Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:28 - ಕನ್ನಡ ಸತ್ಯವೇದವು J.V. (BSI)

28 ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ - ಅಮ್ಮೋನ್ಯರ ವಿಷಯದಲ್ಲಿಯೂ ಅವರು ಮಾಡುವ ದೂಷಣೆಯ ವಿಷಯದಲ್ಲಿಯೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಖಡ್ಗ, ಖಡ್ಗ, ಸಂಹರಿಸುವದಕ್ಕೆ ಹಿರಿದಿದೆ, ವಿುಂಚುವಂತೆ ತೀರಾತಿಕ್ಕಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ, “ಅಮ್ಮೋನ್ಯರ ವಿಷಯದಲ್ಲಿಯೂ ಮತ್ತು ಅವರು ಮಾಡುವ ದೂಷಣೆಯ ವಿಷಯದಲ್ಲಿಯೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಖಡ್ಗ, ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಚೆನ್ನಾಗಿ ಮಸೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ - ಅಮ್ಮೋನ್ಯರ ವಿಷಯದಲ್ಲೂ ಅವರು ಮಾಡುವ ದೂಷಣೆಯ ವಿಷಯದಲ್ಲೂ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ಖಡ್ಗ, ಖಡ್ಗ, ಸಂಹರಿಸುವುದಕ್ಕೆ ಹಿರಿದಿದೆ; ಮಿಂಚುವಂತೆ ಪೂರ್ಣ ಮಸೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ದೇವರು ಹೇಳಿದ್ದು, “ನರಪುತ್ರನೇ, ನನ್ನ ಪರವಾಗಿ ಜನರ ಕೂಡ ಮಾತನಾಡು. ‘ನನ್ನ ಒಡೆಯನಾದ ಯೆಹೋವನು ಅಮ್ಮೋನಿಯರ ಬಗ್ಗೆಯೂ ಅವರ ದೂಷಣೆಗಳ ಬಗ್ಗೆಯೂ ಹೀಗೆ ಹೇಳುತ್ತಾನೆ: “‘ನೋಡು, ಒಂದು ಖಡ್ಗ. ಆ ಖಡ್ಗವು ಒರೆಯಿಂದ ಹೊರಬಂದಿದೆ. ಆ ಖಡ್ಗವನ್ನು ಹರಿತಗೊಳಿಸಲಾಗಿದೆ ಮತ್ತು ನಯಗೊಳಿಸಲಾಗಿದೆ. ಖಡ್ಗವು ಕೊಲ್ಲಲು ಸಿದ್ಧವಾಗಿದೆ. ಮಿಂಚಿನಂತೆ ಹೊಳೆಯಲೆಂದು ಅದನ್ನು ನಯಗೊಳಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಮನುಷ್ಯಪುತ್ರನೇ, ನೀನು ಪ್ರವಾದಿಸಿ, ಸಾರ್ವಭೌಮ ಯೆಹೋವ ದೇವರು ಅಮ್ಮೋನಿಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾರೆ, ‘ಹೌದು, ನೀನು ಹೀಗೆ ಹೇಳು: “ ‘ಒಂದು ಖಡ್ಗವು, ಒಂದು ಖಡ್ಗವು ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಬಹಳವಾಗಿ ಮಸೆಯಲಾಗಿದೆ. ಥಳಥಳಿಸುತ್ತಾ ನುಂಗುವಹಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:28
15 ತಿಳಿವುಗಳ ಹೋಲಿಕೆ  

ಅಮ್ಮೋನ್ಯರ ರಬ್ಬಾ ಎಂಬ ಪಟ್ಟಣಕ್ಕೂ ಯೆಹೂದದೊಳಗೆ ಕೋಟೆಕೊತ್ತಲಗಳಿಂದ ಕೂಡಿದ ಯೆರೂಸಲೇವಿುಗೂ ಖಡ್ಗವು ಬರುವದಕ್ಕೆ ದಾರಿಗಳನ್ನು ಮಾಡು.


ಕೊಳ್ಳೆಗಾರರು ಅರಣ್ಯದ ಎಲ್ಲಾ ಬೋಳುಗುಡ್ಡಗಳಲ್ಲಿಯೂ ಕಂಡುಬಂದಿದ್ದಾರೆ; ಯೆಹೋವನ ಖಡ್ಗವು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ನುಂಗಿಬಿಡುತ್ತಿದೆ; ಯಾರಿಗೂ ನೆಮ್ಮದಿಯಿಲ್ಲ.


ಆಗ ಅಶ್ಶೂರ್ಯರು ಕತ್ತಿಯಿಂದ ಬೀಳುವರು, ಅದು ಮನುಷ್ಯರ ಕತ್ತಿಯಲ್ಲ; ಖಡ್ಗವು ಅವರನ್ನು ನುಂಗುವದು, ಅದು ಮಾನವಖಡ್ಗವಲ್ಲ; ಅವರು ಕತ್ತಿಯ ಕಡೆಯಿಂದ ಓಡುವರು, ಅವರ ಯೌವನಸ್ಥರು ಬಿಟ್ಟಿಹಿಡಿಯಲ್ಪಡುವರು.


ಆದರೆ ಆ ಯುದ್ಧದಿನವು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ದಿನವಾಗಿದೆ; ಅದು ದಂಡನೆಯ ದಿವಸ; ಆಗ ಖಡ್ಗವು ನುಂಗಿ ನುಂಗಿ ತಣಿಯುವದು, ಅವರ ರಕ್ತವನ್ನು ತುಂಬಾ ಹೀರುವದು; ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಬಡಗಲಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಬಲಿಮಾಡಬೇಕೆಂದಿದ್ದಾನಲ್ಲಾ.


ಐಗುಪ್ತದಲ್ಲಿ ಪ್ರಕಟಿಸಿರಿ, ವಿುಗ್ದೋಲ್, ತಹಪನೇಸ್, ನೋಫ್ ಎಂಬೀ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ - [ಐಗುಪ್ತವೇ,] ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ ಎಂದು ಸಾರಿರಿ.


ಮ್ಲೇಚ್ಫರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವಿ; ನಿನ್ನ ಪ್ರಜೆಯು ಮುಗ್ಗರಿಸುವದಕ್ಕೆ ಇನ್ನು ನೀನು ಕಾರಣನಾಗುವದಿಲ್ಲ; ಇದು ಕರ್ತನಾದ ಯೆಹೋವನ ನುಡಿ.


ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ ಕನ್ಯೆಯರನ್ನೂ ಮುದುಕರನ್ನೂ ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.


ಮತ್ತು ರಾಜವಂಶದವನೊಬ್ಬನನ್ನು ಆರಿಸಿ ಅವನೊಂದಿಗೆ ಒಡಂಬಡಿಕೆ ಮಾಡಿಕೊಂಡು ಅವನಿಂದ ಆಣೆಯಿಡಿಸಿ


ಆದರೆ ಅವನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದು ಕುದುರೆಗಳನ್ನೂ ಬಹುಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಐಗುಪ್ತಕ್ಕೆ ರಾಯಭಾರಿಗಳನ್ನು ಕಳುಹಿಸಿದನು. ಇವನು ಸಮೃದ್ಧನಾಗಿಯೇ ಇರುವನೋ? ಇಂಥಾ ಕೃತ್ಯಗಳನ್ನು ನಡಿಸಿದವನು ಪಾರಾಗುವನೋ? ಒಡಂಬಡಿಕೆಯನ್ನು ಮೀರಿದವನು ತಪ್ಪಿಸಿಕೊಂಡಾನೇ?


ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ; ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು