Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:2 - ಕನ್ನಡ ಸತ್ಯವೇದವು J.V. (BSI)

2 ನರಪುತ್ರನೇ, ರಕ್ತಮಯವಾದ ಆ ಪಟ್ಟಣಕ್ಕೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವೋ, ಸ್ಥಿರವಾಗಿದೆಯೋ? ಅದರ ದುರಾಚಾರಗಳನ್ನೆಲ್ಲಾ ಅದಕ್ಕೆ ಹೀಗೆ ತಿಳಿಸು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನರಪುತ್ರನೇ, ರಕ್ತಮಯವಾದ ಆ ಪಟ್ಟಣಕ್ಕೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೋ? ಅದರ ದುರಾಚಾರಗಳನ್ನೆಲ್ಲಾ ಅದಕ್ಕೆ ಹೀಗೆ ತಿಳಿಸು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನರಪುತ್ರನೇ, ರಕ್ತಸಿಕ್ತವಾದ ಆ ಪಟ್ಟಣಕ್ಕೆ ನ್ಯಾಯತೀರಿಸಲು ಸ್ಥಿರಮನಸ್ಸು ಮಾಡಿರುವೆಯಾ? ಅದರ ದುರಾಚಾರಗಳನ್ನೆಲ್ಲಾ ಅದಕ್ಕೆ ಹೀಗೆ ತಿಳಿಸು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನರಪುತ್ರನೇ, ನೀನು ಹಂತಕರ ನಗರಕ್ಕೆ ನ್ಯಾಯತೀರಿಸುವೆಯಾ? ಆಕೆಯ ಭಯಂಕರ ದುಷ್ಟತನದ ಬಗ್ಗೆ ಆಕೆಗೆ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಮನುಷ್ಯಪುತ್ರನೇ, ಈಗ ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ? ಹಾಗಾದರೆ ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:2
22 ತಿಳಿವುಗಳ ಹೋಲಿಕೆ  

ಅಯ್ಯೋ, ರಕ್ತಮಯಪುರಿಯ ಗತಿಯನ್ನು ಏನೆಂದು ಹೇಳಲಿ! ಅದು ಸುಳ್ಳಿನಿಂದಲೂ ಸುಲಿಗೆಯಿಂದಲೂ ತುಂಬಿದೆ; ಕೊಳ್ಳೆಹೊಡೆಯುವದನ್ನು ಬಿಡುವದೇ ಇಲ್ಲ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಹಾ, ರಕ್ತಮಯವಾದ ಪಟ್ಟಣದ ಗತಿಯನ್ನು ಏನು ಹೇಳಲಿ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಹಾ, ರಕ್ತಮಯವಾದ ಪಟ್ಟಣದ ಗತಿಯನ್ನು ಏನು ಹೇಳಲಿ! ಆ ಹಂಡೆಯ ಕಿಲುಬು ಬಿಟ್ಟುಹೋಗದೆ ಅದರಲ್ಲೇ ಲೆಪ್ಪವಾಗಿದೆಯಲ್ಲಾ! ಮಾಂಸದ ತುಂಡುಗಳನ್ನು ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು, ಇದಕ್ಕೆ ಕ್ರಮದ ಚೀಟು ಇಲ್ಲ.


ನರಪುತ್ರನೇ, ಇವರಿಗೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವೋ, ಸ್ಥಿರವಾಗಿದೆಯೋ? ಇವರ ಪಿತೃಗಳ ದುರಾಚಾರಗಳನ್ನು ಇವರಿಗೆ ಹೀಗೆ ತಿಳಿಸು -


ಗಂಟಲೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ದನಿಗೈದು ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು, ಯಾಕೋಬವಂಶದವರಿಗೆ ಅವರ ಪಾಪಗಳನ್ನು ಅರುಹು.


ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು; ಇವರಿಂದ ವಿುಕ್ಕಾದವರಿಗೂ ಭಯವುಂಟಾಗುವದು.


ಪ್ರವಾದಿಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿ ಸ್ವರೂಪನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.


ಅವನನ್ನು ಕೊಲ್ಲಿಸಿದ್ದಕ್ಕೆ ನಾವೂ ನಮ್ಮ ಮಕ್ಕಳೂ ಉತ್ತರ ಕೊಡುತ್ತೇವೆ ಅಂದರು.


ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ಆಗುತ್ತಲಿವೆ, ದೇಶವೆಲ್ಲಾ ರಕ್ತಮಯವಾಗಿದೆ.


ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡ ಪ್ರೇರಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧ ರಕ್ತದಿಂದ ತುಂಬಿಸಿದನು.


ಹೀಗೆ ಲೋಕಾದಿಯಿಂದ ಹೇಬೆಲನ ರಕ್ತವು ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಹತವಾದ ಜಕರೀಯನ ರಕ್ತದವರೆಗೂ ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಈ ಸಂತತಿಯವರು ಉತ್ತರಕೊಡಬೇಕು ಎಂಬದೇ; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಹೇಳುತ್ತೇನೆ.


ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದುಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂವಿುಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತದಿಂದುಂಟಾಗುವ ಅಪರಾಧವು ನಿಮ್ಮ ತಲೆಯ ಮೇಲೆ ಬರುವದು.


ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವದನ್ನು ಕಂಡೆನೆಂಬ ನೆವ ನಿನಗಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ [ನಿನ್ನನ್ನು ದಂಡಿಸುವೆನು].


ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ತಿದ್ದುಪಾಟಾಗಲಿಲ್ಲ; ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.


ಆತನು ನನಗೆ - ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು - ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡನು ಎಂಬದಾಗಿ ಮಾತಾಡಿಕೊಳ್ಳುತ್ತಿದ್ದಾರಲ್ಲಾ;


ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿಮಾಡಿ ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.


ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು -


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿನ್ನ ಮಧ್ಯದಲ್ಲಿ ರಕ್ತವನ್ನು ಸುರಿಸಿ ದಂಡನೆಯ ಕಾಲವನ್ನು ಹತ್ತಿರಕ್ಕೆ ತಂದುಕೊಂಡ ಪುರಿಯೇ! ನಿನ್ನ ಕೇಡಿಗಾಗಿ ಬೊಂಬೆಗಳನ್ನು ಮಾಡಿಕೊಂಡು ನಿನ್ನನ್ನು ಹೊಲೆಗೆಡಿಸಿಕೊಂಡ ನಗರಿಯೇ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು