿಸತಕ್ಕ ಕಾಲ.


ಪ್ರಳಯವು ಬಂತು, ಪೂರ್ಣಪ್ರಳಯವು ಬಂತು, ನಿನ್ನನ್ನು ಚಚ್ಚುವದಕ್ಕೆ ಚಚ್ಚರಗೊಂಡಿದೆ, ಇಗೋ ಬಂದೇ ಬಂತು!


ಆಹಾ, ಬಹುಜಲಮಧ್ಯನಿವಾಸಿನಿಯಾದ ನಗರಿಯೇ, ಧನಭರಿತ ಪುರಿಯೇ, ನಿನ್ನ ಅಂತ್ಯವು ಬಂದಿದೆ, ನೀನು ಸೂರೆಮಾಡಿದ್ದು ಸಾಕು.


ಇದಲ್ಲದೆ ಯೆಹೋವನು ಇಂತೆನ್ನುತ್ತಾನೆ - ಯೆಹೂದದ ಅರಸನಾದ ಚಿದ್ಕೀಯ, ಅವನ ಪ್ರಧಾನರು, ಈ ದೇಶದಲ್ಲಿ ನಿಂತಿರುವ ಯೆರೂಸಲೇವಿುನವರ ಶೇಷ, ಐಗುಪ್ತದೇಶಕ್ಕೆ ವಲಸೆಯಾದವರು, ಇವರೆಲ್ಲರನ್ನು ಕೆಟ್ಟು ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ತರುವೆನು.


ಮನುಷ್ಯರ ಹೃದಯವನ್ನೂ ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.


ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ.


ನರಪುತ್ರನೇ, ಕರ್ತನಾದ ಯೆಹೋವನು ಇಸ್ರಾಯೇಲ್ ದೇಶಕ್ಕೆ ಹೀಗೆ ನುಡಿಯುತ್ತಾನೆ - ಪ್ರಳಯವು, ಪೂರ್ಣಪ್ರಳಯವು ದೇಶದ ಚತುರ್ದಿಕ್ಕಿನಲ್ಲಿಯೂ ಸಂಭವಿಸಿದೆ.


ಈಗಲೇ ನಿನಗೆ ಪ್ರಳಯವು ಬಂದುಬಿಟ್ಟಿತು; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ಉಣ್ಣಿಸುವೆನು.


ನರಪುತ್ರನೇ, ಕೂಗಿಕೋ, ಗೋಳಾಡು! ಖಡ್ಗವು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಬಿದ್ದಿದೆ; ಆ ಪ್ರಭುಗಳು ನನ್ನ ಜನರೊಂದಿಗೆ ಖಡ್ಗಕ್ಕೆ ತುತ್ತಾಗಿದ್ದಾರೆ; ತೊಡೆಯನ್ನು ಬಡಿದುಕೋ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಅಪರಾಧಗಳು ಬೈಲಿಗೆ ಬಂದು ನಿಮ್ಮ ಪಾಪಗಳು ನಿಮ್ಮ ಕಾರ್ಯಗಳಲ್ಲೆಲ್ಲಾ ತಲೆದೋರಿ ನೀವು ನಿಮ್ಮ ಅಧರ್ಮವನ್ನು ನನ್ನ ಜ್ಞಾಪಕಕ್ಕೆ ತಂದು [ಪಾಪಿಗಳಾಗಿ] ನನ್ನ ನೆನಪಿಗೆ ಬಂದಿರಾದ ಕಾರಣ ಶತ್ರುವಿನ ಕೈಗೆ ಸಿಕ್ಕಿಬೀಳುವಿರಿ.


ಅದರ ಪ್ರಾಕಾರಗಳನ್ನು ಚೆನ್ನಾಗಿ ನೋಡಿರಿ; ಅದರ ಕೊತ್ತಲುಗಳನ್ನು ಸೂಕ್ಷ್ಮವಾಗಿ ಗಮನಿಸಿರಿ.


ಅಮ್ಮೋನ್ಯರನ್ನು ಕುರಿತದ್ದು. ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನಮಾಡಿಕೊಂಡಿರುವದೇಕೆ, ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?


ಆದದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು ಯುದ್ಧಘೋಷಮಾಡುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವದು. ಇದು ಯೆಹೋವನ ನುಡಿ.


ನಾನು ರಬ್ಬಾಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿಯೂ ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ರೊಪ್ಪವನ್ನಾಗಿಯೂ ಮಾಡುವೆನು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ನಾನು ರಬ್ಬದ ಕೋಟೆಯಲ್ಲಿ ಬೆಂಕಿಯನ್ನು ಉರಿಸುವೆನು, ಅದು ಅವರ ಅರಮನೆಗಳನ್ನು ನುಂಗಿಬಿಡುವದು; ಆ ಯುದ್ಧದಿನದಲ್ಲಿ ಆರ್ಭಟವಾಗುವದು. ಆ ಸುಂಟರಗಾಳಿಯ ದಿವಸದಲ್ಲಿ ರೋಷಮಾರುತವು ಬೀಸುವದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು