Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:18 - ಕನ್ನಡ ಸತ್ಯವೇದವು J.V. (BSI)

18 ನರಪುತ್ರನೇ, ಇಸ್ರಾಯೇಲ್ ವಂಶವೆಂಬ ಲೋಹವು ನನ್ನ ದೃಷ್ಟಿಯಲ್ಲಿ ಕಲ್ಮಷವಾಗಿದೆ; ಅದೆಲ್ಲಾ ಕುಲುಮೆಯಲ್ಲಿನ ತಾಮ್ರ, ತವರ, ಕಬ್ಬಿಣ, ಸೀಸ; ಅದು ಕಂದುಬೆಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ನರಪುತ್ರನೇ, ಇಸ್ರಾಯೇಲ್ ವಂಶವೆಂಬ ಲೋಹವು ನನ್ನ ದೃಷ್ಟಿಯಲ್ಲಿ ಕಲ್ಮಷವಾಗಿದೆ; ಕುಲುಮೆಯಲ್ಲಿನ ತಾಮ್ರ, ತವರ, ಕಬ್ಬಿಣ, ಸೀಸ ಮತ್ತು ಕಂದು ಬೆಳ್ಳಿಯ ಹಾಗೆ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ನರಪುತ್ರನೇ, ಇಸ್ರಯೇಲ್ ವಂಶವೆಂಬ ಲೋಹವು ನನ್ನ ದೃಷ್ಟಿಯಲ್ಲಿ ಕಲ್ಮಷವಾಗಿದೆ; ಅದೆಲ್ಲಾ ಕುಲುಮೆಯಲ್ಲಿನ ತಾಮ್ರ, ತವರ, ಕಬ್ಬಿಣ, ಸೀಸ; ಅದು ಕಂದುಲೋಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ನರಪುತ್ರನೇ, ಇಸ್ರೇಲ್ ಜನಾಂಗವು ನನ್ನ ಪಾಲಿಗೆ ನಿಷ್ಪ್ರಯೋಜಕವಾಗಿದೆ. ಅವರು ತಾಮ್ರದಂತೆ, ತವರದಂತೆ, ಕಬ್ಬಿಣದಂತೆ ಮತ್ತು ಸೀಸದಂತೆ ಮತ್ತು ಬೆಳ್ಳಿಯನ್ನು ಕುಲುಮೆಯಲ್ಲಿ ಕರಗಿಸಿ ಶುದ್ಧೀಕರಿಸಿದಾಗ ಉಳಿಯುವ ಕಂದುಬೆಳ್ಳಿಯಂತೆ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು ನನಗೆ ಕಸದ ಹಾಗಾದರೂ, ಅವರೆಲ್ಲರೂ ಗುಹೆಯಲ್ಲಿರುವ ತಾಮ್ರ, ತವರ, ಕಬ್ಬಿಣದ ಹಾಗೆ ಇದ್ದಾರೆ. ಸೀಸದ ಮತ್ತು ಬೆಳ್ಳಿಯ ಕಸದ ಹಾಗೆಯೂ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:18
14 ತಿಳಿವುಗಳ ಹೋಲಿಕೆ  

ನಿನ್ನ ಬೆಳ್ಳಿಯು ಕಂದಾಯಿತು, ನಿನ್ನ ದ್ರಾಕ್ಷಾರಸವು ನೀರಾಯಿತು.


ಭೂಲೋಕದ ದುಷ್ಟರೆಲ್ಲರನ್ನು ಕಿಟ್ಟದಂತೆ ತೆಗೆದುಬಿಡುತ್ತೀ; ಆದದರಿಂದ ನಾನು ನಿನ್ನ ಕಟ್ಟಳೆಗಳನ್ನು ಪ್ರೀತಿಸುತ್ತೇನೆ.


ನೋಡು, ನಿನ್ನನ್ನು ಶೋಧಿಸಿದ್ದೇನೆ, ಆದರೆ ಬೆಳ್ಳಿಯಷ್ಟು ಶೋಧಿಸಲಿಲ್ಲ; ಸಂಕಟವೆಂಬ ಪುಟಕ್ಕೆ ಹಾಕಿ ನಿನ್ನನ್ನು ಪರೀಕ್ಷಿಸಿದ್ದೇನೆ.


ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು; ಹೃದಯಗಳನ್ನು ಶೋಧಿಸುವವನು ಯೆಹೋವನೇ.


ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ, ತವರ ಇವುಗಳನ್ನು ಕುಲುಮೆಯೊಳಗೆ ಕೂಡಿಸಿ ಊದಿ ಉರಿಹತ್ತಿಸಿ ಕರಗಿಸುವಂತೆ ನಾನು ನಿಮ್ಮನ್ನು ನನ್ನ ಉಗ್ರಕೋಪದಲ್ಲಿ ಕೂಡಿಸಿ ಇಟ್ಟುಬಿಟ್ಟು ಕರಗಿಸುವೆನು.


ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು;


ಅವರ ಶರಣನು ಭಯದಿಂದ ಹೋಗಿಬಿಡುವನು; ಅವರ ಪ್ರಧಾನರು ಹೆದರಿ ಧ್ವಜಸ್ಥಾನದಿಂದ ದಿಕ್ಕಾಪಾಲಾಗುವರು. ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇವಿುನಲ್ಲಿ ಒಲೆಯನ್ನೂ ಮಾಡಿಕೊಂಡಿರುವ ಯೆಹೋವನ ನುಡಿ ಇದೇ.


ನಿನ್ನ ಮೇಲೆ ಕೈಮಾಡಿ ಪುಟಹಾಕಿ ನಿನ್ನ ಕಲ್ಮಷವನ್ನು ಸಂಪೂರ್ಣವಾಗಿ ಹೋಗಲಾಡಿಸಿ ನಿನ್ನ ಕಂದುಕಸರನ್ನೆಲ್ಲಾ ತೆಗೆದು ಬಿಡುವೆನು.


ಬೆಳ್ಳಿಯಿಂದ ಕಲ್ಮಷವನ್ನು ತೆಗೆದುಹಾಕಿದರೆ ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯಾಗುವದು;


ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವೆಲ್ಲರು ಕಸರಾಗಿರುವದರಿಂದ ಇಗೋ, ನಿಮ್ಮನ್ನು ಯೆರೂಸಲೇವಿುನೊಳಕ್ಕೆ ಕೂಡಿಸುವೆನು.


ಯಾವನು ಅಡ್ಡಬಿದ್ದು ಪೂಜಿಸುವದಿಲ್ಲವೋ ಅವನು ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲ್ಪಡುವನು ಎಂದು ಸಾರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು