Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:7 - ಕನ್ನಡ ಸತ್ಯವೇದವು J.V. (BSI)

7 ಏಕೆ ನರಳಾಡುತ್ತೀ ಎಂದು ಅವರು ನಿನ್ನನ್ನು ಕೇಳಲು ನೀನು ಅವರಿಗೆ - ದುರ್ವಾರ್ತೆಯ ನಿವಿುತ್ತ ನರಳುತ್ತೇನೆ; ಇಗೋ, ವಿಪತ್ತು ಬಂತು; ಎಲ್ಲರ ಹೃದಯವು ಕರಗಿ ನೀರಾಗುವದು; ಎಲ್ಲರ ಕೈ ಜೋಲು ಬೀಳುವದು, ಎಲ್ಲರ ಮನಸ್ಸು ಕುಂದುವದು, ಎಲ್ಲರ ಮೊಣಕಾಲು ನೀರಿನಂತೆ ಚಂಚಲವಾಗುವದು; ಇಗೋ, ಬಂತು, ಆಯಿತು; ಇದು ಕರ್ತನಾದ ಯೆಹೋವನ ನುಡಿ ಎಂದು ಉತ್ತರಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳಲು ನೀನು ಅವರಿಗೆ, ‘ಕೆಟ್ಟ ವಾರ್ತೆಯ ನಿಮಿತ್ತ ನರಳುತ್ತೇನೆ; ಇಗೋ, ವಿಪತ್ತು ಬಂತು; ಎಲ್ಲರ ಹೃದಯವು ಕರಗಿ ನೀರಾಗುವುದು; ಎಲ್ಲರ ಕೈ ಜೋಲು ಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಚಂಚಲವಾಗುವುದು; ಇಗೋ, ಬಂದಿತು, ಬಂದಾಯಿತು’ ಇದು ಕರ್ತನಾದ ಯೆಹೋವನ ನುಡಿ ಎಂದು ಉತ್ತರಕೊಡು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳುವರು. ಆಗ ನೀನು ಅವರಿಗೆ - ‘ದುರ್ವಾರ್ತೆಯ ನಿಮಿತ್ತ ನರಳುತ್ತಿದ್ದೇನೆ; ಇಗೋ, ವಿಪತ್ತು ಬಂದಿತು; ಎಲ್ಲರ ಹೃದಯವು ಕರಗಿ ನೀರಾಗುವುದು, ಎಲ್ಲರ ಕೈ ಜೋಲುಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಅದರುವುದು; ಇಗೋ, ಬಂದಿತು, ಬಂದಾಯಿತು! ಇದು ಸರ್ವೇಶ್ವರನಾದ ದೇವರ ನುಡಿ,’ ಎಂದು ಉತ್ತರಕೊಡು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಅವರು, ‘ನೀನು ದುಃಖದಿಂದ ಅಳುವದೇಕೆ?’ ಎಂದು ವಿಚಾರಿಸುವರು. ಆಗ ನೀನು ಹೀಗೆ ಹೇಳಬೇಕು: ‘ಭೀತಿಯನ್ನು ಉಂಟು ಮಾಡುವ ವಾರ್ತೆ ಬರುವದರಿಂದ ಎಲ್ಲರ ಹೃದಯಗಳು ಭಯದಿಂದ ಕರಗಿಹೋಗಿರುತ್ತವೆ; ಕೈಗಳು ಬಲಹೀನವಾಗುತ್ತವೆ. ಪ್ರತಿ ಮನುಷ್ಯನ ಆತ್ಮವು ಕೃಶವಾಗುವುದು. ಮೊಣಗಂಟುಗಳು ನೀರಿನಂತಿರುವವು.’ ನೋಡಿ, ಆ ಕೆಟ್ಟ ಸುದ್ದಿಯು ಬರುತ್ತಲಿದೆ. ಇವೆಲ್ಲಾ ನಡೆಯುವವು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ‘ನೀನು ಏಕೆ ನರಳಾಡುತ್ತೀ?’ ಎಂದು ಅವರು ನಿನಗೆ ಕೇಳಿದಾಗ, ನೀನು ಹೇಳಬೇಕಾದದ್ದೇನೆಂದರೆ, ‘ಆ ಸುದ್ದಿಯ ನಿಮಿತ್ತವೇ ಅದು ಬರುವುದು. ಏಕೆಂದರೆ ಆಗ ಹೃದಯಗಳೆಲ್ಲಾ ಕರಗುವುವು. ಕೈಗಳೆಲ್ಲಾ ನಿತ್ರಾಣವಾಗುವುವು. ಪ್ರತಿಯೊಂದು ಆತ್ಮವು ಕುಂದುವದು. ಎಲ್ಲಾ ಮೊಣಕಾಲುಗಳು ನೀರಿನಂತೆ ತೇವವಾಗಿರುತ್ತವೆ. ಅದು ಬರುತ್ತದೆ, ಅದು ತರಲಾಗುತ್ತದೆ,’ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:7
37 ತಿಳಿವುಗಳ ಹೋಲಿಕೆ  

ಎಲ್ಲರ ಕೈಗಳು ಜೋಲು ಬಿದ್ದಿರುವವು, ಎಲ್ಲರ ಮೊಣಕಾಲುಗಳು ನೀರಿನಂತೆ ಚಂಚಲವಾಗಿರುವವು.


ಆದದರಿಂದ ಜೋಲುಬಿದ್ದ ಕೈಗಳನ್ನೂ ನಡುಗುವ ಮೊಣಕಾಲುಗಳನ್ನೂ ಸುಧಾರಿಸಿಕೊಳ್ಳಿರಿ;


ನಗರಿಯು ಬರಿದಾಗಿದೆ, ಬಟ್ಟಬರಿದಾಗಿ ಬೀಳುಬಿದ್ದಿದೆ; ಎದೆಯು ನೀರಾಗಿ ಹೋಗಿದೆ, ಮೊಣಕಾಲುಗಳು ಅದರುತ್ತವೆ, ಎಲ್ಲರ ಸೊಂಟಗಳಿಗೂ ವೇದನೆಯಾಗಿದೆ, ಎಲ್ಲರ ಮುಖಗಳೂ ಬಾಡಿವೆ.


ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ, ಬರುವವು; ದಿವ್ಯದರ್ಶನವಾಯಿತೇ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವದು, ಹಿರಿಯರಲ್ಲಿ ಮಂತ್ರಾಲೋಚನೆಯು ಇಲ್ಲವಾಗುವದು.


ಬಾಬೆಲಿನ ಅರಸನು ಅದರ ಸುದ್ದಿಯನ್ನು ಕೇಳಿದನು, ಅವನ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ಅವನನ್ನು ಹಿಡಿದಿದೆ.


ಅದರಿಂದ ಎಲ್ಲರ ಕೈ ಜೋಲುಬೀಳುವದು, ಎಲ್ಲರ ಹೃದಯ ಕರಗಿ ನೀರಾಗುವದು;


ಆಕಾಶದ ಶಕ್ತಿಗಳು ಕದಲುವದರಿಂದ ಮನುಷ್ಯರು ಭಯ ಹಿಡಿದವರಾಗಿ ಲೋಕಕ್ಕೆ ಏನು ಬರುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು.


ಜನರು ನೀನು ಹೀಗೆ ಮಾಡುವದರಿಂದ ನಾವು ತಿಳಿಯತಕ್ಕದ್ದೇನು? ತಿಳಿಸುವದಿಲ್ಲವೋ? ಎಂದು ನನ್ನನ್ನು ಕೇಳಲು


ಆಗ ನಾನು - ಅಯ್ಯೋ, ಕರ್ತನಾದ ಯೆಹೋವನೇ, ಇವನು ಒಗಟುಗಾರನಲ್ಲವೆ ಎಂದು ಈ ಜನರು ನನ್ನ ವಿಷಯವಾಗಿ ಅಂದುಕೊಳ್ಳುತ್ತಾರೆ ಎಂಬದಾಗಿ ಅರಿಕೆಮಾಡಿದೆನು.


ಚೀಯೋನ್ ಪರ್ವತವು ಹಾಳಾಯಿತಲ್ಲಾ! ನರಿಗಳು ಅಲ್ಲಿ ಸಂಚರಿಸುತ್ತವೆ.


ದಮಸ್ಕವನ್ನು ಕುರಿತದ್ದು. ಹಮಾತಿಗೂ ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭಸಮಾಚಾರವನ್ನು ಕೇಳಿ ಕರಗಿಹೋಗಿವೆ; ಸಮುದ್ರಕ್ಕೆ ತಲ್ಲಣಹತ್ತಿದೆ, ಸುಮ್ಮನಿರಲಾರದು.


ಅಯ್ಯೋ, ನನ್ನ ದುಃಖಕ್ಕೆ ಬೆಳಗೆಂದಿಗಾದೀತು? ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ.


ಜೋಲುಬಿದ್ದ ಕೈಗಳನ್ನೂ ನಡುಗುವ ಮೊಣಕಾಲುಗಳನ್ನೂ ಬಲಗೊಳಿಸಿರಿ.


ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವದು; ಬೆಳಬೆಳಗೂ ಹಗಲುರಾತ್ರಿಯೂ ಅದು ಹಾದುಹೋಗುವದು; ಆಗ ಯೆಹೋವನ ಮಾತನ್ನು ಗ್ರಹಿಸಿಕೊಳ್ಳುವದು ಬರೀ ಭಯವೇ.


ಅರಾಮ್ಯರು ಎಫ್ರಾಯೀಮ್ಯರನ್ನು ಹೊಂದಿಕೊಂಡಿದ್ದಾರೆಂಬ ಸುದ್ದಿಯು ಅರಮನೆಗೆ ಮುಟ್ಟಿದಾಗ ಅರಸನ ಮನವೂ ಪ್ರಜೆಯ ಮನವೂ ಗಾಳಿಯಿಂದ ವನವೃಕ್ಷಗಳು ಅಲ್ಲಾಡುವಂತೆ ನಡುಗಿದವು.


ಇಸ್ರಾಯೇಲ್‍ದೇವರಾದ ಯೆಹೋವನೆಂಬ ನಾನು ಯೆರೂಸಲೇವಿುನವರ ಮೇಲೆಯೂ ಯೆಹೂದದವರ ಮೇಲೆಯೂ ಕೇಡನ್ನು ಬರಮಾಡುವೆನು; ಅದನ್ನು ಕೇಳುವವರ ಎರಡು ಕಿವಿಗಳೂ ಮೊರ್ರೆನ್ನುವವು.


ಆಗ ಸಿಂಹಹೃದಯರಾದ ಶೂರರ ಎದೆಯೂ ಕರಗಿ ನೀರಾಗುವದು. ನಿನ್ನ ತಂದೆಯು ರಣವೀರನೆಂದೂ ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಾಯೇಲ್ಯರು ಬಲ್ಲರಷ್ಟೆ.


ಯೊರ್ದನಿನ ಪಶ್ಚಿಮದಲ್ಲಿದ್ದ ಎಲ್ಲಾ ಅಮೋರಿಯರ ಅರಸರೂ ಸಮುದ್ರದ ಬಳಿಯಲ್ಲಿದ್ದ ಸರ್ವ ಕಾನಾನ್ ರಾಜರೂ ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನನ್ನು ಬತ್ತಿಸಿ ಅವರನ್ನು ದಾಟಿಸಿದನೆಂದು ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿವಿುತ್ತವಾಗಿ ಅವರಿಗೆ ಧೈರ್ಯವಿಲ್ಲವಾಯಿತು.


ಮತ್ತು - ಯಾವನಾದರೂ ಧೈರ್ಯಕಡಿಮೆಯಾಗಿ ಅಂಜಿಕೊಂಡರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವದರಿಂದ ಅವನ ಜೊತೆಗಾರರೂ ದಿಗಿಲು ಪಟ್ಟಾರು ಎಂದು ಹೇಳಬೇಕು.


ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದಲ್ಲಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವು ಅವರಲ್ಲಿ ದಿಗಿಲುಹುಟ್ಟಿಸುವದು; ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು; ಯಾರೂ ಹಿಂದಟ್ಟಿ ಬಾರದಿರುವಾಗಲೂ ಅವರು ಓಡಿ ಬೀಳುವರು;


ಫಿಲಿಷ್ಟಿಯರಿಗೆ ಸಂಕಟವಾಯಿತು; ಎದೋಮ್ಯರ ಕುಲಪತಿಗಳು ಕಳವಳಗೊಂಡರು; ಮೋವಾಬ್ಯರ ಮುಖಂಡರು ಗಡಗಡನೆ ನಡುಗುತ್ತಾರೆ; ಕಾನಾನ್ ದೇಶದವರು ಕರಗಿಹೋದರು;


ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಜಿತೇಂದ್ರಿಯರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರ್ರಿ.


ಆಯಿ ಎಂಬ ಊರಿನವರು ಅವರನ್ನು ಊರುಬಾಗಲಿನಿಂದ ಕಲ್ಲುಗಣಿಯವರೆಗೂ ಹಿಂದಟ್ಟಿ ಇಳಿ ನೆಲದಲ್ಲಿ ಅವರನ್ನು ಸೋಲಿಸಿ ಸುಮಾರು ಮೂವತ್ತಾರು ಮಂದಿಯನ್ನು ಹತಮಾಡಿದರು. ಇದರಿಂದ ಇಸ್ರಾಯೇಲ್ಯರ ಧೈರ್ಯವು ಕರಗಿ ನೀರಾಯಿತು.


ಕ್ಷಣದಲ್ಲಿ ಹರಿದು ಕಾಣದೆಹೋಗುವ ನೀರಿನಂತೆ ಅವರು ಮಾಯವಾಗಲಿ; ಬಾಣ ತಾಗಿತೋ ಎಂಬಂತೆ ಅವರು ಬೀಳಲಿ.


ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು.


ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು - ನರಪುತ್ರನೇ,


ಅವರ ಹೃದಯವು ನೀರಾಗಿ ಬಹುಜನ ಎಡವಿಬೀಳುವಂತೆ ಸಂಹರಿಸುವ ಖಡ್ಗವನ್ನು ಅವರ ಪುರದ್ವಾರಗಳಿಗೆಲ್ಲಾ ತಂದಿದ್ದೇನೆ. ಆಹಾ, ವಿುಂಚಿನಂತೆ ವಿುಂಚುತ್ತದೆ, ವಧೆಗಾಗಿ ಉಜ್ಜಿದೆ!


ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿಮಾಡಿಕೊಂಡೀಯೋ, ಕೈಗಳನ್ನು ಬಲಪಡಿಸಿಕೊಂಡೀಯೋ? ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, ನಡಿಸುತ್ತೇನೆ.


ಆಗ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಲಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.


ಆಗ ಯೆರೆಮೀಯನು ಸಕಲ ಸರದಾರರಿಗೂ ಸಮಸ್ತ ಜನರಿಗೂ ಹೀಗೆ ಹೇಳಿದನು - ನೀವು ಕೇಳಿದ ಮಾತುಗಳನ್ನೆಲ್ಲಾ ಈ ಆಲಯಕ್ಕೂ ಈ ಪಟ್ಟಣಕ್ಕೂ ಪ್ರತಿಕೂಲವಾಗಿ ನುಡಿಯಬೇಕೆಂದು ಯೆಹೋವನು ನನ್ನನ್ನು ಕಳುಹಿಸಿದನು.


ನರಪುತ್ರನೇ, ಇಸ್ರಾಯೇಲಿನ ಬೆಟ್ಟಗಳಿಗೆ ಅಭಿಮುಖನಾಗಿ ನಿಂತು ಅವುಗಳನ್ನು ಕುರಿತು ಈ ದೈವೋಕ್ತಿಯನ್ನು ನುಡಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು